ಭ್ರಷ್ಟಾಚಾರ ಕಾಣಿಸದಂತೆ 'ಕಾರ್ಯ' ನಿರ್ವಹಿಸಿ: ಮು ಮಂತ್ರಿ
ವರ್ಗಾವಣೆ 'ಜಾತ್ರೆ'ಯಲ್ಲಿ ತಿಂದುಂಡು ತೇಗುತ್ತಿರುವ ಭ್ರಷ್ಟಾಸುರನ ರೌದ್ರ ನರ್ತನದ ಬಗ್ಗೆ ವಿ.ಕ ಪತ್ರಿಕೆಯು 'ವರ್ಗ:ದುಡ್ಡು ಮಾಡೋರ ಸ್ವರ್ಗ' ಹೆಸರಿನ ಎಫ್ ಐ ಆರ್ ದಾಖಲಿಸಿದನ್ನು(ಮೇ ೧೭,೨೦೦೬) ಕಂಡು 'ಎಚ್ಚೆತ್ತು'ಕೊಂಡಿರುವ ಮಾನ್ಯ ಮು.ಮಂತ್ರಿ ಅಧಿಕಾರಿಗಳೊಂದಿಗೆ ತುರ್ತು ಸಮಾಲೋಚನ ಸಭೆಯನ್ನು ನಡೆಸಿ ವರ್ಗಾವಣೆ ವಿಚಾರದಲ್ಲಿ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆಂದು ಅದೇ ಪತ್ರಿಕೆ ವರದಿ ಮಾಡಿದೆ(ಮೇ ೧೮,೨೦೦೬). ಆದರೆ ಆ ಪತ್ರಿಕೆಯು ತನ್ನ ವರದಿಯಲ್ಲಿ ಸ್ಥಳ ಅಭವಾದಿಂದಲೋ ಅಥವ ಮುದ್ರರಾಕ್ಷಸನ ಹಾವಳಿಯಿಂದಲೋ ಬಹು ಮುಖ್ಯ ಮಾಹಿತಿಯನ್ನು ಕೈ ಬಿಟ್ಟು ಅಪೂರ್ಣ ವರದಿಯನ್ನು ನೀಡಿದೆ. ಪ್ರಕಟವಾಗಿರುವ ವರದಿಯು "ವರ್ಗಾವಣೆ ವಿಚಾರದಲ್ಲಿ ಕಟ್ಟೆಚ್ಚರ ವಹಿಸುವಂತೆ ಮು ಮಂತ್ರಿ ಹೆಚ್.ಡಿ.ಕೆ.ಸ್ವಾಮಿ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ" ಎಂಬ ಸಾಲಿನೊಂದಿಗೆ ಪ್ರಾರಂಭವಾಗಿ, "ಭ್ರಷ್ಟಾಚಾರ ಕಂಡು ಬಂದರೆ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದರು" ಎಂಬ ಸಾಲಿನೊಂದಿಗೆ ಕೊನೆಗೊಳ್ಳುತ್ತದೆ. ಆದರೆ ತಲೆಹರಟೆ ಎಂಬ ಲದ್ದೀಗಾರನ ಪ್ರಕಾರ ವಿ.ಕ ದಲ್ಲಿ ಪ್ರಕಟವಾಗಿರುವ ಮೂಲ ವರದಿಯ ಪ್ರಾರಂಭಿಕ ಸಾಲು ಹೀಗಿದೆ:"ವರ್ಗಾವಣೆಗೆ ಸಂಬಂಧಿಸಿದ ಒಂದೂ 'ಕೇಸು' ಸಹ 'ಹೊರಗಿನ'ವರಿಗೆ ಗೊತ್ತಾಗದಂತೆ ಕಟ್ಟೆಚ್ಚರವಹಿಸುವಂತೆ ಮು.ಮಂತ್ರಿ ಅಧಿಕಾರಿಗಳಿಗೆ 'ತಾಕೀತು' ಮಾಡಿದ್ದಾರೆ".ಕೊನೆಯ ಸಾಲು "ಭ್ರಷ್ಟಾಚಾರ ಕಂಡು ಬಂದರೆ 'ತಪ್ಪಿತಸ್ಥರ' ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ಭ್ರಷ್ಟಾಚರ ಕಂಡು ಬಾರದಂತೆ 'ಕಾರ್ಯ' ನಿರ್ವಹಿಸುವಂತೆ ಸೂಚಿಸಲು ಮುಖ್ಯ ಕಾರ್ಯದರ್ಶಿಗೆ ಆದೇಶ ನೀಡಿದರು". ಜೈ ಭ್ರಷ್ಟಾಸುರ!!!!!!!
www.tale-harate.blogspot.com

- taleharate ರವರ ಬ್ಲಾಗ್
- Login or register to post comments
- 538 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



- ನಿರ್ವಾಹಕರ ಗಮನಕ್ಕೆ ತನ್ನಿ


RSS:
ಪ್ರತಿಕ್ರಿಯೆಗಳು
ಭ್ರ್ಷಷ್ಟಾಚಾರ....
ಶ್ರೀ ಕುಮಾರ ಸ್ವಾಮಿಯವರು ತಮ್ಮ ತೀರ್ಥರೂಪರವರನ್ನು ವಿಚಾರಿಸಿ ನಿಮಗೆ ತಿಳಿಸುತ್ತಾರೆ !
ವೆಂ.