ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಉ: ಬೆಣ್ಣೆಹೂವು ಮತ್ತು ಅಶ್ವಮೇಧ

May 18, 2007 - 12:02am — narendra

ಉ: ಬೆಣ್ಣೆಹೂವು ಮತ್ತು ಅಶ್ವಮೇಧ

narendra's picture

ನಿಮ್ಮ ಪ್ರತಿಕ್ರಿಯೆಗೆ ಧನ್ಯವಾದ. ನನ್ನ ಬರಹಕ್ಕೆ ಚುರುಕಿನ ಚುಟುಕಿನ ಓದು ಸಾಕು. ಕಾದಂಬರಿಯನ್ನು ಮಾತ್ರ ಅಗತ್ಯ ಓದಿ. ನನ್ನ ಬರಹದ ಒಂದು ಒಳ ಉದ್ದೇಶ ಅದೇ.

ಜಾತಿ ಜಾತಿಗಳೊಳಗಿನ ಕಲಹಗಳನ್ನು ಮತ್ತು ಧರ್ಮ ಧರ್ಮಗಳ ನಡುವಿನ ಕಲಹವನ್ನು ಒಂದೇ ರೀತಿಯಲ್ಲಿ ನೋಡುವುದು ಸರಿಯೆ? ನನಗೆ ಈ ಬಗ್ಗೆ ಅನುಮಾನಗಳಿವೆ. ಪರಸ್ಪರ ಜಗಳವಾಡುತ್ತಿರುವ ಜಾತಿಗಳವರೂ ಬೇರೆ ಧರ್ಮದವರ ಎದುರು ನಿಲ್ಲುವಾಗ ಒಂದಾಗಿ ನಿಂತ ಉದಾಹರಣೆಗಳಿಲ್ಲವೆ? ಮತ್ತು ಜಾತಿಗಳ ನಡುವಿನ ಜಗಳಗಳಿಗಿಂತ ಧರ್ಮಗಳ ನಡುವಿನ ಜಗಳಕ್ಕೆ ಸಂಕೀರ್ಣವಾದ ಕಾರಣ (`ರಾಜ' ಕಾರಣ?) ಗಳಿರುವಂತೆಯೂ, ಇಂಥ ಜಗಳಗಳಿಗೆ ಪ್ರಾಯೋಜಕರೂ, ಫಲಾನುಭವಿಗಳೂ ಎಲ್ಲ ಇರುವಂತೆಯೂ ಕಾಣುವುದಿಲ್ಲವೆ. ಜಾತಿ ಜಗಳಗಳು ಕೆಲ ಮಟ್ಟಿಗೆ ಸರಳವಾಗಿದ್ದವು ಅನಿಸುತ್ತದೆ. ಅಶೋಕರು ಕಾದಂಬರಿಯ ಕಾಲಮಾನಕ್ಕೆ ತಕ್ಕಂತೆ ಜಾತಿಜಗಳದ ವ್ಯಾಪ್ತಿಯಲ್ಲೇ ಕಾದಂಬರಿ ಹೆಣೆದಿದ್ದಾರೆ. ಬಹುಷಃ ನಲ್ವತ್ತು ಐವತ್ತು ವರ್ಷಗಳ ಹಿಂದೆ, ಅದೇ ಮುಖ್ಯವಿತ್ತು. ವಿಭಜನೆಯ ನಂತರವೇ ನಮ್ಮಲ್ಲಿ ಹಿಂದೂ ಮುಸ್ಲಿಂ ಭೇದ ತೀವೃವಾದಂತೆ ಕಾಣುತ್ತದೆ. ಒಂದೇ ಮನೆಯಲ್ಲಿದ್ದಾಗ ನಮ್ಮೊಳಗಿನ ಜಗಳವಾಗಿದ್ದು ಮುಂದೆ ನೆರೆಹೊರೆಯವರ ಜಗಳವಾದಾಗ ಅದಕ್ಕೆ ಹೆಚ್ಚು ಹೆಚ್ಚು ಆಯಾಮಗಳೊದಗಿದಂತೆ ಕಾಣುತ್ತದೆ. ಜಾತಿ ಜಗಳ ಮಾತ್ರ ಇವತ್ತಿಗೂ ಮನೆಯೊಳಗಿನ (ಧರ್ಮ ಇಲ್ಲಿ ಎರಡೂ ಜಾತಿಗೆ ಸಮಾನ ಅಂಶ ಆಗಿರುವುದರಿಂದ) ಜಗಳವಾಗಿಯೇ ಇದೆ. ದಲಿತರ ಪ್ರಶ್ನೆ ಬಂದಾಗ, ಕಂಬಾಲಪಲ್ಲಿ ಅಥವಾ ಬೆಂಡಿಗೇರಿಯಂಥ ವಿದ್ಯಮಾನಗಳ ವಿಚಾರದಲ್ಲಿ ಇದು ವಿಕೋಪಕ್ಕೆ ಹೋಗಿದೆ, ನಿಜ. ಆದರೂ ಇವತ್ತು ನಾವು ಎದುರಿಸುತ್ತಿರುವ ಧರ್ಮ ಧರ್ಮಗಳ ನಡುವಿನ ಜಗಳದ ಎದುರು ಜಾತಿ ಜಗಳಗಳು ಎಲ್ಲೋ ಭಿನ್ನ ಎನಿಸುವುದಿಲ್ಲವೆ? ಕುರುಬರ ಕನಕ ಗೋಪುರದ ವಿವಾದ ಅಥವಾ ನಮ್ಮ ಲಿಂಗಾಯತರ ಕೆಲವು ಗೊಂದಲದ ಜಗಳಗಳಿಗೂ ಗುಜರಾತ್‌ನಲ್ಲಾದ ಗೋಧ್ರಾ ಗಲಭೆಗೂ ವ್ಯತ್ಯಾಸವಿಲ್ಲವೆ. ಇದು ಸ್ವಲ್ಪ ಸೂಕ್ಷ್ಮ ವ್ಯತ್ಯಾಸ ಎನ್ನುವುದು ನಿಜ, ಆದರೆ ಅದು ಇದೆ. ಎರಡನ್ನೂ ಸಮಾನವಾಗಿ ಪರಿಗ್ರಹಿಸಿ ವಿಶ್ಲೇಷಿಸುವುದು ತಪ್ಪಾಗಬಹುದು ಅನಿಸಿದೆ ನನಗೆ. ಇದರ ಬಗ್ಗೆ ನಮ್ಮ ಗೆಳೆಯರು ಹೆಚ್ಚು ಬೆಳಕು ಚೆಲ್ಲುವರೆ?

ಮನುಷ್ಯ ಎಂದಿಗೂ ಜಾತಿ/ಪಂಗಡ ಪ್ರೇಮಿ, ಅವನು ಹೊಡೆದಾಟವಿಲ್ಲದೇ ಅಗ್ರೆಶ್ಶನ್ ಇಲ್ಲದೆ ಬದುಕಲಾರನು ಎಂದಿದ್ದೀರಿ. ಇದಕ್ಕೆ ಇತಿಹಾಸವೇ ಪುರಾವೆ ಎಂದೂ ಹೇಳಿದ್ದೀರಿ. ನೀವು ಹೇಳಿರುವುದು ಕಟುಸತ್ಯ. ಆದರೆ ಈ ಇತಿಹಾಸದಿಂದ ನಾಗರೀಕ ಮನುಷ್ಯ ಕಲಿತಿದ್ದೇನು ಹಾಗಾದರೆ ಎಂಬ ಪ್ರಶ್ನೆ ಬರುತ್ತದೆ. ಐದಾರು ದಶಕಗಳ ಹಿಂದೆ ಇದ್ದ ಹಾಗೆ ಇವತ್ತು ಜಾತಿ ಕಲಹ ಇಲ್ಲ ಎನ್ನುವ ಸ್ಥಿತಿಗೆ ನಾವು ಬಂದಿದ್ದೆವು. ಆದರೆ ಅಷ್ಟರಲ್ಲಿ ಈ ಧರ್ಮದ ಅಪಭ್ರಂಶಗಳು ಹುಟ್ಟಿಕೊಂಡವು. ಯಾಕೆ ಹುಟ್ಟಿಕೊಂಡವು ಎಂಬುದು ಎಲ್ಲ ಪ್ರಜ್ಞಾವಂತರಿಗೂ ಗೊತ್ತು. ಆದರೆ ಅಂಥವರ ಸಂಖ್ಯೆ ತೀರಾ ಕಡಿಮೆ ಇರುವುದು ಈ ತಲೆಮಾರಿನ ದುರಂತ. ಅದನ್ನು ನಾವು ನೀವು ಮೀರುವುದರಲ್ಲೇ ಮುಂದಿನ ಭವಿಷ್ಯ ಇರುವುದರಿಂದ ಮನುಷ್ಯರ ಬಗ್ಗೆ ಆಶಾವಾದಿಗಳಾಗಿರೋಣ ಮಹೇಶ್.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಬೆಣ್ಣೆಹೂವು ಮತ್ತು ಅಶ್ವಮೇಧ By: narendra (11 replies) May 17, 2007 - 8:50pm
  • ಉ: ಬೆಣ್ಣೆಹೂವು ಮತ್ತು ಅಶ್ವಮೇಧ By: ವೈಭವ (May 18 2007 - 9:19am)
    • ಉ: ಬೆಣ್ಣೆಹೂವು ಮತ್ತು ಅಶ್ವಮೇಧ By: narendra (May 18 2007 - 8:00pm)
  • ಉ: ಬೆಣ್ಣೆಹೂವು ಮತ್ತು ಅಶ್ವಮೇಧ By: anivaasi (May 18 2007 - 8:12am)
    • ಉ: ಬೆಣ್ಣೆಹೂವು ಮತ್ತು ಅಶ್ವಮೇಧ By: narendra (May 18 2007 - 7:54pm)
  • ಉ: ಬೆಣ್ಣೆಹೂವು ಮತ್ತು ಅಶ್ವಮೇಧ By: anivaasi (May 18 2007 - 8:10am)
  • ಉ: ಬೆಣ್ಣೆಹೂವು ಮತ್ತು ಅಶ್ವಮೇಧ By: mahesha (May 17 2007 - 9:17pm)
    • ಉ: ಬೆಣ್ಣೆಹೂವು ಮತ್ತು ಅಶ್ವಮೇಧ By: narendra (May 18 2007 - 12:02am)
      • ಉ: ಬೆಣ್ಣೆಹೂವು ಮತ್ತು ಅಶ್ವಮೇಧ By: mahesha (May 18 2007 - 10:31am)
        • ಉ: ಬೆಣ್ಣೆಹೂವು ಮತ್ತು ಅಶ್ವಮೇಧ By: narendra (May 18 2007 - 8:14pm)
          • ಉ: ಬೆಣ್ಣೆಹೂವು ಮತ್ತು ಅಶ್ವಮೇಧ By: mahesha (May 18 2007 - 8:28pm)
            • ಉ: ಬೆಣ್ಣೆಹೂವು ಮತ್ತು ಅಶ್ವಮೇಧ By: mahesha (May 18 2007 - 8:31pm)

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • rashmi_pai
    ಉ: ಮೌನ
    July 25, 2008 - 3:13pm
  • roshan_netla
    ಉ: ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
    July 25, 2008 - 3:08pm
  • kannadakanda
    ಉ: ಕನಸು, ಕಣಸು
    July 25, 2008 - 2:57pm
  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 2:41pm
  • ಸಂಗನಗೌಡ
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 2:33pm
  • ಶ್ರೀನಿವಾಸ ವೀ. ಬ೦ಗೋಡಿ
    ಉ: ನಾನಿರುವುದೆ ನಿಮಗಾಗಿ :REMIX
    July 25, 2008 - 2:22pm
  • kannadakanda
    ಉ: ಮುಡುಕುತೊರೆ - ಒಂದು ಬರಹ
    July 25, 2008 - 2:22pm
  • ಸಂಗನಗೌಡ
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 25, 2008 - 2:19pm
  • ಸಂಗನಗೌಡ
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 25, 2008 - 2:17pm
  • kannadakanda
    ಉ: ಅಬ್ಬಿ, ಅರ್ಬಿ
    July 25, 2008 - 2:09pm
ಇನ್ನಷ್ಟು


ನಂಬಿದಂತಿರಬೇಕು, ನಂಬದಲೆ ಇರಬೇಕು |
ನಂಬಿದವ ಕೆಟ್ಟ ಸರ್ವಜ್ಞ ||

— ಸರ್ವಜ್ಞ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator