ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಸಂಪದ ಫೌಂಡೇಶನ್ನಿಗೆ ನೆರವಾಗಿ

ಸಂಪದ › Sampada Blogs › thewiseant ರವರ ಬ್ಲಾಗ್

ನನ್ನ ಮೆಚ್ಚಿನ ಪುಸ್ತಕ

March 26, 2007 - 7:29pm — thewiseant

ನಾನು ಓದಿದ ಹಲವಾರು ಪುಸ್ತಕಗಳ ಪೈಕಿ ನನ್ನ ಮೇಲೆ ಸತ್ಪರಿಣಾಮ ಬೀರಿದ್ದು ಶ್ರೀ ಪರಮಹಂಸ ಯೋಗಾನಂದರ "ಯೋಗಿಯ ಆತ್ಮಕತೆ". Autobiography of a Yogi ಎಂಬ ಹೆಸರಿನಲ್ಲಿ ಮೊದಲ ಬಾರಿಗೆ ಪ್ರಕಟಗೊಂಡ ಈ ಪುಸ್ತಕ 60 ವರ್ಷಗಳ ನಂತರವೂ ವಿಶ್ವದಾದ್ಯಂತ ಪ್ರಸಿದ್ದವಾಗಿದೆ. ಬಹುತೇಕ ಎಲ್ಲಾ ಭಾರತೀಯ ಹಾಗು ವಿಷ್ವದ ಪ್ರಮುಖ ಭಾಷೆಗಳಿಗೆ ಅನುವಾದಗೊಂಡಿದೆ. ಪರಮಹಂಸ ಯೋಗಾನಂದರು ಒಬ್ಬ ಪ್ರಸಿದ್ದ ಯೋಗಿ. ಇದೊಂದು ಯೋಗಿಗಳ ಬಗ್ಗೆ ಒಬ್ಬ ಯೋಗಿಯೇ ಬರೆದ ಅಪರೂಪದ ಕೃತಿ. ತಾವು ಕಂಡು ಅನುಭವಿಸಿದ ಘಟನೆಗಳನ್ನು ಪ್ರಾಮಾಣಿಕವಾಗಿ ತಿಳಿ ಹಾಸ್ಯದೊಂದಿಗೆ ಹೇಳುತ್ತಾ ಓದುಗರನ್ನು ಯೋಗ ಮತ್ತು ಆಧ್ಯಾತ್ಮದ ವಿಷಯಗಳಿಗೆ ಪರಿಚಯಿಸುತ್ತಾರೆ.

ಎರಡು ದೇಹಗಳ ಸಂತ, ಗಾಳಿಯಲ್ಲಿ ತೇಲಾಡುವ ಸಂತ, ಪರಮಸುಖಿಯಾದ ಉಪಾಸಕ, ಗಂಧ ಬಾಬ, ಹುಲಿ ಸ್ವಾಮಿ, ನಿಧ್ರಿಸದ ಸಂತ, ನಿರಾಹಾರ ಯೋಗಿನಿ, ಆನಂದಮಯೀ ಮಾ ಮುಂತಾದವರೊಡನೆ ನಡೆದ ತಮ್ಮ ಭೇಟಿಯನ್ನು ವಿವರವಾಗಿ ತಿಳಿಸುತ್ತಾರೆ. ಕವಿ ರವೀಂದ್ರನಾಥ ಟ್ಯಾಗೋರ್, ಮಹಾತ್ಮಾ ಗಾಂಧಿ, ಜಗಧೀಶ್ ಚಂದ್ರ ಬೋಸ್ ರೊಂದಿಗಿನ ಭೇಟಿಯ ವಿವರಗಳು ಮಹತ್ವಪೂರ್ಣ. ಪವಾಡಗಳ ನಿಯಮಗಳು, ಭಾರತದ ಪ್ರಾಚೀನ ದೈವ ಸಾಕ್ಷಾತ್ಕಾರ ವಿಜ್ಞಾನವೆನಿಸಿದ ಕ್ರಿಯಾ ಯೋಗ, ಸಾವಿನಾಚೆಗಿನ ಬದುಕನ್ನು ಗತಿಸಿ ಸುಮಾರು ನಾಲ್ಕು ತಿಂಗಳ ಬಳಿಕ ಪುನರುಜ್ಜೀವನಗೊಂಡ ತಮ್ಮ ಪೂಜ್ಯ ಗುರು ಶ್ರೀ ಯುಕ್ತೇಶ್ವರರಿಂದ ದೊರಕಿದ ಅಪೂರ್ವವಾದ ಮಾಹಿತಿಯನ್ನು ಓದುಗರೊಂದಿಗೆ ಹಂಚಿಕೊಂಡಿದ್ದಾರೆ.
ಸಾವಿಲ್ಲದ ಚಿರಯವ್ವನದ ಗುರು ಶ್ರೀ ಮಹಾವತಾರ ಬಾಬಾಜಿಯವರ ಇರುವಿಕೆ ಮೊತ್ತಮೊದಲ ಬಾರಿಗೆ ಸಾರ್ವಜನಿಕರಿಗೆ ಈ ಪುಸ್ತಕದಿಂದ ತಿಳಿಯುವಂತಾಯಿತು. ಇವರ ಇಚ್ಛೆಯಂತೆ ಆಧ್ಯಾತ್ಮ ಪಿಪಾಸೆಯಿಂದ ಕೂಡಿದ ಪಾಶ್ಚಿಮಾತ್ಯರಿಗೆ ಯೋಗ ವಿದ್ಯೆಯನ್ನು ದಯಪಾಲಿಸಲು 1920 ರಲ್ಲಿ ಅಮೇರಿಕಕ್ಕೆ ಹೋಗಿ ಅಭೂತಪೂರ್ವ ಯಶಸ್ಸುಗಳಿಸಿದ ವಿವರವಿದೆ. 1935-36ರ ತಮ್ಮ ಭಾರತದ ಭೇಟಿಯ ವಿವರಗಳು ತುಂಬಾ ಸ್ಸ್ವಾರಸ್ಯಕರ. ತಮ್ಮ ಮಹಾಸಮಾಧಿಯಾಗುವ ಮೊದಲು 1946ರಲ್ಲಿ ಪ್ರಕಟಗೊಂಡ ಈ ಪುಸ್ತಕಕ್ಕೆ ನಂತರದ ಬೆಳವಣಿಗೆಗಳನ್ನು ಹೇಳುತ್ತಾ ಓದುಗರ ಅನೇಕ ಪ್ರಶ್ನೆಗಳಿಗೆ ಉತ್ತರವಾಗಿ ಯೋಗ ಮತ್ತು ಆಧ್ಯಾತ್ಮದ ಬಗ್ಗೆ ಇನ್ನಷ್ಟು ವಿವರಗಳನ್ನು ಒಂದು ಹೆಚ್ಚುವರಿ ಅಧ್ಯಾಯದಲ್ಲಿ ನೀಡಿದ್ದಾರೆ.
ಸುಲಲಿತವಾಗಿ ಓದಿಸಿಕೊಂಡು ಹೋಗುವ ಈ ಪುಸ್ತಕ ಧರ್ಮ ದೇಶ ಕಾಲಗಳನ್ನು ಮೀರಿ ಜನಪ್ರಿಯವಾಗಿರುವುದರ ಕಾರಣ ಇದು ಸತ್ಯವೂ ಶಿವವೂ ಸುಂದರವೂ ಆಗಿದೆ. ಎಲ್ಲರ ಮನೆ ಮನಗಳಲ್ಲೂ ಈ ಪುಸ್ತಕ ಬೆಳಗಲಿ ಎಂಬುದೇ ನನ್ನ ಆಶಯ.

ಎನ್. ಅಂಜನ್ ಕುಮಾರ್
thewiseant@yahoo.co.in

~.~
  • thewiseant ರವರ ಬ್ಲಾಗ್
  • Login or register to post comments
  • 1068 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
March 27, 2007 - 12:01pm — Shyam Kishore

ದನಿಗೂಡು: ನನ್ನ ಮೆಚ್ಚಿನ ಪುಸ್ತಕ

Shyam Kishore's picture

ಹೌದು, ಈ ಪುಸ್ತಕ ಬಹಳ ಸೊಗಸಾಗಿದೆ. ಯೋಗಾನಂದರವರು ತಮ್ಮ ಗುರುಗಳನ್ನು ಶಂಕಿಸಿ, ಬೇರೆ ಗುರುಗಳನ್ನು ಹುಡುಕಲು ತೊಡಗಿದಾಗ ನಡೆವ ಘಟನೆಗಳೂ ಈ ಪುಸ್ತಕದ ಮುಖ್ಯ ಅಂಶಗಳಲ್ಲೊಂದು ಅಲ್ಲವೇ? ಹಾಗೇ ನೀವು ಸ್ವಾಮಿ ರಾಮ ಅವರ "ಹಿಮಾಲಯದ ಮಹಾತ್ಮರ ಸನ್ನಿಧಿಯಲ್ಲಿ" ಓದಿದ್ದೀರಾ? ಓದಿಲ್ಲವಾದಲ್ಲಿ ಅದನ್ನೂ ಒಮ್ಮೆ ಓದಿ. ಬಹಳ ಸುಂದರವಾದ ಪುಸ್ತಕ.

- ಶ್ಯಾಮ್ ಕಿಶೋರ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
March 27, 2007 - 8:18pm — thewiseant

Re: ದನಿಗೂಡು: ನನ್ನ ಮೆಚ್ಚಿನ ಪುಸ್ತಕ

thewiseant's picture

ಪ್ರಿಯ ಶ್ಯಾಮ್ ಕಿಶೋರ್,

ನಿಮ್ಮ ಪ್ರತಿಕ್ರಿಯೆಗೆ ವಂದನೆಗಳು. ಸ್ವಾಮಿ ರಾಮರ "Living with the Himalayan masters" ಪುಸ್ತಕ ನನ್ನ ಬಳಿ ಇದೆ. ಸುಂದರವಾದ ಪುಸ್ತಕ. ಅದರಲ್ಲಿರುವ ವಿಷಯಗಳು ತುಂಬಾ ಆಸಕ್ತಿಪೂರ್ಣ. ಉದಾಹರಣೆಗೆ ಕಾಶ್ಮೀರದಲ್ಲಿ ಯೇಸು ವಾಸವಿದ್ದ ಮಂದಿರ, ಉಷಾ ಭಾಷೆಯ ಅಸ್ತಿತ್ವ ಮುಂತಾದುವು.

ಯೋಗಿಯ ಆತ್ಮ ಕಥೆ ಯಾವ ಭಾಷೆಯಲ್ಲಿ ಓದಿದ್ದೀರಿ?. ನನಗೆ ಇದರ ಕನ್ನಡ ಭಾಷಾಂತರದ ಬಗ್ಗೆ ಅಷ್ಟು ಸಮಾಧಾನವಿಲ್ಲ. ಮೊಲದ autobiography of a yogi ತುಂಬಾ ಸೊಗಸಾಗಿದೆ.ಓದಿಲ್ಲವಾದರೆ ಒಮ್ಮೆ ಓದಿ. ಕನ್ನಡಕ್ಕೆ ಭಾಷಾಂತರಿಸಿದವರನ್ನು ಒಮ್ಮೆ ಭೇಟಿ ಮಾಡಿದ್ದೆ. ಅವರು ಹೇಳಿದ ಪ್ರಕಾರ ಇದರ ಭಾಷಾಂತರ ಒಂದು ತಂಡದಿಂದ ಮಾಡಲಾಗಿತ್ತು. ಭಾಷಾಂತರದ ಕೆಲಸ ಎಷ್ಟು ಕಷ್ಟವೆಂಬುದು ನನ್ನ ಸ್ವಂತ ಅನುಭವದಿಂದ ನನಗೆ ತಿಳಿದಿದೆ.

ನನ್ನೊಡನೆ ವ್ಯವಹರಿಸಲು ನಿಮಗೆ ಸ್ವಾಗತ.
ನಿಮ್ಮ ವಿಶ್ವಾಸಿ,
ಅಂಜನ್
thewiseant@yahoo.co.in
(yahoo messenger ನಲ್ಲೂ ಲಭ್ಯ)

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
March 28, 2007 - 11:17am — Shyam Kishore

ಉ: Re: ದನಿಗೂಡು: ನನ್ನ ಮೆಚ್ಚಿನ ಪುಸ್ತಕ

Shyam Kishore's picture

ನಾನು "ಯೋಗಿಯ ಆತ್ಮಕಥೆ"ಯ ಕನ್ನಡ ಅನುವಾದ ಮಾತ್ರ ಓದಿದ್ದೀನಿ. ಸಾಧ್ಯವಾದಾಗ ಇಂಗ್ಲಿಷ್ ಮೂಲ ಓದಬೇಕು. ಆದರೆ "ಹಿಮಾಲಯದ ಮಹಾತ್ಮರ ಸನ್ನಿಧಿಯಲ್ಲಿ"ಯನ್ನು ಇಂಗ್ಲಿಷ್ - ಕನ್ನಡ ಎರಡರಲ್ಲೂ ಓದಿದ್ದೆ. ಕನ್ನಡ ಅನುವಾದ ಚೆನ್ನಾಗಿದೆ ಅನ್ನಿಸಿತು.

- ಶ್ಯಾಮ್ ಕಿಶೋರ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
May 24, 2007 - 7:53pm — venkatesh

ಉ: ನನ್ನ ಮೆಚ್ಚಿನ ಪುಸ್ತಕ

venkatesh's picture

dear kumar,

I will really do it. thanks.
venkatesh

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಯೋಗಿಯ ಆತ್ಮ ಕಥೆ
  • ಭಾರತದ ಜ್ಞಾನಾವತಾರ
  • 'ಕನ್ನಡ ಪುಸ್ತಕ ಮಾರಾಟ ಮಳಿಗೆ' ಉದ್ಘಾಟನಾ ಸಮಾರಂಭ- ಮುಂಬೈನಲ್ಲಿ !
  • ಮಹಾತ್ಮಾ ಗಾಂಧಿಯವರ ಜ್ಞಾಪಕಾರ್ಥ
  • ನಾ ಮೆಚ್ಚಿದ ಪುಸ್ತಕ: "ಶ್ರೀ ಕರ್ನಾಟಕ ಭಕ್ತ ವಿಜಯ"
Syndicate content

ಲೇಖಕರು

thewiseant's picture

ಪೂರ್ಣ ಹೆಸರು
ಎನ್. ಅಂಜನ್ ಕುಮಾರ್

ಪರಿಚಯ

ಯೋಗ, ಆಧ್ಯಾತ್ಮ , ಗಾಂಧೀವಾದ, ಓದು, ಬರವಣಿಗೆ, ಮಕ್ಕಳ ಸಾಹಿತ್ಯ , ಇಂಟರ್‍ನೆಟ್ ಮುಂತಾದುವು ನನ್ನ ಆಸಕ್ತಿಯ ವಿಷಯಗಳು

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಜೋಹದ್ (ನಂದುವಾಲಿ ನದಿ ಪ್ರದೇಶ), ರಾಜಸ್ಥಾನ

(ಚಿತ್ರ: Farhad Contractor.)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಮುಂಬಯಿ ಮುಖಗಳು ಭಾಗ ೧.....
  • ಗುಟ್ಟು - ಸ್ಫೂರ್ತಿ ಸೆಲೆ ೬
  • ಕಣ್ಣೀರು - ಸ್ಫೂರ್ತಿ ಸೆಲೆ ೫
  • ಜೀವನ - ಸ್ಫೂರ್ತಿ ಸೆಲೆ ೪
  • ಸಾಲ - ಸ್ಫೂರ್ತಿ ಸೆಲೆ ೩
  • ಸಂತೋಷ - ಸ್ಫೂರ್ತಿ ಸೆಲೆ ೨
  • ಹಣ - ಸ್ಫೂರ್ತಿ ಸೆಲೆ ೧
  • ಆ ರಾತ್ರಿ...(ನೈಜ ಘಟನೆ ಆಧಾರಿತ ಕಥೆ)
  • ಮನಸ್ಸಿಗೂ ಅಂಗಿ. . ?
  • ನಿನ್ನ ನಗುವಿಗೆ ನನ್ನ ಕನಸನರ್ಪಿಸುವೆ..
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • anivaasi
    ಉ: ಹಸಿವು - ಮಾಯ್ಸನ ಕಂತೆ ೧೨
    August 8, 2008 - 2:20am
  • anivaasi
    ಉ: ಮನಸ್ಸಿಗೂ ಅಂಗಿ. . ?
    August 8, 2008 - 2:15am
  • anivaasi
    ಉ: ಕ್ರೌರ್ಯ ಮತ್ತು ಬಲಿ
    August 8, 2008 - 2:13am
  • anivaasi
    ಉ: ಕ್ರೌರ್ಯ ಮತ್ತು ಬಲಿ
    August 8, 2008 - 2:06am
  • kalpana
    ಉ: Abroad ಅನ್ನೋ ಮಾಯೆ...
    August 8, 2008 - 12:11am
  • kannada.kanteerava
    ಉ: ಕನ್ನಡ ಮಾತನಾಡದ ಶಾಸಕ
    August 7, 2008 - 11:33pm
  • Rajeshwari
    ಉ: ಸ೦ಪದದಲ್ಲಿ ಜಾಣೆಯರು
    August 7, 2008 - 10:59pm
  • Jayalaxmi.Patil
    ಉ: ಮುಂಬಯಿ ಮುಖಗಳು ಭಾಗ ೧.....
    August 7, 2008 - 10:33pm
  • hamsanandi
    ಉ: ಆ ರಾತ್ರಿ...(ನೈಜ ಘಟನೆ ಆಧಾರಿತ ಕಥೆ)
    August 7, 2008 - 9:56pm
  • shreedevikalasad
    ಉ: ಮನಸ್ಸಿಗೂ ಅಂಗಿ. . ?
    August 7, 2008 - 9:09pm
ಇನ್ನಷ್ಟು
ಈಗಿನಂತೆ 0 ಸದಸ್ಯರು ಮತ್ತು 79 ಅತಿಥಿಗಳು ಆನ್ಲೈನ್ ಇರುವರು.


ಪ್ರತಿಯೊಬ್ಬರೂ ಮದುವೆಯಾಗಬೇಕು. ಹೆಂಡತಿ ಒಳ್ಳೆಯವಳಾದರೆ ಸುಖವಾಗಿರುವಿ. ಹೆಂಡತಿ ಕೆಟ್ಟವಳಾದರೆ ತತ್ವಜ್ನಾನಿಯಾಗುವಿ.

— ಅರಿಸ್ಟಾಟಲ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator