ಖ್ಯಾತ ತೆಲುಗು ಲೇಖಕ ಪೆದ್ದಿಂಟಿ ಅಶೋಕ್ ಕುಮಾರ್ ಅವರು ಬರೆದ ವಿಭಿನ್ನ ಶೈಲಿಯ ಕಥೆಗಳನ್ನು ಎಂ ಜಿ ಶುಭಮಂಗಳ ಇವರು “ಜಾಲ" ಎಂಬ ಹೆಸರಿನಲ್ಲಿ ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಈ ಕಥಾ ಸಂಕಲನಕ್ಕೆ ಮುನ್ನುಡಿಯನ್ನು ಬರೆದಿದ್ದಾರೆ ಲೇಖಕಿ ಡಾ. ಪಾರ್ವತಿ ಜಿ ಐತಾಳ್. ಇವರು ತಮ್ಮ ಮುನ್ನುಡಿಯಲ್ಲಿ ಈ ಕಥಾ ಸಂಕಲನದ ಬಗ್ಗೆ ಬಹಳ ಸೊಗಸಾದ ಮಾಹಿತಿ ನೀಡಿದ್ದಾರೆ. ಅದರ ಆಯ್ದ ಭಾಗಗಳು ನಿಮ್ಮ ಓದಿಗಾಗಿ…
“ಜಾಗತೀಕರಣಗೊಂಡ ಈ ಜಗತ್ತಿನಲ್ಲಿ ಸಾವಿರಾರು ಭಾಷೆಗಳ ನಡುವೆ ಸಂವಹನದ ಅಗತ್ಯವು ಎಂದಿಗಿಂತ ಹೆಚ್ಚಾಗಿರುವ ಇಂದಿನ ಸಂದರ್ಭದಲ್ಲಿ ಪರಸ್ಪರ ಅನುವಾದದ ಕೆಲಸವೂ ದಿನೇ ದಿನೇ ಹೆಚ್ಚಾಗುತ್ತಿದೆ. ಅದರಲ್ಲೂ ಬಹುಭಾಷಾ ದೇಶವಾದ ಭಾರತದಲ್ಲಿ ಅಸ್ತಿತ್ವದಲ್ಲಿರುವ ನೂರಾರು ಭಾಷೆಗಳು …