ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ › Sampada Blogs › tvsrinivas41 ರವರ ಬ್ಲಾಗ್

ಛಠ್ ಪೂಜೆ

November 9, 2005 - 10:54pm — tvsrinivas41

ನನ್ನ ಸ್ನೇಹಿತ ಭರತೇಂದು ಕುಮಾರ್ ದಾಸ್ ಮೂಲತ: ಬಿಹಾರಿನವನು. ಅವನು ನನ್ನ ಅಂತರ್ಜಾಲ ತಾಣ ನೋಡಿ, ಏ! ನನ್ನ ಬಗ್ಗೆಯೂ ಒಂದು ಲೇಖನ ಬರೆಯೋ ಅಂತ ಕೇಳಿದ. ಅಲ್ಲಪ್ಪ, ನಿನಗೆ ಕನ್ನಡ ಓದೋದಿಕ್ಕೆ ಬರೋದಿಲ್ಲ ( ಮಾತನಾಡಿದರೆ ಸ್ವಲ್ಪ ಸ್ವಲ್ಪ ಅರ್ಥ ಮಾಡಿಕೊಳ್ಳುತ್ತಾನೆ ) ನಾನು ಏನು ಬರೆದೆ ಅಂತ ನಿನಗೆ ಹೇಗೆ ಗೊತ್ತಾಗತ್ತೆ ಮತ್ತು ಹಾಗೆ ನಿನ್ನ ಬಗ್ಗೆ ಬರೆಯುವುದರಿಂದ ನಿನಗೇನು ಪ್ರಯೋಜನ ಎಂದು ಕೇಳಿದೆ. ಅದಕ್ಕೆ ಅವನಂದದ್ದು, ಅಲ್ಲ ಸಾಹಿತ್ಯ ಲೋಕದಲ್ಲಿ ಕನ್ನಡ ಒಳ್ಳೆಯ ಹೆಸರು ಮಾಡಿದೆ, ನಿನ್ನ ಲೇಖನಗಳೂ ಆಗಾಗ್ಯೆ ಬರ್ತಿವೆ. ಆಮೇಲೆ ನನ್ನ ಬಗ್ಗೆಯೇ ನೀನೊಂದು ಕಥೆ ಬರೆದರೂ ಬರೆದು ಬಿಡ್ತೀಯೇ, ನೀನು ಅಪಾಯಕಾರಿ ಮನುಷ್ಯ. ನನ್ನ ಬಗ್ಗೆ ಮೊದಲೇ ಒಂದು ಬರೆದು ಬಿಡೋ ಎಂದು ದುಂಬಾಲು ಬಿದ್ದ.

ಸರಿ, ಇವನ ಬಗ್ಗೆ ನಾನೇನು ಬರೆಯಲಿ, ಎಂದು ಯೋಚಿಸ್ತಿದ್ದಾಗ, ಅವನೇ ಲೇ! ನನ್ನ ಊರಿನ ಬಗ್ಗೆ ಕೇಳೋ, ನಮ್ಮ ಹಬ್ಬಗಳ ಬಗ್ಗೆ ಕೇಳೋ, ಹೇಳ್ತೀನಿ ಅದನ್ನೇ ನೀನು ಬರೆಯುವಿಯಂತೆ ಎಂದುಬಿಡೋದೇ. ಸರಿ ಹೇಳಪ್ಪ, ಅದೂ ಒಂದು ಆಗಿ ಬಿಡಲಿ ಎಂದು ಹೇಳಿದೆ. ಅವನು ಹೇಳಿದ್ದನ್ನು ನಿಮ್ಮ ಮುಂದೆ ಇಡುತ್ತಿರುವೆ.

ದಾಸ್‍ನ ಊರು ಉತ್ತರ ಬಿಹಾರದ ಧರಭಂಗ ಜಿಲ್ಲೆಯಲ್ಲಿರುವ ಒಂದು ಹಳ್ಳಿ. ಅದು ನೇಪಾಳದ ಗಡಿಯಿಂದ ೪೦ ಕಿಲೋಮೀಟರುಗಳು ದೂರದಲ್ಲಿದೆ. ಇಲ್ಲಿಯ ಹೆಚ್ಚಿನ ಜನರು ಬೇಸಾಯವನ್ನೇ ತಮ್ಮ ಜೀವನಕ್ಕೆ ನಂಬಿರುವವರು. ಈ ಕ್ಷೇತ್ರದಿಂದ ಹೆಚ್ಚಿನ ಐ ಎ ಎಸ್ ಮತ್ತು ಐ ಪಿ ಎಸ್ ಆಫೀಸರುಗಳು ಬಂದಿರುವರು ಮತ್ತು ಬರುತ್ತಿರುವರು. ಇಲ್ಲಿಯವರು ಪದವಿ ಪಡೆದ ನಂತರ ಹೆಚ್ಚಿನ ವಿದ್ಯಾಭ್ಯಾಸವನ್ನು ದೆಹಲಿಯಲ್ಲಿ ಮಾಡುವರು. ಇದಕ್ಕೆ ಕಾರಣ ಗೊತ್ತೇ ಇದೆ. ದೇಶದ ಈ ಭಾಗವು ಎಲ್ಲ ಸ್ತರಗಳಲ್ಲೂ ಹಿಂದುಳಿದಿದೆ.

ಇನ್ನೊಂದು ಮಜವಾದ ವಿಷಯವೆಂದರೆ, ಇವರು ಶ್ರೀ ರಾಮನನ್ನು ದೇವರೆಂದು ಪರಿಗಣಿಸುವುದಿಲ್ಲ. ಏಕೆಂದರೆ ಶ್ರೀರಾಮ ಇವರಿಗೆ ಅಳಿಯ ಮತ್ತು ಸೀತಾಮಾತೆ ಮನೆ ಮಗಳು. ಇವರಾಡುವ ಭಾಷೆ ಹಿಂದಿಯಲ್ಲ. ಮೈಥಿಲಿ. ಹೇಗೆ ಉತ್ತರ ಪ್ರದೇಶದಲ್ಲಿ ಭೋಜಪುರಿ ಪ್ರಚಲಿತವೋ ಹಾಗೆಯೇ ಬಿಹಾರದಲ್ಲಿ ಮೈಥಿಲಿ ಭಾಷೆಯು ಪ್ರಚಲಿತ. ಮೊದಲು ಈ ಪ್ರದೇಶವನ್ನು ಮಿಥಿಲಾ ದೇಶವೆನ್ನುತ್ತಿದ್ದರು. ಈ ಭಾಷೆಗೆ ಪ್ರತ್ಯೇಕವಾದ ಲಿಪಿಯಿಲ್ಲ. ದೇವನಾಗರಿ ಲಿಪಿಯನ್ನೇ ಬಳಸುವರು.

ಇನ್ನು ಇಲ್ಲಿ ಎಲ್ಲ ಬಗೆಯ ಹಬ್ಬಗಳನ್ನೂ ಆಚರಿಸುವರು. ಆದರೆ ವಿಶೇಷವಾದ ಒಂದು ಹಬ್ಬ, ದೇಶದ ಬೇರೆಲ್ಲಿಯೂ ಅಷ್ಟಾಗಿ ವಿಶೇಷವಲ್ಲದ್ದು ಅಂದರೆ ಛಠ್ ಪೂಜೆ.

ಇದೆಂತಹದ್ದಪ್ಪ ಛಠ್ ಪೂಜೆ ಅಂತ ಅಂದ್ಕೊಳ್ತಿದ್ದೆ. ಟಿವಿಯಲ್ಲಿ ನೋಡಿದ ಚಿತ್ರದಲ್ಲಿ ನದಿಯಲ್ಲಿ ಮೊರದ ಬಾಗಿನ ಬಿಡುವುದನ್ನು ನೋಡಿ - ಇದು ತೆಲುಗು ಪದವೇ ಎಂಬ ಅನುಮಾನ ಬಂದಿತ್ತು. ತೆಲುಗುವಿನಲ್ಲಿ ಮೊರಕ್ಕೆ ಚಾಟ್ಲು ಎನ್ನುವರು. ಆದರೆ ಈ ಪದ ಅದರಿಂದ ಬಂದದ್ದಲ್ಲ. ಅಥವಾ ಹಿಂದಿಯ ಛತ್ ನಿಂದ ಬಂದ ಪದವೋ? ಛತ್ ಎಂದರೆ ಛಾವಣಿ. ಆದರೆ ಈ ವ್ರತ ( ಹಬ್ಬ ಅನ್ನುವುದಕ್ಕಾಗುವುದಿಲ್ಲ, ಏಕೆಂದರೆ ದಿನ ಮತ್ತು ರಾತ್ರಿ - ೨೪ ಘಂಟೆಗಳೂ ಉಪವಾಸ ಇರುವರು ) ಬರುವುದು ದೀಪಾವಳಿ ಅಮಾವಾಸ್ಯೆಯ ನಂತರದ ಆರನೆಯ ದಿನ. ಗೊತ್ತಾಯಿತಲ್ಲ ಇದು ಷಷ್ಠಿ ಪೂಜೆ.

ಈ ವ್ರತದ ಬಗ್ಗೆ ಒಂದೆರಡು ಮಾತುಗಳು. ಈ ಒಂದು ರಾತ್ರಿ ಮತ್ತು ಒಂದು ದಿನ ವ್ರತಾರ್ಥಿಗಳು ಗಂಗಾ ನದಿಯ ದಡದಲ್ಲೇ ಇರುವರು. ಅಂದು ಕಟ್ಟುಪವಾಸ ಮಾಡುವರು. ಅಂದು ಬೆಳಗಿನಲ್ಲೇ ಭಕ್ತರು ಗಂಗೆಯಲ್ಲಿ ಮಿಂದು ಮನೆಯಲ್ಲಿ ನೈವೇದ್ಯ ಅರ್ಪಿಸಲು ಗಂಗೆಯ ನೀರನ್ನು ಮನೆಗೆ ತರುವರು. ನೈವೇದ್ಯಕ್ಕೆಂದು ಅರ್ಪಿಸಲು ಖೀರು ( ಪಾಯಸ ), ಪೂರಿ ಮತ್ತು ಬಾಳೆಹಣ್ಣುಗಳನ್ನು ಇಡುವರು. ಬೆಳಗ್ಗೆ ನೈವೇದ್ಯವನ್ನು ತಯಾರಿಸಿ ಸಂಜೆಗೆ ಸೂರ್ಯ ಮುಳುಗುವ ವೇಳೆಯಲ್ಲಿ ನದಿಯ ದಡದಲ್ಲಿ ಸೂರ್ಯದೇವರಿಗೆ ನೈವೇದ್ಯವನ್ನು ಅರ್ಪಿಸುವರು. ರಾತ್ರಿಯಾದೊಡನೆ ಮನೆಗೆ ಬಂದು ಕಬ್ಬಿನ ಜಲ್ಲೆಯಲ್ಲಿ ಚಪ್ಪರವನ್ನು ನಿರ್ಮಿಸಿ ಅದರಲ್ಲಿ ಮಣ್ಣಿನ ಆನೆಯನ್ನು ಮಾಡಿಟ್ಟು ಹಣತೆಗಳಲ್ಲಿ ದೀಪವನ್ನು ಹಚ್ಚಿಟ್ಟು ನೈವೇದ್ಯವನ್ನು ಅರ್ಪಿಸುವರು. ನಂತರ ಅಗ್ನಿ ದೇವನನ್ನು ಆರಾಧಿಸುವರು. ನಸುಕಿನ ಸೂರ್ಯೋದಯಕ್ಕೆ ಮುನ್ನ ನದೀ ದಡಕ್ಕೆ ಹೋಗಿ ಸೂರ್ಯನಿಗೆ ನೈವೇದ್ಯವನ್ನು ಅರ್ಪಿಸಿ, ನಂತರ ತಾವು ಅದನ್ನು ಪ್ರಸಾದವೆಂದು ಸ್ವೀಕರಿಸುವರು.

ಹೊಸದಾಗಿ ಮದುವೆಯಾದ ಹೆಣ್ಣುಮಗಳನ್ನು ಮನೆಗೆ ಕರೆಸಿ, ದೀಪಾವಳಿಯ ನಂತರ ಈ ಛಠ್ ಪೂಜೆಯನ್ನು ಮಾಡಿಸಿ ಮಗಳಿಗೆ ಮತ್ತು ಅಳಿಯನಿಗೆ ಉಡುಗೊರೆಯನ್ನು ನೀಡುವರು.

~.~
  • tvsrinivas41 ರವರ ಬ್ಲಾಗ್
  • Login or register to post comments
  • 803 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡ ಮತ್ತು ಮಾಹಿತಿ ತಂತ್ರಜ್ಞಾನ ಬಗ್ಗೆ ನನ್ನ ಲೇಖನ
  • ಪೂಜಾ ವಿಧಾನ
  • ಬಿಲ್ ಮತ್ತು ನನ್ನ ಭೇಟಿ
  • ಕೃಷ್ಣ..ಕೃಷ್ಣ
  • ಭಾಗ - ೫
Syndicate content

ಲೇಖಕರು

tvsrinivas41's picture

ಪರಿಚಯ

ಸಾಹಿತ್ಯಾಭಿಲಾಷಿ, ಕವನ ರಚಿಸುವ ಹುಚ್ಚು, ಕೆಲವು ಲೇಖನಗಳನ್ನೂ ಬರೆದಿರುವೆ, ಬರೆಯುತ್ತಿರುವೆ.
ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ಅಸಿಸ್ಟೆಂಟ್ ಜನರಲ್ ಮ್ಯಾನೆಜರ್ ಆಗಿರುವೆ. ಬೆಂಗಳೂರು ಶಾಖೆಯನ್ನು ೧೯೮೨ ರಲ್ಲಿ ಸೇರಿ ೧೯೮೯ರಲ್ಲಿ ಮುಂಬಯಿಗೆ ಬಂದಿರುವೆ.

ನನ್ನ ಅಂತರ್ಜಾಲ ತಾಣ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಸಾಂಗರ್, ರಾಜಸ್ಥಾನ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
  • ದೊಡ್ಡವರ ದೊಡ್ಡತನ
  • ಕೈ ಕೊಟ್ಟ ಜೆಟ್ ಏರ್
  • ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
  • ಈ ರೀತಿ ನಿಮ್ಮ ಮನೇಲಿ ಆದರೆ ನೀವು ಏನು ಮಾಡ್ತೀರಿ?
  • ನೂರು ಕನ್ನಡಿಗಳ ದೇಗುಲ
  • ಇವತ್ತು ಕೈ ತೊಳೆಯುವ ದಿನವಂತೇ...!!!
  • ನಿಮ್ಮ ಬ್ರೌಸರ್‌ನಲ್ಲಿಯೇ ಬಿಸಿ ಬಿಸಿ ಸುದ್ದಿ
  • ನಾನು ಯಾವ ಕಾಲದಲ್ಲಿ ಇದ್ದೇನೆ...!?
  • ಓದಿದ್ದು ಕೇಳಿದ್ದು ನೋಡಿದ್ದು-50 ವಿಮರ್ಶೆಯ ಬಗ್ಗೆ ವಿಮರ್ಶೆ:"ಪ್ರಕರಣ"ಕ್ಕೆ ತೆರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:12am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:06am
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:56pm
  • ಹಿರಣ್ಯಾಕ್ಷ
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:56pm
  • srinivasps
    ಉ: 'ಸಂಪದಿಗ' ಪುಲ್ಲಿಂಗ ಆದರೆ..ಸ್ತ್ರೀಲಿಂಗ ಏನಾಗುತ್ತೆ?
    October 15, 2008 - 11:48pm
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:47pm
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:42pm
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:29pm
  • pradeep_adiga
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 15, 2008 - 11:15pm
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:12pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 524 ಅತಿಥಿಗಳು ಆನ್ಲೈನ್ ಇರುವರು.


"ನಾನು ಅವಧೂತನಾಗಿ ಹೋಗುವುದಿಲ್ಲ. ಕನ್ನಡವು ತನ್ನ ಸ್ಥಾನವನ್ನು ಅಧಿಕೃತವಾಗಿ ಪಡೆಯುವತನಕ, ನನ್ನ ಪ್ರಾಣವಿರುವತನಕ, ಕನ್ನಡಕ್ಕಾಗಿ ದುಡಿಯುವುದು, ಕನ್ನಡಕ್ಕಾಗಿ ವ್ಯಕ್ತಿಗಳನ್ನು ದುಡಿಯಲು ಪ್ರಚೋದಿಸುವುದು, ಅದಕ್ಕಾಗಿ ಭಗವಂತನಲ್ಲಿ ಮೊರೆಯಿಡುವುದು ಮಾಡುತ್ತೇನೆ. ನನ್ನೆಲ್ಲ ತಪಃಶಕ್ತಿಯನ್ನು ಅಥವಾ ಪ್ರಾರ್ಥನಾ ಶಕ್ತಿಯನ್ನು ಕನ್ನಡದ ಸೇವೆಗಾಗಿ ಮೀಸಲಿಡುತ್ತೇನೆ.... "

— ಕುವೆಂಪು ('ಕನ್ನಡ ದೀಕ್ಷೆ' ಯಲ್ಲಿ)

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator