ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › tvsrinivas41 ರವರ ಬ್ಲಾಗ್

ಭಾಗ - ೫

February 6, 2006 - 9:07am — tvsrinivas41

೧೯೮೪ ರ ಅಕ್ಟೋಬರ್ ೩೧ನೇ ತಾರ್‍ಈಖು, ಸಿ.ಎ.ಐ.ಐ.ಬಿ ಪರೀಕ್ಷೆಯಿದ್ದಿತು. ಮನೆಯ ಎದುರೇ ಇದ್ದ ನಾಷ್ಯನಲ್ ಕಾಲೇಜಿಗೆ ಹೋಗಿ ಪರೀಕ್ಷೆಯನ್ನು ಬರೆಯಬೇಕಿತ್ತು. ನಾಲ್ಕೈದು ದಿನಗಳ ಹಿಂದೆಯಷ್ಟೇ ಹಲ್ಲಿಗೆ ಸಿಲ್ವರ್ ತುಂಬಿಸಿದ್ದ ಸಮಯ. ಆಗ ನನಗೆ ಸ್ವಲ್ಪ ಜ್ವರವಿದ್ದಿತ್ತು. ಅಂದು ಪರೀಕ್ಷೆ ಇದ್ದುದರಿಂದ ಹೋಗಲೇ ಬೇಕಿತ್ತು. ಏನನ್ನೂ ತಿನ್ನಲು ಮನಸ್ಸಿರಲಿಲ್ಲ. ಅಷ್ಟು ಹೊತ್ತಿಗೆ ಸ್ನೇಹಿತ ರಾಘವೇಂದ್ರ (ಕಾಲೇಜಿನಿಂದ ಸ್ನೇಹಿತನಾಗಿದ್ದು ಒಟ್ಟಿಗೇ ಬ್ಯಾಂಕು ಸೇರಿದವನು), ಅವರ ತಾಯಿ ಕಳುಹಿಸಿದರೆಂದು ರವೆ ಗಂಜಿಯನ್ನು ತಂದಿದ್ದ. ಬೇರೆಯ ದಿನಗಳಲ್ಲಿ ಗಂಜಿಯನ್ನು ನೋಡಲೂ ಅಸಹ್ಯ ಪಡುತ್ತಿದ್ದವನು ಅಂದು ಚಪ್ಪರಿಸಿಕೊಂಡು ತಿಂದಿದ್ದೆ. ಅವನೊಡನೆ ನಾನು ಪರೀಕ್ಷೆಗೆ ಹೊರಟೆ. ಸರಿಯಾಗಿ ಓದಿರಲಿಲ್ಲ. ಏನು ಬರೆಯುವುದು ಎಂದು ಯೋಚಿಸುತ್ತಿರುವಷ್ಟರಲ್ಲೇ ಅಂದಿನ ಪರೀಕ್ಷೆ ಮುಂದೆ ಹೋಗಿದೆಯೆಂದೂ ತಿಳಿದಿತ್ತು. ಅಬ್ಬಾ! ಕೊನೆಗೂ ಓದಲು ಸಮಯ ಸಿಕ್ಕಿತು ಎಂದು ಸಂತಸ ಪಟ್ಟಿದ್ದೆ. ಏಕೆ ಪರೀಕ್ಷೆ ಮುಂದೆ ಹೋಗಿದೆ ಎಂದು ತಿಳಿಯಲೂ ವ್ಯವಧಾನವಿರಲಿಲ್ಲ.
ಎಂತಹ ವಿಪರ್ಯಾಸ ನಾಯಕಿಯನ್ನು ಕಳೆದುಕೊಂಡು ಇಡೀ ದೇಶವೇ ಶೋಕದಲ್ಲಿ ಮುಳುಗಿದ್ದಾಗ ನಾನು ಪರೀಕ್ಷೆ ಮುಂದಕ್ಕೆ ಹೋಗಿರುವುದರ ಬಗ್ಗೆ ಸಂತೋಷ ಪಡ್ತಿದ್ದೆ. ಮರುದಿನ ದಿನ ಪತ್ರಿಕೆಯನ್ನು ನೋಡಿದ ಮೇಲೆಯೇ ಇಂದಿರಾ ಗಾಂಧಿಯವರ ಕೊಲೆಯ ಬಗ್ಗೆ ತಿಳಿದದ್ದು.

ಇದಕ್ಕೆ ಒಂದು ವರ್ಷ ಮೊದಲು (ಸೆಪ್ತೆಂಬರ್ ೧, ೧೯೮೩) ನನ್ನ ತಾತ (ತಾಯಿಯ ತಂದೆ) ಕೂಡಾ ದೈವಾಧೀನರಾದದ್ದು. ಅವರ ಬಗ್ಗೆ ಒಂದೆರಡು ಮಾತುಗಳು. ನನ್ನ ತಾಯಿ ನನ್ನ ತಾತ ಅಜ್ಜಿಯರಿಗೆ ಮೊದಲನೆಯ ಮಗಳು. ನನ್ನ ತಾತ ಆರೋಗ್ಯ ಇಲಾಖೆಯಲ್ಲಿ ಆರೋಗ್ಯಾಧಿಕಾರಿಯಾಗಿ ನಿವೃತ್ತರಾದವರು. ನಾಟಕಗಳಲ್ಲಿ ಪಾತ್ರವಹಿಸಿ ಬಹಳ ಹೆಸರು ಮಾಡಿದ್ದರು. ಏ ವಿ ವರದಾಚಾರ್ಯರ ನಾಟಕಗಳನ್ನು ನೋಡಿ ಅದರಿಂದ ಪ್ರೇರಿತರಾಗಿದ್ದರು.
ಅಯ್ಯೋ! ಅವರ ಹೆಸರೇ ಹೇಳಲಿಲ್ಲ ಅಲ್ವೇ. ಸಿ.ಕೆ.ಸೂರ್ಯನಾರಾಯಣ ರಾವ್. ಚಿಕ್ಕ ವಯಸ್ಸಿನಿಂದಲೂ ಬಹಳ ಕಷ್ಟಪಟ್ಟು ಮೇಲೆ ಬಂದವರು. ಅವರು ನನ್ನ ತಾತ ಎಂದು ಹೇಳಿಕೊಳ್ಳಲು ಒಂದು ಬಗೆಯ ಹೆಮ್ಮೆ ಆಗುತ್ತದೆ. ಮಲೇರಿಯಾಲಜಿಯಲ್ಲಿ ಉನ್ನತ ತರಬೇತಿಗಾಗಿ ಇಂಡೋನೇಷಿಯಾಗೆ ಹೋಗಿ ಬಂದಿದ್ದರು. ಆಗ ಇಂಡೋನೇಷಿಯಾ ಜನ ಜೀವನದ ಬಗ್ಗೆ ಒಂದು ಸಣ್ಣ ಹೊತ್ತಿಗೆಯನ್ನು ಬರೆದು ಪ್ರಕಟಿಸಿದ್ದರು. ಇದಷ್ಟೇ ಅಲ್ಲ ವೃತ್ತಿಯಲ್ಲಿ ಆರೋಗ್ಯ ಅಧಿಕಾರಿಯಾಗಿ ಉತ್ತಮ ಹೆಸರನ್ನು ಪಡೆದಿದ್ದವರು, ನಾಟಕ ರಂಗದ ಜೀವನದ ಒಳ ಹೊರಗನ್ನು ತಿಳಿಸುವ ಲೇಖನವನ್ನು ಧಾರಾವಾಹಿಯಾಗಿ ಸುಧಾ ವಾರಪತ್ರಿಕೆಯಲ್ಲಿ ಬರೆದು ಪ್ರಕಟಿಸಿದ್ದರು. ದೂರ್ವಾಸ ಮುನಿಯ ಅಪರಾವತಾರವಾಗಿದ್ದ ಅವರನ್ನು ಕಂಡು ಎಂದಿಗೂ ದೂರವಿರುತ್ತಿದ್ದೆ. ಕೆಲಸ ಸಿಕ್ಕ ಮೇಲೆಯೇ ನಾನು ಅವರೊಂದಿಗೆ ಮುಕ್ತವಾಗಿ ಮಾತನಾಡಿದ್ದು. ನಾನು ಬಿ.ಕಾಂ. ಮೊದಲನೆಯ ದರ್ಜೆಯಲ್ಲಿ ಪಾಸಾಗಿದ್ದರೂ ಒಂದು ವರ್ಷದ ಕಾಲ ಸರಕಾರೀ ನೌಕರಿ ಸಿಕ್ಕದೇ ಒದ್ದಾಡಿತ್ತಿದ್ದು, ನಂತರ ಎ.ಜೀಸ್ ಆಫೀಸಿನಲ್ಲಿ ಕೆಲಸ ಸಿಕ್ಕಿದ ಹಿಂದೆಯೇ ರಿಸರ್ವ್ ಬ್ಯಾಂಕಿನಲ್ಲಿ ಮೆಡಿಕಲ್ ಎಕ್ಸಾಮಿನೇಷನ್ ಆದಾಗಲೇ, ಕಾರ್ಪೋರೇಷನ್ ಬ್ಯಾಂಕಿನಿಂದ ಕೆಲಸಕ್ಕೆ ಆರ್ಡರ್ ಬಂದು, ಆಗಲೇ ಕರ್ನಾಟಕ ಸರಕಾರದ ನೌಕರಿಯ ಆರ್ಡರ್ ಬಂದದ್ದು, ಕೇಳಿದ ಅವರು ಮೊದಲ ಬಾರಿಗೆ ಮನೆಯ ಅಂಗಳದ ಕಲ್ಲು ಹಾಸಿನ ಮೇಲೆ ಜೊತೆಗೆ ಕುಳ್ಳಿರಿಸಿಕೊಂಡು ಬಹಳ ಆಪ್ಯಾಯತೆಯಿಂದ ಮಾತನಾಡಿಸಿದ್ದು ಮರೆಯಲಾರದ ಘಟನೆ. ಅವರಾಡಿದ ಮಾತುಗಳು ಈಗಲೂ ಕಿವಿಯಲ್ಲಿ ಗುಂಯ್‍ಗುಡುತ್ತಿವೆ.

'ಇಷ್ಟು ದಿನಗಳು ನಿಮ್ಮೆಲ್ಲರನ್ನೂ ಬಹಳ ಸ್ಟ್ರಿಕ್ಟ್ ಆಗಿ ನೋಡಿದ್ದು ನಿನಗೆ ವ್ಯಥೆ ತಂದಿದೆಯೇನಯ್ಯಾ. ಐ ಯಾಮ್ ಪ್ರೌಡ್ ಆಫ್ ಯು ಮೈ ಬಾಯ್. ಕೇಳು ಇವತ್ತು ಹೇಳ್ತಿದ್ದೀನಿ, ನೀವೆಲ್ಲರೂ ನಿಮ್ಮ ನಿಮ್ಮ ಕಾಲ ಮೇಲೆ ನಿಲ್ಲಲಿ, ಜೀವನದ ಅರಿವಾಗಿ, ಇತರರಿಗೆ ಭಾರವಾಗದೇ ಇತರರ ಭಾರವನ್ನು ಹೊರುವಂತಹ ಶಕ್ತಿಯನ್ನೂ ಬುದ್ಧಿಯನ್ನೂ ಹೊಂದಲಿ ಅಂತ ಅಷ್ಟೇ ನಾನು ನಿಮ್ಮಗಳನ್ನು ಸ್ವಲ್ಪ ನಿಕೃಷ್ಟವಾಗಿ ನೋಡುತ್ತಿದ್ದೆ. ನಿನಗೆ ಗೊತ್ತೇನಯ್ಯಾ, ನಾನೂ ವಾರಾನ್ನ ಮಾಡಿಯೇ ಬೆಳೆದವನು. ಎಲ್ಲೋ ಮೂಲೆಯಲ್ಲಿ ಬೆಳೆದವನು ವಿಲಾಯತಿಗೆ ಹೋಗಿ ಬರುವುದು ಎಂದರೇನು ಸುಲಭದ ವಿಷಯವೇ. ನನ್ನ ಹಾಗೆಯೇ ಜೀವನವನ್ನು ನೀನೂ ಅರಿಯುತ್ತಿರುವೆ. ನಿನಗೆ ಒಳ್ಳೆಯದಾಗಲಿ. ಇನ್ಮೇಲೆ ನೀನು ನನ್ನ ಸ್ನೇಹಿತನಿದ್ದ ಹಾಗೆ. ಆಗಾಗ ಬರ್ತಿರಯ್ಯ'.

ಏನೇ ಆಗಲಿ ಆ ತಾತನನ್ನು ಮರೆಯಲಾದೀತೇ? ಇಂದು ಈ ಮಟ್ಟಕ್ಕೆ ಬರಲು ಮನದಲ್ಲಿ ಛಲ ಬಂದಿದ್ದರೆ ಅದು ಅಂದು ಅವರು ಹೇಳಿದ ಮಾತುಗಳೇ ಕಾರಣ. ಅವರ ಆ ಮಾತುಗಳು ಆಪ್ಯಾಯತೆ ನನ್ನಲ್ಲಿ ಮಾನವೀಯತೆಯನ್ನು ಮೂಡಿಸಿತು. ನನ್ನ ದುರಾದೃಷ್ಟ, ನಾನು ಅವರೊಂದಿಗೆ ಹೆಚ್ಚಿನ ಕಾಲ ಕಳೆಯಲಾಗಲಿಲ್ಲ. ಅವರು ಸಾಯುವ ಮೊದಲು ಸ್ವಲ್ಪ ಕಾಲ ಆಸ್ಪತ್ರೆಯಲ್ಲಿ ಇದ್ದರು. ಆಗ ಕೆಲವು ದಿನಗಳ ಕಾಲ ಅವರೊಂದಿಗಿರುವ ಅವಕಾಶ ಸಿಕ್ಕಿತ್ತು. ಆಗಲೂ ಅವರು ಹೆಚ್ಚು ಮಾತನಾಡಲಿಲ್ಲ. ಅವರ ಕರಾರುವಾಕ್ಕಾದ ಜೀವನಕ್ರಮ, ಮಿತ ಆಹಾರ ಸೇವನೆಗಳು ನನಗೆ ಪಾಠ ಕಲಿಸಿದವು.

  • ಅನುಭವ ಕಥನ
~.~
  • tvsrinivas41 ರವರ ಬ್ಲಾಗ್
  • Login or register to post comments
  • 674 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬ್ಯಾಂಕಿನಲ್ಲಿ ರಜತೋತ್ಸವ ಭಾಗ ೨
  • ಬ್ಯಾಂಕಿನಲ್ಲಿ ರಜತೋತ್ಸವ ಭಾಗ ೧
  • ರಜತೋತ್ಸವ ಭಾಗ ೪
  • ಛಠ್ ಪೂಜೆ
  • ಹೊಸ ವರ್ಷದ ಹಳೆಯ ನೆನೆಪು
Syndicate content

ಲೇಖಕರು

tvsrinivas41's picture

ಪರಿಚಯ

ಸಾಹಿತ್ಯಾಭಿಲಾಷಿ, ಕವನ ರಚಿಸುವ ಹುಚ್ಚು, ಕೆಲವು ಲೇಖನಗಳನ್ನೂ ಬರೆದಿರುವೆ, ಬರೆಯುತ್ತಿರುವೆ.
ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ಅಸಿಸ್ಟೆಂಟ್ ಜನರಲ್ ಮ್ಯಾನೆಜರ್ ಆಗಿರುವೆ. ಬೆಂಗಳೂರು ಶಾಖೆಯನ್ನು ೧೯೮೨ ರಲ್ಲಿ ಸೇರಿ ೧೯೮೯ರಲ್ಲಿ ಮುಂಬಯಿಗೆ ಬಂದಿರುವೆ.

ನನ್ನ ಅಂತರ್ಜಾಲ ತಾಣ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • IT - ಸಿಂಪ್ಟಮ್ಸ
  • ಬಿಟ್ಟು ಹೋದವಳಿಗಾಗಿ
  • ಶಾಲೆಗಳು, ಸ್ಪರ್ಧಾತ್ಮಕ ಜಗತ್ತು..
  • ನೀರವತೆ!
  • ಓದಿದ್ದು ಕೇಳಿದ್ದು ನೋಡಿದ್ದು-9
  • ಓ, ಬನ್ನಿ, ಸೋದರರೆ, ಬೇಗ ಬನ್ನಿ!
  • ನನ್ನ ನೆನಪು ನಿನಗೆ ಬರೋದೇ ಇಲ್ಲವಾ ?
  • ನಿನ್ನ ಕನಸಿನ ಸಿನೆಮಾದಲ್ಲಿ ಹಾರ ಹಾಕಿಸಿಕೊಂಡ ಫೋಟೋವಿನ ಪಾತ್ರ..!
  • ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
  • ಲಿನಕ್ಸಾಯಣ - ೧೭- ಫೇಸ್ಟ್ ಬಿನ್ (pastebin) ಬಗ್ಗೆ ಗೊತ್ತಾ?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • savithasr
    ಉ: IT - ಸಿಂಪ್ಟಮ್ಸ
    September 5, 2008 - 4:16pm
  • savithasr
    ಉ: ನೀರವತೆ!
    September 5, 2008 - 3:57pm
  • vikashegde
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 5, 2008 - 3:52pm
  • gururajkodkani
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 5, 2008 - 3:48pm
  • veeravenki
    ಉ: ಬಿಟ್ಟು ಹೋದವಳಿಗಾಗಿ
    September 5, 2008 - 2:54pm
  • yogeshkrbhat1
    ಉ: ಬಿಟ್ಟು ಹೋದವಳಿಗಾಗಿ
    September 5, 2008 - 2:41pm
  • savithru
    ಉ: ಮಾರತ್ತಳ್ಳಿ ಸೇತುವೆಯ ಮೇಲೆ ಅನಿವಾಸಿಯ ಪೋನು
    September 5, 2008 - 2:30pm
  • yogeshkrbhat1
    ಉ: ಪದಬೆಳಗು: ೩: ಸಜ್ಜನ
    September 5, 2008 - 2:28pm
  • anil.ramesh
    ಉ: ಬಿಟ್ಟು ಹೋದವಳಿಗಾಗಿ
    September 5, 2008 - 2:27pm
  • ASHMYA
    ಉ: ನೀರವತೆ!
    September 5, 2008 - 2:17pm
ಇನ್ನಷ್ಟು
ಈಗಿನಂತೆ 8 ಸದಸ್ಯರು ಮತ್ತು 61 ಅತಿಥಿಗಳು ಆನ್ಲೈನ್ ಇರುವರು.


ನೀವು ಹಣಕ್ಕಾಗಿ ಕೆಲಸಮಾಡುವುದಿಲ್ಲ ಎಂಬ ಗುರಿಯನ್ನು ಖಂಡಿತಾ ಮುಟ್ಟಬಹುದು.

— ವಾಲ್ಟ್ ಡಿಸ್ನಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator