ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › Sampada Blogs › tvsrinivas41 ರವರ ಬ್ಲಾಗ್

ಭಾಗ - ೯

February 15, 2006 - 8:33pm — tvsrinivas41

ಈ ಭಾಗದಲ್ಲಿ ನನ್ನಲ್ಲಿ ಮಾನವೀಯತೆಯನ್ನು ರೂಪಿಸಿದ ಪುತ್ತೂರಾಯರು, ಬಾಬುರವಿಶಂಕರರ ಬಗ್ಗೆ ಒಂದೆರಡು ಮಾತುಗಳನ್ನು ಹೇಳುವೆ.

ಸೀತಾರಾಮ ಪುತ್ತೂರಾಯರು ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ಆರ್ಥಿಕ ಸಹಾಯಕರಾಗಿ ಕೆಲಸ ಮಾದುತ್ತಿದ್ದರು. ೧೯೬೪-೬೫ ರ ಸುಮಾರಿನಲ್ಲಿ ಪದವೀಧರರಾಗಿ ಬ್ಯಾಂಕಿಗೆ ಸೇರಿದ್ದರು. ಆಗಿನ ಕಾಲದಲ್ಲಿ ಸಾಮಾನ್ಯವಾಗಿ ಪದವೀಧರರಾಗಿದ್ದವರೆಲ್ಲರೂ ಅಧಿಕಾರಿಗಳಾಗಿ ಸೇರುತ್ತಿದ್ದರು. ಇವರು ಆಗಲೇ ಭಾರತೀಯ ಮಝ್ದೂರ್ ಸಂಘದ ಸಕ್ರಿಯ ಕಾರ್ಯಕರ್ತರಾಗಿದ್ದರು. ಭಾರತೀಯ ಮಝ್ದೂರ್ ಸಂಘವು ಪ್ರಾರಂಭವಾಗಿದ್ದು ೧೯೬೫ ರಲ್ಲಿ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕಾರ್ಮಿಕರ ಒಳಿತಿಗಾಗಿ ಮತ್ತು ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿನ ಕೆಲಸಗಾರರನ್ನು ಸಂಘಟಿಸಲು ಪುತ್ತೂರಾಯರು ಮುಂದಾಳತ್ವ ವಹಿಸಿದರು. ಬ್ಯಾಂಕಿನಲ್ಲಿ ಅಧಿಕಾರಿಯಾದರೆ, ವರ್ಗಾವಣೆ ನೋಡಬೇಕೆಂದೂ ಮತ್ತು ಯೂನಿಯನ್ನಿನ ಕೆಲಸ ಮಾಡಲಾಗುವುದಿಲ್ಲವೆಂದೂ ಅವರು ಬಡ್ತಿಯನ್ನು ತೆಗೆದುಕೊಳ್ಳಲಿಲ್ಲ. ೧೯೭೨ರ ಹೊತ್ತಿಗೆ ಇವರ ಕೈ ಜೋಡಿಸಿದವರು ಶ್ರೀಯುತ ಬಾಬು ರವಿಶಂಕರ ಅವರು. ಇವರಿಬ್ಬರಲ್ಲಿ ನಾನು ಕಂಡ ಒಂದು ಒಳ್ಳೆಯ ಅಂಶವೆಂದರೆ, ಯೂನಿಯನ್ ಸದಸ್ಯರಲ್ಲದೇ ಇತರ ಸಹೋದ್ಯೋಗಿಗಳನ್ನು ತಮ್ಮ ಕುಟುಂಬದ ಸದಸ್ಯರೆಂದೇ ಭಾವಿಸುತ್ತಿದ್ದರು. ಹಬ್ಬ ಹರಿದಿನಗಳಲ್ಲಿ ಮನೆ ಮನೆಗಳಿಗೆ ಹೋಗಿ ಕಷ್ಟ ಸುಖ ವಿಚಾರಿಸುವುದು, ಬೇಕಾದ ಮಾರ್ಗದರ್ಶನವೀಯುವುದೂ ಮಾಡುತ್ತಿದ್ದರು. ಇವರಿಬ್ಬರೂ ತಮ್ಮ ಹೆಚ್ಚಿನ ಕಾಲಾವಧಿಯನ್ನು ಸ್ನೇಹಿತರಿಗಾಗಿಯೇ ಮುಡುಪಾಗಿಟ್ಟಿದ್ದರೆಂದರೆ ಅತಿಶಯೋಕ್ತಿಯಲ್ಲ. ೧೯೮೫ರ ಸುಮಾರಿನಲ್ಲಿ ಹೌಸಿಂಗ ಸೊಸೈಟಿಯವರು ಹೊಸ ಸದಸ್ಯರನ್ನು ನೋದಾಯಿಸಿಕೊಳ್ಳಲು ಪುತ್ತೂರಾಯರೂ ಕಾರಣೀಭೂತರಾಗಿದ್ದರು. ಅದಲ್ಲದೇ ನಮಗೆಲ್ಲರಿಗೂ ನಿವೇಶನವನ್ನು ಹೊಂದಲು ಸಲಹೆ ಕೊಟ್ಟರು. ನಾನಂತೂ, 'ನನಗ್ಯಾಕೆ ಸಾರ್, ಈಗಲೇ ಸೈಟು. ಮುಂದೆ ನೋಡೋಣ. ಅದೂ ಅಲ್ಲದೇ ಈ ಹೌಸಿಂಗ್ ಸೊಸೈಟಿಯಲ್ಲಿ ಯಾವಾಗಲೂ ಜಗಳ ಕದನಗಳನ್ನು ನೋಡ್ತಿದ್ದೀನಿ, ನನಗೆ ಸೇರಲು ಮನಸ್ಸಿಲ್ಲ' ಎಂದಿದ್ದೆ. ಅದಕ್ಕೆ ಪುತ್ತೂರಾಯರು, 'ನೀವೇನೂ ಮಾಡಬೇಕಿಲ್ಲ. ಈ ಅಪ್ಲಿಕೇಷನ್ ಫಾರ್ಂ ತುಂಬಿ ನನ್ನ ಕೈಗೆ ಕೊಡಿ ಮತ್ತು ಕೋ ಆಪರೇಟಿವ್ ಬ್ಯಾಂಕಿನಲ್ಲಿ ಹತ್ತು ಸಾವಿರ ರೂಪಾಯಿಗಳ ಸಾಲ ತೆಗೆದುಕೊಂಡು, ಮೂಲಧನವನ್ನಾಗಿ ಕೊಡಿ. ನಿಮಗೆ ತಿಳಿಯದೆಯೇ ಆ ಸಾಲ ತೀರಿ ಹೋಗುವುದು', ಎಂದಿದ್ದರು. ಅವರ ಹಿತ ನುಡಿಗಳನ್ನು ನಾವೆಲ್ಲರೂ ಪಾಲಿಸಿದ ಕಾರಣವೇ - ನಾವುಗಳಿಂದು ಬೆಂಗಳೂರಿನಂತಹ ಮಹಾನಗರದಲ್ಲಿ ಒಂದು ಮನೆಯನ್ನು ಮಾಡಿಕೊಂಡಿರುವುದು. ತಂಪಾದ ಸಮಯದಲ್ಲಿ ಅವರನ್ನು ನೆನೆಯದಿದ್ದರೆ ಅದು ದ್ರೋಹ ಬಗೆದಂತೆಯೇ.

ಇಷ್ಟೇ ಅಲ್ಲ, ಪುತ್ತೂರಾಯರು ಇನ್ನೊಂದು ಮಾತನ್ನೂ ನಮಗೆಲ್ಲರಿಗೂ ಹೇಳಿದ್ದರು. ಎಂದಿಗೂ ನಿಮ್ಮ ಬ್ಯಾಂಕಿನ ಅಕೌಂಟಿನಲ್ಲಿ ಕಡಿಮೆಯೆಂದರೆ ಹತ್ತು ಸಾವಿರ ರೂಪಾಯಿಗಳನ್ನು ಇಟ್ಟುಕೊಂಡಿರಿ. ಹಣವಿಲ್ಲದವನು ಹೆಣದಂತೆ. ದುಶ್ಚಟಗಳಿಂದ ದೂರವಾಗಿರಿ. ಹೆಚ್ಚಿನ ಹಣ ಕೈನಲ್ಲಿದ್ದರೆ ಇಲ್ಲದವರಿಗೆ ನೀಡಿ. ಇದು ಒಳ್ಳೆಯತನ. ಮುಂದೆ ನಿಮ್ಮ ಮಕ್ಕಳನ್ನು ಇದೇ ಒಳ್ಳೆಯತನ ಕಾಪಾಡುವುದು. ಪುತ್ತೂರಾಯರು ಈ ಮಾತುಗಳನ್ನು ಹೆಳುತ್ತಿದ್ದುದಲ್ಲದೇ ಪಾಲಿಸುತ್ತಿದ್ದರು ಕೂಡಾ. ನಾನು ೧೯೮೯ರಲ್ಲಿ ಮುಂಬೈಗೆ ಬಂದ ಕೆಲವು ವರ್ಷಗಳಲ್ಲಿ ಪುತ್ತೂರಾಯರು ಅಕಾಲಿಕ ಮರಣಕ್ಕೆ ತುತ್ತಾಗಿದ್ದರು. ಅವರಿಗಿದ್ದ ಇಬ್ಬರೂ ಗಂಡು ಮಕ್ಕಳು ವೈದ್ಯ ವೃತ್ತಿ ಹಿಡಿದು ಬಹಳ ಹೆಸರುವಾಸಿಯಾಗಿದ್ದಾರಂತೆ.

  • ಅನುಭವ ಕಥನ
~.~
  • tvsrinivas41 ರವರ ಬ್ಲಾಗ್
  • Login or register to post comments
  • 782 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
February 16, 2006 - 12:48am — hpn

ಹಣವಿಲ್ಲದವನು...

hpn's picture

ಒಂದು ರೀತಿ ನಿಮ್ಮ ಆಟೋಬಯಾಗ್ರಫಿ ಓದಿದ ಹಾಗಾಗುತ್ತಿದೆ. ನಿರೂಪಣೆ ಸರಳವಾಗಿ ಮನಸ್ಸಿಗೆ ತಕ್ಷಣ ಹೊಕ್ಕುವಂತಿದೆ. ಆದರೆ "ನನ್ನ ಮಾನವೀಯತೆ ರೂಪಿಸಿದ" ಎಂದು ಬಳಸುವ ಸಂದರ್ಭಗಳಲ್ಲಿ "ನನ್ನಲ್ಲಿ ಮಾನವೀಯತೆ ರೂಪಿಸಿದ" ಎಂದು ಬಳಸಿದರೆ ಚೆನ್ನಾಗಿರುತ್ತೋ ಏನೋ.

> ನಾವುಗಳಿಂದು ಬೆಂಗಳೂರಿನಂತಹ ಮಹಾನಗರದಲ್ಲಿ ಒಂದು ಮನೆಯನ್ನು ಮಾಡಿಕೊಂಡಿರುವುದು

ಅದೂ ಜೆ ಪಿ ನಗರದಂತಹ ಒಳ್ಳೆಯ ಜಾಗದಲ್ಲಿ Smiling

> ಹಣವಿಲ್ಲದವನು ಹೆಣದಂತೆ

Smiling

--
Check my Blog
Kannada wikipedia

"ಹೊಸ ಚಿಗುರು, ಹಳೆ ಬೇರು"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬ್ಯಾಂಕಿನಲ್ಲಿ ರಜತೋತ್ಸವ ಭಾಗ ೨
  • ಬರಹ ಕ್ರಾಂತಿ!
  • ಬ್ಯಾಂಕಿನಲ್ಲಿ ರಜತೋತ್ಸವ ಭಾಗ ೧
  • ಭಾಗ - ೫
  • ಬ್ಯಾಂಕುಗಳಲ್ಲಿ ಕನ್ನಡದಲ್ಲಿ ವ್ಯವಹರಿಸುವುದು
Syndicate content

ಲೇಖಕರು

tvsrinivas41's picture

ಪರಿಚಯ

ಸಾಹಿತ್ಯಾಭಿಲಾಷಿ, ಕವನ ರಚಿಸುವ ಹುಚ್ಚು, ಕೆಲವು ಲೇಖನಗಳನ್ನೂ ಬರೆದಿರುವೆ, ಬರೆಯುತ್ತಿರುವೆ.
ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ಅಸಿಸ್ಟೆಂಟ್ ಜನರಲ್ ಮ್ಯಾನೆಜರ್ ಆಗಿರುವೆ. ಬೆಂಗಳೂರು ಶಾಖೆಯನ್ನು ೧೯೮೨ ರಲ್ಲಿ ಸೇರಿ ೧೯೮೯ರಲ್ಲಿ ಮುಂಬಯಿಗೆ ಬಂದಿರುವೆ.

ನನ್ನ ಅಂತರ್ಜಾಲ ತಾಣ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಸ್ವಲ್ಪ ನಗಿ
  • ಗೋಕಾಕ ಮಾದರಿಯ ಚಳುವಳಿ ಎಂದರೇನು?
  • ಡೈರಿಯ ಕೆಲವು ಹಾಳೆಗಳು - ಭಾಗ ೭
  • ಡೈರಿಯ ಕೆಲವು ಹಾಳೆಗಳು - ಭಾಗ ೬
  • ನ್ಯಾಷನಲ್ ಪಾರ್ಕ್ ಎಂಬ ಕರಾಳ ಕೊಂಪೆ.
  • ಓದಿದ್ದು ಕೇಳಿದ್ದು ನೋಡಿದ್ದು 41 ವಾರೆಕೋರೆ: ಕನ್ನಡಿಗರನ್ನು ನಗಿಸಲೊಂದು ಹೊಸ ಪತ್ರಿಕೆ
  • ಇತ್ತೀಚಿನ ಕನ್ನಡ ಬ್ಲಾಗುಗಳು, ಕೋಮುವಾದ, ಆರ್ಥಿಕ ಅಭಿವೃದ್ಧಿ...
  • ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಅಷ್ಟಮಿ
  • ಕಳೆದ ನೆನೆಪುಗಳು
  • ಕಾರ್ಟೂನಿಸ್ಟ್ ಪ್ರಕಾಶ್ ಶೆಟ್ಟಿಯವರಿಗೆ ಹೊಸ ಹುಚ್ಚು!
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • muralihr
    ಉ: ನೋಡಿ ಸ್ವಾಮಿ ನಾವಿರೋದೇ ಹೀಗೆ
    October 7, 2008 - 6:28pm
  • Shribgm
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 6:23pm
  • ASHMYA
    ಉ: ಸ್ವಲ್ಪ ನಗಿ
    October 7, 2008 - 6:22pm
  • thoughtsarenotenough
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 7, 2008 - 6:17pm
  • Shribgm
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 6:15pm
  • Shribgm
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 6:10pm
  • gurubaliga
    ಉ: ಬಾಂಬು ದಾಳಿಗಳಿಂದ ಯಾರೂ ಸಾಯುವುದಿಲ್ಲ !
    October 7, 2008 - 5:52pm
  • gurubaliga
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 7, 2008 - 5:29pm
  • srinivasps
    ಉ: ಗುಬ್ಬಿಗಳ ಸಂರಕ್ಷಣೆ ಹೇಗೆ?
    October 7, 2008 - 5:24pm
  • girish.rajanal
    ಉ: ನಮ್ಮ ಫೀಲ್ಡ್...ನಮ್ಮ ಕೆಲಸ..ನಮ್ಮ ದೇಶ ಭಾರತ
    October 7, 2008 - 5:13pm
ಇನ್ನಷ್ಟು
ಈಗಿನಂತೆ 10 ಸದಸ್ಯರು ಮತ್ತು 526 ಅತಿಥಿಗಳು ಆನ್ಲೈನ್ ಇರುವರು.


ಅಖಂಡ ಕರ್ನಾಟಕ:
ಅಲ್ತೊ ನಮ್ಮ ಬೂಟಾಟದ ರಾಜಕೀಯ ನಾಟಕ!

ಇಂದು ಬಂದು ನಾಳೆ ಸಂದು
ಹೋಹ ಸಚಿವ ಮಂಡಲ
ರಚಿಸುವುದು ಕೃತಕವಲ್ತೊ
ಸಿರಿಗನ್ನಡ ಸರಸ್ವತಿಯ
ವಜ್ರ ಕರ್ಣಕುಂಡಲ!

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator