ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › veena ರವರ ಬ್ಲಾಗ್

ಎಂದೂ ಮರೆಯದ ಆ ದಿನ

June 6, 2008 - 5:42pm — veena

ಹೈಕೋರ್ಟ್ ಸಂಚಾರಿ ಪೀಠ ಜುಲೈ ೭ ರಿಂದ ಧಾರವಾಡ ಹಾಗೂ ಗುಲಬರ್ಗಾ ದಲ್ಲಿ ಆರಂಭಗೊಳ್ಳಲು
ಹೈ ಕೋರ್ಟ್ ಆದೇಶಿಸಿದೆ. ಇದೇ ಸಂದರ್ಭದಲ್ಲಿ ಸುಮಾರು ೭ ವರ್ಷಗಳ ಹಿಂದೆ ನಡೆದ ಘಟನೆ ನೆನಪಿಗೆ ಬರುತ್ತಿದೆ.

ಅದಿನ್ನೂ ನಾನು ಕೆಲಸಕ್ಕೆ ಸೇರಿದ ಹೊಸತು. ಧಾರವಾಡ ನನಗಿನ್ನೂ ಒಗ್ಗಿರಲಿಲ್ಲ. ಪ್ರತಿ ಶುಕ್ರವಾರ ಸಂಜೆ ಶಿವಮೊಗ್ಗದ ಬಸ್ ಹತ್ತುತ್ತಿದ್ದ ನಾನು ಭಾನುವಾರ ರಾತ್ರಿ ಅಲ್ಲಿಂದ ಹೊರಡುತ್ತಿದ್ದೆ. ಅದು ಜುಲೈ ತಿಂಗಳ ಒಂದು ಭಾನುವಾರದ ರಾತ್ರಿ, ೧೧-೩೦ ಬಸ್ಸಿಗೆ ಒಬ್ಬಳೇ ಧಾರವಾಡಕ್ಕೆ ಹೊರಟಿದ್ದೆ. ಶಿವಮೊಗ್ಗದಲ್ಲೇ, ಧಾರವಾಡದಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸ ಬೇಕೆಂಬ ಸಲುವಾಗಿ ಬಂದ್ ನಡೆಯುವುದರ ವಾಸನೆ ಬಡಿಯಿತು. ಬಂದ್ ಶುರುವಾಗುವುದು ಸಾಮಾನ್ಯವಾಗಿ ಬೆಳಿಗ್ಗೆ ೯ ರ ನಂತರ ಎಂಬ ಭಂಡ ದೈರ್ಯದ ಮೇಲೆ ಬಸ್ ಹತ್ತಿದೆ. ಅಪ್ಪ ಹೇಳಿದರು ಬೇಡ ಅಂತ, ಆದರೆ ನಾನು ಕೇಳ ಬೇಕಲ್ಲ.

ಚಳುವಳಿಕಾರರು ಬಸ್ಸನ್ನು ಹಾವೇರಿಯಿಂದ ಮುಂದೆ ಬಿಡಲಿಲ್ಲ. ಬಸ್ಸನ್ನು ಬೇರೆ ಮಾರ್ಗದ ಮೂಲಕ ಕಲಘಟಗಿಗೆ ಒಯ್ಯಲಾಯಿತು. ಬಹಳಷ್ಟು ಪ್ರಯಾಣಿಕರು ಅಲ್ಲೇ ಇಳಿದು ಬೇರೆ ವ್ಯವಸ್ಥೆ ಮಾಡಿಕೊಂಡರು.
ನನಗೆ ಏನೂ ಮಾಡಲೂ ತೋಚಲಿಲ್ಲ. ಆಗ ರಾತ್ರಿ ೩ ವರೆ ಗಂಟೆಯಾಗುತ್ತಾ ಬಂದಿತ್ತು. ಮುಂದೇನಾಗುತ್ತದೋ ಎಂಬ ಆತಂಕ, ಧಾರವಾಡಕ್ಕೆ ಹೋಗುವ ಎಲ್ಲ ಸಣ್ಣ ದಾರಿಗಳನ್ನು ಮುಚ್ಚಿದ್ದಾರೆಂದು ತಿಳಿದು ಬಂದಿತು. ಬಸ್ಸು ಕಲಘಟಗಿಯಿಂದ ಮುಂದೆ ಸುತ್ತಿ ಸುತ್ತಿ ಹಳಿಯಾಳಕ್ಕೆ ಬಂದಿತು. ಆಗ ಬೆಳಗ್ಗೆ ೭-೩೦. ಅಲ್ಲಿಂದಲೂ ಕೂಡಾ ಧಾರವಾಡದ ದಾರಿಯನ್ನು ಬಂದ್ ಮಾಡಲಾಗಿತ್ತು. ಇಷ್ಟು ತೀವ್ರತರವಾದ ಪ್ರತಿಭಟನೆಯನ್ನು ನಾನೆಂದೂ ಕಂಡಿರಲಿಲ್ಲ. ನಾನು ಪ್ರತಿವಾರವೂ ಶಿವಮೊಗ್ಗ-ಧಾರವಾಡ ಓಡಾಡುತ್ತಿದ್ದ್ದುದರಿಂದ ಚಾಲಕ ಹಾಗೂ ನಿರ್ವಾಹಕರಿಗೆ ನನ್ನ ಪರಿಚಯವಿದ್ದುದೇ ನನಗಿದ್ದ ದೈರ್ಯ.ಅವರಿಬ್ಬರೂ ನನಗೆ ಅಲ್ಲಿಯೇ ಇದ್ದ ಹೋಟೆಲಿಗೆ ಕರೆದುಕೊಂಡು ಹೋಗಿ ತಿಂಡಿ ಕೊಡಿಸಿದರು. (ಯಾವ ಜನ್ಮದ ಅನುಬಂಧವೋ, ) ಆಗ ಯಾವ ಬಸ್ಸುಗಳೂ ಯಾವ ಊರಿಗೂ ಹೊರಡಲಿಲ್ಲ. ಒಂಭತ್ತರ ಸುಮಾರಿಗೆ ಬೆಂಗಳೂರಿಗೆ ಬಸ್ಸೊಂದು ಹೊರಡುವ ಸೂಚನೆ ಬಂತು. ಚಾಲಕ/ನಿರ್ವಾಹಕರಿಬ್ಬರೂ ಅಲ್ಲಿಯವರೆಗೆ ನನ್ನ ಜೊತೆಗೆ ಇದ್ದು, ಬೆಂಗಳೂರಿನ ಬಸ್ ಹತ್ತಿಸಿದರು. ಟಿಕೇಟ್ ಅನ್ನು ಕೂಡ ೩೦-೫೦ ಕಿ.ಮೀ ಗಳ ನಂತರ ಮತ್ತೆ ಮತ್ತೆ ಕೊಡಲಾಗುತ್ತಿತ್ತು. ಬಸ್ ಎಲ್ಲಿಯವರೆಗೂ ಹೋಗುತ್ತದೆ ಎಂದು ಅವರಿಗೇ ಗೊತ್ತಿರಲಿಲ್ಲ. ಬಸ್ ಮತ್ತೆ ಹಲವು ಊರುಗಳನ್ನು ಸುತ್ತಿಕೊಂಡು (ಆ ಸಂದರ್ಭದಲ್ಲಿ ಕೂಡ ನಾನು ಸಿದ್ಧಾಪುರ, ಯಲ್ಲಾಪುರ ಕಡೆಯ ಮಲೆನಾಡನ ಸೌಂದರ್ಯ ಸವಿದೆ) ಹರಿಹರಕ್ಕೆ ಬಂದಿತು. ಸಧ್ಯ ಬದುಕಿದೆ. ಆಗ ಸಮಯ ಸುಮಾರು ಮದ್ಯಾಹ್ನ ೧-೩೦. ಹರಿಹರದಲ್ಲಿ ನನ್ನ ಸೋದರಮಾವನ ಮನೆಯಿದ್ದು, ಅಲ್ಲಿಗೆ ತಲುಪಿದೆ. ಅಲ್ಲಿದ ಮನೆಗೆ ಫೋನ್ ಮಾಡಿ ನಡೆದ ವಿಷಯವನ್ನೆಲ್ಲ ತಿಳಿಸಿದೆ.ನಂತರ ಮರು ದಿನ ಮತ್ತೆ ಧಾರವಾಡದತ್ತ ಪ್ರಯಾಣ ಬೆಳೆಸಿದೆ.

ಬಹುಶಃ ಇದಕ್ಕೇ ಕೊಂಕಣ ಸುತ್ತಿ ಮೈಲಾರಕ್ಕೆ ಹೋಗುವುದು ಎನ್ನುತಾರೇನೋ. ಆಗಿನ್ನೂ ಮೊಬೈಲ್ ಬಳಕೆ ಇಷ್ಟು ವ್ಯಾಪಕವಾಗಿರಲಿಲ್ಲ. ನಾನು ಒಂದು ಸುರಕ್ಷಿತ ಸ್ಥಾನ ತಲುಪುವಲ್ಲಿ ಆ ಚಾಲಕ/ನಿರ್ವಾಹಕರು ಮಾಡಿದ ಸಹಾಯ ನಾನೆಂದೂ ಮರೆಯುವುದಿಲ್ಲ. ನಾನು ಅವರಿಗೆ ಚಿರರುಣಿ.

  • ಅನುಭವ ಕಥನ
~.~
  • veena ರವರ ಬ್ಲಾಗ್
  • Login or register to post comments
  • 521 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 6, 2008 - 8:43pm — rameshbalaganchi

ಉ: ಎಂದೂ ಮರೆಯದ ಆ ದಿನ

rameshbalaganchi's picture

ನಿಮ್ಮ ತಂದೆತಾಯಂದಿರು ಆತಂಕಪಟ್ಟಿರಬಹುದೆಂಬುದನ್ನು ಬಿಟ್ಟರೆ, ಸಾಧಾರಣವಾಗಿ ನೀವು ಹೋಗದ ಜಾಗಗಳಿಗೆ ಹೋಗಿ, ನೋಡದ ನೋಟಗಳನ್ನು ಕಂಡಿರಿ. ಇದೂ ಒಂಥರಾ ಮಜಾ ಅಲ್ವಾ? ನಿಮಗೆ ಆ ಕ್ಷಣಕ್ಕೆ ಆತಂಕವಾಗಿತ್ತಾ?

"ಏರಿದವನು ಚಿಕ್ಕವನಿರಬೇಕು"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 6, 2008 - 9:43pm — veena

ಉ: ಎಂದೂ ಮರೆಯದ ಆ ದಿನ

veena's picture

veena.
ಆತಂಕದ ಜೊತೆಗೆ ಒಂಥರಾ ಭಂಡ ದೈರ್ಯವಿತ್ತು ಆಗ. ಆದರೆ ಈಗ ಮದುವೆಯಾದ ಮೇಲೆ ಅದು ಕಡಿಮೆಯಾಗಿದೆ. ನಾವು(ಮಹಿಳೆಯರು) ನಮ್ಮ ಗಂಡಂದಿರ ಮೇಲೆ ಮಾನಸಿಕವಾಗಿ ಹೆಚ್ಚು ಅವಲಂಬಿರಾಗುತ್ತೇವೆ ಎನಿಸುತ್ತದೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮರಳಿ ಗೂಡಿಗೆ ಬಂತು ಮರಿ ಹಕ್ಕಿ
  • ಕೊಂಕಣ ಸುತ್ತಿ ಮೈಲಾರಕ್ಕೆ...
  • ನಿದ್ದೆಯಿಂದ ಆದ ನನ್ನ ಅನುಭವಗಳು
  • ವೃತ್ತಿಜೀವನದ ಹಂತಗಳು...
  • Accident Zone - ಆಕಸ್ಮಿಕ ವಲಯ
Syndicate content

ಲೇಖಕರು

veena's picture

ಪರಿಚಯ

I am working as Postal Assistant in Dharwad, interested in reading kannada books.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಜೋಯೀಸರ ಮಗಳು
  • 1700 11th AVE NE ಅಪಾರ್ಟ್ ಮೆಂಟ್ - 6
  • ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
  • ಓದಿದ್ದು ಕೇಳಿದ್ದು ನೋಡಿದ್ದು-11
  • ಶಿವರಾಜ್ ಕುಮಾರ ಅಭಿಮಾನಿಗಳಿಗೆ ಮತ್ತೇರಿಸುವ ಚಿತ್ರ " ಮಾದೇಶ "
  • ಹಬ್ಬ ತಂದ ನೆನಪು...
  • ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
  • ಆಧುನಿಕ "ಬೇಡರ ಕಣ್ಣಪ್ಪ"..
  • ವೃತ್ತಿಜೀವನದ ಹಂತಗಳು...
  • ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Chamaraj
    ಉ: ಜೀವ ಕಾಯುವುದೇತಕೆ?
    September 7, 2008 - 10:27am
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 155 ಅತಿಥಿಗಳು ಆನ್ಲೈನ್ ಇರುವರು.


ದನ ಸಿಂಗ ಹುಲಿ ಹಕ್ಕಿ ಹಾವು ಮೀನ್‌ಗಳಿಗೆಲ್ಲ |
ಇನಿಸುಣಿಸು, ಬೆದೆ, ಬೆದರು - ಅಷ್ಟೆ ಜೀವಿತವು ||
ಮನುಜನೆಂತನಿತರಿಂ ತೃಪ್ತಿವಡೆವನವಂಗೆ |
ಕ್ಷಣಕ್ಷಣವು ಹೊಸ ಹಸಿವು -- ಮಂಕುತಿಮ್ಮ |

— ಡಿ. ವಿ. ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator