ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

majavani

ಸಂಪದ › Sampada Blogs › vinayaka ರವರ ಬ್ಲಾಗ್

ಅಕ್ಷರವಿಹಾರ

ಮಲೆನಾಡ ಮಡಿಲಿನಿಂದ ಹೊರಟ ವಾಕಿಂಗು...

ಓ ದೊರೆಯೇ ಪತ್ರ ಓದಲು ನಾ ಒಲ್ಲೆ...

June 17, 2008 - 10:24am — vinayaka

ಹಾಯ್ ಕಪೀಶ
ನಾನು ನಿಂಗೆ ಹೊಸ ಹೆಸರಿಟ್ಟಿದ್ದೇನೆ ಅಂತಾ ಕಣ್ಣು ಮಿಟುಕಿಸುತ್ತಿದ್ದೀಯಾ? ನೀನು ಬರೀ ಕಪೀಶ ಅಲ್ಲ. ಕಪೀಶೋತ್ತಮ ಕಪೀಶ! ಅಣ್ಣಾ ದೊರೆಯೆ, ನನ್ನ ಅಪ್ಪಾ ಜೋಯ್ಸನ್ನ ಸಾರ್ವಜನಿಕವಾಗಿ ಬೈಯ್ಯಬೇಡ ಅಂತಾ ನಾ ನಿಂಗೆ ಎಷ್ಟು ಸಲ ವದರಿದ್ದೀನಿ. ಆದ್ರೂ ನೀನು ಮಾತ್ರ ನಿನ್ನ ಚಾಳಿ ಬಿಟ್ಟಿಲ್ಲ. ಹಾಗಾಗಿ ಇನ್ನು ಮೇಲೆ ನಾನು ನಿನ್ನ ಪತ್ರವನ್ನು ಓದುವುದಿಲ್ಲ ಎಂಬುದಾಗಿ ನಿರ್ಧಾರ ಮಾಡಿದ್ದೇನೆ. ನನ್ನ ಈ ನಿರ್ಧಾರಕ್ಕೆ ಎದುರಿಗಿರುವ ಎಮ್ಮೆ ಕೋಣಗಳೇ ಸಾಕ್ಷಿ!
ಅದ್ಯಾಕೋ ಇತ್ತೀಚೆಗೆ ನಿನ್ನ ಪತ್ರಗಳು ತುಂಬಾ ಬೇಸರ ಮೂಡಿಸತೊಡಗಿವೆ. ಕಾಂಕ್ರೀಟು ಜಂಗಲ್ಲನ್ನು ಬೈಯ್ಯುವ ತೆವಲನ್ನು ಬಿಟ್ಟು ಮತ್ತೇನೂ ನಿನ್ನ ಪತ್ರದಲ್ಲಿ ಕಾಣುತ್ತಿಲ್ಲ. ಅದನ್ನ ಬಿಟ್ಟರೆ ಇನ್ನೂ ನಿನಗೆ ಗೊತ್ತಿರೋದು ನನ್ನನ್ನು ಅಣಗಿಸಿಸುವುದು ಮಾತ್ರ. ಮೊದಲೆಲ್ಲಾ ನೀನು ಪತ್ರದಲ್ಲಿ ಚೆಂದಚೆಂದದ ಪುಟ್ಟ ಪುಟಾಣಿ ಕಥೆಗಳನ್ನು ಬರೆಯುತ್ತಿದ್ದೆ ಅಲ್ವಾ? ಏ ಈಗ್ಲೂ ಅಂತಹದ್ದೇ ಕಥೆ ಬರೆಯೋ ಪ್ಲೀಸ್.
ನೋಡು ನಮ್ಮಪ್ಪ ಜೋಯ್ಸ್ ಎಂತಹವನೇ ಆಗಿರಬಹುದು. ಆದ್ರೆ ಅವನನ್ನು ಸಾರ್ವಜನಿಕವಾಗಿ ಬೈಯ್ಯುವ ಅಧಿಕಾರ ನಿನಗಿಲ್ಲ. ಇನ್ನೂ ಮುಂದೆ ಮತ್ತೆ ಬೈದೆ ಅಂತಾದರೆ ನಾನಂತೂ ನಿನ್ನನ್ನು ಬಿಲ್‌ಕುಲ್ ಮಾತಾಡಿಸುವುದಿಲ್ಲ. ಏ ಬೆವರ್ಸಿ ಹೋಗೇ ನೀನಲ್ಲದಿದ್ದರೆ ಮತ್ತೊಬ್ಬಳು ಅಂತಾ ನೀನು ಹೇಳೆ ಹೇಳ್ತಿಯಾ ಅಂತಾ ನಂಗೆ ಗೊತ್ತು. ನಾನು ಈ ಸಲ ನಿನ್ನ ಆ ಗೊಡ್ಡು ಬೆದರಿಕೆಗಳಿಗೆಲ್ಲಾ ಬಗ್ಗುವುದಿಲ್ಲ ಎಂಬುದಾಗಿ ಈ ಪತ್ರದ ಮೂಲಕ ಎಚ್ಚರಿಕೆ ನೀಡುತ್ತಿದ್ದೇನೆ.
ಡಿಗ್ರಿ ಮುಗಿಸಿ ಮನೆಯಲ್ಲಿ ಕುಳಿತಿರುವ ನನ್ನ ಬದುಕು ನಿಜಕ್ಕೂ ನನಗೆ ಬೇಸರ ಮೂಡಿಸುತ್ತಿದೆ. ಅಪ್ಪಾ, ಅಮ್ಮ ನನ್ನ ಮದುವೆ ಮಾಡಬೇಕು ಅಂತಾ ಒಂದೇ ಸಮನೆ ಹಠ ಹಿಡಿದು ಕುಳಿತಿದ್ದಾರೆ. ನಾನು ಮದುವೆ ಆಗಲಾರೆ ಎಂದು ಕುಳಿತಿದ್ದೇನೆ. ಯಾಕೋ ನನಗೆ ಕೆಲವೊಮ್ಮೆ ಈ ಬದುಕು ಅರ್ಥವೇ ಆಗಲ್ಲ ಮಾರಾಯ. ಮದ್ವೆ ಆದ್ರೆ ನನ್ನ ಇಡೀ ಬದುಕೇ ಮುಗಿಯಿತು ಅನ್ನಿಸುತ್ತಾ ಇದೆ. ಆಫ್‌ಕೋರ್ಸ್ ನಿನ್ನನ್ನೇ ನಾನು ಮದ್ವೆ ಆದ್ರೂ ಕೂಡಾ! ಥೂ ಜೀವನೆಲ್ಲಾ ಜಿಗುಪ್ಸೆ ಬಂದು ಬಿಟ್ಟಿದೆ. ಯಾವಾಗ ಸಾಯುತ್ತೇನೋ ಅನ್ನಿಸ್ತಾ ಇದೆ. ಬದುಕಿ ಸಾಧಿಸುವುದಾದರೂ ಏನು ಅಲ್ವಾ?
ಕೆಲವರು ಬದುಕಿನ ಪ್ರತಿ ಕ್ಷಣವನ್ನು ಎನ್‌ಜಾಯ್ ಮಾಡುತ್ತಾರೆ. ಆದರೆ ನನ್ನಿಂದ ಅದು ಸಾಧ್ಯವೇ ಇಲ್ಲ. ಮಾರಾಯ. ಒಮ್ಮೊಮ್ಮೆ ಏನಾದ್ರೂ ಸಾಧಿಸಬೇಕು, ಒಂದಿಷ್ಟು ಹೆಸರು ಮಾಡಬೇಕು ಅನ್ನಿಸತ್ತೆ. ಮತ್ತೆ ಕೆಲವೊಮ್ಮೆ ಸಾಧಿಸಿ ಆಗಬೇಕಾದದ್ದು ಏನು ಅನ್ನಿಸತ್ತೆ. ಸಾಧನೆ ಮಾಡಿದವನು ಸಾಯುತ್ತಾನೆ. ಮಾಡದವನು ಸಾಯುತ್ತಾನೆ ಅಲ್ವಾ?
ನನ್ನ ಪ್ರಶ್ನೆಗಳನ್ನೆಲ್ಲಾ ಕಂಡು ಅರವತ್ತರ ಅರಳು ಮರಳು ನಿನಗೆ ಈಗಲೇ ಶುರುವಾಗಿದೆ ಅಂತಾ ನೀನು ಅಣಗಿಸುತ್ತೀಯಾ ಅಂತಾ ಗೊತ್ತು. ಆದ್ರೂ ನನ್ನ ಸಮಸ್ಯೆಗಳನ್ನು ನಿನ್ನಲ್ಲಿ ಅಲ್ಲದೇ ಮತ್ಯಾರಲ್ಲಿ ಹೇಳಿಕೊಳ್ಳಲಿ ಅಲ್ವಾ? ಮದ್ವೆ ಆಗೋದು, ಸಮಸ್ಯೆ, ಆಗದೇ ಇರೋದು ಸಮಸ್ಯೆ. ನಿನ್ನನ್ನೇ ಮದ್ವೆ ಆಗ್ತೀನಿ ಅಂತಾ ಹಠ ಹಿಡಿದು ಕೂರೋದು ಮತ್ತು ದೊಡ್ಡ ಸಮಸ್ಯೆ. ದೊರೆ ನನ್ನ ಸಮಸ್ಯೆಗೆ ಏನಾದ್ರೂ ಪರಿಹಾರ ಹೇಳೋ ಪ್ಲೀಸ್.
ಪರಿಹಾರಕ್ಕೆ ಕಾಯುತ್ತಾ
ನಿನ್ನವಳು

  • kreative
~.~
  • vinayaka ರವರ ಬ್ಲಾಗ್
  • Login or register to post comments
  • 215 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 18, 2008 - 1:23pm — girish.rajanal

ಉ: ಓ ದೊರೆಯೇ ಪತ್ರ ಓದಲು ನಾ ಒಲ್ಲೆ...

girish.rajanal's picture

ವಿನಾಯಕ,
ಪತ್ರ ವ್ಯವಹಾರ ಮುಂದುವರಿಸು ತುಂಬ ತಮಾಷೆಯಾಗಿದೆ...

ನಿಮ್ಮವ,
ಗಿರೀಶ ರಾಜನಾಳ
ಉಡಾಳ ಓಣಿ ಕೆಡಸಿದರ...ಸಂಭಾವಿತ ಊರನ್ನೇ ಕೆಡಸಿದನಂತೆ....!!!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನೀರಿಲ್ಲದ ನದಿಯೊಂದಕ್ಕೆ ಹಾರಲು ಹೋಗಿ......
  • ಮೂಲಾನಕ್ಷತ್ರದ ಅನಿಷ್ಟದವಳೇ....
  • ನಾನು ಎಸ್ಸೆಸ್ಸಲ್ಸಿ ಪಾಸಾಗಲೇ ಬಾರದಿತ್ತು…!
  • ನಮ್ಮ ಬದುಕಿನಲ್ಲಿ ಸಂಬಂಧಗಳನ್ನು ಬಿಟ್ಟು ಮತ್ತೇನಿದೆ?
  • ಜಾತಿ ಬಿಟ್ಟ ಜೋಕುಮಾರನೆ....
Syndicate content

ಲೇಖಕರು

vinayaka's picture

ಪೂರ್ಣ ಹೆಸರು
vinayaka

ಪರಿಚಯ

ಹುಟ್ಟಿದ್ದು ಮಲೆನಾಡಿನಲ್ಲಿ, ಓದಿದ್ದೆಲ್ಲಾ ತುಳುನಾಡಿನಲ್ಲಿ. ಜೀತ ಮಾಡ್ತಾ ಇರೋದು ಬೆಂಗಳೂರೆಂಬ ಅಪ್ಪಟ ಕಾಂಕ್ರೀಟು ಜಂಗಲ್ಲಿನಲ್ಲಿ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು-3
  • ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...
  • ಗೆಳತಿಗಾಗಿ ಒಂದು ಕವನ
  • ನೀವು ಆದರ್ಶ, ಶೋಭಾ ಕರಂದ್ಲಾಜೆ ಅಲ್ಲ...
  • ನಿನ್ನಿಂದ
  • ನಮ್ಮಧ್ವನಿ
  • ಟೋಪಿ ಹಳೆಯದಾದರೇನು?! ಕೋತಿ ನವನವೀನ!
  • ಸಮುದಾಯ ರೇಡಿಯೋ
  • ಬೂದಿಕೋಟೆ
  • ಕಾದಿರುವೆ ನಿನಗಾಗಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • harshavardhan v...
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 30, 2008 - 10:13am
  • dhanu.vijai
    ಉ: ಕಚೇರಿ ಎಂಬ ನರಕ-೧
    August 30, 2008 - 9:32am
  • shreedevikalasad
    ಉ: ತಾರಸಿಯ ಗೋಡೆ ಮತ್ತು ಕ್ಯಾನ್ವಾಸ್
    August 30, 2008 - 9:22am
  • Sunil Jayaprakash
    ಉ: ಕಾದಿರುವೆ ನಿನಗಾಗಿ
    August 30, 2008 - 9:11am
  • Smi
    ಉ: ಕಚೇರಿ ಎಂಬ ನರಕ-೧
    August 30, 2008 - 9:01am
  • anil.ramesh
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 8:46am
  • Aravinda
    ಉ: ತಿಳಿ ಹಾಸ್ಯ ಮರೆತಿಲ್ಲ!
    August 30, 2008 - 8:34am
  • pallavi.dharwad
    ಉ: ಕಚೇರಿ ಎಂಬ ನರಕ-೧
    August 30, 2008 - 7:39am
  • pallavi.dharwad
    ಉ: ಕಚೇರಿ ಎಂಬ ನರಕ-೧
    August 30, 2008 - 7:36am
  • pallavi.dharwad
    ಉ: ಕಚೇರಿ ಎಂಬ ನರಕ-೧
    August 30, 2008 - 7:14am
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 60 ಅತಿಥಿಗಳು ಆನ್ಲೈನ್ ಇರುವರು.


ಪ್ರೀತಿಯು ಮನುಷ್ಯನನ್ನು ಹುಚ್ಚನನ್ನಾಗಿಸುತ್ತದೆ.

— ಸಿಗ್ಮಂಡ್ ಫ್ರಾಯ್ಡ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator