ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಉ: ಸಂಸ್ಕಾರ ಕಾದಂಬರಿ ಅಶ್ಲೀಲವೇ!!

February 18, 2008 - 9:11pm — cmariejoseph

ಉ: ಸಂಸ್ಕಾರ ಕಾದಂಬರಿ ಅಶ್ಲೀಲವೇ!!

cmariejoseph's picture

ಅನಂತಮೂರ್ತಿಯವರು ಅತ್ಯಂತ ಪ್ರಗತಿಪರರಾಗಿದ್ದೂ ತಮ್ಮ ಸಾಹಿತ್ಯದ ಮೂಲಕ ಸಮಾಜಕ್ಕೆ ನೇರವಾಗಿ ಸಂದೇಶ ಕೊಡಲು ಹೋಗದೇ ಕನ್ನಡಿ ತೋರಿದವರು. ಕ್ರಿಶ್ಚಿಯನ್ ಹೆಣ್ಣನ್ನು ಮದುವೆಯಾಗಿರುವುದರಿಂದ ತಮ್ಮ ಸಂಸ್ಕಾರ ಹೇಗಿದ್ದೀತು ಎಂಬುದರ ಸುಳಿವನ್ನು ಇಲ್ಲಿ ನೀಡಿದ್ದಾರೆಂದು ಕುಹಕಿಗಳು ಆಡಿಕೊಂಡರಂತೆ. ಪರ್ವ ಬರೆದ ಭೈರಪ್ಪ ಪರ್ವರ್ಟೆಡ್ ಭೈರಪ್ಪ ಎನ್ನಲಿಲ್ಲವೇ ಹಾಗೆ. ತಮ್ಮ ಸಂಸ್ಕಾರ ಕಾದಂಬರಿಯಲ್ಲಿ ಅನಂತಮೂರ್ತಿಯವರು ಇಡೀ ವ್ಯವಸ್ಧೆಗೇ ಸಂಸ್ಕಾರ ಆಗಬೇಕಿದೆ ಎಂಬುದನ್ನು ಧ್ವನಿಸುತ್ತಾರೆ.
ಪ್ರಾಣೇಶಾಚಾರ್ಯ ಹಾಗೂ ನಾರಾಯಣಪ್ಪ ಈ ಕೃತಿಯಲ್ಲಿ ಎರಡು ಧೃವಗಳಾಗಿ ನಿಲ್ಲುತ್ತಾರೆ. ಪ್ರಾಣೇಶಾಚಾರ್ಯ ಧರ್ಮಭೀರು ಹಾಗೂ ಜನತೆಗೆ ಬುದ್ಧಿ ಹೇಳಬಲ್ಲ ಸಾತ್ವಿಕ. ಆದರೆ ನಾರಾಯಣಪ್ಪ ಎಲ್ಲ ಧರ್ಮಕಟ್ಟಲೆಗಳನ್ನು ಧಿಕ್ಕರಿಸಿ ಚಂದ್ರಿಯನ್ನು ಮಡಗಿಕೊಂಡ ಲಂಪಟ. ಪ್ರಾಣೇಶಾಚಾರ್ಯನ ಪುರಾಣಕ್ಕಿಂತಲೂ ಜನಗಳಿಗೆ ನಾರಾಯಣಪ್ಪನ ಕ್ಯಾಸೆಟ್ ಮೋಡಿಯೇ ಹುಚ್ಚು ಹಿಡಿಸುತ್ತದೆ. ಹೀಗೆ ನಾರಾಯಣಪ್ಪ ವಾಸ್ತವದ ಸಂಕೇತವಾಗುತ್ತಾನೆ.
ನಾರಾಯಣಪ್ಪ ಸತ್ತ ಮೇಲೆ ಚಂದ್ರಿ ಬಂದು ಆತನಿಗೆ ಸಂಸ್ಕಾರ ಮಾಡಬೇಕೆಂದು ಕೇಳಿಕೊಳ್ಳುತ್ತಾಳೆ. ಅದಕ್ಕೆ ಪ್ರಾಣೇಶಾಚಾರ್ಯ ಹಿಂಜರಿದರೂ ಕೊನೆಗೆ ಹಾಸಿಗೆ ಹಿಡಿದಿರುವ ತನ್ನ ಪತ್ನಿಗಾಗಿ ಚಂದ್ರಿಯ ನೆರವನ್ನು ಪಡೆಯಬೇಕಾಗುತ್ತದೆ. ಚಂದ್ರಿಯ ಸಂಗದಲ್ಲಿ ಆತ ನೆಲದ ವಾಸನೆ ಏನೆಂದು ಅರಿಯುತ್ತಾನೆ ಹಾಗೆಯೇ ಪ್ರಾಣೇಶಾಚಾರ್ಯನ ಸನಿಹದಲ್ಲಿ ಆಕೆ ಆಗಸದ ಸಪ್ತರ್ಷಿ ಮಂಡಲವನ್ನು ದರ್ಶಿಸುತ್ತಾಳೆ. (ಇದು ಅಶ್ಲೀಲವೆನಿಸಿದರೆ ಓದಬೇಡಿ, ಅಷ್ಟೇ) ಈ ಕ್ರಿಯೆ ನಡೆದ ಮೇಲೆ ಪ್ರಾಣೇಶಾಚಾರ್ಯನಿಗೆ ತಾನು ತಪ್ಪು ಮಾಡಿದ ಅರಿವುಂಟಾಗಿ ಅಲ್ಲಿ ನಿಲ್ಲದೆ ಓಡಿಹೋಗುತ್ತಾನೆ. ಓಡಿ ಹೋದವನು ಹೋಟೆಲಿಗೆ ನುಗ್ಗಿ ಕಾಫಿ ಹೀರುತ್ತಾನೆ. ಮಡಿವಂತ ಬ್ರಾಹ್ಮಣರು ಹೋಟೆಲಿನಲ್ಲಿ ಕಾಫಿ ಕುಡಿಯುವುದೆಂದರೆ ನಿಷಿದ್ಧವೆನಿಸಿದ್ದ ಆ ಕಾಲದಲ್ಲಿ ಪ್ರಾಣೇಶಾಚಾರ್ಯನ ಕ್ರಿಯೆ ಬದಲಾವಣೆಯ ಸಂಕೇತವಾಗಿ ಕಾಣುತ್ತದೆ.
ಇಲ್ಲಿ ನಾರಣಪ್ಪನ ಹೆಣದ ರೂಪದಲ್ಲಿ ನಮ್ಮ ದೇಶದ ಒಟ್ಟು ವ್ಯವಸ್ಥೆಯೇ ಕೊಳೆತು ನಾರುತ್ತಿದೆ. ಅದಕ್ಕೆ ಸಂಸ್ಕಾರ ಕೂಡಲೇ ಆಗಬೇಕು. ವ್ಯವಸ್ಥೆಯ ಅಂಗವಾದ ಚಂದ್ರಿಯಂಥ ಸೂಳೆಯರೂ ಸಂಸ್ಕಾರಕ್ಕಾಗಿ ಹಪಹಪಿಸುವಾಗ ಹೊಲಸಿನಲ್ಲೇ ಮುಳುಗಿರುವ ಕರ್ಮಠರು ಶಾಸ್ತ್ರಗಳ ತೌಲನಿಕ ಮೀಮಾಂಸೆಯಲ್ಲಿ ತೊಡಗಿದ್ದಾರೆ. ಆಗ ಅನ್ಯಧರ್ಮದ ಅನ್ಯಸಂಸ್ಕೃತಿಯ ಸಜ್ಜನನೊಬ್ಬ ಅವತರಿಸಿ ಸಂಸ್ಕಾರಗೈಯುವ ಪ್ರಕ್ರಿಯೆಯನ್ನು ಗಮನಿಸಿ ಸಮಾಜ ಪರಿವರ್ತನೆಗೆ ಇಂಬುಗೊಡಬೇಕಾದ ಶಿಕ್ಷಕರು ನೆಲದವಾಸನೆ ಮತ್ತು ನಕ್ಷತ್ರದರ್ಶನಗಳ ಜುಗಲಬಂದಿಯಲ್ಲಿ ತೊಡಗಿರುವುದೇ ನಮ್ಮ ಶಿಕ್ಷಣವ್ಯವಸ್ಥೆಯ ದುರಂತ.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಸಂಸ್ಕಾರ ಕಾದಂಬರಿ ಅಶ್ಲೀಲವೇ!! By: mahesha (17 replies) February 17, 2008 - 7:02pm
  • ಉ: ಸಂಸ್ಕಾರ ಕಾದಂಬರಿ ಅಶ್ಲೀಲವೇ!! By: rameshbalaganchi (Feb 19 2008 - 8:27pm)
  • ಉ: ಸಂಸ್ಕಾರ ಕಾದಂಬರಿ ಅಶ್ಲೀಲವೇ!! By: madhava_hs (Feb 19 2008 - 6:02pm)
  • ಉ: ಸಂಸ್ಕಾರ ಕಾದಂಬರಿ ಅಶ್ಲೀಲವೇ!! By: agilenag (Feb 19 2008 - 4:33pm)
  • ಉ: ಸಂಸ್ಕಾರ ಕಾದಂಬರಿ ಅಶ್ಲೀಲವೇ!! By: ವೈಭವ (Feb 19 2008 - 1:33pm)
  • ಉ: ಸಂಸ್ಕಾರ ಕಾದಂಬರಿ ಅಶ್ಲೀಲವೇ!! By: kpbolumbu (Feb 19 2008 - 9:53am)
  • ಉ: ಸಂಸ್ಕಾರ ಕಾದಂಬರಿ ಅಶ್ಲೀಲವೇ!! By: ಶಿವ (Feb 18 2008 - 8:03pm)
  • ಉ: ಸಂಸ್ಕಾರ ಕಾದಂಬರಿ ಅಶ್ಲೀಲವೇ!! By: madhava_hs (Feb 18 2008 - 12:45pm)
    • ಉ: ಸಂಸ್ಕಾರ ಕಾದಂಬರಿ ಅಶ್ಲೀಲವೇ!! By: cmariejoseph (Feb 18 2008 - 9:11pm)
      • ಉ: ಸಂಸ್ಕಾರ ಕಾದಂಬರಿ ಅಶ್ಲೀಲವೇ!! By: ಸಂಗನಗೌಡ (Feb 19 2008 - 5:28pm)
      • ಉ: ಸಂಸ್ಕಾರ ಕಾದಂಬರಿ ಅಶ್ಲೀಲವೇ!! By: mahesha (Feb 19 2008 - 12:21pm)
        • ಉ: ಸಂಸ್ಕಾರ ಕಾದಂಬರಿ ಅಶ್ಲೀಲವೇ!! By: cmariejoseph (Feb 19 2008 - 7:15pm)
  • ಉ: ಸಂಸ್ಕಾರ ಕಾದಂಬರಿ ಅಶ್ಲೀಲವೇ!! By: kpbolumbu (Feb 17 2008 - 10:06pm)
    • ಉ: ಸಂಸ್ಕಾರ ಕಾದಂಬರಿ ಅಶ್ಲೀಲವೇ!! By: ramesh-m (Feb 19 2008 - 1:35am)
      • ಉ: ಸಂಸ್ಕಾರ ಕಾದಂಬರಿ ಅಶ್ಲೀಲವೇ!! By: ಸಂಗನಗೌಡ (Feb 19 2008 - 5:18pm)
        • ಉ: ಸಂಸ್ಕಾರ ಕಾದಂಬರಿ ಅಶ್ಲೀಲವೇ!! By: ಶ್ರೀನಿವಾಸ ವೀ. ಬ೦ಗೋಡಿ (Feb 19 2008 - 8:07pm)
          • ಉ: ಸಂಸ್ಕಾರ ಕಾದಂಬರಿ ಅಶ್ಲೀಲವೇ!! By: hamsanandi (Feb 19 2008 - 10:45pm)
      • ಉ: ಸಂಸ್ಕಾರ ಕಾದಂಬರಿ ಅಶ್ಲೀಲವೇ!! By: roopablrao (Feb 19 2008 - 4:44pm)

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಇದು ಯಾವ ಹೂವು? ಹೇಳಿ ನೋಡೋಣ...
    October 6, 2008 - 11:03pm
  • ASHOKKUMAR
    ಉ: ಕಾರ್ಟೂನಿಸ್ಟ್ ಪ್ರಕಾಶ್ ಶೆಟ್ಟಿಯವರಿಗೆ ಹೊಸ ಹುಚ್ಚು!
    October 6, 2008 - 10:59pm
  • Rajeshwari
    ಉ: ಸಪ್ತಸ್ವರಗಳು
    October 6, 2008 - 10:32pm
  • gurubaliga
    ಉ: ಮೈ ಮನಗಳ ಸುಳಿಯಲ್ಲಿ - ಒಂದು ಸಮೀಕ್ಷೆ
    October 6, 2008 - 10:09pm
  • Rajeshwari
    ಉ: ಹೊಸ ಅಡುಗೆಗಳು (ಪುರುಷರಿಗೆ ಮಾತ್ರ)
    October 6, 2008 - 10:03pm
  • Nagaraj.G
    ಉ: ಸ್ವಲ್ಪನಗಿ
    October 6, 2008 - 10:00pm
  • Nagaraj.G
    ಉ: ಸ್ವಲ್ಪನಗಿ
    October 6, 2008 - 9:58pm
  • Rajeshwari
    ಉ: ಮರೆಯಲಾಗುವುದೇ ಈ ಅಸಾಧಾರಣ ವ್ಯಕ್ತಿಯನ್ನು!
    October 6, 2008 - 9:56pm
  • siddharam
    ಉ: ಹೊಸ ಅಡುಗೆಗಳು (ಪುರುಷರಿಗೆ ಮಾತ್ರ)
    October 6, 2008 - 9:50pm
  • siddharam
    ಉ: ಗಜಲ್
    October 6, 2008 - 9:46pm
ಇನ್ನಷ್ಟು


ಮ೦ಗಳವೆ೦ಬೆನು ಜಗಕಿದಕೆಲ್ಲಕು
ಹಿ೦ಗಲಿ ಭವ ತಾಪ೦ ದೋಷ೦
ತ೦ಗಲಿ ಮನ ಶಮದೊಳು ನಿರ್ವೈರ್ಯ೦
ಅ೦ಗವಿಸಲಿ ಸದ್ರಸತೋಷ೦.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator