ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಚೆನ್ನವೀರ ಕಣವಿ:೮೧ ಸಾಹಿತ್ಯಾಭಿನಂದನ

July 4, 2008 - 11:56am — harshavardhan v...
Jul 6 2008 - 9:30am
Jul 6 2008 - 6:30pm
Asia/Calcutta
ಚೆಂಬೆಳಕಿನ ಕವಿ ಶ್ರೀ ಚೆನ್ನವೀರ ಕಣವಿ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ಬೆಳಗಿನ ಚೆಲುವು! ಚಿತ್ರ:ಬಿ.ಎಂ.ಕೇದಾರನಾಥೇಶ್ವರಸ್ವಾಮಿ

ಎಷ್ಟು ಹಣತೆಗಳಿಂದ ಕತ್ತಲೆಯು ಕರಗುವುದು?
ಎಷ್ಟು ಕವಿತೆಗೆ ಜಗದ ಕಣ್ಣು ತೆರೆಯುವುದು?
ಒಂದಿದ್ದರೂ ಸಾಕು ಮನೆಗೆ ಬೆಳಕಾಗುವುದು.
ಒಂದು ಕವಿತೆಗೂ ಕೂಡ ಮನ ಕರಗಬಹುದು.
-(ಒಂದು ಹಲವು- ಜೀನಿಯಾ)

ಬದುಕಿದಂತೆ ಬರೆದವರು ನಮ್ಮ ಮುಂದಿದ್ದಾರೆ. ಬರೆದಂತೆ ಬದುಕಿದವರು ಸಹ ಕೆಲವರು. ನಮ್ಮ ದಾರಿಗೂ ಬೆಳಕಾಗಿದ್ದಾರೆ ಅವರಲ್ಲಿ ಕೆಲವರು. ಅಂಥವರಲ್ಲಿ ಚೆಂಬೆಳಕಿನ ಕವಿ ನಾಡಿನ ಚೇತನ ಚೆನ್ನವೀರ ಕಣವಿ ಅಗ್ರಗಣ್ಯರು. ಬಹುಶ: ಅವರು ಬರೆದಿರುವ ಎಲ್ಲ ಕವನ, ಸುನೀತಗಳಿಗೆ ಕನ್ನಡಿಗರ ಮನ ಕರಗಿದೆ. ಅಕ್ಕರೆ ಮೊಳಕೆಯೊಡದಿದೆ. ಈ ಸಾಂಸ್ಕೃತಿಕ ರಾಯಭಾರಿಯ ನೆನೆದು ಮನ ಹಿಗ್ಗಿದೆ. ಬದುಕುವ ಉತ್ಸಾಹ ಇಮ್ಮಡಿಗೊಂಡಿದೆ. ಮನದಲ್ಲಿ ಆಕಾಶ ಬುಟ್ಟಿ ಬೆಳಗಿದೆ.

ಹೂವು ಹೊರಳುವವು
ಸೂರ್ಯನ ಕಡೆಗೆ
ನಮ್ಮದಾರಿ ಬರಿ
ಚಂದ್ರನವರೆಗೆ!

ಭಾವಜೀವಿಯಲ್ಲಿ ಕವಿ ನಿವೇದಿಸಿಕೊಂಡಂತೆ..

ಧಾರವಾಡದ ನೇರ ಗುಣವೇನೋ!
ಕವಿಗಾಳಿ ಸವಿಗಾಳಿ ತೀಡುತಿಹುದು.
ಧಾರವಾಡದ ತಾಯ ಮಡಿಲಲ್ಲಿ ಮೊರೆಯಿಟ್ಟ
ದತ್ತವಾಣಿಗೆ ಎದೆಯು ಕೋಡುತಿಹುದು.

ನಾಡಿನ ಡಾ.ಜಿ.ಎಸ್.ಶಿವರುದ್ರಪ್ಪ ಮತ್ತು ಡಾ.ಚೆನ್ನವೀರ ಕಣವಿ ಅಂದಿನ ಪ್ರಾಥಮಿಕ ಶಾಲೆಯ ಬಡ ಶಾಲಾ ಮಾಸ್ತರ ಮಕ್ಕಳಾಗಿ, ಫ್ರೀ ಬೋರ್ಡಿಂಗ್ ಮೊರೆಹೊಕ್ಕು, ತುಂಬ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಉಚ್ಚ ಶಿಕ್ಷಣ ಪಡೆದಿದ್ದೇ ಒಂದು ಸಾಹಸ. ಜೊತೆಗೆ ಕಾವ್ಯ ಕೃಷಿಗೆ ತೊಡಗಿದ್ದು ಅವರ ಪ್ರತಿಭಾ ವಿಶೇಷ. ಕುವೆಂಪು ಹಾಗು ಬೇಂದ್ರೆ ತರುವಾಯು ಕನ್ನಡ ಕಾವ್ಯದ ನಿಜವಾದ ವಾರಸುದಾರರಾಗಿ ಅರ್ಧಶತಮಾನದ ಕಾಲ ಅವರು ಕಾವ್ಯ ಕ್ಷೇತ್ರದಲ್ಲಿ ಮಾಡಿದ ಸಾಧನೆ ನಮ್ಮ ಸಾಹಿತ್ಯ ಚರಿತ್ರೆಯ ಭಾಗ.
ಬನ್ನಿ, ಇದೇ ರವಿವಾರ ೬ನೇ ಜುಲೈ, ೨೦೦೮ ರಂದು ಬೆಳಿಗ್ಗೆ ೯.೩೦ಕ್ಕೆ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಕಣವಿ ಅವರಿಗೆ ಸಾಹಿತ್ಯಾಭಿನಂದನೆ ಜರುಗಲಿದೆ. ನೀವು ಬನ್ನಿ. ಗೆಳೆಯರನ್ನು ಕರೆತನ್ನಿ. ಮನೆ ಮಂದಿಯನ್ನು ಬರ ಹೇಳಿ. ಇಡೀ ದಿನ ಡಾ.ಜಿ.ಎಂ.ಹೆಗ್ಗಡೆ, ಡಾ.ಶ್ಯಾಮಸುಂದರ ಬಿದರಕುಂದಿ, ಶ್ರೀ ಮೋಹನ ನಾಗಮ್ಮನವರ, ಪ್ರೊ.ಬಿ.ವಿ.ಗುಂಜೆಟ್ಟಿ ಟೊಂಕ ಕಟ್ಟಿ ನಿಂತಿದ್ದಾರೆ.

ಬನ್ನಿ...

~.~
  • 116 hits
  • Calendar
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಚೆಂಬೆಳಕಿನ ಕವಿ ಶ್ರೀ ಚೆನ್ನವೀರ ಕಣವಿ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ಬೆಳಗಿನ ಚೆಲುವು! ಚಿತ್ರ:ಬಿ.ಎಂ.ಕೇದಾರನಾಥೇಶ್ವರಸ್ವಾಮಿ
  • ಗಾನಯೋಗಿ ಪಂಚಾಕ್ಷರಿ ಗವಾಯಿ ಸ್ಮೃತಿ ಸಂಗೀತ ಸಭಾ, ಸಂಗೀತ ಕಾರ್ಯಕ್ರಮ
  • ಜಯಂತ ಕಾಯ್ಕಿಣಿ ಕುವೆಂಪು-ಬೇಂದ್ರೆ ಅವರನ್ನು ಮಾನವೀಯ ನೆಲೆಯಲ್ಲಿ ಅನಾವರಣಗೊಳಿಸಿದಾಗ..ಭಾಗ ೩
  • ಬಣ್ಣ ಸಹಿತ ಗಣಪತಿಯ ಸಾಧಕ-ಬಾಧಕಗಳು- ವಿಚಾರ ಸಂಕಿರಣ
  • ಶ್ರೀಯುತ ಚೆನ್ನವೀರ ಕಣವಿಯವರು
Syndicate content

ಲೇಖಕರು

harshavardhan v.sheelavant's picture

ಪೂರ್ಣ ಹೆಸರು
harshavardhan v. sheelavant

ಪರಿಚಯ

Assistant Professor, Institute of Mass Communication and Research, Hubli. Freelance Journalist. a netizen having own blog- 'arivinamarevu.blogspot.com.' Karnataka Media Academy awardee. AIR grade artist. Centre for Agricultural Media (CAM) Fellow. Love to contribute feature articles, farm crisis, rural and agri life. Happy to teach journalism, to promote citizen journalism.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • savithasr
    ಉ: ಸ್ವಾತಂತ್ರ್ಯ ಮತ್ತು ಸ್ವರಾಜ್ಯ
    October 8, 2008 - 2:51pm
  • mahesha
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 8, 2008 - 2:37pm
  • venkatesh
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 8, 2008 - 2:17pm
  • girish.rajanal
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 8, 2008 - 2:08pm
  • Deeparavishankar
    ಉ: ಮರೆಯಲಾಗುವುದೇ ಈ ಅಸಾಧಾರಣ ವ್ಯಕ್ತಿಯನ್ನು!
    October 8, 2008 - 1:59pm
  • venkatesh
    ಉ: ವಿಮಾನದಿಂದ ಕೆಳಗೆ ಕಾಣುವ ಚಿತ್ರ !
    October 8, 2008 - 1:55pm
  • Deeparavishankar
    ಉ: ನನ್ನ ಮನಸ್ಸಿನ ಅಜ್ಞಾನ
    October 8, 2008 - 1:55pm
  • Deeparavishankar
    ಉ: ಮಲೆನಾಡಿನ ಹಾಸನ ಬೇಲೂರಿನ ನೆನಪುಗಳು
    October 8, 2008 - 1:50pm
  • Deeparavishankar
    ಉ: ಮರಳಿ ಬರಲಿ ಬಾಲ್ಯ
    October 8, 2008 - 1:44pm
  • siddharam
    ಉ: ಗಜಲ್
    October 8, 2008 - 1:30pm
ಇನ್ನಷ್ಟು


ಜಾನಪದ ಶಿಷ್ಟಿಯಲಿ, ಸಂಪತ್ಸಮಷ್ಟಿಯಲಿ |
ಜ್ಞಾನಸಂಧಾನದಲಿ, ಮೌಲ್ಯ ಗಣನೆಯಲಿ ||
ಮಾನವತೆ ಮಾನುಷ್ಯ ಧಾರ್ಮಿಕತೆಯೆದ್ದುನಿಲೆ |
ಆನಂದ ಧರೆಗಂದು -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator