ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › sindhu ರವರ ಬ್ಲಾಗ್

ದೀಪಗಳು..

July 3, 2007 - 5:31pm — sindhu

ಇನ್ನೇನು ಮಳೆ ಬರುವ ಸೂಚನೆಯಲ್ಲಿ ಕಪ್ಪುಗಟ್ಟಿದ ಮೋಡ, ಇನ್ನೆಲ್ಲೋ ಮಳೆಬಿದ್ದ ಕುರುಹಾಗಿ ತೀಡಿ ಬಂದ ತಂಗಾಳಿಯ ಆ ಸಂಜೆ ನಾನು ಮತ್ತು ತಮ್ಮ ಗಾಂಧಿ ಬಜಾರಿಗೆ ಹೊರಟಿದ್ದೆವು. ಊರಿಗೆ ಹೊರಟ ಅವನಿಗೆ ಅಲ್ಲಿರುವ ಪುಟ್ಟ ಮಕ್ಕಳಿಗೆ ಆಟ ಸಾಮಾನು, ಕತೆ ಪುಸ್ತಕ ಕೊಳ್ಳಬೇಕಿತ್ತು. ಗಡಿಬಿಡಿಯಲ್ಲಿ ಪಾರ್ಕ್ ಮಾಡಿ, ಇಳಿದು ಪುಸ್ತಕದಂಗಡಿ ಹೊಕ್ಕರೆ ಅಲ್ಲಿ ಕುರ್ಚಿಯಲ್ಲಿ ಪುಸ್ತಕವೊಂದನ್ನು ಹಿಡಿದು ಏನೋ ಮಾತಾಡುತ್ತ ಕುಳಿತ ನನ್ನ ಪ್ರೀತಿಯ ಕತೆಗಾರ. ಅಲ್ಲಲ್ಲಿ ಜನರಿದ್ದರು. ಹೇಗೆ ಮಾತಾಡುವುದೆಂಬ ಸಂಕೋಚದಲ್ಲಿ, ಆಚೆ ಬದಿಯಾಸಿ ಪುಸ್ತಕ ಆರಿಸಿ, ನಿದಾನವಾಗಿ ಗಲ್ಲೆಯ ಕಡೆ ಬಂದು ಅವರ ಕಣ್ಣೋಟಕ್ಕೆ ಸಿಕ್ಕಿಬಿದ್ದೆ.
ನನ್ನ ಮನದೊಳಗಣ ಖುಷಿ, ಮೈಯೆಲ್ಲ ಆವರಿಸಿ, ಮುಖಮಂಡಲದಲ್ಲಿ ನಗೆಹೂವಿನ ಗೊಂಚಲರಳಿ ತುಂಬ ದಿನಗಳ ಬಳಿಕ ನೋಡಲು ಸಿಕ್ಕಿದ ಅವರನ್ನು ವಿಷ್ ಮಾಡಿತು. ಅವರೋ ಕಡಲತೀರದವರಲ್ಲವಾ, ಪ್ರೀತಿಯ ರಾಶಿ; ಅಲೆಅಲೆಯಾಗಿ ನುಗ್ಗಿಬಂದ ಹಿಗ್ಗು ಅವರ ಮಿಂಚುಕಣ್ಣಿಂದಿಳಿದು, ಕನ್ನಡಕ ತೆಗೆಸಿ, ಹತ್ತಿರ ಬಂದು ಬಳಸಿ ಹಿಡಿಯಿತು.

ನನಗೆ ಟೇಬಲ್ ಮೇಲೆ ಕುಳಿತು ಅಜ್ಜನ ಕತೆ ಕೇಳುತ್ತಾ ಬೇರೆ ಲೋಕಕ್ಕೆ ತೇಲಿ ಹೋದ ಹಾಗೆ, ತುಂಬ ಇಷ್ಟವಾದ ಅಣ್ಣನ ತೋಳತೆಕ್ಕೆಗೆ ಸಿಕ್ಕಿದ ಹಾಗೆ, ತುಂಬದಿನಗಳಿಂದ ದೂರದೂರಲ್ಲಿದ್ದ ಗೆಳತಿ ಅಚಾನಕ್ ಸಿಕ್ಕಿ ಮಾತುಕತೆಯಾಡಿದ ಹಾಗೆ, ಈಗಷ್ಟೇ ಮಳೆ ನಿಂತು, ಬಿಸಿಲು ಹರಡಿ ಕಾಮನ ಬಿಲ್ಲು ಮೂಡಿದ ಹಾಗೆ.. ಎಲ್ಲ ಆಪ್ತ ಅನುಭವಗಳ ಒಟ್ಟಂದದ ಹಾಗೆ... ಮಾತು ಬರದೆ ಬರಿದೆ ನಕ್ಕೆ. ಮಾತ ಬದಲು ಅವರು ನಕ್ಕರು. ಹಾಗೆ ಒಂದಷ್ಟು ಅವರ ತಿಳಿವಿನ ಸವಿ ಸವಿದು, ನಾಲ್ಕೆಂಟು ಹಿತಮಾತನಾಡಿ, ಸುತ್ತರಿದಿದ್ದ ಯಾವ್ಯಾವುದೋ ಸೀರಿಯಸ್ ವಿಷಯಗಳಿಂದ ಕೆಲಕ್ಷಣಗಳ ಮಟ್ಟಿಗೆ ಮರೆಯಾಗಿ ಹಗುರ್‍ಆಗಿ.. ಹೇಗೆ ಹೇಳಲಿ ಆ ಕ್ಷಣಗಳ ಮಾಧುರ್ಯವನ್ನು..

ಇಳಿಸಂಜೆಯಲ್ಲಿ ಪುಟ್ಟ ದೀಪವೊಂದು ದೇವರಗೂಡಿನಲ್ಲಿ ಬೆಳಗಿ ಕತ್ತಲನ್ನ ಇಂಚಿಂಚೇ ತಳ್ಳಿದಂತ ಹಿತವಾದ ಬೆಳಕಲ್ಲಿ ಅದ್ದಿ ಹೋದೆ.

ಅದಾಗಿ ಮಾರನೆಯ ದಿನ, ಮನೆಯಲ್ಲಿ ಗಂಡನೊಡನೆ ಕೂತು ಬಿಸಿಬಿಸಿ ಕಾಫಿ ಕುಡಿಯುತ್ತಾ, ಚಾನಲ್ ತಿರುಗಿಸುತ್ತಿದ್ದಾಗ ಅಚಾನಕ್ ಆಗಿ  ಮನಸು ಗಾಂಧಿ ಬಜಾರು ಅಂತ ಬರೆದ ಪ್ರೀತಿಯ ಕವಿ ನಿಸಾರ್ ಅಹಮದ್ ಕಂಡರು. ಅಲ್ಲೆ ನಿಂತು ಅವರನ್ನು ಸವಿದೆವು. ಅಸ್ಖಲಿತ ಕನ್ನಡ, ಎಲ್ಲೂ ಗ್ರಂಥಸ್ಥವೆನ್ನಿಸದೆ ಆದರೆ ಕವಿತೆಯ ಸೊಗದಿಂದ ಹೊರಬರುವ ಸಹಜ ಮಾತುಗಳು, ಅವರ ಹಲವೆಂಟು ಕವಿತೆಗಳಲ್ಲಿ ಮಿಂದು ಬಂದ ಅನುಭವ. ಆ ಕಾರ್ಯಕ್ರಮ ನಡೆಸಿಕೊಟ್ಟವರು ಯಾರೋ ತಿಳಿಯಲಿಲ್ಲ ಗಬ್ಬಾಗಿ ಮಾತಾಡಿದರು. ನಿಸಾರ್ ಅಂತಹ ಹಿರಿಯ ಚೇತನದ ಮಾತನ್ನು ಅವರು ಅಲ್ಲಲ್ಲಿ ತಡೆಹಿಡಿದು ಪಾತಿ ಮಾಡಿ ಹರಿಯಬಿಡುತ್ತಿದ್ದರು. ತುಂಬ ಇರಿಟೇಟ್ ಆಗುತ್ತಿತ್ತು ನೋಡುತ್ತಿದ್ದ ನನಗೆ.. ಅಷ್ಟರಲ್ಲೆ ಅವರು ಏನೇ ಮಾಡಿದರೂ ಸರಳವಾಗಿ, ನೇರವಾಗಿ ಮಾತಾಡುತ್ತಿದ್ದ ನಿಸಾರರ ಹಿರಿತನದ ಮಾತುಗಳು ಮನಕ್ಕೆ ತಂಪೆರೆಯುತ್ತಿದ್ದವು. ಕಾರ್ಯಕ್ರಮದ ಉದ್ದೇಶ ತುಂಬ ಗೊಂದಲಮಯವಾಗಿತ್ತು, ಆದರೆ ಚಾನಲ್ ತಿರುಗಿಸದೆ ಕೂತು ನೋಡುವಂತೆ ಮಾಡಿದ್ದು ಕವಿವರ್ಯರೇ. ನಿರ್ವಾಹಕ ಎಲ್ಲೂ ಮಧ್ಯದಲ್ಲಿ ಮಾತಾಡದೆ, ಅವರಿಗೇ ಮಾತಾಡಲು ಬಿಟ್ಟಿದ್ದರೆ ಚೆನ್ನಾಗಿತ್ತು ಅನ್ನುವಷ್ಟು ಚೆನ್ನಾಗಿ ನಡೆಸಿಕೊಟ್ಟರು. ನಿಸಾರರು ಹೇಗೆ ಮುಸ್ಲಿಂ ಸಂವೇದನೆ ಎಂಬ ಜಾಡಿಗೆ ಬೀಳದೆ ಧ್ಯಾನಸ್ಥ ಮನಸ್ಥಿತಿಯಲ್ಲಿ ಕವಿತೆ ಬರೆದರು ಅನ್ನುವುದು ಹಿಗ್ಗಾಡಿ ಜಗ್ಗಾಡಿ ಕೇಳಿದ ಕಾರ್ಯಕ್ರಮ ನಿರ್ವಾಹಕನ ಪ್ರಶ್ನೆಗಳ ಸಾರಾಂಶ.  ಮತ್ತದೇ ಬೇಸರದ ಪ್ರಶ್ನೆಗೆ ನಿಸಾರರು ಬೆಣ್ಣೆ ಕದ್ದ ಕೃಷ್ಣನ ಹಾಡು ಬರೆದಂತೆ ನವಿರಾಗಿ, ಮೇಲೆಸೆದ ಕಲ್ಲು ಮತ್ತೆ ಕೆಳಗೆ ಬೀಳುವಷ್ಟು ಸಹಜವಾಗಿ ಉತ್ತರಿಸಿದರು. ಕುಲವನ್ನಾಧರಿಸಿ ಕವಿಯನ್ನು, ಕವಿತೆಯನ್ನು ಅಳೆಯುವ ಮಾಪನದ ಬಗ್ಗೆ ಅವರಿಗೆ ಕಿರಿಕಿರಿಯಾಗಿತ್ತು. ಬೆಳೆದ ವಾತಾವರಣವನ್ನು ಸಹಜವಾಗಿ ತಂದರೆ ಆ ಬಗ್ಗೆ ಕುಹಕವಾಡುವ ಸಧ್ಯದ ಸಾಹಿತ್ಯ ಪರಿಸ್ಥಿತಿಯ ಬಗ್ಗೆ ನೋವಿತ್ತು. ಹಳೆಯ ದಿನಗಳ ಧೀಮಂತ ಚರ್ಚೆ ವಿಮರ್ಶೆಗಳ ಬಗ್ಗೆ ಪ್ರೀತಿಯಿತ್ತು.

ನಾನು ಏನು ಹೇಳಲು ಹೊರಟೆ ಅಂದರೆ, ಇಲ್ಲಿಯವರೆಗೆ ಒಂದು ದಿನಕ್ಕೂ, ಅವರ ಕವಿತೆ ಓದಿದಾಗ, ಹಾಡು ಕೇಳಿದಾಗ ನಾನು ಅವರನ್ನು ನಿಸಾರ್ ಎಂದು ಅನುಭವಿಸಿದ್ದೆನೇ ಹೊರತು, ಆಹಾ ಎಷ್ಟು ಚಂದ ಕನ್ನಡದಲ್ಲಿ ಬರೆವ ಮುಸ್ಲಿಂ ಕವಿ ಎಂದಲ್ಲ. ಇದು ನಾವು ಬಹುಪಾಲು ಕನ್ನಡಿಗರ ಅನುಭವ ಕೂಡಾ. ಹೀಗಿದ್ದೂ ಮತ್ತೆ ಮತ್ತೆ ಅವರನ್ನು ಈ ಭೂಮಿಕೆಗೆ ಎಳೆತರುವ ಸಣ್ಣತನ ಬೇಸರ ತಂದಿತು.
ಅವರು ಸ್ವಲ್ಪ ಕಿರಿಕಿರಿಯಾಗಿದ್ದರೂ, ಲೋಕವೇ ಹೀರದಿರು ದುಂಬಿಯೊಲು ಹೂವ ಎಂದು ಕೇಳುವ ಒಲವಿನ ಬಳ್ಳಿಯಂತೆ ಮೈದುಂಬಿ ನಮಗಾಗಿ ಮಾತಾಡುತ್ತಿದ್ದರು, ನಿರ್ವಾಹಕರ ಪ್ರಶ್ನೆಯ ರಗಳೆಗೆ ಮತ್ತೆ ಸಿಕ್ಕಿಬೀಳುವ ಅರಿವಿದ್ದೂ, ಗಾಳಿಯಲಿ ಗಂಧದಂತೆ ತೇಲುವ ಚೇತನವಾಗಿ..

ಈ ಎರಡೂ ಭಿನ್ನ ದರ್ಶನಗಳು. ಒಂದು ಮನದ ಕತ್ತಲಲ್ಲಿ ಬೆಚ್ಚಗೆ ಮಿನುಗಿದ ದೀಪ, ಇನ್ನೊಂದು ಬುದ್ಧಿಯ ಕತ್ತಲೆಯಲ್ಲಿ ಹೊಳೆದು ಬೆಳಗಿದ ದೀಪ. ಎರಡೂ ಬೆಳಕುಗಳನ್ನುಂಡು ಇಲ್ಲಿ ಈಗ ಸ್ವಲ್ಪ ಬೆಳಕಿದೆ. ಆರದಂತೆ ಕಾಯುತ್ತ ಆ ಬೆಳಕನ್ನು ಅಕ್ಷರವಾಗಿಸುವ ನಮ್ರ ಪ್ರಯತ್ನ. ಆ ಚೇತನಗಳ ಬೆಳಕು ಸೋಂಕಿ ನನ್ನ ಚೈತನ್ಯ ಪುಳಕಿತಗೊಂಡಿದೆ.

  • ಕೃತಜ್ಞತೆ..
~.~
  • sindhu ರವರ ಬ್ಲಾಗ್
  • Login or register to post comments
  • 235 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • `ಥಟ್ ಅಂತ ಹೇಳಿ`ಯಲ್ಲಿ ನಿಸಾರ್ ಅಹಮದ್!
  • ಹೂವಿನ ಹುಡುಗಿ....
  • ಪಚ್ಚೆಕಲ್ಲು ಪಾಣಿ ಪೀಠ...
  • Podcastingನ ೭ನೇ ಸಂಚಿಕೆ: ಕೆ ಎಸ್ ನಿಸಾರ್ ಅಹ್ಮದ್ ರವರೊಂದಿಗೆ
  • ರುಚಿ
Syndicate content

ಲೇಖಕರು

sindhu's picture

ಪರಿಚಯ

ಹೇಳಿಕೊಳ್ಳುವಂತಹ ಪರಿಚಯ ವಿಷಯವೇನಿಲ್ಲ..
ಪ್ರಕೃತಿಯ ಚೆಲುವು ಮತ್ತು ಸಾಧ್ಯತೆಗಳನ್ನ ಮೆಚ್ಚುವವಳು.
ವೃತ್ತಿ: ಟೆಕ್ನಾಲಜಿ ಟ್ರೈನಿಂಗ್

ಎಲ್ಲ ನೋಟಗಳಾಚೆಗಿನ್ನೊಂದು ಚಿತ್ರವಿದೆ...

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಪ್ರೌಢಲೇಖನಗಳ ರಹಸ್ಯ
  • ವಿಪಿನಸಂವಾದ
  • ನನ್ನ ಅನುನಾಯಿ
  • ನೆನಪುಗಳು
  • ಕನಸಾ,,,,,,,,,,,,,,,,
  • ಶರಣರ ಬದುಕನ್ನು ಮರಣದಲ್ಲಿ ನೋಡು
  • ಸೇತುವೆ ಇತ್ತಂತೆ ರಾಮನೇ ಒಡದನಂತೆ....!
  • ಗೂಡು...
  • ಮುತ್ತಿನ-ಶೃಂಗಾರ
  • ನಾನಿರುವುದೆ ನಿಮಗಾಗಿ :REMIX
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
  • uniquesupri
    ಉ: ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
    July 24, 2008 - 11:55pm
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 11:51pm
  • srinivasps
    ಉ: ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
    July 24, 2008 - 11:49pm
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:48pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 11:40pm
  • ಗಣೇಶ
    ಉ: ಗೂದೆ ಹಣ್ಣು
    July 24, 2008 - 11:40pm
  • uniquesupri
    ಉ: ಮಾಧ್ಯಮಗಳು ಸ್ವಯಂ ನಿಯಂತ್ರಣ ಅನುಸರಿಸಲಿ
    July 24, 2008 - 11:39pm
  • uniquesupri
    ಉ: ಇದು ಬರಿ ಬೆಳಗಲ್ಲೋ...
    July 24, 2008 - 11:37pm
  • srinivasps
    ಉ: ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
    July 24, 2008 - 11:12pm
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 19 ಅತಿಥಿಗಳು ಆನ್ಲೈನ್ ಇರುವರು.


ಭಾರತ ದಾತ್ಮ೦ ಕ೦ಗೆಡುತಿದೆ ಪರ
ಸಾರಸ್ವತ ಸ೦ಪದ ಭರದಿ೦
ತಾರಿ ಹೋಗಿತಿದೆ ತಾಯ್ನಾಡಿನ ಮನ
ಏರುವಿದೇ ಸ್ವಪ್ರತ್ಯಯದಿ೦

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator