ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಹೊಸ ರೂಪದಲ್ಲಿ ಕನ್ನಡ ವಾಟರ್ ಪೋರ್ಟಲ್

ಸಂಪದ › Sampada Blogs › taleharate ರವರ ಬ್ಲಾಗ್

ಐಶ್ ಮದುವೆಯ multi effects!!!!!

January 30, 2007 - 5:57pm — taleharate

2010ರಲ್ಲಿ ವಿಶ್ವದಾದ್ಯಂತ ದೂರ ಸಂಪರ್ಕ ಸ್ಥಗಿತಗೊಳ್ಳುತ್ತದೆಯಂತೆ. ಸೂರ್ಯನ ಉಜ್ವಲ ಕಿರಣದಿಂದಾಗಿ ಹೀಗಾಗುತ್ತದೆಯೆಂದು ಹೇಳಲಾಗಿದೆ. ಆದರೆ ಈ ಫೆಬ್ರವರಿ 27 ರಂದು ನಮ್ಮ ಸುದ್ದಿ ಮಾಧ್ಯಮಗಳ ಮೇಲೆ ಪ್ರಭಾವ ಬೀರಬಲ್ಲ ಘಟನೆಯ ಬಗ್ಗೆ ಎಲ್ಲೂ ವರದಿಯಾಗಿಲ್ಲ.

ಅಂದು 'ಐಶ್ ಮದುವೆ' ಎಂಬ ಘಟನೆಯ ತೀಕ್ಷಣ ಪ್ರಭಾವದಿಂದಾಗಿ ಇತರೆ ಎಲ್ಲಾ ಸುದ್ದಿಗಳು ಪತ್ರಿಕೆಗಳಲ್ಲಿ, ಟಿ ವಿ ಚಾನೆಲ್ ಗಳಲ್ಲಿ ಮೂಲೆಗುಂಪಾಗಲಿವೆ. ರಾಜಕಾರಣಿಗಳು,ನೇತಾರರು ಅಂದು ಯಾವುದೇ ಹೇಳಿಕೆಗಳಾಗಲಿ, ವಿರೋಧಿಗಳ ವಿರುದ್ದ ಆರೋಪ ಮಾಡುವುದಾಗಲಿ, ಹೊಸ ಯೋಜನೆ,ಯೋಚನೆಗಳನ್ನು ಪ್ರಕಟಿಸುವುದಾಗಲಿ ಮಾಡುವುದಿಲ್ಲವಂತೆ. 'ಐಶ್ ಮದುವೆ'ಯ ಮಂಗಳ ವಾದ್ಯದ ಅಬ್ಬರದಲ್ಲಿ ಇವರ ಕಿರುಚಾಟ ಕೇಳಿಸುವುದಿಲ್ಲವಾದ್ದರಿಂದ ಎಲ್ಲರೂ ಸರ್ವಸಮ್ಮತದಿಂದ ಈ ನಿರ್ಣಯ ಕೈಗೊಂಡಿದ್ದಾರೆ.

ಈ ಮಧ್ಯೆ, 'ಅಖಿಲ ಭಾರತ ವಿರಹಿಗಳ ಪಕ್ಷ' ಅಸ್ತಿತ್ತ್ವಕ್ಕೆ ಬಂದಿದ್ದು ಹಾಲಿ ನಟ ಹಾಗು ಮಾಜಿ 'ಐಶ್ ಪ್ರೇಮಿ' ಸಲ್ಮಾನ್ ಖಾನ್ ಈ ಪಕ್ಷದ ಅಧ್ಯಕ್ಷರಾಗಿ ಹಾಗು ಇನ್ನೊಬ ನಟ ವಿವೇಕ್ ಒಬೆರಾಯ್ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಈ ಪಕ್ಷದ ಕರ್ನಾಟಕ ರಾಜ್ಯ ಘಟಕಕ್ಕೆ ರವಿ ಬೆಳಗೆರೆ ಸಾರಥ್ಯ ವಹಿಸಿಕೊಂಡಿದ್ದಾರೆ.

ನಿನ್ನೆ ಮುಂಬಯಿ ಯಲ್ಲಿ ಕರೆದಿದ್ದ ಪತ್ರಿಕಾ ಗೋಷ್ಟಿಯಲ್ಲಿ ಪಕ್ಷದ ಕಾರ್ಯಕ್ರಮಗಳ ಬಗ್ಗೆ ಮಾತಾಡುತ್ತ ರಾಷ್ಟ್ರಧ್ಯಕ್ಷರು, ಫೆಬ್ರವರಿ 14(ಪ್ರೇಮಿಗಳ ದಿನ)ನ್ನು ಕರಾಳದಿನವನ್ನಾಗಿ ಆಚರಿಸಲು ಕರೆ ನೀಡಿದ್ದಾರೆ. ಅಂದು ಬೆಂಗಳೂರಿನಲ್ಲಿ ವಿರಹಿಗಳಿಗೆ ಸಾಂತ್ವನದ ಮಾತುಗಳಿರುವ ಸಿ ಡಿಯನ್ನು ರವಿ ಬೆಳಗೆರೆ ಬಿಡುಗಡೆ ಮಾಡಲಿದ್ದಾರೆ ಎಂದೂ ತಿಳಿಸಿದರು.

ಈ ಬಾರಿಯ ಪ್ರೇಮಿಗಳ ದಿನವನ್ನು ಕರಾಳ ದಿನವನ್ನಾಗಿ ಆಚರಿಸಲು ಕರೆ ನೀಡಿರುವುದರಿಂದ ಅಂದು ಆಗಲಿದ್ದ ಭರ್ಜರಿ ವಹಿವಾಟಿಗೆ ಕೊಡಲಿ ಪೆಟ್ಟು ಬಿದ್ದಿದೆ. ಪ್ರೇಮಿಗಳ ದಿನವನ್ನು ಬಂಡವಾಳವಾಗಿಸಿಕೊಂಡಿದ್ದ ವಾಣಿಜ್ಯ ಸಂಸ್ಥೆಗಳು ಅಪಾರ ನಷ್ಟ ಅನುಭವಿಸುವ ಸೂಚನೆ ಕಂಡು ಬಂದಿದೆ.

ಹೊಸದಾಗಿ ಪ್ರಾರಂಭ ಆಗಿರುವ 'ಅಖಿಲ ಭಾರತ ವಿರಹಿಗಳ ಪಕ್ಷ' ದೇಶದ ರಾಜಕಾರಣದಲ್ಲಿ ಹೊಸ ಅಧ್ಯಾಯ ಪ್ರಾರಂಭಿಸಿದೆ. ಇದರಿಂದ ರಾಜಕೀಯ ಕ್ಷೇತ್ರದಲ್ಲಿ ಯಾವ ತರಹ ಬದಲಾವಣೆಗಳಾಗಬಹುದೆಂದು ಕಾದು ನೋಡಬೇಕಾಗಿದೆ ಎಂದು ರಾಜಕೀಯ ವಿಮರ್ಶಕರು, ಚಿಂತಕರು,ಚಿಂತಿತರು ಅಭಿಪ್ರಾಯ ಪಟ್ಟಿದ್ದಾರೆ.

www.tale-harate.blogspot.com

~.~
  • taleharate ರವರ ಬ್ಲಾಗ್
  • Login or register to post comments
  • 389 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
January 31, 2007 - 5:13pm — santoshbhatta

Re: ಐಶ್ ಮದುವೆಯ multi effects!!!!!

santoshbhatta's picture

ಸ್ವಾಮಿ ತಲೆ ಹರಟೆ ಅವರೆ ನಮ್ಮ ಸಲ್ಲು ವಿರಹಿಗಳ ಸಂಘದ ಅಧ್ಯಕ್ಷರಾಗಬೇಕಿಲ್ಲ ಐಶ್ವರ್ಯ ಎಂಬ ಗತ ಕಾಲದ ಸುಂದರಿಯನ್ನು ಮೀರಿಸುವ ಕಟ್ರಿನಾ ಕೈಫ್ ರವರ ಹೃದಯದಲ್ಲಿ ಮನೆ ಮಾಡಿದ್ದಾರೆ. ಅವರನ್ನು ನೋಡಿ ವಿರಹದಲ್ಲಿ ಬಳಲುತ್ತಿರುವ ದೇವಿದಾಸರು ಬದುಕುವದು ಹೇಗೆ ಎಂದು ಕಲಿಯಬೇಕು ಅಷ್ಟೆ Wink

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪ್ರೇಮಿಗಳ ಆತ್ಮಹತ್ಯೆ ಹೆಚ್ಚಳಕ್ಕೆ ಕಾರಣ
  • ಇಂತಹ ರಾಜಕೀಯ ವ್ಯವಸ್ಥೆಗೆ ಬದಲಾವಣೆ ಎಂದು................?
  • ಹದಿನಾಲ್ಕರ ಆಚರಣೆ
  • Hard disk ಗೌಡರ ಮೌನವೄತ ಮತ್ತು ಮಾಜಿಯ 'ಕಾವೇರಿ'ದ ಜೋಕು!!!!
  • ಫೆಬ್ರವರಿ ೨೧ -ನಾಶವಾಗುತ್ತಿರುವ ಭಾಷೆಗಳು- ಕನ್ನಡ
Syndicate content

ಲೇಖಕರು

taleharate's picture

ಪರಿಚಯ

ಜನ ನನ್ನ ಗಂಭೀರ ಮಾತುಗಳನ್ನು ತಮಾಷೆಯಾಗಿ ಭಾವಿಸುತ್ತಾರೆ, ತಮಾಷೆ ಮಾತನ್ನು ಗಂಭಿರವಾಗಿ ಪರಿಗಣಿಸುತ್ತಾರೆ. ಅದೇ ನನ್ನ ಅಸಲಿ ಸಮಸ್ಯೆ!!!!!!!!!!
ನನ್ನ ಕನ್ನಡಕ ನೋಡಿ ನನ್ನನ್ನು ಬುದ್ದಿವಂತ ಅಂತಾರೆ ಜನ.ಜನಕ್ಕೇನು,ಏನು ಬೇಕಾದರು ಹೇಳುತ್ತಾರೆ.ನನ್ನ ದಡ್ಡತನಕ್ಕೆ ನಾನೇ ಸರಿಸಾಟಿ. ಪಿ ಯು ಸಿ ನಲ್ಲಿ ಸೆಕೆಂಡ್ ಕ್ಲಾಸ್,ಡಿಗ್ರಿ ಪಾಸ್ ಕ್ಲಾಸ್ ಅದೂ ಐದು ವರ್ಷದ ದೀರ್ಘ ದಂಡಯಾತ್ರೆಯ ನಂತರ.ಈಗ ಹೇಳಿ ನಾನು ಬುದ್ದಿವಂತನಾ?

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...
  • ಗೆಳತಿಗಾಗಿ ಒಂದು ಕವನ
  • ನೀವು ಆದರ್ಶ, ಶೋಭಾ ಕರಂದ್ಲಾಜೆ ಅಲ್ಲ...
  • ನಿನ್ನಿಂದ
  • ನಮ್ಮಧ್ವನಿ
  • ಟೋಪಿ ಹಳೆಯದಾದರೇನು?! ಕೋತಿ ನವನವೀನ!
  • ಸಮುದಾಯ ರೇಡಿಯೋ
  • ಬೂದಿಕೋಟೆ
  • ಕಾದಿರುವೆ ನಿನಗಾಗಿ
  • ಕುಹೂ ದನಿಯು ಕಿವಿ ತೂತ ಕೊರೆದಿತ್ತು!
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 12:40am
  • srinivasps
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 12:07am
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 11:48pm
  • shylaswamy
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 11:17pm
  • anil.ramesh
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:48pm
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:39pm
  • Sunil Jayaprakash
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:33pm
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 29, 2008 - 10:22pm
  • kulmanju
    ಉ: ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
    August 29, 2008 - 10:07pm
  • hamsanandi
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:03pm
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 62 ಅತಿಥಿಗಳು ಆನ್ಲೈನ್ ಇರುವರು.


ಎಲ್ಲರೂ ತಮ್ಮ ತಪ್ಪುಗಳಿಗೆ ಅನುಭವ ಎಂದು ಕರೆಯುತ್ತಾರೆ.

— ಆಸ್ಕರ್ ವೈಲ್ಡ್, ಹೆಸರಾಂತ ಐರಿಶ್ ಹಾಸ್ಯಗಾರ, ಕವಿ, ಕಾದಂಬರಿಗಾರ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator