ನೆಲದ ಮರೆಯ ನಿದಾನ (ಮಾಲಿಕೆ)
೧.ನೀನೆ ಕೇಳಿದ ಪ್ರಶ್ನೆ
January 20, 2008 - 1:03pm — nuthan.hbಎಡೆಬಿಡದೆ ಎದೆಯೊಳಗೆ
ಕದವ ತಟ್ಟುವಿಯಲ್ಲ,
ಉರಿಯಾಗಿ ಎದೆಯಲ್ಲಿ,
ಮಿಂಚಾಗಿ ಮೈಯ್ಯಲ್ಲಿ,
ಕುದಿರಕ್ತದಲ್ಲಿ, ನಡುನಾಡಿಯಲ್ಲಿ,
ಎರಕದಂದದಿ ಹರಿದು ಬುಸುಗುಟ್ಟುತಿಹೆಯಲ್ಲ,
ಹೊಟ್ಟೆಯಲಿ ಹಸಿವಾಗಿ,
ದಿಟ್ಟನೆಯ ಮಗುವಾಗಿ,
ಕಚ್ಚಿಬಿಡದೆನ್ನ ರಚ್ಚೆಹಿಡಿದು ಕಾಡುವಿಯಲ್ಲ,
ಏನು ನೀನು?
ನಿನ್ನ ತೊದಲು ತುಂಟಾಟ ಸುಮ್ಮನಲ್ಲ,
ನಿನ್ನ ಹಠ- ನಿನ್ನಾಟ ಬರಿದೇನಲ್ಲ! ಮುಂದೆ ಓದಿ »

- Login or register to post comments
- 218 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಎತ್ತು ಏರಿಗೆಳೆದರೆ ಕೋಣ ನೀರಿಗೆಳೆಯಿತು
March 3, 2006 - 8:08pm — ismailಎತ್ತು ಏರಿಗೆಳೆದರೆ ಕೋಣ ನೀರಿಗೆಳೆಯಿತು
ಈ ಗಾದೆ ಕನ್ನಡಿಗರಿಗೆಲ್ಲಾ ಪರಿಚಿತ. ರೈತರಂತೂ ಇದನ್ನು ಅಕ್ಷರಾರ್ಥದಲ್ಲೇ ಕಲ್ಪಿಸಿಕೊಂಡು ಸ್ವಾರಸ್ಯವನ್ನು ಗ್ರಹಿಸಿಯಾರು. ಒಂದು ವಸ್ತುವನ್ನು ಇಬ್ಬರು ಎರಡು ಪರಸ್ಪರ ಭಿನ್ನ ದಿಕ್ಕುಗಳಿಗೆ ಎಳೆದರೆ ಅದು ಒಂದಿಂಚೂ ಅಲುಗದು ಎಂಬುದನ್ನು ಈ ಗಾದೆ ಧ್ವನಿಸುತ್ತದೆ. ಇನ್ನೂ ಸರಳಗೊಳಿಸಿದರೆ ಇಬ್ಬರ ಮೊಂಡುವಾದಗಳು ಅಥವಾ ಇಬ್ಬರ ವ್ಯರ್ಥ ಪ್ರಯತ್ನಗಳಿಗೆ ಇದು ರೂಪಕವಾಗಬಹುದು. ಈ ಸರಳ ಗ್ರಹಿಕೆಗಳ ಆಚೆಗೆ ಹೋಗಿ ಈ ಗಾದೆಯನ್ನು ಅರ್ಥ ಮಾಡಿಕೊಳ್ಳುವ ಪ್ರಯತ್ನ ಮಾಡಿದರೆ...? ಮುಂದೆ ಓದಿ »

ನೆಲದ ಮರೆಯ ನಿದಾನ-2: ಮರದಿಂದ ಹಣ್ಣು ಯಾಕೆ ಕೆಳಗೆ ಬೀಳುತ್ತದೆ?
February 27, 2006 - 7:32pm — ismailಮರದಿಂದ ಹಣ್ಣು ಯಾಕೆ ಕೆಳಗೆ ಬೀಳುತ್ತದೆ? ಈ ಪ್ರಶ್ನೆಗೆ ಶಾಲೆಗೆ ಹೋದ ಯಾರೂ ಉತ್ತರ ಕೊಡುತ್ತಾರೆ. ಗುರುತ್ವಾಕರ್ಷಣೆಯಿಂದಾಗಿ ಅದು ಕೆಳಗೆ ಬೀಳುತ್ತದೆ. ಯಾಕೆ? ಎಂಬ ಮತ್ತೊಂದು ಪ್ರಶ್ನೆ ಹಾಕಿದರೆ ನ್ಯೂಟನ್ನ ಗುರುತ್ವಾಕರ್ಷಣೆಯ ಸಿದ್ಧಾಂತಗಳ ವಿವರಣೆಯನ್ನು ಪಡೆಯಬಹುದು. ಮುಂದೆ ಓದಿ »

ನೆಲದ ಮರೆಯ ನಿದಾನ-1
February 26, 2006 - 7:23pm — ismailಈ ಬರೆಹಗಳಿಗೆ ಒಂದು ಪೀಠಿಕೆಯ ಅಗತ್ಯವಿದೆ ಎಂದು ಭಾವಿಸಿ ಇದನ್ನು ಬರೆಯುತ್ತಿದ್ದೇನೆ ಗೆಳೆಯ ಹಾಗೂ ಸಹದ್ಯೋಗಿ ರಾಜಶೇಖರ ಹೆಗಡೆ ಉದಯವಾಣಿಯ ಕೃಷಿ ಪುಟದ ಹೊಣೆ ಹೊತ್ತಾಗ ಕೊಟ್ಟ ಒಂದು ಐಡಿಯಾ ಈ ಬರೆಹಗಳಿಗೆ ಕಾರಣ. ಇವುಗಳು ನೆಲದ ಮರೆಯ ನಿದಾನ ಎಂಬ ಶೀರ್ಷಿಕೆಯಡಿಯಲ್ಲಿ ಉದಯವಾಣಿಯ ಕೃಷಿ ಸಂಪದ ಪುಟದಲ್ಲಿ ಪ್ರಕಟವಾಗಿದ್ದವು. ಇವು ನಿಜಕ್ಕೂ ಏನು? ಅದು ನನಗೂ ಗೊತ್ತಿಲ್ಲ. ಇವುಗಳನ್ನು ಹರಿಪ್ರಸಾದ್ ಅವರಿಗೆ ಓದಲು ಕೊಟ್ಟಾಗ `ನನಗೆ ಇಷ್ಟವಾಗಲಿಲ್ಲ' ಎಂದಿದ್ದರು. ಹಾಗೆಯೇ ಇನ್ನು ಕೆಲವು ಗೆಳೆಯರು ಇಷ್ಟಪಟ್ಟಿದ್ದರು. ಈಗಲೂ ನಾನೊಂದು ಅದೃಷ್ಟ ಪರೀಕ್ಷೆ ಮಾಡಿಕೊಳ್ಳಲು ಹೊರಟಿದ್ದೇನೆ. ಎಲ್ಲರ ಪ್ರತಿಕ್ರಿಯೆಗೆ ಕಾಯುತ್ತಿದ್ದೇನೆ. ಮುಂದೆ ಓದಿ »


RSS: