ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಹೊಸ ರೂಪದಲ್ಲಿ ಕನ್ನಡ ವಾಟರ್ ಪೋರ್ಟಲ್

ಸಂಪದ › ಕಥಾ ಮಾಲಿಕೆ

ಸಪ್ತಗಿರಿ ಸಂಪದ (ಪೌರಾಣಿಕ ಕಥಾನಕ)

ಸಪ್ತಗಿರಿ ಸಂಪದ(ಪೌರಾಣಿಕ ಕಥಾನಕ) ಸಂಚಿಕೆ-3

August 23, 2006 - 1:27pm — ritershivaram

ದೇವರು ಎಲ್ಲಿದ್ದಾನೆ? ಇಲ್ಲ ಅವನು ಇದ್ದಿದ್ದರೆ ಇಷ್ಟೆಲ್ಲಾ ಅನಾಹುತಗಳು ಆಗುತ್ತಿರಲಿಲ್ಲ ಎಂದು ಹೇಳುತ್ತೇವೆ. ಅಂಥವರು ಈಗಾಗಲೇ ಹೇಳಿದಂತೆ ಈ ಜಗತ್ತಿನ ತ್ರಿಗುಣಾತ್ಮಕ ತತ್ವವನ್ನು ಮನಗಾಣಬೇಕಾಗುತ್ತದೆ. ಈಗ ಜನಸಂಖ್ಯೆ ಹೆಚ್ಚುತ್ತಿರುವುದರಿಂದ ಪರಪಮ ಪಾಪಿಗಳೂ ಹೆಚ್ಚುತ್ತಲೇ ಇದ್ದಾರಷ್ಟೇ... ಕೇವಲ ಕಾಲುಭಾಗ ಮಾತ್ರವೆ ಆದರೂ ಸಾತ್ವಿಕ ಶಕ್ತಿ ಯಾವಾಗಲೂ ಬೆಂಕಿ ಮುಚ್ಚಿದ ಕೆಂಡದಂತೆಯೆ ಇರುತ್ತದೆಯಲ್ಲ... ಅದು ಸಿಡಿದೆದ್ದ ಸಂದರ್ಭಗಳಲ್ಲೆಲ್ಲ ಪಾಪಿಗಳ ದಮನವಾಗುತ್ತಲೆ ಇರುತ್ತದೆಯಾದರೂ ನಾವು ಅವರ ಸಂಖ್ಯೆ ಹೆಚ್ಚುತ್ತಲೆ ಇರುವುದು ಇನ್ನೂ ನಡೆದೇ ತೀರುವುದರಿಂದ, ಎಷ್ಟೇ ದುಷ್ಟ ನಿಗ್ರಹವಾದರೂ ಕೂಡ ನಮಗೆ ತೃಪ್ತಿ ಇಲ್ಲವಾಗಿರುತ್ತದೆ
ದೇವರಿಲ್ಲ ಎಂದು ಸುಲಭವಾಗಿ ಹೇಳಿಬಿಡುವ ವ್ಯಕ್ತಿ ತಾನು ಸ್ವತಃ ದೇವರೇ ಆಗಿರಬೇಕಷ್ಟೇ. ಆತನ ಅಪರಾಧಗಳಿಗೆ ಕ್ಷಮೆ ಎಂಬುದೇ ಇಲ್ಲವಲ್ಲ... ! ಹಾಗೆಯೆ, ದೇವರಿದ್ದಾನೆಂದು ಪರಮ ಭಕ್ತಿಯಿಂದ ಮಾಡಬಾರದ ಪಾತಕಗಳನ್ನೂ ಮಾಡುವ ವ್ಯಕ್ತಿ ಕೂಡ ಕ್ಷಮಾರ್ಹನಲ್ಲ; ಅವನಿಗೆ ಆ ದೇವರೇ ಅವನ ಜೀವಿತದಲ್ಲಿ ನಾವೇ ಕಾಣುವಂತೆ ಶಿಕ್ಷೆ ವಿಧಿಸದಿರಲಾರ. ಶಿಶುಪಾಲ ನೂರೊಂದು ತಪ್ಪು ಮಾಡುವವರೆಗೆ ಶ್ರೀ ಕೃಷ್ಣ ಕಾದು ಕುಳಿತವನಂತೆ ನಾವು ಅಂಥ ಪಾತಕಿಗಳ ಪಾಪದ ಕೊಡ ತುಂಬುವ ತನಕವೂ ಕಾಯುವುದು ಅನಿವಾರ್ಯ.....
ದೇವರು, ಮನುಷ್ಯನಿಗೆ ದೈವತ್ವದಲ್ಲಿ ನಂಬಿಕೆ ಎಂದರೆ- ಸತ್ಯ ಧರ್ಮ, ಪ್ರಾಮಾಣಿಕತೆ, ಇತರರಿಗೆ ಉಪದ್ರವ ಕೊಡದೇನೆ, ದ್ವೇಷಾಸೂಯೆಗಳಿಗೆ ಮನ ತೆರದೇನೆ, ಕಷ್ಟಕಾರ್ಪಣ್ಯಗಳನ್ನು ಎದುರಿಸುತ್ತಲೇ ಬದುಕನ್ನು ನಿಭಾಯಿಸುವುದು. ಯಾವಾಗಲೂ, ಸಭ್ಯರಿಗೆ, ಜ್ಞಾನಿಗಳಿಗೇ ಈ ಜಗತ್ತಿನಲ್ಲಿ ತೊಂದರೆಗಳು ಅಧಿಕ. ಅದು ವಿಧಿ ನಿಯಮವೇ ಸರಿ. ಅದನ್ನು ಮೀರಿ ಅಡ್ಡ ದಾರಿ ಹಿಡಿಯುವುದೆಂದರೆ ಅಪಗತಿ ತಂದು ಕೊಂಡಂತೆಯೆ ಸರಿ. ಅಷ್ಟೇಕೆ , ಮಾನವೀಯ ಪ್ರಜ್ಞೆಯೊಂದಿದ್ದರೆ, ಸಾಲದು ದೈವ ಶ್ರದ್ಧೆ ಇರಲೇಬೇಕು. ನೀವೇ ಯೋಚಿಸಿ; ಅದಿಲ್ಲದಿದ್ದರೆ, ಈ ಜಗತ್ತು ತನ್ನ ವ್ಯಾಪಾರ ವ್ಯವಹಾರದಲ್ಲಿಯೂ ನಂಬಿಕೆಯುಳ್ಳವರಿಲ್ಲದೇನೆ ಸ್ತಗಿತಗೊಳ್ಳುವುದಿಲ್ಲವೇ? ವ್ಯವಹಾರದಲ್ಲಿ ಎಷ್ಟೇ ಲೆಕ್ಕಪತ್ರಗಳು, ದಾಖಲೆಗಳಿರಲಿ ನಂಬಿಕೆಯ ಮೇಲೇ ಕೊಟ್ಯಂತರ ರೂ.ಗಳ ವಹಿವಾಟು ನಡೆಯುತ್ತಲೇ ಇರುವುದನ್ನು ಕಾಣುತ್ತಲೇ ಇದ್ದೇವೆ. ದೊಡ್ಡ ದೊಡ್ಡ ಕೈಗಾರಿಕೋದ್ಯಮಿಗಳು, ಬೃಹತ್ ಬಂಡವಾಳ ಶಾಹಿಗಳೂ ಇಂದಿಗೂ ದೇವರನ್ನು ನಂಬದೇನೆ ತಮ್ಮ ಹಣ ಹೂಡಿಕೆ ಮಾಡದಿರುವವರು ವಿರಳವೇ ಸರಿ. ಕೋಟಿಗಟ್ಟಲೆ ಚೆಲ್ಲುವ ಚಿತ್ರೋದ್ಯಮಿಗಳಂತೂ, ದೇವರು ಹಾಗೂ ತಮ್ಮ ಭವಿಷ್ಯದಲ್ಲಿ ನಂಬಿಕೆ ಎಂದಿಗೂ ಬಿಡಲಾರರಲ್ಲ...!
*********  ಮುಂದೆ ಓದಿ »

  • ಸಪ್ತಗಿರಿ ಸಂಪದ (ಪೌರಾಣಿಕ ಕಥಾನಕ)
~.~
  • Login or register to post comments
  • 709 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಸಪ್ತಗಿರಿ ಸಂಪದ(ಪುರಾಣ ಕಥಾನಕ) ಸಂಚಿಕೆ-3

August 23, 2006 - 11:56am — ritershivaram

ದೇವರು ಎಲ್ಲಿದ್ದಾನೆ? ಇಲ್ಲ ಅವನು ಇದ್ದಿದ್ದರೆ ಇಷ್ಟೆಲ್ಲಾ ಅನಾಹುತಗಳು ಆಗುತ್ತಿರಲಿಲ್ಲ ಎಂದು ಹೇಳುತ್ತೇವೆ. ಅಂಥವರು ಈಗಾಗಲೇ ಹೇಳಿದಂತೆ ಈ ಜಗತ್ತಿನ ತ್ರಿಗುಣಾತ್ಮಕ ತತ್ವವನ್ನು ಮನಗಾಣಬೇಕಾಗುತ್ತದೆ. ಈಗ ಜನಸಂಖ್ಯೆ ಹೆಚ್ಚುತ್ತಿರುವುದರಿಂದ ಪರಪಮ ಪಾಪಿಗಳೂ ಹೆಚ್ಚುತ್ತಲೇ ಇದ್ದಾರಷ್ಟೇ... ಕೇವಲ ಕಾಲುಭಾಗ ಮಾತ್ರವೆ ಆದರೂ ಸಾತ್ವಿಕ ಶಕ್ತಿ ಯಾವಾಗಲೂ ಬೆಂಕಿ ಮುಚ್ಚಿದ ಕೆಂಡದಂತೆಯೆ ಇರುತ್ತದೆಯಲ್ಲ... ಅದು ಸಿಡಿದೆದ್ದ ಸಂದರ್ಭಗಳಲ್ಲೆಲ್ಲ ಪಾಪಿಗಳ ದಮನವಾಗುತ್ತಲೆ ಇರುತ್ತದೆಯಾದರೂ ನಾವು ಅವರ ಸಂಖ್ಯೆ ಹೆಚ್ಚುತ್ತಲೆ ಇರುವುದು ಇನ್ನೂ ನಡೆದೇ ತೀರುವುದರಿಂದ, ಎಷ್ಟೇ ದುಷ್ಟ ನಿಗ್ರಹವಾದರೂ ಕೂಡ ನಮಗೆ ತೃಪ್ತಿ ಇಲ್ಲವಾಗಿರುತ್ತದೆ
ದೇವರಿಲ್ಲ ಎಂದು ಸುಲಭವಾಗಿ ಹೇಳಿಬಿಡುವ ವ್ಯಕ್ತಿ ತಾನು ಸ್ವತಃ ದೇವರೇ ಆಗಿರಬೇಕಷ್ಟೇ. ಆತನ ಅಪರಾಧಗಳಿಗೆ ಕ್ಷಮೆ ಎಂಬುದೇ ಇಲ್ಲವಲ್ಲ... ! ಹಾಗೆಯೆ, ದೇವರಿದ್ದಾನೆಂದು ಪರಮ ಭಕ್ತಿಯಿಂದ ಮಾಡಬಾರದ ಪಾತಕಗಳನ್ನೂ ಮಾಡುವ ವ್ಯಕ್ತಿ ಕೂಡ ಕ್ಷಮಾರ್ಹನಲ್ಲ; ಅವನಿಗೆ ಆ ದೇವರೇ ಅವನ ಜೀವಿತದಲ್ಲಿ ನಾವೇ ಕಾಣುವಂತೆ ಶಿಕ್ಷೆ ವಿಧಿಸದಿರಲಾರ. ಶಿಶುಪಾಲ ನೂರೊಂದು ತಪ್ಪು ಮಾಡುವವರೆಗೆ ಶ್ರೀ ಕೃಷ್ಣ ಕಾದು ಕುಳಿತವನಂತೆ ನಾವು ಅಂಥ ಪಾತಕಿಗಳ ಪಾಪದ ಕೊಡ ತುಂಬುವ ತನಕವೂ ಕಾಯುವುದು ಅನಿವಾರ್ಯ.....
ದೇವರು, ಮನುಷ್ಯನಿಗೆ ದೈವತ್ವದಲ್ಲಿ ನಂಬಿಕೆ ಎಂದರೆ- ಸತ್ಯ ಧರ್ಮ, ಪ್ರಾಮಾಣಿಕತೆ, ಇತರರಿಗೆ ಉಪದ್ರವ ಕೊಡದೇನೆ, ದ್ವೇಷಾಸೂಯೆಗಳಿಗೆ ಮನ ತೆರದೇನೆ, ಕಷ್ಟಕಾರ್ಪಣ್ಯಗಳನ್ನು ಎದುರಿಸುತ್ತಲೇ ಬದುಕನ್ನು ನಿಭಾಯಿಸುವುದು. ಯಾವಾಗಲೂ, ಸಭ್ಯರಿಗೆ, ಜ್ಞಾನಿಗಳಿಗೇ ಈ ಜಗತ್ತಿನಲ್ಲಿ ತೊಂದರೆಗಳು ಅಧಿಕ. ಅದು ವಿಧಿ ನಿಯಮವೇ ಸರಿ. ಅದನ್ನು ಮೀರಿ ಅಡ್ಡ ದಾರಿ ಹಿಡಿಯುವುದೆಂದರೆ ಅಪಗತಿ ತಂದು ಕೊಂಡಂತೆಯೆ ಸರಿ. ಅಷ್ಟೇಕೆ , ಮಾನವೀಯ ಪ್ರಜ್ಞೆಯೊಂದಿದ್ದರೆ, ಸಾಲದು ದೈವ ಶ್ರದ್ಧೆ ಇರಲೇಬೇಕು. ನೀವೇ ಯೋಚಿಸಿ; ಅದಿಲ್ಲದಿದ್ದರೆ, ಈ ಜಗತ್ತು ತನ್ನ ವ್ಯಾಪಾರ ವ್ಯವಹಾರದಲ್ಲಿಯೂ ನಂಬಿಕೆಯುಳ್ಳವರಿಲ್ಲದೇನೆ ಸ್ತಗಿತಗೊಳ್ಳುವುದಿಲ್ಲವೇ? ವ್ಯವಹಾರದಲ್ಲಿ ಎಷ್ಟೇ ಲೆಕ್ಕಪತ್ರಗಳು, ದಾಖಲೆಗಳಿರಲಿ ನಂಬಿಕೆಯ ಮೇಲೇ ಕೊಟ್ಯಂತರ ರೂ.ಗಳ ವಹಿವಾಟು ನಡೆಯುತ್ತಲೇ ಇರುವುದನ್ನು ಕಾಣುತ್ತಲೇ ಇದ್ದೇವೆ. ದೊಡ್ಡ ದೊಡ್ಡ ಕೈಗಾರಿಕೋದ್ಯಮಿಗಳು, ಬೃಹತ್ ಬಂಡವಾಳ ಶಾಹಿಗಳೂ ಇಂದಿಗೂ ದೇವರನ್ನು ನಂಬದೇನೆ ತಮ್ಮ ಹಣ ಹೂಡಿಕೆ ಮಾಡದಿರುವವರು ವಿರಳವೇ ಸರಿ. ಕೋಟಿಗಟ್ಟಲೆ ಚೆಲ್ಲುವ ಚಿತ್ರೋದ್ಯಮಿಗಳಂತೂ, ದೇವರು ಹಾಗೂ ತಮ್ಮ ಭವಿಷ್ಯದಲ್ಲಿ ನಂಬಿಕೆ ಎಂದಿಗೂ ಬಿಡಲಾರರಲ್ಲ...!
*********  ಮುಂದೆ ಓದಿ »

  • ಸಪ್ತಗಿರಿ ಸಂಪದ (ಪೌರಾಣಿಕ ಕಥಾನಕ)
~.~
  • Login or register to post comments
  • 584 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಸಪ್ತಗಿರಿ ಸಂಪದ (ಪೌರಾಣಿಕ ಕಥಾನಕ) ಸಂಚಿಕೆ-1

August 18, 2006 - 7:13pm — ritershivaram

ಕಲ್ಯಾಣಾದ್ಭುತ ಗಾತ್ರಾಯ ಕಾಮಿತಾರ್ಥ ಪ್ರದಾಯಿನೇ |
ಶ್ರೀಮದ್ವೆಂಕಟನಾಥಾಯ ಶ್ರೀನಿವಾಸಾಯತೇನಮಃ ||
ಜಗತ್ತು ತ್ರಿಗುಣಾತ್ಮಕವಾಗಿದೆ. ಇಲ್ಲಿ ಮೂರು ಭಾಗ ಜಲಾವೃತವಾಗಿದೆ. ಒಂದು ಭಾಗ ಮಾತ್ರ ಭೂಮಿ. ಈ ಒಂದು ಭಾಗ ಭೂಮಿಯಲ್ಲಿ ಮೂರು ಭಾಗ ಪರಮ ಪಾಪಿಗಳೆ ತುಂಬಿದ್ದಾರೆ. ಹೌದು, ಪರಮ ಪಾಪಿಗಳಿಗೇ ಸುಭಿಕ್ಷ ಕಾಲವೆಂದರು ನಮ್ಮ ಹರಿದಾಸರು 15ನೇ ಶತಮಾನದಲ್ಲಿಯೆ. ಈಗ ಜನ ಸಂಖ್ಯೆ ಹೆಚ್ಚುತ್ತಲೇ ಇದೆ ಪರಮ ಪಾಪಿಗಳೂ ಹೆಚ್ಚುತ್ತಲೆ ಇದ್ದಾರೆ. ಹೌದು, ಮೂರು ಭಾಗ ಪರಮ ಪಾಪಿಗಳಾದರೆ, ಇನ್ನೊಂದು ಭಾಗದಲ್ಲಿ ಸಾತ್ವಿಕರು. ಈ ಸಾತ್ವಿಕರಿಂದಲೇ ಇಡೀ ಜಗತ್ತು ಅಸ್ತಿತ್ವದಲ್ಲಿರುವುದು; ಚಲನೆಯಲ್ಲಿರುವುದು. ಜಗತ್ತಿನಲ್ಲಿ ಸಾತ್ವಿಕ ಶಕ್ತಿಯೆ ಮೇಲು. ನಾವು ಯಾರ ಜೊತೆ ಬದುಕ ಬೇಕೆಂಬುದ ನಮ್ಮ ಆಯ್ಕೆಗಷ್ಟೇ ಎದಿರಾಗಿ ಬಿಡುವ ಸವಾಲು ಅಲ್ಲವೇ...?  ಮುಂದೆ ಓದಿ »

  • ಸಪ್ತಗಿರಿ ಸಂಪದ (ಪೌರಾಣಿಕ ಕಥಾನಕ)
~.~
  • Login or register to post comments
  • 721 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
Syndicate content

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ರ, ಱ ಹಾಗೂ ಳ, ೞ ಬಗ್ಗೆ ವಿಚಾರವಿನಿಮಯ ಮಾಡಿಕೊಳ್ಳಲು ಸಂಪದದಲ್ಲಿ ಒಬ್ಬನೇ ಒಬ್ಬ ಕನ್ನಡಿಗ/ಕನ್ನಡಗಿತ್ತಿ ಇಲ್ಲ.
    August 29, 2008 - 11:08am
  • mahesha
    ಉ: ಬಿಡ್ತಾರ್‍
    August 29, 2008 - 10:50am
  • mahesha
    ಉ: ಕುಹೂ ದನಿಯು ಕಿವಿ ತೂತ ಕೊರೆದಿತ್ತು!
    August 29, 2008 - 10:45am
  • mahesha
    ಉ: ಚೈನಾ ೧೦೦ ನಾವು ೦
    August 29, 2008 - 10:41am
  • mahesha
    ಉ: ಪೆಱೆ/ಹೆಱೆ
    August 29, 2008 - 10:39am
  • kishoreyc
    ಉ: ಚೈನಾ ೧೦೦ ನಾವು ೦
    August 29, 2008 - 10:25am
  • mahesha
    ಉ: ಪೆಱೆ/ಹೆಱೆ
    August 29, 2008 - 10:19am
  • mahesha
    ಉ: must, can, may - ಕನ್ನಡದಲ್ಲಿ ಸಮಗಳೇನು?
    August 29, 2008 - 10:17am
  • kannadakanda
    ಉ: must, can, may - ಕನ್ನಡದಲ್ಲಿ ಸಮಗಳೇನು?
    August 29, 2008 - 10:03am
  • kannadakanda
    ಉ: ಕೆಲವು ಸಂಖ್ಯಾವಾಚಿಗಳು ಹಾಗೂ ಅವುಗಳ ಸಾಧಿತ ಪದಗಳು
    August 29, 2008 - 10:02am
ಇನ್ನಷ್ಟು


ಅನ್ನದಾತುರಕಿಂತ ಚಿನ್ನದಾತುರ ತೀಕ್ಷ್ಣ ।
ಚಿನ್ನದಾತುರಕಿಂತ ಹೆಣ್ಣುಗಂಡೊಲವು ।।
ಮನ್ನಡೆಯ ದಾಹವೀಯೆಲ್ಲಕಂ ತೀಕ್ಷ್ಣತಮ ।
ತಿನ್ನುವುದದಾತ್ಮವನೆ -- ಮಂಕುತಿಮ್ಮ ।।

— -ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator