ಪುಸ್ತಕ ಪರಿಚಯ

ಲೇಖಕರು: gopaljsr
October 24, 2012
ಕನ್ನಡ ಸಾಹಿತ್ಯದಲ್ಲಿ ಒಂದು ಜನಪ್ರಿಯ ಪ್ರಕಾರ ಹರಟೆ. ಕನ್ನಡ ಸಾಹಿತ್ಯ-ಲೋಕದ ಅನೇಕ ಉದ್ಧಾಮ ಸಾಹಿತಿಗಳು ಈ ಸಾಹಿತ್ಯ ಪ್ರಕಾರವನ್ನು ತುಂಬಾ ಸೊಗಸಾಗಿ ದುಡಿಸಿಕೊಂಡಿದ್ದಾರೆ. ಕಲೆತರಂತೂ ಹರೆಟೆಗೊಂದು ವಿಭಿನ್ನ, ವಿಶಿಷ್ಟ ಆಯಾಮವನ್ನು ದೊರಕಿಸಿಕೊಟ್ಟಿದ್ದಾರೆ. ಹರಟೆ ಹಾಲು ಹರೆತೆಯಗದಂತೆ ಜಾಗ್ರತಿ ಮೂಡಿಸಿದ್ದಾರೆ ....ಎಂಬ ಹಿನ್ನುಡಿ ಇರುವ ಒಂದು ಒಳ್ಳೆಯ ಪುಸ್ತಕ. ಸಕತ್ ನಗೆಗಡಲಿನಲ್ಲಿ ತೇಲಿಸುವ ಹನ್ನೆರಡು ಹರಟೆಗಳ ಸಂಗ್ರಹ. ಅವರ ಒಂದು ಲೇಖನದ ಲಿಂಕ್ ಕೆಳಗೆ ಇದೆ. ನಗುವುದು ಅಷ್ಟೇ ಅಲ್ಲದೆ…
ಲೇಖಕರು: partha1059
October 13, 2012
ಕೆ.ವಿ.ಅಯ್ಯರ್ ಕನ್ನಡದಲ್ಲಿ ಚಿರಸ್ಥಾಯಿ ಪ್ರಣಯ ತ್ಯಾಗದ ಕಾದಂಬರಿ ಶಾಂತಲ. ಅದೆಷ್ಟು ಬಾರಿ ಮುದ್ರಣವಾಗಿದೆಯೊ ನನಗೆ ತಿಳಿಯದು. ನನ್ನಲ್ಲಿರುವ ಹಳೆಯ ಪ್ರತಿಯೆ ಹತ್ತನೆಯ ಮುದ್ರಣ!. ಕನ್ನಡದ ಹೋಯ್ಸಳರ ರಾಣಿ ಶಾಂತಲೆಯ ಜೀವನವದ ವರ್ಣಚಿತ್ರ ಈ ಕಾದಂಬರಿ. ಹೋಯ್ಸಳರ ದೊರೆ ಜೈನ ಬಿಟ್ಟಿದೇವ ನಂತರದಲ್ಲಿ ಶ್ರೀ ವೈಷ್ಣವನಾದ ವಿಷ್ಣುವರ್ದನ ಹಾಗು ಅವನ ಪತ್ನಿ ಶಾಂತಲೆ ಹಾಗು ಲಕ್ಷ್ಮೀಯರ ಜೀವನ ಚಿತ್ರಣ. ಈ ಮೂವರ ನಡುವಿನ ಒಲವಿನಿ ಕೊಂಡಿ ಕುವರವಿಷ್ಣು,ಮಹಾರಾಜ ವಿಷ್ಣುವರ್ದನರ ತಾಯಿ ಮಹಾದೇವಿಯವರ ಸಾಕುಮಗ,…
2
ಲೇಖಕರು: spr03bt
October 10, 2012
ಇತ್ತೀಚೆಗೆ ಪ್ರಜವಾಣಿ ಪತ್ರಿಕೆಯಲ್ಲಿ ಡಾ. ಕೆ.ಎನ್. ಗಣೇಶಯ್ಯನವರ ಹೊಸ ಕಾದ೦ಬರಿ "ಮೂಕ ಧಾತು" ಬಿಡುಗಡೆಯಾದ ಸುದ್ದಿ ಓದಿ ನನಗೆ ತು೦ಬಾ ಖುಶಿಯಾಗಿತ್ತು. ಕನ್ನಡದಲ್ಲಿ ಅವರ ವಿಶಿಷ್ಟ ಹಾಗು ಹೊಸ ಬರವಣಿಗೆ ಶೈಲಿಗೆ ಮರುಳಾದವರಲ್ಲಿ ನಾನೂ ಒಬ್ಬ. ಇವರ ಬಗ್ಗೆ ತಿಳಿದ ಸ್ವಲ್ಪವೇ ಸಮಯದಲ್ಲಿ ಇವರ ಎಲ್ಲಾ ಹತ್ತು ಪುಸ್ತಕಗಳನ್ನು ಓದಿ ಮುಗಿಸಿರುವೆ ಎ೦ದರೆ ಇವರ ಬರವಣಿಗೆಗಿರುವ ಸೆಳತ ಅರ್ಥವಾಗಬಹುದು. ವೃತ್ತಿಯಲ್ಲಿ ಕೃಷಿ ವಿಜ್ಞಾನಿಯಾದ ಇವರ ಬರವಣಿಗೆಯಲ್ಲಿ ಹೆಚ್ಚಾಗಿ ಕಾಣುವುದು ಇತಿಹಾಸಕ್ಕೆ…
ಲೇಖಕರು: siddharam
November 26, 2011
ಭಾರತ ಹೇಗೆ ಕೃಷಿ ಪ್ರಧಾನವಾದ ದೇಶವೋ ಚೀನಾ ದೇಶವೂ ಕೃಷಿ ಪ್ರಧಾನವಾದ ದೇಶವೇ. ಇಂದು ಚೀನ ಅಭಿವೃದ್ಧಿ ಹೊಂದಿದ ದೇಶಗಳ ಸಾಲಿನಲ್ಲಿದ್ದರೂ ಅದರ ಅಂತರಾಳದಲ್ಲಿ ಹರಿಯುತ್ತಿರುವುದು ಕೃಷಿಯ ಬೆವರೇ. ಅಮೆರಿಕನ್ ಲೇಖಕಿ ಪರ್ಲ್.ಎಸ್.ಬಕ್ ಚೀನಾ ದೇಶದಲ್ಲಿ ೫ ವರ್ಷಗಳವರೆಗೆ ಇದ್ದು, ಅಲ್ಲಿನವರಿಗೆ ಕೃಷಿಯ ಬಗೆಗಿರುವ ಒಲವು, ಅಲ್ಲಿನ ಬದುಕಿನ ಬವಣೆಗಳು, ಲಿಂಗ ತಾರತಮ್ಯ, ಮೇಲ್ವರ್ಗದವರ ಶೋಷಣೆ, ಭೂಮಿಯ ಬಗೆಗೆ ಕೃಷಿಕರಿಗಿರುವ ಪ್ರೀತಿ ಎಲ್ಲವನ್ನೂ ತಮ್ಮ ಗುಡ್ ಅರ್ತ್ ಕಾದಂಬರಿಯಲ್ಲಿ ಹಿಡಿದಿಟ್ಟಿದ್ದಾರೆ.…
ಲೇಖಕರು: hamsanandi
November 25, 2011
ನಾನು ಚಿಕ್ಕವನಿದ್ದಾಗ ಅಜ್ಜಿ ಎಷ್ಟೋ ಹಳೆಯ ವಿಚಾರಗಳ ಬಗ್ಗೆ ಹೇಳುತ್ತಿದ್ದರು. ಅವರು ಹೋಗಿದ್ದ ಊರುಗಳ ಪ್ರಸ್ತಾಪವೂ ಅಲ್ಲಲ್ಲಿ ಬರ್ತಿತ್ತು. ಅವುಗಳಲ್ಲಿ ಒಂದು ಪ್ರಯಾಗದ ತ್ರಿವೇಣಿ ಸಂಗಮ. ಅಲ್ಲಿ ಗಂಗೆ ಮತ್ತೆ ಯಮುನೆ ಎರಡೂ ನದಿಗಳು ಸೇರುತ್ತವೆ. ಕಪ್ಪು ಬಣ್ಣದ ಯಮುನಾ ಮತ್ತೆ ತಿಳಿಯಾದ ಗಂಗೆ ಎರಡೂ ಅಲ್ಲದೆ, ಬರಿಗಣ್ಣಿಗೆ ಕಾಣದ ಸರಸ್ವತೀ ಕೂಡ ಅಲ್ಲೇ ಸೇರುತ್ತೆ. ಅದು ಗುಪ್ತ ಗಾಮಿನಿ, ಹಾಗಾಗಿ ಇದಕ್ಕೆ ತ್ರಿವೇಣಿ ಸಂಗಮ ಅಂತ ಹೆಸರು (ವೇಣಿ = ಜಡೆ. ಜಡೆಗೆ ಮೂರು ಕಾಲುಗಳಿರುವುದರಿಂದ ಈ ಹೆಸರು…
2
ಲೇಖಕರು: makrumanju
October 21, 2011
 ಜ್ಞಾನಪೀಠ ಪ್ರಶಸ್ತಿ ವಿಜೇತ ಕಂಬಾರರ ಈ ಕಾದಂಬರಿಯನ್ನು ನಾನು ಎಂ.ಫಿಲ್ ಪದವಿಯಲ್ಲಿ ಅಧ್ಯಯನ ವಿಷಯವಾಗಿ ತೆಗೆದು ಕೊಂಡಿದ್ದೆ. ಇಲ್ಲಿ ಈ ಕಾದಂಬರಿಯ ಓದಿನ ಸಾರಾಂಶವನ್ನು ತಿಳಿಸಲು ಪ್ರಯತ್ನಿಸುತ್ತೇನೆ.    'ಶಿಖರಸೂರ್ಯ' ಕಾದಂಬರಿಯು ಜನಪದ ಕತೆಯನ್ನು ಆಧರಿಸಿ ರಚಿತವಾಗಿದೆ. ಚಂದ್ರಶೇಖರ ಕಂಬಾರರ ಐದನೆಯ ಹಾಗೂ ಇಲ್ಲಿವರೆಗಿನ ಕೊನೆಯ ಕಾದಂಬರಿ 'ಶಿಖರಸೂರ್ಯ'. ಈ ಕಾದಂಬರಿಯು 2006 ರಲ್ಲಿ  ಪ್ರಕಟಗೊಂಡಿತು. ಜಾನಪದ ಮೈಯ್ಯಿಗೆ ಆಧುನಿಕ ಸಂವೇದನೆಯನ್ನು ಕಸಿ ಮಾಡಿದ ನಮ್ಮ ಅದ್ವೀತಿಯ ಕವಿಯಾದ ಕಂಬಾರರ…