Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › Sampada Blogs › tvsrinivas41 ರವರ ಬ್ಲಾಗ್

ಮುಂಬೈ ಕನ್ನಡಿಗನ ದಿನಚರಿ

August 5, 2005 - 6:50pm — tvsrinivas41

ಕಳೆದ ಮಂಗಳವಾರ ಮತ್ತು ಭಾನುವಾರದ ಮಳೆಯ ಆರ್ಭಟದಿಂದ ತತ್ತರಿಸಿದ್ದ ಜನರ ದೈನಂದಿನ ಕೆಲಸ ಕಾರ್ಯಗಳು ಇಂದಿಗೆ ಸಾಮಾನ್ಯ ಸ್ಥಿತಿಗೆ ಬಂದಿತು. ಅದು ಹೇಗೆ ಇಂದೇ ಸಾಮಾನ್ಯ ಸ್ಥಿತಿಗೆ ಬಂದಿತು ಅಂತ ಹೇಳ್ತೀರಿ ಅಂತ ನೀವು ಕೇಳಬಹುದು. ಇಂದು ಲೋಕಲ್ ಟ್ರೈನಿನಲ್ಲಿ ತುಂಬಾ ಜನಸಂದಣಿ ಇತ್ತು. ಮತ್ತು ನನ್ನ ಸ್ನೇಹಿತನೊಬ್ಬನ ಜೇಬಿಗೆ ಕತ್ತರಿ ಬಿದ್ದಿತ್ತು.
ಪ್ರತಿದಿನ ಟ್ರೈನ್ ಹತ್ತುವಾಗ, ಹತ್ತಿದ ಮೇಲೆ, ಇಳಿಯುವಾಗ ತುಂಬಾ ಕಷ್ಟ ಕೋಟಲೆಗಳನ್ನು ಅನುಭವಿಸುತ್ತೀವಿ. ನನಗೇನೋ ಅದು ಆಭ್ಯಾಸವಾಗಿ ಹೋಗಿದೆ. ಆದರೆ ಹೊಸಬರಿಗೆ ಇಲ್ಲಿಯವರೆವಿಗೆ ಇದ್ದ ಧೈರ್ಯವೆಲ್ಲಾ ಕಳೆದು ತಮ್ಮ ತಮ್ಮ ಊರುಗಳಿಗೆ ಮರಳೋಣ ಅಥವಾ ಕೆಲಸವೇ ಬಿಟ್ಟುಬಿಡೋಣ ಅಥವಾ ಆತ್ಮಹತ್ಯೆ (!) ಮಾಡಿಕೊಳ್ಳೋಣ ಎನ್ನುವಷ್ಟು ಬೇಸರವಾಗುತ್ತದೆ. ಅದೇ ಕೆಲವರಿಗೆ ಹಾಗೇನೂ ಅನ್ನಿಸುವುದಿಲ್ಲ. ಅವರು ವಿ.ಐ.ಪಿ. ಏನೋ ಅನ್ನುವಂತೆ ಅವರಿಗೆ ಕುಳಿತುಕೊಳ್ಳಲು ಸ್ಥಾನ ಸಿಕ್ಕುವುದು, ಒಳಗೆ ಹೋಗಲು ಅನುವಾಗುವುದು. ಅದು ಹೇಗೆ ಎನ್ನುವುದು ನನಗೆ ಚಿದಂಬರ ರಹಸ್ಯದಂತಾಗಿತ್ತು. ಇಂದು ಅದನ್ನು ಹತ್ತಿರದಿಂದ ಅನುಭವಿಸಿದೆ. ಅವರು ಅನುಸರಿಸುವ 3 ಅತ್ಯಂತ ಮುಖ್ಯ ಅಂಶವನ್ನು ಅನುಸರಿಸುವರು. ಒಂದು - ತಲೆಗೆ ಚೆನ್ನಾಗಿ ಎಣ್ಣೆ ಹಚ್ಚಿರುವರು. ಆದೂ ಜಿಗುಟು ಜಿಗುಟಾಗಿರುವ ಹರಳೆಣ್ಣೆ. ಅವರು ಹತ್ತಿರ ಬಂದರೇ ಎಲ್ಲರೂ ದೂರ ಸರಿಯುವರು.

ಎರಡು - ಮಳೆಗಾಗಿ ಛತ್ರಿ ಇಟ್ಟುಕೊಂಡಿರುವರು. ಅದು ಒದ್ದೆಯಾಗಿದ್ದಾಗ ಅದನ್ನು ಕೊಡವುದಿಲ್ಲ. ಆ ಕೆಲಸವನ್ನು ಗಾಡಿ ಹತ್ತಿದ ಮೇಲೆಯೇ ಮಾಡುವರು. ಅವರ ಛತ್ರಿಯಿಂದ ಸ್ನಾನ ಮಾಡಿಸಿಕೊಳ್ಳಲಿಚ್ಛಿಸಿದ ಜನ ಅವರಿಗೆ ಜಾಗ ಬಿಡುವರು. ಮಳೆಗಾಲ ಇಲ್ಲದಿದ್ದಾಗಲೂ ಛತ್ರಿ ಹಿಡಿದಿರುವರು. ಆಗೆಲ್ಲಿಂದ ಬರುವುದು ನೀರು ಅಂತ ಕೇಳ್ತೀರಾ? ಸಾರ್ವಜನಿಕ ನಲ್ಲಿ ಇದೆಯಲ್ಲ.

ಮೂರು - ಯಾವಾಗಲೂ ಹುರಿಗಡಲೆ ಅಥವಾ ಕಡಲೆಕಾಯಿ ಬೀಜ ತಿನ್ನುವರು. ಒಳಗೆ ಬಂದ ತಕ್ಷಣ ಅವರಿಂದ ಢರ್ ಭುರ್ ಝೇಂಕಾರ.

ನೀವೇ ಹೇಳಿ ಅವರುಗಳು ನಿಜಕ್ಕೂ ಬುದ್ಧಿವಂತರಲ್ಲವೇ? ಇನ್ನು ಮೇಲೆ ನಾನೂ ಅವರನ್ನು ಅನುಸರಿಸಲು ಪ್ರಯತ್ನಿಸುವೆ.

Ornamental seperator
  • tvsrinivas41 ರವರ ಬ್ಲಾಗ್
  • Login or register to post comments
  • 819 hits
  • Email this blog
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 6, 2005 - 5:01pm — hpn

ಶಬ್ಧದ ಉಪಯೋಗ

hpn's picture

"ಜನಗಳು" ಎಂದು ಬರೆಯೋದಕ್ಕಿಂತ "ಜನರು" ಎಂದು ಬರೆದರೆ ಚೆನ್ನಾಗಿರುತ್ತದೆ, ಅಲ್ಲವೆ?

  • Login or register to post comments
  • link
  • Email this ಪ್ರತಿಕ್ರಿಯೆ
August 6, 2005 - 5:20pm — hpn

ಒಳ್ಳೆಯ ಪ್ಲಾನ್ ಅಲ್ವೆ? ;)

hpn's picture

ಅವರುಗಳು ಅನುಸರಿಸಿರುವುದು ಒಳ್ಳೆಯ ಐಡಿಯಾಗಳೆ, ಆದರೆ ನೀವೂ ಕಡಲೇಕಾಯಿ ತಿಂದು ಡರ್ ಪುರ್ ಎಂದುಕೊಂಡು ಹೋಗಲು ಸಾಧ್ಯವೆ? Eye-wink

  • Login or register to post comments
  • link
  • Email this ಪ್ರತಿಕ್ರಿಯೆ
August 6, 2005 - 6:00pm — tvsrinivas41

ಸರಿ

tvsrinivas41's picture

ಮೊದಲಿಗೆ ಪದ "ಜನಗಳು" ತಿದ್ದಿರುವೆ. ಇದು ಎರಡನೇ ಬಾರಿ . ಹಳೆಯ ಅಭ್ಯಾಸಗಳು ಅಷ್ಟು ಸುಲಭವಾಗಿ ಸಾಯುವುದಿಲ್ಲವಂತೆ.

ಹೌದು ನಾವು ಅವರಂತೆ ಇರೋದಿಕ್ಕಾಗೋದಿಲ್ಲ. ತಲೆಗೆ ಹಾಗೆ ಎಣ್ಣೆ ಹಚ್ಚಿಕೊಳ್ಳಲೂ ಆಗುವುದಿಲ್ಲ, ಛತ್ರಿಯಲ್ಲಿಯ ನೀರನ್ನು ಎಲ್ಲರ ಮೇಲೆ ಕೊಡವಲಾಗುವುದಿಲ್ಲ. ಸಾರ್ವಜಿನಿಕವಾಗಿ ಅಪಾನವಾಯುವಂತೂ ಬಿಡಲಾಗುವುದಿಲ್ಲ, ನಿಂತುಕೊಂಡಂತೂ ಹೋಗುವ ಶಕ್ತಿ ಇದೆ.

ತವಿಶ್ರೀನಿವಾಸ

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಇಂದಿನ ಡೈರಿಯಿಂದ
  • ಹೃದಯವಂತಿಕೆ
  • ರೆವೆರೆಂಡ್ ಫರ್ಡಿನ್ಯಾಂಡ್ ಕಿಟ್ಟೆಲ್ ರ ಬಗ್ಗೆ ಒಂದೆರಡು ಮಾತುಗಳು
  • 7.22 ಲೋಕಲ್
  • ಏಕೆ ಹೀಗಾಗುವುದು?
Syndicate content

ಲೇಖಕರು

tvsrinivas41's picture

ಪರಿಚಯ

ಸಾಹಿತ್ಯಾಭಿಲಾಷಿ, ಕವನ ರಚಿಸುವ ಹುಚ್ಚು, ಕೆಲವು ಲೇಖನಗಳನ್ನೂ ಬರೆದಿರುವೆ, ಬರೆಯುತ್ತಿರುವೆ.
ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ಅಸಿಸ್ಟೆಂಟ್ ಜನರಲ್ ಮ್ಯಾನೆಜರ್ ಆಗಿರುವೆ. ಬೆಂಗಳೂರು ಶಾಖೆಯನ್ನು ೧೯೮೨ ರಲ್ಲಿ ಸೇರಿ ೧೯೮೯ರಲ್ಲಿ ಮುಂಬಯಿಗೆ ಬಂದಿರುವೆ.

ನನ್ನ ಅಂತರ್ಜಾಲ ತಾಣ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
  • ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
  • ’ಅವಧಿ’ಯಲ್ಲಿ ಆಡಿದ ಉಯ್ಯಾಲೆ
  • ಬಂದಿದೆ ಚುನಾವಣೆ
  • ಐನಾಪುರ ಸುತ್ತುಮುತ್ತಲ ಕನ್ನಡದ ಪರಿಚಯ
  • ಲಿನಕ್ಸಾಯಣ - ೭ - ಚಿತ್ರಪುಟಗಳ ಲೋಕಕ್ಕೊಂದು ಚೊಕ್ಕ ಕೊಡುಗೆ ಗಿಂಪ್
  • ಸೃಷ್ಟಿ(ಸುಶೀಲನ ಪದ್ಯಗಳು)
  • ಕಟಪಯಾದಿ ಸೂತ್ರ
  • ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
  • ಕೆಂಪು, ಕಣ್ಣು ಏನು ಪರಿಹಾರ..???
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಶ್ರೀನಿಧಿ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 9:09am
  • hamsanandi
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:25am
  • keshavamurali
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:10am
  • ವೈಭವ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:04am
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:26pm
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:23pm
  • ವೈಭವ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 15, 2008 - 9:59pm
  • ಶ್ರೀನಿಧಿ
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 15, 2008 - 9:39pm
  • ಶ್ರೀನಿಧಿ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 15, 2008 - 9:34pm
  • Vinod Pattanshetti
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 15, 2008 - 7:23pm
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 11 ಅತಿಥಿಗಳು ಆನ್ಲೈನ್ ಇರುವರು.

ಯಾರಾದರೂ ಸಮುದ್ರದಲ್ಲಿ ಇಳಿಯ ಬಯಸಿದರೆ 'ದೋಣಿ ತೆಗೆದುಕೊಂಡು ಹೋಗು' ಎನ್ನುವೆವು. ಇದೇ ಕರ್ಮ ಯೋಗ. ದಂಡೆಯ ಮೇಲೆ ನಿಂತು ನೋಡುವುದು ಸನ್ಯಾಸ. ಇವೆರಡರ ಆನಂದವೂ ಒಂದೇ. ಎರಡರಲ್ಲಿಯೂ ಮನುಷ್ಯ ಮುಳುಗುವುದಿಲ್ಲ. ಸಾಕ್ಷಿಯಂತೆ ಸಮುದ್ರವನ್ನು ನೋಡುತ್ತಾನೆ, ಇದರಲ್ಲೇ ಇರುವುದು ಆನಂದ

— ವಿನೋಬಾ ಭಾವೆ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator