ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಕನ್ನಡಸಾಹಿತ್ಯ.ಕಾಂ ರಾಷ್ಟ್ರೀಯ ಮಟ್ಟದ ವಿಚಾರಸಂಕಿರಣ - ಪೂರ್ವ‌ಭಾವಿ ಸಿದ್ಧತಾ ಸಭೆ

December 19, 2006 - 12:50pm — Rohit
Dec 23 2006 - 5:00pm
Dec 23 2006 - 6:30pm
Asia/Calcutta

ಗೆಳೆಯರೆ,

"ಮಾಹಿತಿ ತಂತ್ರಜ್ಞಾನದ ಸಂದರ್ಭ‌ದಲ್ಲಿ ದೇಸಗತಿ ಭಾಷೆಗಳು ಮತ್ತು ಸಂಸ್ಕೃತಿ" - ಈ ವಿಷಯದ ಮೇಲೆ ರಾಷ್ಟ್ರೀಯ ಮಟ್ಟದ ವಿಚಾರಸಂಕಿರಣವೊಂದನ್ನು, ನಡೆಸುವ ಪ್ರಸ್ತಾವನೆಯೊಂದಿಗೆ, ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗದವರು ಕಳೆದ ಸೆಪ್ಟೆಂಬರ್ 16 ರಂದು ಬೆಂಗಳೂರಿನಲ್ಲಿ ಸಭೆಯೊಂದನ್ನು ನಡೆಸಿ, ಅಲ್ಲಿ, ಈ ಪ್ರಸ್ತಾವನೆಯನ್ನು ಚರ್ಚೆ‌ಗೆತ್ತಿಕೊಂಡು, ಸಭೆಯು ಸರ್ವಾ‌ನುಮತದಿಂದ ವಿಚಾರಸಂಕಿರಣವನ್ನು ನಡೆಸಲು ತೀರ್ಮಾನಿಸಿತು. ಇದರ ತಾರ್ಕಿಕ ಬೆಳವಣಿಗೆಯಾಗಿ, ವಿವಿಧ ಸಮಿತಿಗಳನ್ನು ರಚಿಸಲಾಯಿತು. ಈ ಸಮಿತಿಗಳ ನಿರ್ವಹಣೆಯ ಹೊಣೆಗಾರಿಕೆಯನ್ನು ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗದ ಹಲವಾರು ಸ್ವಯಂಪ್ರೇರಿತ ಸದಸ್ಯರು ವಹಿಸಿಕೊಂಡಿದ್ದು, ವಿಚಾರಸಂಕಿರಣದ ಸಿದ್ಧತೆಗಳಲ್ಲಿ ತೊಡಗಿದ್ದಾರೆ.

ನಂತರದ ಬೆಳವಣಿಗೆಯಲ್ಲಿ, ಬೆಂಗಳೂರಿನ 'ಕ್ರೈಸ್ಟ್ ಕಾಲೇಜ್ ಆಫ್ ಲಾ', ಇವರು ಈ ವಿಚಾರಸಂಕಿರಣದ ಸಹ-ಪ್ರಾಯೋಜಕರಾಗಿರಲು ಮುಂದೆ ಬಂದಿದ್ದು, ಎರಡು ದಿನಗಳ ಈ ವಿಚಾರಸಂಕಿರಣಕ್ಕೆ ತಮ್ಮ ಕಾಲೇಜಿನ ಆಡಿಟೋರಿಯಂ ಅನ್ನು, ಹಾಗೂ ದೃಶ್ಯ, ಶ್ರವಣ ವ್ಯವಸ್ಥೆಗಳನ್ನು ಬಳಸಿಕೊಳ್ಳಲು ಅನುಮತಿ ನೀಡಿರುತ್ತಾರೆ.

ಇದೀಗ ವಿವಿಧ ಸಮಿತಿಗಳಲ್ಲಿ ಆಗಿರುವ ಕಾರ್ಯ‌ಗಳ ಅವಲೋಕನ ಮಾಡುವ ಹಾಗೂ ಮುಂದಿನ ಕೆಲಸಗಳನ್ನು ಯೋಜಿಸುವ ಉದ್ದೇಶದಿಂದ, ಈ ವಿಚಾರಸಂಕಿರಣದ ಆಯೋಜಿಸುವಿಕೆಯಲ್ಲಿ ತೊಡಗಿಸಿಕೊಂಡಿರುವವರ ಹಾಗೂ ತೊಡಗಿಸಿಕೊಳ್ಳಲು ಇಚ್ಛಿಸುವವರ, ಹಾಗೂ ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗದ ಎಲ್ಲ ಸದಸ್ಯರ ಸಭೆ ನಡೆಸಲಾಗುತ್ತಿದೆ. ಸಭೆಯ ವಿವರಗಳು ಕೆಳಕಂಡಂತಿವೆ.

ಸಮಯ: ಸಂಜೆ 5.30 ಕ್ಕೆ
ದಿನಾಂಕ: 23.12.2006 ಶನಿವಾರದಂದು
ಸ್ಥಳ: ಕ್ರೈಸ್ಟ್ ಕಾಲೇಜು ಆವರಣ,
ಬೆಂಗಳೂರು ಡೈರಿ ಎದುರು, ಹೊಸೂರು ರಸ್ತೆ,
ಬೆಂಗಳೂರು - 29

ಈ ವಿಚಾರಸಂಕಿರಣವು ನಿಂತನೀರಾಗಿರುವ ಚಿಂತನಾ ಕ್ಷೇತ್ರವನ್ನು, ಹಾಗೂ ತಾಂತ್ರಿಕ ಕ್ಷೇತ್ರವನ್ನು ಪರಸ್ಪರ ಮುಖಾಮುಖಿಯಾಗಿಸಿ, ಆ ಮೂಲಕ ತಂತ್ರಜ್ಞಾನವನ್ನು ಹೆಚ್ಚು ಪ್ರಜಾಸತ್ತಾತ್ಮಕ ಹಾಗೂ ಜನೋಪಯೋಗಿಯಾಗಿಸುವ ನಿಟ್ಟಿನಲ್ಲಿ ಅಗತ್ಯವಾದ ಹೊಸ ಆಲೋಚನೆ, ಚಿಂತನೆಗಳಿಗೆ ದಿಕ್ಸೂಚಿಯಾಗಲಿದೆ. ಮಾಹಿತಿ ತಂತ್ರಜ್ಞಾನದ ಮೂಲಕ ದೇಶದಲ್ಲಿ ಹೊಸ ಆರ್ಥಿ‌ಕ ಉತ್ಕ್ರಾಂತಿಗೆ ಕಾರಣವಾದ, ಬೆಂಗಳೂರು, ಕರ್ನಾ‌ಟಕ ಹಾಗೂ ಕನ್ನಡಿಗರು ಇಂತಹ ವಿಶಿಷ್ಟ ಪ್ರಯೋಗಮಾಡಹೊರಟಿರುವುದು, ಕನ್ನಡಿಗರೆಂಬ ನಮ್ಮ ಅಭಿಮಾನಕ್ಕೆ ಮತ್ತೊಂದು ಗರಿ.

ಈ ಪ್ರಯೋಗದಲ್ಲಿ ಭಾಗಿಯಾಗಲು, ಆಸಕ್ತರಾದ, ಇಂತಹ ಕಾರ್ಯ‌ವೊಂದರಲ್ಲಿ ಭಾಗವಹಿಸಿ, ನಮ್ಮ ಸಮಾಜಕ್ಕೆ ಹೆಚ್ಚು ಹತ್ತಿರವಾಗುವ, ಮುಕ್ತ ಮನಸ್ಸಿನ ಎಲ್ಲರಿಗೂ ತೆರೆದ ಬಾಗಿಲಿನ ಸ್ವಾಗತ..

ಕ್ರೈಸ್ಟ್ ಕಾಲೇಜಿನ ಆವರಣದಲ್ಲಿ ಭೇಟಿಯಾಗೋಣ..

ಶೇಖರ್ ಪೂರ್ಣ‌
ksctanda@gmail.com

ಮೊಬೈಲ್: 9321430015
ಮನೆ: ೦೮೦ ೨೬೪೮೪೬೧೭

ಗಮನಿಸಿ: ಈ ಸಭೆಯಲ್ಲಿ ವಿವಿಧ ಭೌಗೋಳಿಕ ನೆಲೆಗಳಲ್ಲಿರುವ ಕನ್ನಡಸಾಹಿತ್ಯ.ಕಾಂ ಬೆಂಬಲಿಗರಿಗೂ ಹಾಗೂ ಆಸಕ್ತರಿಗೂ ಭಾಗವಹಿಸುವ ಅವಕಾಶ ಮಾಡಿಕೊಡುವ ಪ್ರಯತ್ನವಾಗಿ, ಅಂತರ್ಜಾಲದ ಮೂಲಕ ನೇರ ಪ್ರಸಾರ ಮಾಡಲಾಗುವುದು. ಹೆಚ್ಚಿನ ವಿವರಗಳಿಗೆ, ksctanda@gmail.com ಗೆ ಪತ್ರ ಬರೆಯಬೇಕಾಗಿ ಎಲ್ಲರಲ್ಲೂ ವಿನಮ್ರ ಮನವಿ.

~.~
  • 468 hits
  • Calendar
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡಸಾಹಿತ್ಯ.ಕಾಂ ಅಭಿಯಾನಕ್ಕೆ ಮಹತ್ವದ ತಿರುವು - ಚಳಿಗಾಲದ ಅಧಿವೇಶನದಲ್ಲಿ ಚರ್ಚೆಗೆ ಕನ್ನಡಸಾಹಿತ್ಯ.ಕಾಂ ಮನವಿ....?
  • ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ, ಹಾಸನ - ಉದ್ಘಾಟನಾ ಸಮಾರಂಭ ಹಾಗೂ ವಿಚಾರ ಗೋಷ್ಠಿ
  • 'ಸಲ್ಲಾಪ' - ಕನ್ನಡಸಾಹಿತ್ಯ.ಕಾಂ ನಿಂದ ಮತ್ತೊಂದು ಪ್ರಥಮ
  • ಕನ್ನಡಸಾಹಿತ್ಯ.ಕಾಂ ಮುಂಬಯಿ-ಪುಣೆ ಬೆಂಬಲಿಗರ ಬಳಗದ ಉದ್ಘಾಟನಾ ಸಮಾರಂಭ ಹಾಗೂ ವಿಚಾರ ಸಂಕಿರಣ
  • ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ ಪುಣೆ ಭೇಟಿ
Syndicate content

ಲೇಖಕರು

Rohit's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • rajeshnaik111
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 9:25pm
  • vijayp
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 9:20pm
  • mowna
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 7:04pm
  • hpn
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:29pm
  • anivaasi
    ಉ: ಪತನದ ಕತೆ
    October 11, 2008 - 6:06pm
  • anivaasi
    ಉ: ಪತನದ ಕತೆ
    October 11, 2008 - 6:05pm
  • anivaasi
    ಉ: ಪತನದ ಕತೆ
    October 11, 2008 - 5:50pm
  • venkatesh
    ಉ: (ಈಚಲುಮರಗಳು) ಪಾಮ್ ಮರಗಳು, ಹಾಗೂ ನೀರಿನ-ಬುಗ್ಗೆಗಳು !
    October 11, 2008 - 5:00pm
  • palachandra
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 4:15pm
  • csomsekraiah
    ಉ: ಇ೦ದಿನಿ೦ದ ಸ೦ಪದ ಬಳಗದಲ್ಲಿ ನಾನೂ ಒಬ್ಬ
    October 11, 2008 - 3:46pm
ಇನ್ನಷ್ಟು


ಮಾತಾಡುವುದನ್ನು ನಿಲ್ಲಿಸಿ, ಕೆಲಸ ಮಾಡುವುದೇ ಯಶಸ್ಸಿನ ಶುಭಾರಂಭ!

— ವಾಲ್ಟ್ ಡಿಸ್ನಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator