ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › Sampada Blogs › vinayaka ರವರ ಬ್ಲಾಗ್

ಅಕ್ಷರವಿಹಾರ

ಮಲೆನಾಡ ಮಡಿಲಿನಿಂದ ಹೊರಟ ವಾಕಿಂಗು...

ಅವಕ್ಕೆ ಅದೆಲ್ಲಾ ಯಾಕೆ ಅರ್ಥವಾಗಲ್ಲ…?!

May 20, 2008 - 8:14am — vinayaka

ನಕ್ಸಲರ ಅಟ್ಟಹಾಸಕ್ಕೆ ಮತ್ತೆರಡು ಹೆಣ ಬಿದ್ದಿದೆ. ಬಿಜೆಪಿಯನ್ನು ಬೆಂಬಲಿಸಬೇಡಿ ಅನ್ನುವ ಕರೆಗೆ ಓಗೊಡಲಿಲ್ಲ ಅಂತಾ ಅವರು ಕೊಲೆ ಮಾಡಿದ್ದಂತೆ! ಅದೇ ಕೊಲೆಯನ್ನು ಭಜರಂಗಿಗಳು, ಹಿಂದುವಾದಿಗಳು ಮಾಡಿದ್ದರೆ ನಮ್ಮ ನಾಡಿನ ಬುದ್ದಿಜೀವಿಗಳ ನಾಡಿಮಿಡಿತ ಏರಿಹೋಗುತ್ತಿತ್ತು! ಅಯ್ಯೋ ಅಮಾಯಕರನ್ನು ಕೊಂದರು…ಕರ್ನಾಟಕ ಮತ್ತೊಂದು ಗುಜಾರಾತ್ ಆಗುತ್ತಿದೆ…ಅಂತೆಲ್ಲಾ ಘ್ನಾನಪೀಠಿಗಳ ಪುಂಗಿ ಶುರುವಾಗುತ್ತಿತ್ತು. ಮಾನವೀಯತೆಯ ಭಾವ ಉಕ್ಕಿ ಉಕ್ಕಿ ಹರಿಯುತ್ತಿತ್ತು! ಆದರೆ ಅದೇ ಕೃತ್ಯವನ್ನು ನಕ್ಸಲೀಯರು ಮಾಡಿದರೆ ಬುದ್ದಿಜೀವಿಗಳ ಭಾವ ಯಾಕೆ ನಿಮಿರುವುದಿಲ್ಲ?!
ನಾನು ಟ್ಯಾಬ್ಲಾಯ್ಡೊಂದಕ್ಕೆ ವರದಿಗಾರಿಕೆ ಮಾಡುತ್ತಿದ್ದಾಗ ಬೋಜಶೆಟ್ಟರನ್ನು ಮಾತಾಡಿಸಿದ್ದೆ. ಅವರಿಗೆ ಊರಿನಲ್ಲಿ ಬದುಕಲು ನಕ್ಸಲರು ನೀಡುತ್ತಿರುವ ಕಿರುಕುಳವನ್ನು, ಅವರು ಅದನ್ನು ಮೆಟ್ಟಿನಿಲ್ಲುತ್ತಿರುವ ರೀತಿಯನ್ನು ವಿವರಿಸಿದ್ದರು. ಮೊನ್ನೆಯಿಂದ ಅದ್ಯಾಕೋ ಆ ಶೆಟ್ಟರ ನೆನಪೇ ಕಾಡುತ್ತಿದೆ. ಹೆಬ್ರಿಯ ಹಳ್ಳಿಮೂಲೆಯೊಂದರಲ್ಲಿ ಶಾಲೆಯ ಅಧ್ಯಾಪಕರಾಗಿ ತಮ್ಮ ಪಾಡಿಗೆ ತಾವು ಬದುಕುತ್ತಿದ್ದ ಶೆಟ್ಟರಿಗೆ ಸಮಾಜೋದ್ದಾರಕ ನಕ್ಸಲರು ಮೃತ್ಯುಪಾಶವಾದರು.ಹೆಬ್ರಿಯಂತಹ ಕಾಡುಮೂಲೆಯ ಹಳ್ಳಿಯಲ್ಲಿ ಇದ್ದ ಸಮಸ್ಯೆಗಳಾದರೂ ಏನು? ನಕ್ಸಲಿಸಂ ಅಲ್ಲಿಗೆ ಯಾಕೆ ಬಂದು ವಕ್ಕರಿಸಿತು. ನಕ್ಸಲಿಸಂ ಬಂದ ಮೇಲೆ ಬಗೆಹರಿದ ಸಮಸ್ಯೆಗಳಾದರೂ ಏನು?!…..ಊಹುಂ ಇವ್ಯಾವುದಕ್ಕೂ ನಮ್ಮ ಘ್ನಾನಪೀಠಿಗಳ ಹತ್ತಿರ ಉತ್ತರವಿಲ್ಲ. ಹಳ್ಳಿಮೂಲೆಯ ಸಮಸ್ಯೆಗಳು ಕೇವಲ ಪಶ್ಚಿಮಘಟ್ಟದ ಹಳ್ಳಿಗೆ ಮಾತ್ರ ಸೀಮಿತವಲ್ಲ. ಭಾರತದ ಪ್ರತಿಯೊಂದು ಹಳ್ಳಿಗಳಿಗೂ ಇದೆ. ಅದರ ನಡುವೆ ನಮ್ಮ ನಾಡಿನ ಜನ ಶಾಂತಿಯಿಂದ, ನೆಮ್ಮದಿಯಿಂದ ಜೀವನ ನಡೆಸುತ್ತಾ ಬಂದಿದ್ದಾರೆ. ವಿದ್ಯುತ್ ಇಲ್ಲ, ಶಾಲೆಯಿಲ್ಲ…ಊಹುಂ ಇಂತಹ ಸಮಸ್ಯೆಗಳಿಗೆ ನಮ್ಮವರು ತಲೆಕೆಡಿಸಿಕೊಳ್ಳಲೇ ಇಲ್ಲ. ಅವರಿಗೆ ಚೆನ್ನಾಗಿ ಗೊತ್ತು ಈ ನಾಡಿನಲ್ಲಿ ಒಂದು ಹೊತ್ತಿನ ತುತ್ತು ಕೂಳಿಗೂ ಗತಿಯಿಲ್ಲದವರು ಅನೇಕರಿದ್ದಾರೆ ಎಂದು. ಅವನ್ನೆಲ್ಲಾ ಸರಿಪಡಿಸುತ್ತೇವೆ ಎಂದು ಕಾಡೊಳಗೆ ಹೋಗಿ ಮಂಗನಂತೆ ಕುಳಿತರೆ ಪ್ರಯೋಜನವಿಲ್ಲ ಎಂದು.
ರಷ್ಯಾದಲ್ಲಿ ಕ್ರಾಂತಿಯಾಯಿತು, ಚೀನಾದಲ್ಲಿ ಅದಾಯಿತು…..ಹಾಗೆ ಭಾರತದಲ್ಲೂ ಇದಾಗತ್ತೆ! ಹೌದು ಆಗತ್ತೆ ಶಾಂತವಾಗಿದ್ದ ಮಲೆನಾಡಿನಲ್ಲಿ ರಕ್ತಹರಿಯತ್ತೆ. ಬುದ್ದಿಜೀವಿಗಳಿಂದ ಕಾಡಿಗೆ ಹೋಗಿ ಕುಳಿತ ಒಂದಿಷ್ಟು ಬಡವರ, ದಲಿತರ, ಪರದೇಶಿಗಳ ಹೆಣ ಬೀಳತ್ತೆ. ಇದನ್ನೆಲ್ಲಾ ಲಾಭವಾಗಿಸಿಕೊಂಡು, ಇದರಿಂದ ಪ್ರಚಾರಗಿಟ್ಟಿಸಿಕೊಂಡು ಹೋರಾಟ ಅದು ಇದು ಅಂತಾ ತಿರುಗಾಡಿ ಹಣಮಾಡುವ ಅಪ್ರತಿಮ ಹೋರಾಟಗಾರರ ಬೊಗಸೆ ತುಂಬತ್ತೆ ಅವರ ಮಕ್ಕಳು ವಿದೇಶಕ್ಕೆ ತೆರಳಲು ಸುಲಭವಾಗತ್ತೆ. ಅಷ್ಟೆ ಆಗುವುದು ಹೊರತು ಮತ್ತೇನೂ ಆಗಲಾರದು ನಾವು ಚೀನಾ ಮಾದರಿಯನ್ನು ಆರಾಧಿಸಲು ಹೊರಟರೆ!
ಮಲೆನಾಡಿಗೆ ನಕ್ಸಲಿಸಂ ಕಾಲಿಟ್ಟು ಸುಮಾರು ದಶಕಗಳೇ ಕಳೆಯಿತು. ಶೃಂಗೇರಿ, ಕುದ್ರೆಮುಖ ಭಾಗದ ಎಷ್ಟು ಹಳ್ಳಿಗಳು ಉದ್ದಾರವಾಗಿವೆ? ಎಷ್ಟು ಹಳ್ಳಿಗಳಿಗೆ ನಕ್ಸಲರು ರಸ್ತೆ ಮಾಡಿದ್ದಾರೆ.ಎಷ್ಟು ಬಾವಿತೋಡಿದ್ದಾರೆ? ಎಷ್ಟು ಶಾಲೆ ಕಟ್ಟಿಸಿದ್ದಾರೆ? ಎಷ್ಟು ದಲಿತರಿಗೆ ಕೂರಿಸಿ ಊಟಹಾಕುತ್ತಿದ್ದಾರೆ?! ಅಂತಾ ಕೇಳಿದರೆ ಅಯ್ಯೋ ಅದನ್ನೆಲ್ಲಾ ಸರ್ಕಾರ ಮಾಡಬೇಕು! ಅದು ಮಾಡಲೀ ಅಂತಾನೇ ನಾವು ಕಾಡಲ್ಲಿ ಕುಳಿತು ಇಷ್ಟೆಲ್ಲಾ ಹೋರಾಟ ಮಾಡುತ್ತಿರುವುದು! ಅನ್ನುತ್ತಾರೆ ನೂರಕ್ಕೂ ಹೆಚ್ಚು ಜನರಿರುವ ನಕ್ಸಲ್ ತಂಡದವರು. ಅಲ್ಲಾ ಸ್ವಾಮಿ ಬಾವಿತೋಡಲು, ರಸ್ತೆಮಾಡಲು ಸರ್ಕಾರ ಯಾಕೆ ಬೇಕು ನೂರು ಮಂದಿ ಸಾಕಾಗುವುದಿಲ್ಲವೇ?
ಬನ್ನಿ ನಮ್ಮ ನಾಡಿನಲ್ಲಿ ಒಂದಿಷ್ಟು ಸ್ತ್ರೀಶಕ್ತಿ ಕೇಂದ್ರಗಳಿವೆ. ಸರ್ಕಾರದ ಸಹಾಯವಿಲ್ಲದೇ ಅವು ಮಾಡುತ್ತಿರುವ ಕೆಲಸವನ್ನು ನೋಡಬಹುದು. ನಾಚಿಕೆ ಆಗಬೇಕು ನಕ್ಸಲರಿಗೆ ಒಬ್ಬ ಹೆಣ್ಣು ಮಗಳು ಮಾಡುವ ಕೆಲಸವನ್ನು ಮಾಡಲಾಗದೇ ಷಂಡರಂತೆ ಕಾಡಿಗೆ ಹೋಗಿ ಕುಳಿತುಕೊಳ್ಳಲು. ಅವರನ್ನು ಕಾಡಿಗೆ ಹೋಗುವಂತೆ ಪ್ರೇರೇಪಿಸುವ ಒಂದಿಷ್ಟು ಪ್ರಾಧ್ಯಾಪಕರಿಗೆ, ಬುದ್ದಿಜೀವಿಗಳಿಗೂ, ಹುಳಿ ಹುಳಿ ಸಂಪಾದಕರಿಗೂ ನಾಚಿಕೆಯಾಗಬೇಕಿತ್ತು. ಬುದ್ದಿ ಪರಾಕಾಷ್ಠೆ ಅತಿಯಾದರೇ ಸಮಾಧಿ ಸ್ಥಿತಿ ತಲುಪುತಾರಂತೆ! ನಾಚಿಕೆ, ಮಾನ, ಮರ್ಯಾದೆ ಎಲ್ಲವನ್ನೂ ಬಿಡುತ್ತಾರಂತೆ! ನಿರ್ಲಿಪ್ತ ಸ್ಥಿತಿ ಅಂತಾರಲ್ಲಾ ಅಂತಹದ್ದೇ ಸ್ಥಿತಿ ತಲುಪುತ್ತಾರಂತೆ ನಮ್ಮ ನಾಡಿನ ಬುದ್ದಿಜೀವಿಗಳು ಅದೇ ಹಂತ ತಲುಪಿದವರು! ಎಲ್ಲವನ್ನು ತ್ಯಜಿಸಿ ನಿಂತಿರುವವರು!ಅವರಿಗೆಲ್ಲಾ ಚೆನ್ನಾಗಿ ಗೊತ್ತು ಈ ಹೋರಾಟದಲ್ಲಿ ಸಾಯುವವರು ಅಮಾಯಕರು ಹೊರತು ತಮ್ಮ ಹೆಂಡಿರು ಮಕ್ಕಳು , ತಾವು ಇಟ್ಟುಕೊಂಡವರು , ಕಟ್ಟಿಕೊಂಡವರು ಸಾಯುವುದಿಲ್ಲ ಅಂತಾ! ಯಾಕೋ ಇದನೆಲ್ಲಾ ನೋಡುತ್ತಿದ್ದರೆ ಶಿವರಾಮ ಕಾರಂತರ ಗೋಂಡಾರಣ್ಯ ಕಾದಂಬರಿ ನೆನಪಿಗೆ ಬರತ್ತೆ. ಇಂತಹವರನ್ನು ನೋಡಿಯೇ ಬಹುಶಃ ಕಾರಂತರು ಆ ಕಾದಂಬರಿ ಬರೆದಿರಬೇಕು!
ಒಟ್ಟಲ್ಲಿ ಶಾಂತ ಮಲೆನಾಡಿನಲ್ಲಿ ರಕ್ತದೋಕಳಿ, ಅಮಾಯಕರ ಬಲಿ. ಈ ಹೋರಾಟಕ್ಕೆ ಶೀಘ್ರವಾಗಿ ಕಡಿವಾಣ ಹಾಕಲೇಬೇಕಿದೆ. ಬೇರು ಕೀಳದೇಮರ ಕಡಿದ್ರೆ ಪ್ರಯೋಜನವಿಲ್ಲ. ಹಾಗಾಗಿ ಯೂನಿವರ್ಸಿಟಿ ವಿದ್ಯಾರ್ಥಿಗಳನ್ನು ನಕ್ಸರನ್ನಾಗಿ ಪರಿವರ್ತಿಸುವ ಕೆಲ ಪ್ರಾದ್ಯಾಪಕರನ್ನು, ನಾಡಿನಲ್ಲಿ ಕುಳಿತು ನಕ್ಸಲ್ ಪರ ಸಂಪಾದಕೀಯ ಬರೆಯುವ ಕೆಲ ಹುಳಿಹುಳಿ ಸಂಪಾದಕರನ್ನು ಪೊಲೀಸರು ಮೊದಲು ಎನ್‌ಕೌಂಟರ್ ಮಾಡಿದ್ದರೆ ಚೆನ್ನಾಗಿತ್ತು.ಅದೆಲ್ಲಾ ಏನೇ ಇರಲಿ ಸತ್ತ ಬೋಜಶೆಟ್ಟಿಯ ಜೀವಕ್ಕೆ ಬೆಲೆತೆರುವವರು ಯಾರು?ಗುಜಾರಾತ್‌ನಲ್ಲಿ ಸತ್ತವರದ್ದು ಮಾತ್ರ ಜೀವವಾ? ಹೆಬ್ರಿಯವರದ್ದು ನಿರ್ಜಿವವಾ? ಇದೆಲ್ಲಾ ಯಾಕೆ ಅವಕ್ಕೆ….ಅಂದರೆ ಅವಕ್ಕೆ…ಅದೇ ಬಹಿರಂಗವಾಗಿ…ಅಲ್ಲಲ್ಲ ಅಂತರಂಗದಿಂದ ಬರೆಯುತ್ತಾವಲ್ಲ ಹುಳಿ ಹುಳಿ ಸಂಪಾದಕರು, ಬುದ್ದಿಯ ಪರಾಕಾಷ್ಠೆಯಿಂದ ನಿರ್ಲಿಪ್ತ ಸ್ಥಿತಿ ತಲುಪಿರುವವರಿಗೆ ಅರ್ಥವಾಗಲ್ಲ?!(ಹುಳಿ ಅಂದರೆ ಮಲೆನಾಡು ಬಾಷೆಯಲ್ಲಿ ಅಹಂಕಾರಿ ಅಂತಾ ಅರ್ಥ. ಅದನ್ನು ಇಲ್ಲಿ…..?!!!!)

  • chitane
~.~
  • vinayaka ರವರ ಬ್ಲಾಗ್
  • Login or register to post comments
  • 511 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 20, 2008 - 2:05pm — ಶ್ರೀನಿಧಿ

ಉ: ಅವಕ್ಕೆ ಅದೆಲ್ಲಾ ಯಾಕೆ ಅರ್ಥವಾಗಲ್ಲ…?!

ಶ್ರೀನಿಧಿ's picture

ಒಂದಂತೂ ಖಂಡಿತ ನಿಜ. ನಕ್ಸಲರಿಗಾಗಲೀ, ಅವರಿಗೆ ಸಹಾಯ ಮಾಡುತ್ತಿರುವವರಿಗಾಗಲೀ, ಮಾತಾಡುವುದಕ್ಕಾಗಿಯೇ / ತಮ್ಮ ರಾಜಕೀಯ ಆಕಾಂಕ್ಷೆಗಳಿಗಾಗಿಯೇ ಮಾವೋವಾದ/ನಕ್ಸಲಿಸಂ ಹೊರತು ಜನರನ್ನು ಉದ್ಧಾರ ಮಾಡುವುದಕ್ಕಲ್ಲ. ಇದು ನೂರು ಬಾರಿ ಚೀನಾದಲ್ಲಿ, ಉತ್ತರ ಕೊರಿಯಾದಲ್ಲಿ, ಕೇರಳದಲ್ಲಿ, ಪಶ್ಚಿಮ ಬಂಗಾಳದಲ್ಲಿ, ಜಾರ್ಖಂಡಿನಲ್ಲಿ ಕಾಣಿಸುತ್ತಿದೆ, ಕಾಣಿಸಿದೆ. ಅಲ್ಲೆಲ್ಲಾ ರಕ್ತ ಚೆಲ್ಲಾಡಿದ ಮೇಲೆ ಮಲೆನಾಡಿಗೂ ಕಾಲಿಟ್ಟಿದ್ದಾರೆ. ಹೀಗೆ ಮಾಡುವುದು ತಪ್ಪು ಎಂದು ಯಾವನೂ ಹೇಳುತ್ತಿಲ್ಲ. ಕೆಲವರಿಗೆ ಭಯವಾದರೆ, ಮತ್ತಿತರಿಗೆ ಅದು ರಾಜಕೀಯ ವಿರೋಧಿಗಳ ಬಾಯಿ ಶಾಶ್ವತವಾಗಿ ಮುಚ್ಚಿಸಲು ಒಂದು ಆಯುಧ ಎಂತಾಗಿಬಿಟ್ಟಿದೆ! (ಅದೇಕೋ ಇವರ ರಾಜಕೀಯ ವಿರೋಧಿಗಳು ಭಾಜಪ, ಆರ್. ಎಸ್. ಎಸ್ ನವರು ಮಾತ್ರ!!)

ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 20, 2008 - 2:12pm — madhava_hs

ಉ: ಅವಕ್ಕೆ ಅದೆಲ್ಲಾ ಯಾಕೆ ಅರ್ಥವಾಗಲ್ಲ…?!

madhava_hs's picture

ಪೋಲೀಸರೇನಾದ್ರೂ ಎನ್ ಕೌಂಟರಿನಲ್ಲಿ ಒಂದಿಬ್ಬರು ನಕ್ಸಲರನ್ನು ಕೊಂದಿದ್ದರೆ, ಹುತ್ತದಿಂದ ಹಾವುಗಳು ಹೊರಬಂದಂತೆ ಈ ಬು(ಲ?)ದ್ದಿ ಜೀವಿಗಳು ಹೊರಬಂದು ಇದು ಅಕ್ಷಮ್ಯ, ಇದು ಕೂಡದು ಎಂದು ಕೂಗಾಡುತ್ತಿರಲಿಲ್ಲವೇ?

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಗೆದ್ದೆ ರಾಗಿ ಮುದ್ದೆ ಮಾಡಿ ಗೆದ್ದೆ
  • ಹಿನ್ನೀರಿನಲ್ಲಿ ಬೆರೆತ ಕಣ್ಣೀರು (ರಕ್ತಕಣ್ಣೀರು?)
  • ಪುಳಿ/ಹುಳಿ, ಪುಳಿಸೇಹಣ್ಣು/ಹುಳಿಸೇಹಣ್ಣು, ಪುಣಿಸೇಹಣ್ಣು/ಹುಣಿಸೇಹಣ್ಣು, ಪುೞಿ/ಹುೞಿ
  • ಗಂಡಸರೂ ಬಸುರಿ ಆಗುವುದಾಗಿದ್ದರೆ...?!
  • ಈ ಬೆಂಗಳೂರು ಹೀಗಾದ್ರೆ ಹೇಗೆ..?!
Syndicate content

ಲೇಖಕರು

vinayaka's picture

ಪೂರ್ಣ ಹೆಸರು
vinayaka

ಪರಿಚಯ

ಹುಟ್ಟಿದ್ದು ಮಲೆನಾಡಿನಲ್ಲಿ, ಓದಿದ್ದೆಲ್ಲಾ ತುಳುನಾಡಿನಲ್ಲಿ. ಜೀತ ಮಾಡ್ತಾ ಇರೋದು ಬೆಂಗಳೂರೆಂಬ ಅಪ್ಪಟ ಕಾಂಕ್ರೀಟು ಜಂಗಲ್ಲಿನಲ್ಲಿ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ವಾಪಾಸ್ ಬಂದುಬಿಟ್ಟೆ...!
  • ಸ್ವಲ್ಪ ಖುಷಿ... ಸ್ವಲ್ಪ ದುಃಖ... ಈ ಬ್ಲಾಗ್‌ಗಳು....
  • ಕನಸು ಕದ್ದ ಹುಡುಗಿ...
  • ಚೌರದವನ ಕಷ್ಟ ಸುಖ
  • ಇ೦ದಿನಿ೦ದ ಸ೦ಪದ ಬಳಗದಲ್ಲಿ ನಾನೂ ಒಬ್ಬ
  • ಹನ್ನೊಂದು ಅಡಿ ಎತ್ತರದ ತಂಬೂರಿ!
  • ಓದಿದ್ದು ಕೇಳಿದ್ದು ನೋಡಿದ್ದು-46 ಅರ್ಥಶಾಸ್ತ್ರದಲ್ಲಿ ನೋಬೆಲ್ ವಿಜೇತ,ಪ್ರಶಸ್ತಿಯ ಹಣವನ್ನು ಎಲ್ಲಿ ಹೂಡಲಿದ್ದಾರೆ?
  • ಗುರುದತ್ ಎಂಬ ದುರಂತ ನಾಯಕ
  • ಸ್ವಲ್ಪನಗಿ
  • ಮೈಸೂರು ದಸರಾ ೨೦೦೮ ವೆಬ್ಕಾಸ್ಟ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • palachandra
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 10:14pm
  • ಚನ್ನಬಸವಪುತ್ತೂರ್ಕರ್
    ಉ: ಇ೦ದಿನಿ೦ದ ಸ೦ಪದ ಬಳಗದಲ್ಲಿ ನಾನೂ ಒಬ್ಬ
    October 11, 2008 - 9:40pm
  • rajeshnaik111
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 9:25pm
  • vijayp
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 9:20pm
  • mowna
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 7:04pm
  • hpn
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:29pm
  • anivaasi
    ಉ: ಪತನದ ಕತೆ
    October 11, 2008 - 6:06pm
  • anivaasi
    ಉ: ಪತನದ ಕತೆ
    October 11, 2008 - 6:05pm
  • anivaasi
    ಉ: ಪತನದ ಕತೆ
    October 11, 2008 - 5:50pm
  • venkatesh
    ಉ: (ಈಚಲುಮರಗಳು) ಪಾಮ್ ಮರಗಳು, ಹಾಗೂ ನೀರಿನ-ಬುಗ್ಗೆಗಳು !
    October 11, 2008 - 5:00pm
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 51 ಅತಿಥಿಗಳು ಆನ್ಲೈನ್ ಇರುವರು.


ತಣ್ಣನೆ ಮನದಿ೦ ತಣ್ಣಮಾನಸಕೆ
ಮಣ್ಣಿನ ಕ೦ಪಿದು ಹರಡುತಿದೆ
ಬಣ್ಣದ ಮಾತೊಳು ಬ್ರಹ್ಮವನಾತ್ಮಕೆ
ಉಣ್ಣಬಡಿಸಿಯೌತಣಿಸುತಿದೆ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator