Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಓದುಗರ ಗಮನಕ್ಕೆ: ವ್ಯತ್ಯಯವಾದಲ್ಲಿ ತಿಳಿಸಿ.

ಸಂಪದ

ಸಂದರ್ಶನಗಳು

ವಿವೇಕ್ ಶಾನಭಾಗ್ ಸಂದರ್ಶನ

October 26, 2007 - 8:09pm — narendra
ವಿವೇಕ್ ಶಾನುಭಾಗ್

ಇಂಡಿಯನ್ ಫೌಂಡೇಶನ್ ಫರ್ ಆರ್ಟ್ಸ್ ಸಂಸ್ಥೆ ತನ್ನ ತ್ರೈಮಾಸಿಕದ ಇತ್ತೀಚಿನ ಸಂಚಿಕೆಯಲ್ಲಿ ಪ್ರಕಟಿಸಿರುವ ನಮ್ಮ ಖ್ಯಾತ ಕತೆಗಾರ, ದೇಶಕಾಲ ಪತ್ರಿಕೆಯ ಸಂಪಾದಕ ವಿವೇಕ್ ಶಾನಭಾಗರ ಸಂದರ್ಶನದ ಕನ್ನಡ ಅನುವಾದ ಇಲ್ಲಿದೆ: ದೇಶಕಾಲದ ಸ್ಥೂಲ ಪರಿಚಯ "ದೇಶಕಾಲಕ್ಕೆ ಮೂರುವರ್ಷ" ಎಂಬ ಲೇಖನದಲ್ಲಿ ಲಭ್ಯವಿದೆ.

ಬರಹಗಾರ ಮತ್ತು ದೇಶಕಾಲದ ಸಂಪಾದಕ ವಿವೇಕ್ ಶಾನಭಾಗ್ ಇಲ್ಲಿ ಕನ್ನಡ ಸಾಹಿತ್ಯಕ್ಕೆ ಸಣ್ಣ ಪತ್ರಿಕೆಗಳ ಕೊಡುಗೆ ಮತ್ತು ತನ್ನ ಪತ್ರಿಕೆ ಹೇಗೆ ತನ್ನದೇ ಆದ ಒಂದು ಸ್ಥಾನ ಕಲ್ಪಿಸಿಕೊಂಡಿದೆ ಎಂಬ ಬಗ್ಗೆ ಮಾತನಾಡಿದ್ದಾರೆ:

ಪ್ರಶ್ನೆ: ಕನ್ನಡದ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಪತ್ರಿಕೆಗಳ ಒಂದು ಒಟ್ಟಾರೆ ಚಿತ್ರಣವನ್ನು ನಮ್ಮ ಓದುಗರಿಗೆ ನೀಡಬಹುದೆ?

ಸಾಹಿತ್ಯಿಕ ಪತ್ರಿಕೆಗಳ ಒಂದು ದೊಡ್ಡ ಪರಂಪರೆಯೇ ಕನ್ನಡಕ್ಕಿದೆ. ಮಾಸ್ತಿ, ಶಿವರಾಮ ಕಾರಂತ, ಗೋಪಾಲಕೃಷ್ಣ ಅಡಿಗ, ಯು.ಆರ್.ಅನಂತಮೂರ್ತಿ ಮತ್ತು ಇನ್ನೂ ಹಲವು ಪ್ರಮುಖ ಬರಹಗಾರರು ಸಾಹಿತ್ಯಿಕ ಪತ್ರಿಕೆಗಳನ್ನು ಸಂಪಾದಿಸಿ ಪ್ರಕಟಿಸಿದ್ದರು. ಹೆಚ್ಚಿನವು ದೀರ್ಘಕಾಲ ಉಳಿಯಲಿಲ್ಲ ಎಂಬುದು ನಿಜವಾದರೂ ಹೊಸ ಬರಹಗಾರರನ್ನು ಉತ್ತೇಜಿಸುವ ಮೂಲ ಉದ್ದೇಶವನ್ನು ಅವು ಈಡೇರಿಸಿವೆ. ನಮ್ಮ ಹೆಚ್ಚಿನ ಹೆಚ್ಚಿನ ಸಾಹಿತ್ಯಿಕ ಬೆಳವಣಿಗೆಗಳು, ಬದಲಾವಣೆಗಳು ಈ ವಲಯದಿಂದ ಸ್ಪೂರ್ತಿ ಪಡೆದಿವೆ.  ಮುಂದೆ ಓದಿ »

  • ಸಂದರ್ಶನಗಳು
Ornamental seperator
  • Login or register to post comments
  • 502 hits
  • Email this page
  • Delicious
  • Google
  • Yahoo

ಕೆ.ಎಸ್‌. ನಿಸಾರ್‌ ಅಹಮದ್‌ ಸಂದರ್ಶನ

December 23, 2006 - 3:03pm — suresh_k

ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನ ನಿಮಗೆ ದೊರಕಿದೆ. ಇದಕ್ಕೆ ನಿಮ್ಮ ಪ್ರತಿಕ್ರಿಯೆ ಏನು?

-ನನ್ನ ಬದುಕಿನ ಅತ್ಯಂತ ಸಾರ್ಥಕ ಕ್ಷಣಗಳಲ್ಲಿ ಇದೂ ಒಂದು. ಇದಕ್ಕೆ ಮೂರ್ನಾಲ್ಕು ಕಾರಣಗಳಿವೆ. ನಾಲ್ಕು ವರ್ಷಗಳ ಹಿಂದೆಯೇ ನಾನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ ಅಂತ ವದಂತಿಯಾಗಿತ್ತು. ತುಂಬಾ ಜನ ದೂರವಾಣಿ ಮೂಲಕ ಶುಭ ಕೋರಿದ್ದರು ಕೂಡ. ಸಹಜವಾಗಿ ತುಂಬಾ ಖುಷಿಯಾಗಿತ್ತು. ಆದರೆ, ಅದಾದ ಕೆಲವೇ ಗಂಟೆಗಳಲ್ಲಿ ನಾನು ಆಯ್ಕೆಯಾಗಿಲ್ಲ ಅಂತ ಗೊತ್ತಾಗಿ ನಿರಾಸೆ ಆಯ್ತು. ಆಸೆ ಹುಟ್ಟಿಸಿ ಆಮೇಲೆ ಹೀಗಾದರೆ ಎಲ್ಲೋ ಎಂಥಾ ಮನುಷ್ಯನಿಗಾದ್ರೂ, ಎಂಥಾ ಸ್ಥಿತಪ್ರಜ್ಞನಿಗಾದ್ರೂ ಸ್ವಲ್ಪ ಬೇಸರ ಆಗುತ್ತೆ. ಆದ್ರೂ ಸಾವರಿಸಿಕೊಂಡೆ. ಹಾಗೆ ನೋಡಿದ್ರೆ ಇಷ್ಟರವರೆಗೆ ನನಗೆ ಬಂದಿರುವಂಥ ಪ್ರಶಸ್ತಿಗಳೆಲ್ಲ ಆಯಾಚಿತವಾಗಿ ಬಂದಂಥವು. ಯಾರ ಕೈಕಾಲು ಹಿಡಿದು ಪಡೆದುಕೊಂಡದ್ದೇನಲ್ಲ. ಹಾಗಾಗಿ ಬರಬೇಕಾಗಿದ್ದು ಬಂದೇ ಬರುತ್ತೆ ಅನ್ನೋ ನಂಬಿಕೆ ಇತ್ತು. ದೈವ ಕೃಪೆಯಿಂದ ಎಂಥಾ ಹೊತ್ತಲ್ಲಿ ಬಂದಿದೆ ಅಂದರೆ, ಕರ್ನಾಟಕ ಸುವರ್ಣ ರಾಜ್ಯೋತ್ಸವದ ಹೊನ್ನಸಗೆ ಆಚರಿಸುತ್ತಿದೆ. ಶಿವಮೊಗ್ಗದಲ್ಲಿ- ನಾನು ಎಲ್ಲಿ ಅತ್ಯಂತ ಮಹತ್ವದ, ಪುಷ್ಕಳವಾದ, ಧಾರಾಳವಾದ ಕವಿತೆಗಳನ್ನು ಬರೆದನೋ ಅಲ್ಲಿ ಸಮ್ಮೇಳನ ನಡೆಯುತ್ತಿದೆ. ಶಿವಮೊಗ್ಗ ನನ್ನ ಎರಡನೇ ಸೃಜನಶೀಲತೆಯ ತವರು ಅಂತ ಹೇಳಿಕೊಂಡಿದ್ದೇನೆ. ಬೆಂಗಳೂರು ಬಿಟ್ಟರೆ ಶಿವಮೊಗ್ಗ ನನಗೆ ಅತ್ಯಂತ ಪ್ರಿಯವಾದ ಊರು. ಏಕೆಂದರೆ ನನಗೆ ಅಲ್ಲಿ ಏಕಾಂತ ಸಿಕ್ತು. 1967ರ ಹೊತ್ತಲ್ಲಿ ಆಟೋಗಳು ಇರ್ಲಿಲ್ಲ, ಬರೀ ಜಟಕಾ ಗಾಡಿಗಳಿದ್ವು. ಶಿವಮೊಗ್ಗ ತನ್ನ ಹಳ್ಳಿ ಸೊಗಡಿನ ಮುಗ್ಧತೆ ಕಾಪಾಡಿಕೊಂಡು ಬಂದಿತ್ತು. ಇವತ್ತು ಹಿರಿಯಕ್ಕನ ಚಾಳಿ ಅಂತ ಬೆಂಗಳೂರಿನ ಚಾಳಿ ಬಡಿದಿದೆ ಅದಕ್ಕೆ. ಆ ಕಾಲದಲ್ಲಿ ತುಂಬಾ ನಿರಾಳವಾಗಿತ್ತು. ಕೈಚಾಚಿದಲ್ಲಿ ಗದ್ದೆ, ತೋಟ, ಹೊಳೆ, ಕಾಲುವೆ, ಪಕ್ಷಿಗಳು.... ಅತ್ಯಂತ ಆನಂದ ನೀಡುವ, ಪ್ರಶಾಂತ ವಾತಾವರಣ. ಹಾಗಾಗಿ ಶಿವಮೊಗ್ಗದಲ್ಲಿ ಈ ಸ್ಥಾನ ಸಿಕ್ಕಿದ್ದಂತೂ ನನಗೆ ಉಡುಗೊರೆ ಕೊಟ್ಟ ಹಾಗಿದೆ. ಇನ್ನೊಂದು ವಿಚಾರವೆಂದರೆ, ಶಿವಮೊಗ್ಗದಲ್ಲಿ ನಾನು ಯಾವ ಕೋಣೆಯಲ್ಲಿ ಕುಳಿತು ಸಾಮಾನ್ಯ ಶಿಷ್ಟ ಜನ, ವಿಮರ್ಶಕರು ಇವತ್ತಿಗೂ ಒಳ್ಳೆಯ ಪದ್ಯಗಳು ಅಂತ ಮೆಚ್ಚಿಕೊಂಡಿರುವ ಕವಿತೆಗಳನ್ನು ಬರೆದೆನೋ ಆ ಕೋಣೆಗೂ ಈಗ ಸಮ್ಮೇಳನ ನಡೆಯುತ್ತಿರುವ ವೇದಿಕೆಗೂ ಒಂದೇ ರಸ್ತೆ ಅಡ್ಡ. ಇದು ಕಾಕತಾಳೀಯವೋ, ಯೋಗಾಯೋಗವೋ ಗೊತ್ತಿಲ್ಲ. ಯಾವುದೋ ಅಲೌಕಿಕ ಶಕ್ತಿಯ ಕೃಪೆ ಇರುವುದಂತೂ ನಿಜ. ಆ ಶಕ್ತಿಗೆ ನನ್ನ ನಮಸ್ಕಾರ.  ಮುಂದೆ ಓದಿ »

  • ಸಂದರ್ಶನಗಳು
Ornamental seperator
  • Login or register to post comments
  • 1345 hits
  • Email this page
  • Delicious
  • Google
  • Yahoo
Syndicate content

ಲೇಖನಗಳ ಆಹ್ವಾನ

ಅರ್ಘ್ಯಂ ಸಂಸ್ಥೆಯವರು ನೀರಿನ ಬಳಕೆ, ಉಪಯೋಗ, ನೈರ್ಮಲ್ಯ ಹಾಗೂ ಸಂಬಂಧಪಟ್ಟ ವಿಷಯಗಳ ಕುರಿತು ಅರಿವು ಮೂಡಿಸಲು ಪ್ರಾರಂಭಿಸಿರುವ ಇಂಡಿಯ ವಾಟರ್ ಪೋರ್ಟಲ್ ಕನ್ನಡದ ಪ್ರಾಯೋಗಿಕ ಆವೃತ್ತಿ ಆಗಲೇ ಕನ್ನಡ ಓದುಗರ ಮುಂದಿದೆ.

ಈ ಹೊಸ ಕನ್ನಡ ಪೋರ್ಟಲ್ ಗೆ ಕನ್ನಡ ಲೇಖನಗಳನ್ನು ಸಂಪದ ಸಮುದಾಯದ ಸದಸ್ಯರಿಂದ ಈ ಮೂಲಕ ಆಹ್ವಾನಿಸುತ್ತಿದ್ದೇವೆ.

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Prabhu Murthy
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 23, 2008 - 12:54am
  • ಮನಹ್ಪಠಲ
    ಉ: MAC OS ನಲ್ಲಿ ಬರಹ ಅಥವಾ ನುಡಿ ಕನ್ನಡದ ವರ್ಶನ್ಗಳು ಸಿಗುತ್ವಾ?
    May 22, 2008 - 11:40pm
  • Sunil Jayaprakash
    ಉ: ಯೂಹೂ ಮ್ಯಾಪ್ ಕನ್ನಡದಲ್ಲಿ
    May 22, 2008 - 11:10pm
  • prasannasp
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 9:32pm
  • venkatesh
    ಉ: ಇರೀರು ಕಿರೀರ್ಗೆ ಜಾಗ ಬಿಟ್ಕೊಟ್ಟು , ಆಸೀರ್ವಾದ ಮಾಡೋದೆ, ಅರಸೋದೆ ಅಲ್ವ್ರ, ನಮ್ಮ ಕನ್ನಡದೋರ್ ಪರಂಪರೆ. ಏನಂತೀರ ದೇವ್ರು ?
    May 22, 2008 - 9:18pm
  • harshab
    ಉ: ಇರೀರು ಕಿರೀರ್ಗೆ ಜಾಗ ಬಿಟ್ಕೊಟ್ಟು , ಆಸೀರ್ವಾದ ಮಾಡೋದೆ, ಅರಸೋದೆ ಅಲ್ವ್ರ, ನಮ್ಮ ಕನ್ನಡದೋರ್ ಪರಂಪರೆ. ಏನಂತೀರ ದೇವ್ರು ?
    May 22, 2008 - 7:23pm
  • Sunil Jayaprakash
    ಉ: MAC OS ನಲ್ಲಿ ಬರಹ ಅಥವಾ ನುಡಿ ಕನ್ನಡದ ವರ್ಶನ್ಗಳು ಸಿಗುತ್ವಾ?
    May 22, 2008 - 7:03pm
  • shylaswamy
    ಉ: ಅದೃಷ್ಟ
    May 22, 2008 - 6:39pm
  • thiligola
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 6:39pm
  • thiligola
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 6:34pm
ಇನ್ನಷ್ಟು

ಪರಸ್ಥಳದಲ್ಲಿ ವಿದ್ಯೆಯೇ ಧನ, ವಿಪತ್ಕಾಲದಲ್ಲಿ ಬುಧ್ಧಿಯೇ ಧನ, ಪರಲೋಕದಲ್ಲಿ ಧರ್ಮವೇ ಧನ, ಒಳ್ಳೆಯ ನೆಡೆತೆಯಾದರೋ ಎಲ್ಲೆಡೆಯಲ್ಲಿಯೂ ಅಖಂಡ ಧನ.

— ಭಾರತ ಮಂಜರೀ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator