ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › vinayaka ರವರ ಬ್ಲಾಗ್

ಅಕ್ಷರವಿಹಾರ

ಮಲೆನಾಡ ಮಡಿಲಿನಿಂದ ಹೊರಟ ವಾಕಿಂಗು...

ನಾನು ಎಸ್ಸೆಸ್ಸಲ್ಸಿ ಪಾಸಾಗಲೇ ಬಾರದಿತ್ತು…!

June 8, 2008 - 8:29am — vinayaka

ನಾನು ಎಸ್ಸೆಸ್ಸಲ್ಸಿ ಪಾಸಾಗಲೇ ಬಾರದಿತ್ತು…!

ಹಾಯ್ ಕೋತಿ
ನಿನಗೆ ನಾನು ಪತ್ರ ಬರೆಯದೇ ತುಂಬಾ ದಿನಗಳೇ ಆಗಿಹೋಯಿತು ಮಾರಾಯಿತಿ. ಬರೀಬೇಕು ಅಂದುಕೊಂಡಿದ್ದೇ ಏನು ಮಾಡ್ತಿಯಾ ಹೇಳು ನಾನು ಬರೆಯಲಿಕ್ಕೆ ಅಂತಾ ಹೊರಟಾಗಲೆಲ್ಲಾ ನಮ್ಮ ಮನೆ ಬೆಕ್ಕು ಅಡ್ಡಬಂತು! ನೀನೇ ಹೇಳಿದ್ದೆ ಅಲ್ವಾ ಕೆಲಸಕ್ಕೆ ಮುಂಚೆ ಬೆಕ್ಕು ಅಡ್ಡ ಬಂದ್ರೆ ಅಪಶಕುನ ಅಂತಾ! ಬೆಕ್ಕು ಇಲ್ಲದ ಹೊತ್ತು ನೋಡಿಕೊಂಡು ಬರೆಯೋವಾಗ ಇಷ್ಟುದಿನ ಆಯಿತು ನೋಡು! ಹೋಗ್ಲಿ ಬಿಡು ಆ ಲಾಂಗ್ ಸ್ಟೋರಿಗಳೆಲ್ಲಾ ಈಗ್ಯಾಕೆ? ಮತ್ತೆ ಹೇಗಿದ್ದಿಯಾ? ಜೋಯ್ಸರು ಹೇಗಿದ್ದಾರೆ?!
ಅಂದಹಾಗೆ ತುಂಗಾ ನದಿಗೆ ಹಾರಿ ಸಾಯುವ ನಿನ್ನ ಪ್ರಾಜೆಕ್ಟ್ ಏನಾಯಿತು?! ಈ ಕಾಗದ ನಿನ್ನ ಕೈ ಸೇರುವುದರೊಳಗೆ ನೀನು ಸತ್ತ ಸುದ್ದಿ ನನ್ನ ಕಿವಿ ಮುಟ್ಟಿದ್ದರೂ ಅಚ್ಚರಿ ಇಲ್ವೆನೋ ಅಲ್ವೇನೇ?! ಸುಮ್ನೆ ತಮಾಶೆ ಮಾಡಿದೆ ಕಣೇ…ನೀನು ಸತ್ತರೆ ಮತ್ತೆ ನಾನಿನ್ನೆಲ್ಲಿ ಬದುಕಿರುತ್ತೀನಿ ಅಲ್ವಾ?! ಹಾಳಾದ ದುಡಿಮೆ ಅನ್ನೋದು ತುಂಬಾ ಬೇಜಾರು ಬರಿಸಿ ಬಿಟ್ಟಿದೆ ಕಣೇ. ಜೀವನವೆಲ್ಲಾ ಜಿಗುಪ್ಸೆ ಬಂದು ಬಿಟ್ಟಿದೆ. ಅದ್ಯಾಕೋ ತಿರ್ಥಹಳ್ಳಿಯ ಕಾಡಲ್ಲಿ ಒಂದಿಷ್ಟು ದಿನ ಹಾಯಾಗಿ ಇರೋಣ ಅಂತಾ ಆಲೋಚನೆ ಮಾಡ್ತಾ ಇದೀನಿ. ಮಲೆನಾಡು ಕಾಡಿನ ಪರಿಚಯವೇ ಮರೆತಂತಾಗಿದೆ. ಏ ನಿನಗೆ ನೆನಪಿದೆಯೇನೇ….ನಾನು ಈ ಹಾಳು ನಗರಕ್ಕೆ ಬರುವ ಮೊದಲು ನಾನು ನೀನು ಗುಡ್ಡ ಸುತ್ತಾ ಇದ್ದಿದ್ದು….ನೆರಳೆ ಹಣ್ಣು, ಮುಳ್ಳು ಹಣ್ಣು, ಪರಗಿ ಹಣ್ಣು ಅಂತೆಲ್ಲಾ ಕಾಡಲ್ಲಿ ಸಿಕ್ಕಸಿಕ್ಕ ಹಣನ್ನೆಲ್ಲಾ ತಿಂತಾ ಇದ್ದಿದ್ದು…ಕೋತಿಗಳ ತರಹ ಕಚ್ಚಾಡ್ತಾ ಇದ್ದಿದ್ದು…ಎಷ್ಟು ಸಖತ್ತಾಗಿ ಇತ್ತು ಅಲ್ವಾ ಆ ದಿನಗಳು? ಇವತ್ತು ನಂಗೆ ಅದೇ ತರಹ ಆಟ ಆಡಬೇಕು ಅನ್ನಿಸ್ತಾ ಇದೆ. ಆದ್ರೆ ಈ ಹಾಳು ಸಮಾಜ ಅದನ್ನ ಒಪ್ಪೋದೇ ಇಲ್ಲ ಕಣೇ…ಅದರಲ್ಲೂ ನಿಮ್ಮೂರಿನ ಆ ಗಯ್ಯಾಳಿಗಳು ನಾವು ಈಗಲೂ ಆಟ ಆಡಿದರೆ ಹುಚ್ಚು ಹಿಡಿದಿದೆ ಇವರಿಗೆ ಅಂತಾ ದೊಡ್ಡ ಸುದ್ದಿ ಹಬ್ಬಿಸಿ ಬಿಡ್ತಾರೆ. ಅದನೆಲ್ಲಾ ನೆನಸಿಕೊಂಡರೆ ಕೋಪ ಬರತ್ತೆ…
ನಾನು ದೊಡ್ಡವನಾಗಲೇ ಬಾರದಿತ್ತು ಎಸ್ಸೆಸಲ್ಸಿಲೀ ಫೇಲಾಗಬೇಕಿತ್ತು ಅನ್ನಿಸತ್ತೆ ಎಷ್ಟೋ ಸಲ. ನಿನ್ನಜ್ಜಿ ನಿನ್ನಿಂದಲೇ ಆಗಿದ್ದು ಎಲ್ಲಾ, ಓದಬೇಕು ನೀನು, ಹಾಗಾಬೇಕು, ಇದಾಗಬೇಕು ಅಂತೆಲ್ಲಾ ಆವತ್ತು ಪುರಾಣ ನನ್ನ ತಲೆಗೆ ತುರುಕಿದವಳು, ನನ್ನನ್ನು ಕಾಲೇಜು ಮೆಟ್ಟಿಲು ಹತ್ತಿಸಿದವಳು ನೀನೇ ಬೇವರ್ಸಿ! ನಿಂಗೆ ನಿಮ್ಮಪ್ಪನಿಗಿಂತ ಕ್ರೂರ ಗಂಡ ಸಿಗಲಿ, ನಿನ್ನ ಗಂಡ ಕುಡಿಯುವವನು, ಇಸ್ಪೀಟ್ ಆಡುವವನು, ಅದಕ್ಕಿಂತಲೂ ಕ್ರೂರಿಯಾಗಿರಲಿ….ಕತ್ತೆ ನೀನು ನಾನು ಕಾಡಲಿ ಇರಬೇಕು ಅಂದುಕೊಂಡಿದ್ದನ್ನು ಹಾಳು ಮಾಡಿದವಳು….!!!!
ಮತ್ತೆ ಸಮಾಚಾರ ಜೋಯ್ಸರು ಏನು ಮಾಡ್ತಾ ಇದಾರೆ. ಈಗಂತೂ ಚುನಾವಣೆ…ಜೋಯ್ಸರ ಜ್ಯೋತಿಷ್ಯದ ಬಿಸಿನೆಸ್ ಫುಲ್ ಜೋರಾ? ಸೋಮಯಾಜಿ ನೆಕ್ಸ್ಟ್ ಜ್ಯೋಯ್ಸರೆ ಇರಬೇಕು ಅಲ್ವಾ ಸುಳ್ಳು ಸುಳ್ಳು ಶಕುನ ಹೇಳೋರು…?!ನಿಮ್ಮಪ್ಪ ನಂಗೆ ಹೇಳಿದ ಒಂದೇ ಒಂದೇ ಒಂದು ಸತ್ಯ ಅಂದ್ರೆ ನಿಂಗೆ ಒಬ್ಬ ಲಫಂಗನ ಮಗಳು ಸಿಕ್ತಾಳೆ ಅಂತಾ! ಅದೊಂದು ಮಾತ್ರ ಸಖತ್ತಾಗಿ ಹೇಳಿದಾರೆ ಕಣೇ!
ನಿನ್ನ ಜೊತೆ ನಿನ್ನ ಗ್ಯಾಂಗ್‌ನಲ್ಲಿ ಉರಿಯುತ್ತಿದ್ದ ಹುಡಿಗಿಯರೆಲ್ಲಾ ಹೇಗಿದಾರೆ ಈಗ? ಏ ಮೊನ್ನೆ ಯಾರೋ ಒಬ್ಬಳು ನಿನ್ನ ಜೊತೆ ಇದ್ದವಳು ಸಿಕ್ಕಿದ್ಲು. ನನ್ನ ನಿನ್ನ ಕ್ಲಾಸ್‌ಮೇಟ್ ಅಂತೆ ಪಿಯುಸಿಲಿ ನಂಗೊಂತು ಚೂರು ಗುರುತು ಸಿಕ್ಕಲಿಲ್ಲ. ಅವಳಾಗಿಯೇ ಮಾತಾಡಿಸಿದಳು ನಿನ್ನ ಹುಡುಗಿ ಫ್ರೆಂಡು ನಾನು ಅಂತಾ! ಏನೋ ಕಾಲೇಜು ಮುಗಿದ ಎಲ್ಲಾ ಮುಗೀತು. ಯಾರದ್ದು ಪರಿಚಯವೂ ಇಲ್ಲ ಏನೂ ಇಲ್ಲ. ನಮ್ಮದೊಂದು ತೀರ ಅವರದೊಂದು ತೀರ ಅಲ್ವಾ? ಅದನೆಲ್ಲಾ ನೆನೆಸಿಕೊಂಡರೆ ಯಾಕೋ ತುಂಬಾ ಬೇಜಾರಾಗತ್ತೆ. ನಮ್ಮ ಜೊತೆ ಕುಣಿದವರು ಕಿತ್ತಾಡಿದವರು ಯಾರು ಕೊನೆಗೆ ಸಿಗೋದೇ ಇಲ್ಲ…ಹೋಗ್ಲಿ ಬಿಡು ನನ್ನ ಜೊತೆ ಆವತ್ತಿಂದಲೂ ಜಗಳ ಆಡುತ್ತಿದ್ದ ನೀನಾದ್ರೂ ಇದಿಯಲ್ವಾ ಅಷ್ಟೆ ಸಮಧಾನ ನಂಗೆ. ಅಯ್ಯೋ ಆಫೀಸ್‌ಗೆ ಲೇಟಾಯಿತು …ಇನ್ನೊಂದು ಸಾರಿ ಮತ್ತೆ ಪತ್ರ ಬರಿತೀನಿ ಆಯಿತಾ…ಅಲ್ಲಿವರೆಗೂ ಬಾಯ್
ಕೋತಿಯಲ್ಲದವ

~.~
  • vinayaka ರವರ ಬ್ಲಾಗ್
  • Login or register to post comments
  • 302 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 9, 2008 - 2:08pm — veena

ಉ: ನಾನು ಎಸ್ಸೆಸ್ಸಲ್ಸಿ ಪಾಸಾಗಲೇ ಬಾರದಿತ್ತು…!

veena's picture

veena.

ಖುಶಿ ಕೊಡುವ ಬರಹ. ನಿಮ್ಮ ಪತ್ರಾಯಣ ಹೀಗೆ ಮುಂದುವರಿಯುತ್ತಿರಲಿ. ಮುಂದಿನ ಭಾಗಕ್ಕಾಗಿ ಕಾತುರದಿಂದ ಕಾಯುತ್ತಿರುವೆ. ಈ ಬೆಕ್ಕು ಅಡ್ಡ ಬಂದರೂ ಪರವಾಗಿಲ್ಲ, ಬರೆಯಿರಿ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
June 10, 2008 - 1:10am — lgnandan

ಉ: ನಾನು ಎಸ್ಸೆಸ್ಸಲ್ಸಿ ಪಾಸಾಗಲೇ ಬಾರದಿತ್ತು…!

lgnandan's picture

ಮೂಢನಂಬಿಕೆಗಳನ್ನು ಬಿಟ್ಟು ನಿಮ್ಮ ಪತ್ರ ವ್ಯವಹಾರ ಆಗಾಗೇ ನಡಿಸಿ. ಸುಮ್ಮನೆ ತಮಾಶೆ ಮಾಡಿದೆ. ಪತ್ರ ಚೆನ್ನಾಗಿತ್ತು. ಮುಂದುವರಿಸಿ.
-ನಂದನ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
June 13, 2008 - 10:16pm — Muthuraj.S

ಉ: ನಾನು ಎಸ್ಸೆಸ್ಸಲ್ಸಿ ಪಾಸಾಗಲೇ ಬಾರದಿತ್ತು…!

Muthuraj.S's picture

Muthuraja.S Nanaganthu bahala dinagala nanthara kushikottu nanna hudugiyannu nenapisida baraha. thumba chennagide.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮೂಲಾನಕ್ಷತ್ರದ ಅನಿಷ್ಟದವಳೇ....
  • ಓ ದೊರೆಯೇ ಪತ್ರ ಓದಲು ನಾ ಒಲ್ಲೆ...
  • ನೀರಿಲ್ಲದ ನದಿಯೊಂದಕ್ಕೆ ಹಾರಲು ಹೋಗಿ......
  • ಜಾತಿ ಬಿಟ್ಟ ಜೋಕುಮಾರನೆ....
  • ನೀನು ನಿನ್ನ.....
Syndicate content

ಲೇಖಕರು

vinayaka's picture

ಪೂರ್ಣ ಹೆಸರು
vinayaka

ಪರಿಚಯ

ಹುಟ್ಟಿದ್ದು ಮಲೆನಾಡಿನಲ್ಲಿ, ಓದಿದ್ದೆಲ್ಲಾ ತುಳುನಾಡಿನಲ್ಲಿ. ಜೀತ ಮಾಡ್ತಾ ಇರೋದು ಬೆಂಗಳೂರೆಂಬ ಅಪ್ಪಟ ಕಾಂಕ್ರೀಟು ಜಂಗಲ್ಲಿನಲ್ಲಿ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಲಿನಕ್ಸಾಯಣ - ೧೬ - ಉಬುಂಟು ನನ್ನ ಭಾಷೆಯಲ್ಲಿ?
  • ಒದ್ದಾಡುವ ನೆನಪುಗಳು..
  • ಅಪ್ಪಣೆ ಕೊಟ್ಟರೆ ಕೆನ್ನೇಲಿ ಗಾಯ..!
  • ನನ್ನ ಮುದ್ದು ಕೋತಿಗೆ !
  • ಅಮ್ಮ ನ ನೆನಪು ಮತ್ತು ಫಾರಿನ್ನು .:)
  • ಓದಿದ್ದು ಕೇಳಿದ್ದು ನೋಡಿದ್ದು-3
  • ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...
  • ಗೆಳತಿಗಾಗಿ ಒಂದು ಕವನ
  • ನೀವು ಆದರ್ಶ, ಶೋಭಾ ಕರಂದ್ಲಾಜೆ ಅಲ್ಲ...
  • ನಿನ್ನಿಂದ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • shashikannada
    ಉ: ಕನ್ನಡ ಭಾಷೆ ಎಷ್ಟು ಹಳೆಯದು?
    August 30, 2008 - 6:26pm
  • spruhi
    ಉ: ಅಮ್ಮ ನ ನೆನಪು ಮತ್ತು ಫಾರಿನ್ನು .:)
    August 30, 2008 - 6:21pm
  • spruhi
    ಉ: ಕನ್ನಡ ಮಾತಾಡಿ, ಮಜಾ ಮಾಡಿ
    August 30, 2008 - 6:16pm
  • cmariejoseph
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 5:56pm
  • cmariejoseph
    ಉ: ಸುಲಭಕನ್ನಡಕೈಗನ್ನಡಿ- (ಆವೃತ್ತಿ ೧.೦)
    August 30, 2008 - 5:48pm
  • cmariejoseph
    ಉ: ಸುಲಭಕನ್ನಡಕೈಗನ್ನಡಿ- (ಆವೃತ್ತಿ ೧.೦)
    August 30, 2008 - 5:39pm
  • cmariejoseph
    ಉ: ಸುಲಭಕನ್ನಡಕೈಗನ್ನಡಿ- (ಆವೃತ್ತಿ ೧.೦)
    August 30, 2008 - 5:35pm
  • csomsekraiah
    ಉ: ಬಿಡುಗಡೆಯ ನಂತರದ ಬೇಡಿಗಳು (೩)
    August 30, 2008 - 5:12pm
  • ಸಂಗನಗೌಡ
    ಉ: ಬಾ ತಬ್ಬಿಕೋ :-)
    August 30, 2008 - 5:01pm
  • cmariejoseph
    ಉ: ಒಂದು ನಾಯಿ ಕತೆ
    August 30, 2008 - 5:00pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 56 ಅತಿಥಿಗಳು ಆನ್ಲೈನ್ ಇರುವರು.


ಆತ್ಮಸಂಯಮದಿಂದ ಕೂಡಿದ ವಿವೇಕ, ವಿನಯದಿಂದ ಕೂಡಿದ ವಿದ್ಯೆ, ಸರಳತೆಯಿಂದ ಕೂಡಿದ ಅಧಿಕಾರ ಇವು ಮಹಾತ್ಮರ ಲಕ್ಷಣ.

— ಹಿತೋಪದೇಶ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator