ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಸಂಪದ ಫೌಂಡೇಶನ್ನಿಗೆ ನೆರವಾಗಿ

ಸಂಪದ › Sampada Blogs › shreekant.mishrikoti ರವರ ಬ್ಲಾಗ್

ಒಳ್ಳೆಯ ಓದು

ನಾನು ಓದಿದ ಒಳ್ಳೆಯ ವಿಷಯ ನಿಮಗೆ ತಿಳಿಸುವೆ .

ಉತ್ತರ ಕರ್ನಾಟಕದಲ್ಲಿ ಕನ್ನಡದ ಕಥೆ -೩

July 19, 2006 - 4:43pm — shreekant.mishrikoti

ಶ್ರೀ ಮುದವೀಡು ಕೃಷ್ಣರಾಯರು ಹೀಗೆ ಹೇಳಿದ್ದಾರೆ :
"ಈ ಪ್ರದೇಶವು ಕನ್ನಡ ನಾಡಿನ ಭಾಗವೆಂಬ ಅರಿವೂ ಇಲ್ಲಿಯ ಜನರಿಗಿಲ್ಲದಾಗಿ 'ದಕ್ಷಿಣ ಮಹಾರಾಷ್ಟ್ರ'ವೆಂಬ ಅಸಂಬದ್ಧ ಹಣೆಪಟ್ಟಿಯು ಇದರ ಪಾಲಿಗೆ ಬಂದಿತು. ೧೮೮೫ರಿಂದ ೧೯೧೫ರವರೆಗಿನ ಅವಧಿಯಲ್ಲಿ ಪರಿಸ್ಥಿತಿ ಬಹಳೇ ಕೆಟ್ಟಿತು. ಮುಂಬಯಿ ಅಧಿಕಾರದ ಕೇಂದ್ರವಾಗಿದ್ದ ಮಹಾರಾಷ್ಟ್ರದ ಕಡೆಯಿಂದ ಮರಾಠೀ ಭಾಷೆಯ ಅಧಿಕಾರಿಗಳೇ ಹೆಚ್ಚಾಗಿ ಬರತೊಡಗಿದರು. ಶಿಕ್ಷಣ ವಿಭಾಗವು ಅವರ ಗುತ್ತಿಗೆಯಾಯಿತು. ವಕೀಲಿಯಂತಹ ಹೊಸವರ್ಚಸ್ಸಿನ ಧನೋತ್ಪಾದಕ ಉದ್ಯೋಗಗಳಿಗೆ ಈ ಹೊಸ ಪ್ರದೇಶವು ಅವರಿಗೆ ತೆರೆದಿಟ್ಟಂತಾಯಿತು. ರೇಲ್ವೆಯ ಕಛೇರಿಗಳು ಇಲ್ಲಿಗೆ ಬಂದವು. ವ್ಯಾಪಾರೋದ್ಯೋಗದ ಬೆನ್ನು ಹತ್ತಿ ಅನೇಕ ಮರಾಠರು ಇಲ್ಲಿ ಬಂದು ನೆಲೆಸಿದರು. ಮಹಾರಾಷ್ಟ್ರದಲ್ಲಿಯ ನಾಟಕ ಕಂಪನಿಗಳಿಗೆ ಇದೊಂದು ಹೊಸ ಕ್ಷೇತ್ರವೇ ಲಭ್ಯವಾಗಿ ಅವರ ನಾಟಕಗಳು ತೆರಪಿಲ್ಲದೆಯೇ ಆಗಹತ್ತಿದವು. ಅಲ್ಲಿಯ ವ್ಯಾಖ್ಯಾನಕಾರರು , ಪುರಾಣಿಕರು , ಕೀರ್ತನಕಾರರು , ಗಾಯಕರು , ನರ್ತಕಿಯರು ಇಲ್ಲಿ ಬಂದು ನೆಲೆಸಹತ್ತಿದರು . ಇವರಿಗೆಲ್ಲ ಇಲ್ಲಿದ್ದ ಮರಾಠೀ ಅಧಿಕಾರಿಗಳಿಂದಲೂ ಇಲ್ಲಿಯೇ ನೆಲೆಯೂರಿದ ಮರಾಠಿಗರಿಂದಲೂ ಚೆನ್ನಾಗಿ ಆಶ್ರಯ ದೊರೆತು ಮತ್ತೂ ಹೊಸಬರಿಗೆ ಇತ್ತ ಕಡೆಗೆ ದುಡ್ಡು ಗಳಿಸಲಿಕ್ಕೆ ಬರಲು ಪ್ರೋತ್ಸಾಹ ದೊರೆಯಹತ್ತಿತು. ಇದೆಲ್ಲ ಕಾರಣಗಳಿಂದಾಗಿ ಪಂಪ, ರನ್ನ , ಕುಮಾರವ್ಯಾಸರ ತಿರುಳ್ಗನ್ನಡ ನಾಡಾದ ಈ ಸೀಮೆಯಲ್ಲಿ ಕನ್ನಡ ನುಡಿಯ ಹಿಂದೆ ಬಿದ್ದು ಮರಾಠೀ ಭಾಷೆಯು ಬೆಳೆಯಹತ್ತಿತು. ಅಭಿಮಾನೀ ಮರಾಠಿಗರು ತಮ್ಮ ವರ್ಚಸ್ಸಿನಿಂದ ಇಲ್ಲಿ ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಮರಾಠೀ ಶಾಲೆಗಳನ್ನು ಸ್ಥಾಪಿಸಿಕೊಂಡರು. ಇನು ಸುಸಂಸ್ಕೃತ ಕನ್ನಡಿಗರು ಮೇಲ್ತರಗತಿಯ ಶಿಕ್ಷಣಕ್ಕೆ ಪುಣೆ , ಮುಂಬೈಗೆ ಹೋದಾಗ ತಮ್ಮ ಮಕ್ಕಳಿಗೆ ಸಾಮಾನ್ಯ ವ್ಯವಹಾರಕ್ಕೆ ಅನಾನುಕೂಲವಾಗಬಾರದೆಂಬ ವಿಚಾರದಿಂದ , ಅತ್ತಕಡೆಯ ಹೆಣ್ಣು ಗಂಡಿನ ವಿವಾಹ ಸಂಬಂಧ ಬಂದಾಗ 'ಆರೇ'* ಅರಿಯದವರೆಂಬ ಅಪಮಾನಕ್ಕೆ ಗುರಿಯಾಗಬಾರದೆಂಬ ವಿವೇಕಶೂನ್ಯ ಹಂಬಲದಿಂದ ತಮ್ಮ ಮಕ್ಕಳನ್ನೂ ಮರಾಠೀ ಶಾಲೆಗಳಿಗೇ ಕಳಿಸಹತ್ತಿದರು. ಹೀಗೆ ಪುಣೆ , ಮುಂಬೈ ಕಡೆಗೆ ಹೋಗಿ ಬಂದ ಸುಶಿಕ್ಷಿತ ಕನ್ನಡಿಗರು ತಮ್ಮ ತಾಯಿನುಡಿಯಾದ ಕನ್ನಡವನ್ನೇ ಮರೆತು ಮರಾಠಿಯನ್ನೇ ಮನೆಯ ಮಾತನ್ನಾಗಿ ಮಾಡುವ ಮಹತ್ವಾಕಾಂಕ್ಷೆಯನ್ನು ಹೊಂದಿದರು. ಮೈಸೂರಿನ ಕಡೆಯಿಂದ ಮನೆಗೆ ಬಂದ ಅಚ್ಚಗನ್ನಡದ ಗೃಹಿಣಿಯರನ್ನು ಮರಾಠಿಯನ್ನು ಕಲಿಯಹಚ್ಚಿ ಅವರ ಅಬದ್ಧ ಸುಬದ್ಧ 'ಆರೇ'ದಿಂದಲಾದರೂ ಮನೆತನವನ್ನೇ ಮರಾಠೀಮಯ ಮಾಡುವ ಮೋಹಕ್ಕೆ ಒಳಗಾದರು. ಹೀಗೆ ಅನೇಕ ಕಾರಣಗಳಿಂದ ಇತ್ತ ಕಡೆಯ ಕನ್ನಡಿಗರ ಸ್ವಾಭಿಮಾನ , ಸ್ವಭಾಷಾಭಿಮಾನವು ಕುಗ್ಗುತ್ತ ನಡೆದು , ಕನ್ನಡವು ಮುಗ್ಗರಿಸಿ ಬಿದ್ದು ಮರಾಠಿಯ ಪ್ರಾಬಲ್ಯವೇ ಹೆಚ್ಚಾಗಿ ಅದರ ವರ್ಚಸ್ಸೇ ಬೆಳೆಯಲಾರಂಬಿಸಿತು. ' ಓದಿದರೆ ಮರಾಠಿ ಪುಸ್ತಕಗಳನ್ನೇ ಓದಬೇಕು , ತರಿಸಿದರೆ ಮರಾಠಿ ವರ್ತಮಾನಪತ್ರ ಮಾಸಪತ್ರಿಕೆಗಳನ್ನೇ ತರಿಸಬೇಕು. ನೋಡಿದರೆ ಮರಾಠಿ ನಾಟಕಗಳನ್ನೇ ನೋಡಬೇಕು. ಕೇಳಿದರೆ ಮರಾಠಿ ಹಿಂದೂಸ್ಥಾನೀ ಸಂಗೀತವನ್ನೇ ಕೇಳಬೇಕು' ಎಂಬ ಸೊಲ್ಲೇ ಎಲ್ಲೆಲ್ಲಿಯೂ ಹರಡಿಕೊಂಡ ವಿಪರೀತ ಪರಿಸ್ಥಿತಿಯಿಂದ ಈ ಕನ್ನಡನಾಡು ಜರ್ಜರಿತವಾಗಿ ಹೋಯಿತು. "

(* ಆರ್ಯನ್ , ಆರೇ ಭಾಷೆ - ಮರಾಠೀ - ಇಂದಿಗೂ ಇಲ್ಲಿ ಆರೇ ಹೆಸರಿನ ಹಾಲಿನ ಡೈರಿ ಇದೆ . ಅದರ ಹೆಸರೂ ಇದೇ 'ಆರೇ' ಇರಬಹುದು. ಮರಾಠೀ ಮಿತ್ರರಿಗೆ ಕೇಳಿದೆ. ಗೊತ್ತಿಲ್ಲವೆಂದರು )

(ಮುಂದುವರೆಯುವದು)

~.~
  • shreekant.mishrikoti ರವರ ಬ್ಲಾಗ್
  • Login or register to post comments
  • 782 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ
  • ಕನ್ನಡವನ್ನು ಆ ಕಾಲದಲ್ಲಿ ಉಳಿಸಿದವರು ವೀರಶೈವರು ( ಉ.ಕ.ಕ-೫)
  • ಉತ್ತರಕರ್ನಾಟಕದಲ್ಲಿ ಕನ್ನಡದ ಕಥೆ -೧
  • ಇಂದೇ ನೋಡಲು ಮರೆಯದಿರಿ ಈ ಲಿಂಕನ್ನು
  • ಜ್ಞಾನದೇವ ಮತ್ತು ಆಳಂದಿ
Syndicate content

ಲೇಖಕರು

shreekant.mishrikoti's picture

ಪರಿಚಯ

ನನಗೆ ತಿಳಿದು ಬಂದ ಒಳ್ಳೆಯ ವಿಷಯ ನಿಮಗೂ ತಿಳಿಸುವೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಜೋಹದ್ (ನಂದುವಾಲಿ ನದಿ ಪ್ರದೇಶ), ರಾಜಸ್ಥಾನ

(ಚಿತ್ರ: Farhad Contractor.)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಮುಂಬಯಿ ಮುಖಗಳು ಭಾಗ ೧.....
  • ಗುಟ್ಟು - ಸ್ಫೂರ್ತಿ ಸೆಲೆ ೬
  • ಕಣ್ಣೀರು - ಸ್ಫೂರ್ತಿ ಸೆಲೆ ೫
  • ಜೀವನ - ಸ್ಫೂರ್ತಿ ಸೆಲೆ ೪
  • ಸಾಲ - ಸ್ಫೂರ್ತಿ ಸೆಲೆ ೩
  • ಸಂತೋಷ - ಸ್ಫೂರ್ತಿ ಸೆಲೆ ೨
  • ಹಣ - ಸ್ಫೂರ್ತಿ ಸೆಲೆ ೧
  • ಆ ರಾತ್ರಿ...(ನೈಜ ಘಟನೆ ಆಧಾರಿತ ಕಥೆ)
  • ಮನಸ್ಸಿಗೂ ಅಂಗಿ. . ?
  • ನಿನ್ನ ನಗುವಿಗೆ ನನ್ನ ಕನಸನರ್ಪಿಸುವೆ..
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • anivaasi
    ಉ: ಹಸಿವು - ಮಾಯ್ಸನ ಕಂತೆ ೧೨
    August 8, 2008 - 2:20am
  • anivaasi
    ಉ: ಮನಸ್ಸಿಗೂ ಅಂಗಿ. . ?
    August 8, 2008 - 2:15am
  • anivaasi
    ಉ: ಕ್ರೌರ್ಯ ಮತ್ತು ಬಲಿ
    August 8, 2008 - 2:13am
  • anivaasi
    ಉ: ಕ್ರೌರ್ಯ ಮತ್ತು ಬಲಿ
    August 8, 2008 - 2:06am
  • kalpana
    ಉ: Abroad ಅನ್ನೋ ಮಾಯೆ...
    August 8, 2008 - 12:11am
  • kannada.kanteerava
    ಉ: ಕನ್ನಡ ಮಾತನಾಡದ ಶಾಸಕ
    August 7, 2008 - 11:33pm
  • Rajeshwari
    ಉ: ಸ೦ಪದದಲ್ಲಿ ಜಾಣೆಯರು
    August 7, 2008 - 10:59pm
  • Jayalaxmi.Patil
    ಉ: ಮುಂಬಯಿ ಮುಖಗಳು ಭಾಗ ೧.....
    August 7, 2008 - 10:33pm
  • hamsanandi
    ಉ: ಆ ರಾತ್ರಿ...(ನೈಜ ಘಟನೆ ಆಧಾರಿತ ಕಥೆ)
    August 7, 2008 - 9:56pm
  • shreedevikalasad
    ಉ: ಮನಸ್ಸಿಗೂ ಅಂಗಿ. . ?
    August 7, 2008 - 9:09pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 43 ಅತಿಥಿಗಳು ಆನ್ಲೈನ್ ಇರುವರು.


ಮನಸು ಬೆಳೆದಂತೆಲ್ಲ ಹಸಿವು ಬೆಳೆಯುವುದಯ್ಯ |
ತಣಿಸಲದನೊಗೆಯುವುದು ಬಗೆಬಗೆಯ ಯುಕ್ತಿ ||
ಮನುಜನೇಳಿಗೆಯದರಿನ್; ಆ ಮನಸಿನೇಳಿಗೆಗೆ |
ಕೊನೆಯೆಲ್ಲಿ? ಚಿಂತಿಸೆಲೊ -- ಮಂಕುತಿಮ್ಮ ||

— ಡಿ. ವಿ. ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator