ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › vinayaka ರವರ ಬ್ಲಾಗ್

ಅಕ್ಷರವಿಹಾರ

ಮಲೆನಾಡ ಮಡಿಲಿನಿಂದ ಹೊರಟ ವಾಕಿಂಗು...

ಚರ್ಚಿಸಲೂ ನಮಗೆ ಪುರುಸೊತ್ತಿಲ್ಲ!

July 11, 2008 - 7:33pm — vinayaka

ಏನು ಬ್ಯೂಸಿ ಅಂತೀರಾ...ನಮ್ಮ ಮಾತುಗಳು ಆರಂಭವಾಗುವುದೇ ಇಲ್ಲಿಂದ. ಪಿಕ್‌ನಿಕ್‌ಗೆ ಪುರುಸೊತ್ತು ಇದೆ, ಚಲನಚಿತ್ರ ಅಂದ್ರೆ ನಮ್ಮ ಕೆಲಸಗಳೆಲ್ಲಾ ಮರೆತು ಹೋಗತ್ತೆ. ಧಾರಾವಾಹಿ ನೋಡಲು ನಮ್ಮಲ್ಲಿ ಸಾಕಷ್ಟು ಸಮಯವಿದೆ. ಆದ್ರೂ ಒಂದಿಷ್ಟು ಕೆಲಸಗಳಿಗೆ ಮಾತ್ರ ನಮ್ಮದು ಅದೇ ರಾಗ! ಯಾವುದಾದರೂ ಒಳ್ಳೆ ಕೆಲಸ ಮಾಡುತ್ತೇವೆ, ಒಳ್ಳೆ ವಿಚಾರ ಹೇಳುತ್ತೇವೆ ಅಂತಾ ನಮ್ಮ ಈ ಪ್ಯಾಟಿ ಜನರನ್ನು ಕರೆದು ನೋಡಿ ಊಹುಂ ಸುತಾರಾಂ ಅವರಿಗೆ ಪುರುಸೊತ್ತಿರದು!
ಮೊನ್ನೆ ಅದ್ಯಾಕೋ ನನ್ನ ಸಂಚಿ ನಾಗಿ ಕಥೆ ಓದಿದ ವೆಂಕಟ ಲಕ್ಷ್ಮಿಯವರು ಇಂದಿನ ಕತೆಗಾರರ ಕುರಿತಾಗಿ ಮಾತಾಡಲು ಕುಳಿತರು. ಇವತ್ತಿನ ಬರಹಗಾರರಿಗೆಲ್ಲಾ ಪೇಶನ್ಸ್‌ ಇಲ್ಲ. ಕಥೆಗಳೆಲ್ಲಾ ಚಿಕ್ಕದಾಗುತ್ತಿದೆ. ವಿಷಯ ವಿಸ್ತಾರವಾದದ್ದನ್ನು ಆಯ್ದುಕೊಂಡು ನರೇಶನನ್ನು ಚಿಕ್ಕದಾಗಿ ಮಾಡುತ್ತಾರೆ. ನಿಮ್ಮ ಕಥೆಯೂ ಹಾಗೇ ಆಗಿದೆ ಅಂತಾ ಅವರು ಮಾತು ಮುಗಿಸಿದರು. ಆಫ್‌ಕೋರ್ಸ್ ಅದು ನಿಜ ಕೂಡಾ. ಆದರೆ ಅದಕ್ಕಿಂತ ಮುಖ್ಯವಾಗಿ ಕಥೆ ಓದುವ ಮಂದಿಗೆ ಎಷ್ಟು ಪೇಶನ್ಸ್‌ ಇದೆ ಅನ್ನೋದು ಮುಖ್ಯವಾಗತ್ತೆ.
ಶಿವರಾಮ ಕಾರಂತರು ಒಂದು ಕುಚೋದ್ಯ ಹೇಳುತ್ತಿದ್ದರು. ಅವರ ಮೂಕಜ್ಜಿಯ ಕನಸಿಗೆ ಪ್ರಶಸ್ತಿ ಬಂದಾಗ ಅನೇಕ ಕಡೆ ಅವರಿಗೆ ಸನ್ಮಾನ ಆಯಿತಂತೆ. ಸಾಕಷ್ಟು ಜನ ಅವರ ಕಾದಂಬರಿ ಗುಣಗಾನ ಮಾಡಿದರಂತೆ. ಆದ್ರೆ ಅದರಲ್ಲಿ ಮುಕ್ಕಾಲು ಪಾಲು ಜನ ಕಾದಂಬರಿ ಓದದೇ ಗುಣಗಾನ ಮಾಡಿದವರಂತೆ! ಈ ವಿಚಾರವನ್ನು ಕಾರಂತರು ತುಂಬಾ ಸೊಗಸಾಗಿ ಬರೆದುಕೊಳ್ಳುತ್ತಾರೆ.
ಇತ್ತೀಚೆಗೆ ನನ್ನ ಬರಹವನ್ನು ಸುಮ್‌ಸುಮ್ನೆ ಹೊಗಳುವವರೆ ಹೆಚ್ಚಾಗಿದ್ದಾರೆ. ನಾನು ಬ್ಲಾಗ್‌ ನಿಲ್ಲಿಸುತ್ತೀನಿ ಅಂತಾ ಮೊನ್ನೆ ಚೇತನಕ್ಕಾ ಅದ್ಯಾಕೋ ಗುನುಗುತ್ತಿದ್ದರು. ತಕ್ಷಣ ನನಗೆ ಕಾರಂತರ ಮಾತು ನೆನಪಾಯಿತು. ಒಂದು ಕೃತಿಯನ್ನು, ಬರಹವನ್ನು ಪೂರ್ಣ ಓದದೇ ಹೊಗಳುವ ಟ್ರೆಂಡು ಆವತ್ತಿನಿಂದ ಇವತ್ತಿನವರೆಗೂ ಇದೆ. ಸುದೀರ್ಘ ಬರಹವನ್ನೋ, ಕಥೆಯನ್ನೋ ಬರೆದರೆ ಅದರಲ್ಲೂ ಇಂಟರ್‌ ನೆಟ್, ಬ್ಲಾಗ್‌ಗಳಲ್ಲಿ ಬರೆದರೆ ಖಂಡಿತಾ ಜನ ಓದಲ್ಲ. ಅಂದಹಾಗೆ ಬ್ಲಾಗ್‌ ಎಂಬುದು ನನ್ನ ಮಟ್ಟಿಗಂತೂ ಪ್ರಭಾವಶಾಲಿ ಅನ್ನಿಸುವ ಓದುವ ಮಾಧ್ಯಮವಲ್ಲ.
ಮೊನ್ನೆ ಹೀಗೆ ಪುತ್ತೂರಿನ ಕುಂಟನಿ ನಿವಾಸದಿಂದ ಅಮೆರಿಕದ ಕೆಲ ಮಿತ್ರರ ಬ್ಲಾಗ್‌ವರೆಗೂ ಸುಮ್ನೆ ಒಂದು ವಾಕಿಂಗ್‌ ಹೋಗಿ ಬಂದೆ. ಎಷ್ಟೊಂದು ಅದ್ಬುತ ಬರಹಗಳಿದ್ದವು ಅಂದ್ರೆ ಕೆಲವು ವಾಸ್ತವವಾಗಿ ಚರ್ಚೆಯಾಗಬೇಕಿತ್ತು. ಆದ್ರೆ ಒಂದು ಕಮ್ಮೆಂಟ್ ಕೂಡ ಕೆಲ ಬರಹಗಳಿಗೆ ಇರಲಿಲ್ಲ. ವಾಸ್ತವವಾಗಿ ಬರಹಗಾರ ಜನ ಕಮ್ಮೆಂಟ್ ಮಾಡಲಿ, ಪ್ರತಿಕ್ರಿಯೆ ನೀಡಲಿ ಅಂತಾ ಬರೆಯುವುದಿಲ್ಲ( ನನ್ನಂತಹವನು, ಇತರರ ಕುರಿತು ನನಗೆ ಗೊತ್ತಿಲ್ಲ) ಆದ್ರೂ ಅಂತಹ ಬರಹದ ಕುರಿತು ಕನಿಷ್ಟ ಪಕ್ಷ ಚರ್ಚೆ ನಡೆಸಬೇಕು. ಸಾಹಿತ್ಯವಲಯದಲ್ಲಿ ಒಂದಿಷ್ಟು ವಿಚಾರ ಚರ್ಚೆಯಾಗಬೇಕು( ಯಾಕಂದ್ರೆ ಇಂದಿನ ಸಾಹಿತ್ಯವಲಯ ಜನಪ್ರಿಯ ವಾಗಿರುವುದೇ ಮಾತಿಗಾಗಿ, ಉಪದೇಶಕ್ಕಾಗಿ, ಚರ್ಚೆಗಾಗಿ ಹೊರತು ಕೃತಿಗಾಗಿ, ಕಾರ್ಯಕ್ಕಾಗಿ ಅಲ್ಲ!)
"ಇನ್ನೊಂದು ಸಾಹಿತ್ಯ ಚರಿತ್ರೆ" ಅಂತಾ ಆ ಪುಸ್ತಕದ ಹೆಸರು. ಸುಮತೀಂದ್ರ ನಾಡಿಗರು ಬರೆದ ಪುಸ್ತಕ. ಆಗಿನ ಕಾಲದಲ್ಲಿ ಸಾಹಿತಿಯೊಬ್ಬನ ಕವನ, ಲೇಖನಗಳು ಹೇಗೆ ಚರ್ಚೆಯಾಗುತ್ತಿತ್ತು, ಅನಂತಮೂರ್ತಿ, ಅಡಿಗರಂತಹ ದಿಗ್ಗಜರ ನಡುವೆ ಯಾವ ತರಹ ಒಂದು ವಿಚಾರದ ಕುರಿತಾಗಿ ಚರ್ಚೆ ನಡೆಯುತ್ತಿತ್ತು ಅನ್ನುವುದು ವಿವರಿಸುವ ಅದ್ಬುತ ಪುಸ್ತಕವದು. ಸಾಹಿತ್ಯ ಕ್ಷೇತ್ರದಲ್ಲಿ ಬರಹಗಾರನೊಬ್ಬ ಹೇಗೆ ವಿಕಸಿತಗೊಳ್ಳುತ್ತಾ ಹೋಗುತ್ತಾನೆ ಎಂಬುದನ್ನು ಆ ಪುಸ್ತಕದಿಂದ ಅರಿತುಕೊಳ್ಳಬಹುದು.
ಯಾವೊಬ್ಬನೂ ಹುಟ್ಟುತಲೇ ಸರ್ವಜ್ಞನಾಗುವುದಿಲ್ಲ. ತಪ್ಪುಗಳನ್ನು ತಿದ್ದಿಕೊಳ್ಳುತ್ತಲೇ ಫ್ರೌಡನಾಗುತ್ತಾ ಹೋಗುತ್ತಾನೆ. ಹಾಗೇ ಬರಹಗಾರನೊಬ್ಬ ಪ್ರೌಡನಾಗಲು ಆತನ ಲೇಖನದ ಮೇಲೆ ನಾವು ಹುಟ್ಟುಹಾಕುವ ಚರ್ಚೆ ಸಹಕಾರಿಯಾಗುತ್ತದೆ. ಜತೆಗೆ ನಮ್ಮ ಚಿಂತನಾ ಲಹರಿಯೂ ವಿಕಸಿತಗೊಳ್ಳುತ್ತಾ ಹೋಗುತ್ತದೆ. ಹಾಗಾಗಿಯೇ ಪು.ತಿ.ನ, ಅ.ನಕೃ, ಅಡಿಗ, ಮೊದಲಾದ ಸಾಹಿತಿಗಳ ಕಾಲದಲ್ಲಿ ಸಾಹಿತ್ಯ ಸಮಾಜದ ಚರ್ಚಿತ ವಿಷಯಗಳಲ್ಲಿ ಒಂದಾಗಿದ್ದು (ಲಂಕೇಶ್, ಅನಂತಮೂರ್ತಿ, ತೇಜಸ್ವಿ ಕಾಲದ ಸಾಹಿತ್ಯ ಸಮರವೇ ಬೇರೆ ತರಹದ್ದು!)ಅಂತಾ ನನ್ನಗನ್ನಿಸುತ್ತದೆ.
ಆದರೆ ಇವತ್ತು ನಮ್ಗೆ ಒಂದು ವಿಚಾರದ ಕುರಿತು ಚರ್ಚೆ ಮಾಡುವುದು ಹಾಳಾಗಲೀ, ಬರಹವನ್ನು ಸಂಪೂರ್ಣ ಓದುವಷ್ಟು ಪುರುಸೊತ್ತು ಇಲ್ಲ ಅಲ್ವಾ? ಅಂದಿನ ಜನಾಂಗಕ್ಕೂ ಇಂದಿನ ಪೀಳಿಗೆಗೂ ಇರುವ ವ್ಯತ್ಯಾಸ ಅದೇಷ್ಟು ಅಲ್ವಾ? ಹಾಗಾಗಿಯ ನಾನಂತೂ ಚಿಕ್ಕ ಚಿಕ್ಕ ಕಥೆಯನ್ನೇ ಬರೆಯುವುದು! ಅದು ಕಥೆಯೋ, ಬರಹವೋ ಅಂತಾ ನನಗೂ ಕೆಲವೊಮ್ಮೆ ಅರ್ಥವಾಗುವುದಿಲ್ಲ!

  • chitane
~.~
  • vinayaka ರವರ ಬ್ಲಾಗ್
  • Login or register to post comments
  • 155 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಓ ದೊರೆಯೇ ಪತ್ರ ಓದಲು ನಾ ಒಲ್ಲೆ...
  • ಈ ಬೆಂಗಳೂರು ಹೀಗಾದ್ರೆ ಹೇಗೆ..?!
  • ನಮ್ಮ ಬದುಕಿನಲ್ಲಿ ಸಂಬಂಧಗಳನ್ನು ಬಿಟ್ಟು ಮತ್ತೇನಿದೆ?
  • ಮೂಲಾನಕ್ಷತ್ರದ ಅನಿಷ್ಟದವಳೇ....
  • ಹೀಗೊಂದು ಕಥೆಯ ಹೆಸರು- ಮರೀಚಿಕೆ
Syndicate content

ಲೇಖಕರು

vinayaka's picture

ಪೂರ್ಣ ಹೆಸರು
vinayaka

ಪರಿಚಯ

ಹುಟ್ಟಿದ್ದು ಮಲೆನಾಡಿನಲ್ಲಿ, ಓದಿದ್ದೆಲ್ಲಾ ತುಳುನಾಡಿನಲ್ಲಿ. ಜೀತ ಮಾಡ್ತಾ ಇರೋದು ಬೆಂಗಳೂರೆಂಬ ಅಪ್ಪಟ ಕಾಂಕ್ರೀಟು ಜಂಗಲ್ಲಿನಲ್ಲಿ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಜೋಯೀಸರ ಮಗಳು
  • 1700 11th AVE NE ಅಪಾರ್ಟ್ ಮೆಂಟ್ - 6
  • ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
  • ಓದಿದ್ದು ಕೇಳಿದ್ದು ನೋಡಿದ್ದು-11
  • ಶಿವರಾಜ್ ಕುಮಾರ ಅಭಿಮಾನಿಗಳಿಗೆ ಮತ್ತೇರಿಸುವ ಚಿತ್ರ " ಮಾದೇಶ "
  • ಹಬ್ಬ ತಂದ ನೆನಪು...
  • ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
  • ಆಧುನಿಕ "ಬೇಡರ ಕಣ್ಣಪ್ಪ"..
  • ವೃತ್ತಿಜೀವನದ ಹಂತಗಳು...
  • ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Chamaraj
    ಉ: ಜೀವ ಕಾಯುವುದೇತಕೆ?
    September 7, 2008 - 10:27am
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
ಇನ್ನಷ್ಟು
ಈಗಿನಂತೆ 6 ಸದಸ್ಯರು ಮತ್ತು 143 ಅತಿಥಿಗಳು ಆನ್ಲೈನ್ ಇರುವರು.


ಸೂರ್ಯನ ಎಳೆಬಿಸಿಲಿನಲ್ಲಿ ಬದುಕಿರಿ, ಸಮುದ್ರವನ್ನೇ ಈಜಿರಿ, ಕಾನನದ ತಂಗಾಳಿಯನ್ನು ಸೇವಿಸಿರಿ...

— ಎಮರ್ಸನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator