ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › Shyam Kishore ರವರ ಬ್ಲಾಗ್

ಗಣೇಶ ಪಂಚರತ್ನ

December 25, 2006 - 2:30am — Shyam Kishore

ಸಂಸ್ಕೃತ-ಕನ್ನಡ ಉಭಯಭಾಷಾ ಕೋವಿದರಾದ ನನ್ನ ಅಜ್ಜ ಬೀರೂರು ಚಿದಂಬರ ಜೋಯಿಸರು ವನಸುಮದಂತೆ ಬಾಳಿ-ಬದುಕಿದವರು. ಕಾಶೀಪಂಡಿತಸಭಾದಿಂದ "ಸಂಸ್ಕೃತಕವಿಕಂಠೀರವ" ಎಂಬ ಬಿರುದನ್ನೂ, ಕರ್ನಾಟಕ ಸರ್ಕಾರ-ಗಾಂಧೀ ಸ್ಮಾರಕ ನಿಧಿಯ ವತಿಯಿಂದ ಸುವರ್ಣ ಪದಕವನ್ನೂ ಗಳಿಸಿದ್ದ ಅಜ್ಜನ ಲೇಖನಿಯಿಂದ ಹಲವಾರು ಅತ್ಯುತ್ತಮ ಕೀರ್ತನೆ,ಭಜನೆ,ಕಾವ್ಯಗಳು ಹೊರಹೊಮ್ಮಿವೆ. ಇವರ ಆಯ್ದ ಭಜನೆ-ಕೀರ್ತನೆಗಳ ಸಂಕಲನವಾದ "ಭಜನಮಣಿಮಾಲಾ" ಈಗಾಗಲೇ ನಾಲ್ಕು ಮುದ್ರಣಗಳನ್ನು ಕಂಡಿದೆ. ಇದರಿಂದ ಆಯ್ದ ಗಣಪತಿಯನ್ನು ಸ್ತುತಿಸುವ ಕೀರ್ತನೆ "ಗಣೇಶ ಪಂಚರತ್ನ"ವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ. ಸಂಪೂರ್ಣ "ಗಣೇಶ ಅಥರ್ವಶೀರ್ಷ"ದ ಸಾರವನ್ನು ಈ ಭಜನೆಯ ಐದು ಚರಣಗಳಲ್ಲಿ ಕಾಣಬಹುದಾಗಿದೆ.

ಗಣೇಶ ಪಂಚರತ್ನ
ರಾಗ - ಸಿಂಧು ಭೈರವಿ

ಏಕದಂತ ವಕ್ರತುಂಡ ವಿಘ್ನರಾಜನೇ|
ಮೊದಲು ನಿನ್ನ ಭಜಿಸಿದವಗೆ ಕಾರ್ಯಸಾಧನೆ||   ||ಪ||

ಶ್ರುತಿಯು 'ತತ್ವಮಸಿ'ಯು ನೀನೆ ನೀನೆ ಕರ್ತೃವೂ|
ನೀನೆ ಲೋಕಸಂರಕ್ಷಕ ನೀನೆ ಸಂಹಾರಕ||
ನೀನು ನಿತ್ಯನಾತ್ಮ ನೀನು ನೀನೆ ಬ್ರಹ್ಮವೂ|
ಜ್ಞಾನಮಯನು ನೀನೆ ದೇವ ನೀನೆ ಚಿನ್ಮಯ       ||೧||

ಭೂಮಿ ನೀನು ಜಲವು ನೀನು ನೀನೆ ಅಗ್ನಿ ವಾಯುವೂ|
ಅಂತರಿಕ್ಷವೆಲ್ಲ ನೀನೆ ವೇದರೂಪನೂ||
ಮೂರುಗುಣವ ಮೀರಿದವನು ಮೂರುದೇಹವಿಲ್ಲದವನು|
ಕಾಲಮೂರ ದಾಟಿದವನು ಶಕ್ತಿರೂಪನೂ          ||೨||

ಬ್ರಹ್ಮ ನೀನು ವಿಷ್ಣು ನೀನು ನೀನೆ ರುದ್ರನೂ|
ಇಂದ್ರನಗ್ನಿವಾಯು ನೀನೆ ಚಂದ್ರ ಸೂರ್ಯರೂ||
ಪಾಶಾಂಕುಶಧಾರಿದೇವ ವರದಾಭಯ ಹಸ್ತನೇ|
ಇಲಿಯನೇರಿ ಮೆರೆವ ದೊರೆಯೆ ಮೂಷಕಧ್ವಜ     ||೩||

ಲಂಬೋದರ ರಕ್ತವಸನ ಶೂರ್ಪಕರ್ಣನೇ|
ರಕ್ತಗಂಧಲಿಪ್ತದೇಹ ರಕ್ತಕುಸುಮ ಪೂಜಿತ||
ವ್ರಾತಪತಿಯೆ ಪ್ರಮಥಪತಿಯೆ ನಮಿಪೆ ಗಣಪತಿ|
ನುತಿಪೆ ಶಿವನ ಸುತನೆ ನಿನ್ನ ವರದಮೂರ್ತಿಯೇ   ||೪||

ನಿನ್ನ ನಾಮ ಪಠಿಸಲವಗೆ ವಿಘ್ನವಿಲ್ಲವೋ|
ನಿನ್ನ ಹಾಸ್ಯಗೈದ ಶಶಿಗೆ ಕ್ಷಯವು ಬಂದುದೂ||
ನಮಿಸೆ ನಿನ್ನ ಸಿದ್ಧಿ ಬುದ್ಧಿ ತಾನೆ ದೊರೆವುದೂ|
ಅದುವೆ ನೀ ಚಿದಂಬರೇಶ ಮನದೊಳಿರುವುದೂ   ||೫||

                                        - ಬೀರೂರು ಚಿದಂಬರ ಜೋಯಿಸ್

~.~
  • Shyam Kishore ರವರ ಬ್ಲಾಗ್
  • Login or register to post comments
  • 474 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
December 26, 2006 - 11:14am — Sunil Jayaprakash

ಸಂ: ಗಣೇಶ ಪಂಚರತ್ನ

Sunil Jayaprakash's picture

ನಿಮ್ಮ ಅಜ್ಜನವರಿಗೆ ಮತ್ತು ನಿಮಗೆ ಧನ್ಯವಾದಗಳು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ದೇವರಿಗೊಂದು ಮನವಿ
  • ಬೈಟೊ ಕಾಫಿ !!! - ೧
  • ಪ್ರೇಮೋದ್ಗಾರ...!!
  • ಪ್ರೇಮೋದ್ಗಾರ...!!
  • ೧.ನೀನೆ ಕೇಳಿದ ಪ್ರಶ್ನೆ
Syndicate content

ಲೇಖಕರು

Shyam Kishore's picture

ಪರಿಚಯ

ವೃತ್ತಿಯಿಂದ ನಾನೊಬ್ಬ ಸಾಫ್ಟ್‌ವೇರ್ ಇಂಜಿನಿಯರ್. ಪ್ರವೃತ್ತಿಯಿಂದ ಸಾಹಿತ್ಯ ಮತ್ತು ಕಲಾಭ್ಯಾಸಿ. ಓದುವುದು, ಚಿತ್ರ ಬಿಡಿಸುವುದು, ಆಗಾಗ ಕವನ-ಚುಟುಕ-ಲೇಖನ ಬರೆಯುವುದು, ಹರಟೆ ಕೊಚ್ಚೋದು, ಕನ್ನಡ ಸಿನಿಮಾ ನೋಡುವುದು ಇತ್ಯಾದಿ ಹವ್ಯಾಸಗಳು.
ಮತ್ತಷ್ಟು ವಿವರಗಳಿಗೆ ನನ್ನ ಬ್ಲಾಗ್ ಪುಟ ಮನದ ಮಾತು ನೋಡಿ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಪ್ರೌಢಲೇಖನಗಳ ರಹಸ್ಯ
  • ವಿಪಿನಸಂವಾದ
  • ನನ್ನ ಅನುನಾಯಿ
  • ನೆನಪುಗಳು
  • ಕನಸಾ,,,,,,,,,,,,,,,,
  • ಶರಣರ ಬದುಕನ್ನು ಮರಣದಲ್ಲಿ ನೋಡು
  • ಸೇತುವೆ ಇತ್ತಂತೆ ರಾಮನೇ ಒಡದನಂತೆ....!
  • ಗೂಡು...
  • ಮುತ್ತಿನ-ಶೃಂಗಾರ
  • ನಾನಿರುವುದೆ ನಿಮಗಾಗಿ :REMIX
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 1:10am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:08am
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:06am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:01am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:00am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 56 ಅತಿಥಿಗಳು ಆನ್ಲೈನ್ ಇರುವರು.


ನನಗೆ ಯಾರೂ ಶತ್ರುಗಳಿಲ್ಲ. ಅವರೆಲ್ಲರೂ ಈಗಾಗಲೇ ಸತ್ತಿದ್ದಾರೆ

— ವಿನ್ ಸ್ಟನ್ ಚರ್ಚಿಲ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator