ಪುಸ್ತಕ ಸಂಪದ

  • ಖ್ಯಾತ ಆಂಗ್ಲ ಬರಹಗಾರರಾದ ಚಾರ್ಲ್ಸ್ ಲುಡ್ಟಿಜ್ ಡಾಜ್ ಸನ್ (Charles Lutwidge Dodgson) ಲೂಯಿ ಕರೋಲ್ ಎಂಬ ಗುಪ್ತನಾಮದಲ್ಲಿ ಬರೆದ ಆಲೀಸ್ ಇನ್ ವಂಡರ್ ಲ್ಯಾಂಡ್ (Alice in Wonderland) ಎಂಬ ಮಕ್ಕಳ ಕಥಾ ಸಂಕಲನವನ್ನು ಹೊರತಂದಿದ್ದರು. ಕನ್ನಡದ ಖ್ಯಾತ ಸಾಹಿತಿ ನಾ ಕಸ್ತೂರಿ ಇವರು ಈ ಕಥಾ ಸಂಕಲನವನ್ನು ಬಹಳ ಸೊಗಸಾಗಿ ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಇಂಗ್ಲಿಷ್ ನ ಆಲೀಸ್ ಕನ್ನಡಕ್ಕೆ ಬರುವಾಗ ಪಾಪಚ್ಚಿ ಆಗಿದ್ದಾಳೆ. 

    ಕನ್ನಡ ಪುಸ್ತಕ ಪ್ರಾಧಿಕಾರವು ೧೯೩೫, ೧೯೭೩, ೧೯೯೮ ವರ್ಷಗಳಲ್ಲಿ ಈ ಕೃತಿಯನ್ನು ಮರು ಮುದ್ರಣ ಮಾಡಿತ್ತು. ಈಗ ಕರ್ನಾಟಕ ಅನುವಾದ ಸಾಹಿತ್ಯ ಅಕಾಡೆಮಿ ಅವರು ಮುದ್ರಿಸಿದ್ದಾರೆ. ಲೂಯಿ ಕರೋಲ್ ಎಂಬ ಗುಪ್ತನಾಮದಿಂದ ಈ ಕಥೆಗಳನ್ನು ಬರೆದ ಚಾರ್ಲ್ಸ್…

  • ವೃತ್ತಿಯಲ್ಲಿ ಶಿಕ್ಷಕಿಯಾಗಿ, ಮುಖ್ಯೋಪಾಧ್ಯಾಯಿನಿಯಾಗಿ ಈಗ ನಿವೃತ್ತಿ ಜೀವನವನ್ನು ಅನುಭವಿಸುತ್ತಿರುವ ರತ್ನಾ ಕೆ ಭಟ್ ತಲಂಜೇರಿ (ರತ್ನಕ್ಕ) ಇವರು ಬರೆದ ಗಝಲ್ ಗಳ ಸಂಕಲನ ಇತ್ತೀಚೆಗೆ ಬಿಡುಗಡೆಯಾಗಿದೆ. “ಗಝಲ್ ಬರವಣಿಗೆಯಲ್ಲಿ ನುರಿತವಳು ನಾನಲ್ಲ" ಎಂದು ಪ್ರಾಮಾಣಿಕವಾಗಿಯೇ ಹೇಳುವ ರತ್ನಕ್ಕ ಇದುವರೆಗೆ ಬರೆದ ಗಝಲ್ ಗಳನ್ನೆಲ್ಲಾ ಸೇರಿಸಿ ಸಂಕಲನದ ರೂಪದಲ್ಲಿ ಹೊರತಂದಿದ್ದಾರೆ. ಇವರ ಈ ಸಾಧನೆಗೆ ಬೆನ್ನೆಲುಬಾಗಿ ನಿಂತವರು ಇವರ ಸಹೋದರ ಹಾಗೂ ಸಾಹಿತಿ ಹಾ ಮ ಸತೀಶ ಮತ್ತು ಕಥಾಬಿಂದು ಪ್ರಕಾಶನದ ಪ್ರದೀಪ್ ಕುಮಾರ್ ಇವರು. ರತ್ನಕ್ಕನವರ ಯಾವುದೇ ಕಾರ್ಯಕ್ಕೆ ಬೆನ್ನೆಲುಬಾಗಿ ನಿಂತಿರುವ ಅವರ ಪತಿ ತಲಂಜೇರಿ ಕೃಷ್ಣ ಭಟ್ ಅವರನ್ನು ಹಾಗೂ ವಾಟ್ಸಾಪ್ ಬಳಗ ‘ಗಝಲ್ ವಾಹಿನಿ' ಇದರ ಸದಸ್ಯೆಯಾಗಿದ್ದು ತಾವು ಬರೆದ ಗಝಲ್ ಗಳ…

  • ಜೂಲ್ಸ್ ವೆರ್ನ್, ಫ್ರೆಂಚ್ ಭಾಷೆಯಲ್ಲಿ ವೈಜ್ಞಾನಿಕ ಲೇಖನಗಳನ್ನು ಬರೆಯುವವರಲ್ಲಿ ಪ್ರಮುಖರು. ಇವರ ’ಎ ಜರ್ನಿ ಟು ದ ಸೆಂಟರ್ ಆಫ್ ದ ಅರ್ತ್’ ಎಂಬ ರೋಚಕವಾದ ಕೃತಿಯ ಸಂಗ್ರಹಾನುವಾಗಿದೆ ಈ ಕೃತಿ. ಇದನ್ನು ಎಂ. ಗೋಪಾಲಕೃಷ್ಣ ಅಡಿಗರು ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಈ ಕೃತಿ ಮೊದಲು ಪ್ರಕಟವಾದದ್ದು ೧೯೭೯ರಲ್ಲಿ. ಆಗ ಅದನ್ನು ಪ್ರಕಾಶಿಸಿದ್ದು ಬೆಂಗಳೂರಿನ ಜಗತ್ ಸಾಹಿತ್ಯ ಮಾಲೆ ಇವರು. ಈಗ ಕನ್ನಡ ಅನುವಾದ ಸಾಹಿತ್ಯ ಅಕಾಡೆಮಿಯವರು ಮರು ಮುದ್ರಣ ಮಾಡಿದ್ದಾರೆ.

    ಈ ಬಗ್ಗೆ ಈ ಮಾಲಿಕೆಯ ಪ್ರಧಾನ ಸಂಪಾದಕರಾದ ಪ್ರಧಾನ್ ಗುರುದತ್ತ ಇವರು ಈ ಕೃತಿಯ ಬಗ್ಗೆ ತಮ್ಮ ಮುನ್ನುಡಿಯಲ್ಲಿ ಬರೆಯುತ್ತಾ “ ವೈಜ್ಞಾನಿಕ ಕಥೆ ಕಾದಂಬರಿಗಳನ್ನು ಬರೆದವರಲ್ಲಿ ಮುಖ್ಯರೆಂದು ಪರಿಗಣಿತರಾಗಿರುವ…

  • 'ಮುದ್ರಾ ಪ್ರವೇಶ' ಎಂಬ ಕೃತಿಯು ಯೋಗಮುದ್ರಾ ವಿಜ್ಞಾನವನ್ನು, ಮುದ್ರೆಗಳನ್ನು ಅಭ್ಯಸಿಸುವ ಕ್ರಮವನ್ನು ಬಣ್ಣಿಸಿರುವ ಕೃತಿ. ಸಾಮಾನ್ಯ ಓದುಗನಿಗೂ ಅರ್ಥವಾಗುವ ರೀತಿಯಲ್ಲಿ ಬರೆದಿದ್ದಾರೆ ಕೆ ರಂಗರಾಜ ಅಯ್ಯಂಗಾರ್ ಇವರು. ಈ ಕೃತಿಯಲ್ಲಿ ಅಧ್ಯಾತ್ಮಿಕ ಮುದ್ರೆಗಳು, ಶಾಸ್ತ್ರೀಯ ಹಾಗೂ ಪೂಜಾ ಮುದ್ರೆಗಳು, ಶ್ರೀ ಗಾಯತ್ರೀ ಮುದ್ರೆಗಳು, ಚೈತನ್ಯದಾಯೀ ಮುದ್ರೆಗಳು, ದೇವತಾ ಮುದ್ರೆಗಳು, ಚಿಕಿತ್ಸಾ ಮುದ್ರೆಗಳು, ಹಠಯೋಗ ಮುದ್ರೆಗಳು, ನರ್ತನ ಮುದ್ರೆಗಳು, ತಪ್ತ ಮುದ್ರೆಗಳು ಇತ್ಯಾದಿಗಳ ಬಗ್ಗೆ ಸವಿವರ ಹಾಗೂ ಸಚಿತ್ರವಾದ ಮಾಹಿತಿಯನ್ನು ಈ ಕೃತಿಯಲ್ಲಿ ನೀಡಲಾಗಿದೆ. 

    ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ ಇದರ ಉಪಕುಲಪತಿಗಳಾದ ಡಾ. ಎಚ್ ಆರ್ ನಾಗೇಂದ್ರ ಇವರು ತಮ್ಮ ಶುಭ…

  • ಛಂದ ಪುಸ್ತಕ 2009ನೇ ಸಾಲಿನ ಬಹುಮಾನ ಪಡೆದ ಕಥಾಸಂಕಲನ ಇದು. ಕಥಾಸ್ಪರ್ಧೆಯ ತೀರ್ಪುಗಾರರಾದ ಅಮರೇಶ ನುಗಡೋಣಿ ಹತ್ತಾರು ಕತೆಗಾರರ ಸುಮಾರು 100 ಕತೆಗಳನ್ನು ಓದಿ, ಇದನ್ನು ಆಯ್ಕೆ ಮಾಡಿದ್ದಾರೆ.

    "ತೀರ್ಪುಗಾರರ ಮಾತಿ”ನಲ್ಲಿ ಅವರು ಹೀಗೆ ಬರೆದಿದ್ದಾರೆ: “ಈ ಸಂಕಲನದಲ್ಲಿ ಹನ್ನೆರಡು ಕಥೆಗಳಿವೆ. ಹತ್ತು ವರ್ಷಗಳ ಅವಧಿಯಲ್ಲಿ ಈ ಕಥೆಗಳು ರಚನೆಯಾಗಿವೆ. ಸಂದೀಪ ನಾಯಕರ ಕಥೆಗಳು ಸಮಾನತೆಯನ್ನು ಕಾಯ್ದುಕೊಂಡಿವೆ. ಪಾತ್ರಗಳ ಸೃಷ್ಟಿಯಲ್ಲಾಗಲಿ, ಸನ್ನಿವೇಶಗಳ ನಿರ್ಮಾಣದಲ್ಲಾಗಲಿ, ಉದ್ಭವಿಸುವ ಸಮಸ್ಯೆಯಲ್ಲಾಗಲಿ, ದೃಷ್ಟಿಧೋರಣೆಯಲ್ಲಾಗಲಿ, ಕಥೆಯ ನಿರೂಪಣೆಯಲ್ಲಾಗಲಿ, ಭಾಷೆಯ ಬಳಕೆಯಲ್ಲಾಗಲಿ, ಒಟ್ಟು ಕಥನಕ್ರಮದಲ್ಲಾಗಲಿ ಏಕರೂಪತೆಯನ್ನು ಹೊಂದಿವೆ. ಏರುಗತಿಯಲ್ಲಾಗಲಿ, ಏರುಪೇರಾಗಲಿ ಇಲ್ಲ. ಒಂದು ಹದವನ್ನು ಕಾಯ್ದುಕೊಂಡಿವೆ. ಇದನ್ನು ಒಂದು…

  • ಜಯಶ್ರೀ ಕದ್ರಿಯವರ ನೂತನ ಕವನ ಸಂಕಲನ ‘ಕೇಳಿಸದ ಸದ್ದುಗಳು'ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಕವನ ಸಂಕಲನಕ್ಕೆ ಬೆನ್ನುಡಿಯನ್ನು ಬರೆದಿದ್ದಾರೆ ಖ್ಯಾತ ಕವಯತ್ರಿಯಾದ ಎಂ ಆರ್ ಕಮಲ. ಅವರ ಪ್ರಕಾರ “ಜಯಶ್ರೀ ಕದ್ರಿಯವರಿಗೆ ಕವಿತೆಯೆನ್ನುವುದು ತುದಿ ಬೆರಳಿಗಂಟಿದ ಪರಾಗ. ಹೂವಿನ ಘಮಲು. ರಾಗವೊಂದನ್ನು ಜೀವದಲ್ಲಿ ಮೆಲ್ಲನೆ ಅರಳಿಸುವ ಸೋಜಿಗ. ಒಳಗಿನ ಕುದಿತ,ಇರಿತಗಳಿಂದ ಬಿಡುಗಡೆಯನ್ನು ಪಡೆವ ಹಾದಿ. ನಿಶ್ಯಬ್ಧಕ್ಕೆ ಶಬ್ಧವನ್ನು ತುಂಬುವ, ಭಾವಕ್ಕೆ ಪದಗಳನ್ನು ನೇಯುವ ಬೆಡಗು. ಲೆಕ್ಕವಿಡದೆ ಕತ್ತಲಲ್ಲಿ ಉಳಿದು ಹೋದ ಹೆಣ್ಣು ಮಕ್ಕಳ ನಿಟ್ಟುಸಿರುಗಳನ್ನು ಬೆಳಕಿಗಿಟ್ಟು ತನ್ನನ್ನು, ಸಮಾಜವನ್ನು ಏಕಕಾಲದಲ್ಲಿ ಪರೀಕ್ಷಿಸಿಕೊಳ್ಳುವ ಪರಿ.”

    ಜಯಶ್ರೀ ಕದ್ರಿಯವರ ಕಥಾ ಸಂಕಲನಕ್ಕೆ…

  • ವಿವಿದ ಲೇಖಕರಿಂದ ಬರೆಯಲ್ಪಟ್ಟ ಚೈನಾ ಮತ್ತು ಜಪಾನ್ ದೇಶದ ಪ್ರಸಿದ್ಧ ಕಥೆಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ ಖ್ಯಾತ ಅನುವಾದಕರಾದ ನೀಲತ್ತಹಳ್ಳಿ ಕಸ್ತೂರಿ ಇವರು. ಈ ಪುಸ್ತಕವನ್ನು ಕರ್ನಾಟಕ ಅನುವಾದ ಸಾಹಿತ್ಯ ಅಕಾಡೆಮಿಯವರು ಹೊರತಂದಿದ್ದಾರೆ. ಈ ಕೃತಿಯಲ್ಲಿ ೮ ಕಥೆಗಳಿವೆ. 

    ಮೊದಲ ಕಥೆ ಹಾನನ ಅಕೃತ್ಯ ಇದರ ಮೂಲ ಲೇಖಕರು ಷಿಗೆ ನಯೋಯ. ಇವರು ಆಧುನಿಕ ಜಪಾನಿನ ಅತಿ ಪ್ರಮುಖ ಹಾಗೂ ಪ್ರಭಾವಶಾಲಿ ಲೇಖಕರಲ್ಲಿ ಒಬ್ಬರು. ಅವರ ಬರಹಗಳಲ್ಲಿ ಅಸಾಧಾರಣವಾದ ಒಂದು ಚೆಲುವು ಹಾಗೂ ಸೂಕ್ಷ್ಮ ದೃಷ್ಟಿಗಳ ಮಿಲನವಿದೆ. ಅವರ ಹಲವಾರು ಕಥೆಗಳು ಕೇವಲ ಕಾಲ್ಪನಿಕ. ಆದರೆ ಅವರ ‘ಕಿನೋಸಾತಿಯಲ್ಲಿ' ಮುಂತಾದ ವೈಶಿಷ್ಟ್ಯಪೂರ್ಣ ಕೃತಿಗಳು ಸಾವಿನ ಮೇಲಿನ ಚಿಂತನೆಯನ್ನು ಒಳಗೊಂಡು ಆತ್ಮಕಥಾ…

  • ಕನ್ನಡ ಮಹಿಳಾ ಕಾವ್ಯ’ ಪ್ರಾತಿನಿಧಿಕ ಸಂಗ್ರಹ ೨೦೨೦-೨೦೨೧- ಎಚ್.ಎಸ್. ಅನುಪಮಾ ಅವರ ಕವಿ ಪ್ರಕಾಶನದಿಂದ ಪ್ರಕಟಗೊಂಡಿರುವ ಈ ಕೃತಿಯನ್ನು ಪ್ರೊ. ಸಬಿಹಾ ಭೂಮಿಗೌಡ ಅವರು ಸಂಪಾದಿಸಿದ್ದಾರೆ. ಈ ಕೃತಿಯ ಕುರಿತು ತಿಳಿಸುತ್ತಾ ‘ಕನ್ನಡ ಸಾಹಿತ್ಯದ ಪ್ರಾತಿನಿಧಿಕ ಕವನ ಸಂಪುಟಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ತೀರ ಸೊರಗಿರುವುದನ್ನು ಸ್ತ್ರೀವಾದಿಗಳು ಆಧಾರ ಸಹಿತವಾಗಿ ದಾಖಲಿಸಿದ್ದಾರೆ. ಆ ಕಾರಣಕ್ಕಾಗಿ ಮಹಿಳೆಯರ ಬರಹಗಳಿಗೆ ಉತ್ತೇಜನ ನೀಡಲು ಆರಂಭವಾದ ಪ್ರತ್ಯೇಕ ಕಾವ್ಯ ಸಂಪುಟಗಳು ಅನಂತರದಲ್ಲಿ ಅಸ್ಮಿತೆಯ ಕಾರಣದಿಂದ ಪ್ರಕಟಿಸುವ ತುರ್ತನ್ನು ಎದುರುಗೊಂಡವು ಎಂಬುದು ವಾಸ್ತವ. ಆದರೆ ಇದೊಂದೇ ಕಾರಣವಲ್ಲ. ಕಳೆದ ಶತಮಾನದ ಎಪ್ಪತ್ತು-ಎಂಬತ್ತರ ದಶಕಗಳ ವಾರ್ಷಿಕ ಸಾಹಿತ್ಯ ಸಮೀಕ್ಷೆಗಳಲ್ಲಿ `ಈ ವರ್ಷದಲ್ಲಿ ಮಹಿಳೆಯರು ಕೆಲವು…

  • ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕರಾಗಿದ್ದ ಅಜಿತ ಕುಮಾರ ಇವರು ತುರ್ತು ಪರಿಸ್ಥಿತಿಯ ಸಮಯದಲ್ಲಿ ಜೈಲಿನಲ್ಲಿ ಆತ್ಮಸ್ಥೈರ್ಯ ಮತ್ತು ಆರೋಗ್ಯ ಕಾಪಾಡಲು ಕೈಗೊಂಡ ಯೋಗಾಭ್ಯಾಸದ ಕುರಿತಾದ ಸಮಗ್ರ ಪುಸ್ತಕ ‘ಯೋಗ ಪ್ರವೇಶ'. ೧೯೮೪ರಲ್ಲಿ ಪ್ರಥಮ ಮುದ್ರಣ ಕಂಡ ಈ ಕೃತಿಯು ಬಹಳ ಜನಪ್ರಿಯವಾಗಿತ್ತು. ೧೯೯೦ರಲ್ಲಿ ಅಜಿತಕುಮಾರರ ಅಕಾಲಿಕ ನಿಧನದ ಬಳಿಕ ೨೦೧೯ರಲ್ಲಿ ಹಾಗೂ ೨೦೨೨ರಲ್ಲಿ ಈ ಕೃತಿಯು ಮರು ಮುದ್ರಣವಾಯಿತು. ಇಂಥಹ ಒಂದು ಕೃತಿಯನ್ನು ಕನ್ನಡ ಸಾರಸ್ವತ ಲೋಕಕ್ಕೆ ಒಪ್ಪಿಸಿದ ಅಜಿತಕುಮಾರರ ಸಾಧನೆ ಸದಾ ಕಾಲ ಸ್ಮರಣೀಯವಾಗಿದೆ.

    ಜನ ಸಾಮಾನ್ಯರಿಂದ ಗಗನಗಾಮಿಗಳವರೆಗೆ ಇಂದು ಎಲ್ಲ ಜನವರ್ಗಗಳನ್ನೂ ಯೋಗ ಆಕರ್ಷಿಸಿದೆ. ಹಿಂದೆ ಭಾರತದಲ್ಲಷ್ಟೇ ಪ್ರಚಲಿತವಾಗಿದ್ದ ಯೋಗ ಇಂದು ಜಗತ್ತಿನ…

  • ಬೆಂಗಳೂರಿನ ಕರ್ನಾಟಕ ಅನುವಾದ ಸಾಹಿತ್ಯ ಅಕಾಡೆಮಿ ಹೊರ ತಂದ ‘ಮಿಲಿಂದ ಪ್ರಶ್ನೆ' ಎಂಬ ಕೃತಿ ಮೂಲತಃ ಪಾಲಿ ಭಾಷೆಯಲ್ಲಿ ಬರೆಯಲ್ಪಟ್ಟಿದೆ ಎಂದು ಕೃತಿಯ ಅನುವಾದಕರಾದ ಖ್ಯಾತ ಸಾಹಿತಿ ಜಿ ಪಿ ರಾಜರತ್ನಂ ಅವರು ತಮ್ಮ ಮುನ್ನುಡಿಯಲ್ಲಿ ತಿಳಿಸುತ್ತಾರೆ. ಜಿ ಪಿ ರಾಜರತ್ನಂ ಅವರು 'ಪ್ರವೇಶ' ಎಂಬ ಮುನ್ನುಡಿ ಬರಹದಲ್ಲಿ ಈ ಕೃತಿಯ ಬಗ್ಗೆ ಬಹಳಷ್ಟು ಮಾಹಿತಿಗಳನ್ನು ತಿಳಿಸುತ್ತಾ ಹೋಗಿದ್ದಾರೆ. ಅದರ ಆಯ್ದ ಭಾಗಗಳು ನಿಮ್ಮ ಓದಿಗಾಗಿ…

    “ ಪಾಲಿ ಭಾಷೆಯಲ್ಲಿರುವ ಸಾಹಿತ್ಯವು ಎರಡು ವಿಧವಾದುದೆಂದು ಸ್ಥೂಲವಾಗಿ ಹೇಳಬಹುದು. ಒಂದು ಪಿಟಕ ಸಾಹಿತ್ಯ ಮತ್ತೊಂದು ಪಿಟಕೇತರ ಸಾಹಿತ್ಯ. ವಿನಯ ಪಿಟಕ, ಸುತ್ತ ಪಿಟಕ, ಅಭಿಧಮ್ಮ ಪಿಟಕ ಎಂಬ ಮೂರು ಪಿಟಕಗಳು, ಸಿಂಹಳ ಬರ್ಮಾ ಸಯಾಂ ದೇಶಗಳ ಬೌದ್ಧರ…