ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸಾಹಿತ್ಯ, ಭಾಷೆ

ಬಸವಣ್ಣನವರ ವಚನಗಳ ಬಗ್ಗೆ ಒಂದು ಚಿಂತನೆ

April 5, 2007 - 10:01am — ssantosh

ನಮ್ಮ ದೇಶದಲ್ಲೆ ಬಹುಶಃ ಪ್ರಥಮ ಬಾರಿಗೆ ಸಾಮಾಜಿಕ, ಧಾರ್ಮಿಕ, ತಾತ್ವಿಕ, ಸಾಹಿತ್ಯಕ ಹಾಗು ರಾಜಕೀಯವಾಗಿ ಕ್ರಾಂತಿಯನ್ನುಂಟು ಮಾಡಿದ ಮಹಾನುಭಾವ ಬಸವಣ್ಣ. ಅವರ ಬಹು ದೊಡ್ಡ ಕೊಡುಗೆಗಳಲ್ಲಿ ವಚನ ಸಾಹಿತ್ಯವೂ ಒಂದು. ಅದರ ಬಗೆಗಿನ ಚಿಂತನೆ ಹಾಗು ಜಿಙ್ನಾಸೆಗಳು ಇಲ್ಲಿ ಮೂಡಿವೆ.

"ಎನಗಿಂತ ಕಿರಿಯರಿಲ್ಲ
ಶಿವಭಕ್ತರಿಗಿಂತ ಹಿರಿಯರಿಲ್ಲ ..."

ಈ ವಚನ ಎಷ್ಟು ಸರಳವಾಗಿದೆಯೊ ಅಷ್ಟೆ ಗಹನ ವಿಚಾರವನ್ನು ಒಳಗೊಂಡಿದೆ. ನೇರವಾಗಿ ಹೇಳುವುದಾದರೆ ಇದು ಬಸವಣ್ಣನವರ ಸರಳತೆ,ವಿನಮ್ರತೆ ಹಾಗು ವಿನಯತೆಗೆ ಕೈಗನ್ನಡಿಯಂತಿದೆ. ಆದರೆ ಇಲ್ಲಿ ಗಮನಿಸಬೇಕಾದ ಅಂಶ ಬಸವಣ್ಣನವರು "ಶಿವಭಕ್ತರಿಗಿಂತ ಹಿರಿಯರಿಲ್ಲ..." ಎಂದು ಏಕೆ ಹೇಳುತ್ತಾರೆ ಶಿವನಿಗಿಂತ ಹಿರಿಯರಿಲ್ಲ ಎಂದು ಏಕೆ ಹೇಳಲಿಲ್ಲ? ಎಂಬುದು. ಅವರು ದೈವಕ್ಕಿಂತ ದೈವಭಕ್ತಿಯೇ ಹಿರಿದು, ಶುದ್ಧ ದೈವ ಭಕ್ತಿಯುಳ್ಳವನು ದೈವವನ್ನು ಮೀರಿಸಬಲ್ಲ ಎಂದು ನಂಬಿದ್ದರೆಂದು ಖಂಡಿತವಾಗಿ ಹೇಳಬಹುದು. ಈ ಮಾತನ್ನು ಬಹು ಮಟ್ಟಿನ ಆಸ್ತಿಕರು ಒಪ್ಪುತ್ತಾರೊ ತಿಳಿಯದು, ಆದರೂ ಬಸವಣ್ಣನವರ ಈ ನಿಲುವು ಹಿಂದು ಧರ್ಮದಲ್ಲಿ ಕ್ರಾಂತಿಕಾರಕ ಎಂದು ಹೇಳಬಹುದು. ಭಕ್ತಿಯು ಮುಕ್ತಿಯ ಸಾಧನವೊಂದೆ ಅಲ್ಲ ಬದುಕನ್ನು ಹಸನು ಮಾಡುವ ಶಕ್ತಿ ಹೊಂದಿದೆ ಎಂದು ಅರ್ಥ ಮಾಡಿಕೊಳ್ಳಬಹುದು.

"ಉಳ್ಳವರು ಶಿವಾಲಯ ಮಾಡುವರಯ್ಯ
ನಾನೇನ ಮಾಡಲಿ ಬಡವನಯ್ಯ

ಎನ್ನ ಕಾಲೆ ಕಂಬವು
ದೇಹವೆ ದೇಗುಲ
ಶಿರವೆ ಹೊನ್ನ ಕಳಸವಯ್ಯ

ಸ್ಥಾವರಕ್ಕಳಿವಂಟು
ಜಂಗಮಕ್ಕಳಿವಿಲ್ಲ
ಅಯ್ಯ ಕೇಳಯ್ಯ ಕೂಡಲಸಂಗಯ್ಯ"

ನೇರ ಅರ್ಥ ಇದು ಒಬ್ಬ ಬಡವನ ನಿಸ್ಸಾಹಯಕತೆಯಾಗಿ ಕಾಣಬಹುದು ಆದರೆ ಇದು 'ದೇಹ'ವನ್ನೆ 'ದೇಗುಲ'ವನ್ನಾಗಿಸುವ ಉನ್ನತ ತತ್ವಯುಕ್ತ ವಾಣಿ. ಇದು ಬಹುಶಃ ಆಗಿನ ಕಾಲದ ಅಸ್ಪೃಷ್ಯತೆ, ಜಾತೀಯತೆಯಂತಹ ಕಂದಾಚಾರಗಳ ವಿಡಂಬಣೆಯಾಗಿ ಕೂಡ ಅರ್ಥೈಸಬಹುದು. ತಮ್ಮ ತಮ್ಮ ದೇಹದಲ್ಲಿ ದೇಗುಲವನ್ನು ಕಟ್ಟಿ ಶಿರದಲ್ಲಿ ಕಳಸವನ್ನು ಪ್ರತಿಷ್ಠಾಪಿಸಿ, ದೇಹದಲ್ಲಿ ದೇಗುಲವಿಲ್ಲದೆ ಪ್ರಾಪಂಚಿಕ ದೇಗುಲಗಳನ್ನು ಸಂದರ್ಶಿಸಿದರೆ ಯಾವ ದೇವನು ಒಲಿಯುವುದಿಲ್ಲ ಎಂಬ ನಿಲುವು ಅಭೂತಪೂರ್ವವಾದುದು. ಹಾಗೆಯೆ ಚಲನಶೀಲವಾದ ದೇಹವೆಂಬ[ಒಬ್ಬ ಮನುಷ್ಯನ ಜೀವಿತಾವಧಿಯಲ್ಲಿ] ದೇಗುಲಕ್ಕೆ ಅಳಿವಿಲ್ಲ ಆದರೆ ಜಡವಾಗಿರುವ ಪ್ರಾಪಂಚಿಕ ದೇಗುಲಗಳು ನಾಶವಾಗುವ ಸಾಧ್ಯತೆಗಳಿವೆ. ಯಾವುದೇ ಬಾಹ್ಯ ವಸ್ತು-ಆಚರಣೆಗಳಿಗಿಂತ ಮನುಷ್ಯನ ದೇಹ-ಮನಸ್ಸುಗಳು ಭಕ್ತಿಪಥಕ್ಕೆ ಬಹು ಮುಖ್ಯ ಎಂದು ಅರ್ಥೈಸಬಹುದಾಗಿದೆ.

(ಸಂಪಾದಿಸಿದ್ದು)

‹ "ಮೌಲ್ಯ ವರ್ಧಿತ" ಸರಿಯೆ!? ಧರಣಿ ಮಂಡಲ ಮಧ್ಯದೊಳಗೆ... ಸಾಹಿತ್ಯ ಇದೆಯಾ? ›
  • ಸಾಹಿತ್ಯ, ಭಾಷೆ
~.~
  • Login or register to post comments
  • 779 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 5, 2007 - 11:48am — ವೈಭವ

Re: ಬಸವಣ್ಣನವರ ವಚನಗಳ ಬಗ್ಗೆ ಒಂದು ಚಿಂತನೆ

ವೈಭವ's picture

ಇವು ನಾನು ಬರೆದೆ ವಾಕ್ಯಗಳಂತಿವಿಯಲ್ಲ...Smiling :)

ನೀವು ಇಲ್ಲಿಂದ ಪಡೆದಿರಾ ? ybhava.blogspot.com

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
April 5, 2007 - 1:30pm — ಶ್ಯಾಮ ಕಶ್ಯಪ

ಯಾಕೆ ಶಿವ?

ಶ್ಯಾಮ ಕಶ್ಯಪ's picture

ಹೌದಲ್ಲ, ಅವರ ಲೇಖನವನ್ನು ಯಥಾವತ್ ಏತ್ತುಹಾಕಿದೆ ಎಂಬಂತಿದೆ.. ಯಾಕೆ ಶಿವ?

--

ಇರುವುದೆಲ್ಲವ ಬಿಟ್ಟು, ಇರದುದದೆಡೆಗೆ ತುಡಿವುದೇ ಜೀವನ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
April 5, 2007 - 3:35pm — honnung

Re: ಬಸವಣ್ಣನವರ ವಚನಗಳ ಬಗ್ಗೆ ಒಂದು ಚಿಂತನೆ

honnung's picture

ಹೌದು ಅನಾಮತ್ತಾಗಿ ಎತ್ತಿ ಹಾಕಿದಂತಿದೆ. ಇದೋ ಮೂಲ ಲೇಖನದ ಕೊಂಡಿ.

ಅಂದ ಹಾಗೆ ವೈಭವರವರೆ, ನಿಮ್ಮ ಬೆಳಕಿನ ಎಳೆ ಲೇಖನ ಚೆನ್ನಾಗಿ ಹೊಮ್ಮಿದೆ. ನಿಮ್ಮ ವಿಜ್ಞಾನದ ಲೇಖನಗಳು ಮುಂದುವರೆಯಲಿ.
------------------
ನಗೆಗನ್ನಡಂ ಗೆಲ್ಗೆ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
April 5, 2007 - 5:55pm — hpn

ಸದಸ್ಯರ ಐಡಿ ಬ್ಲಾಕ್ ಮಾಡಲಾಗಿದೆ

hpn's picture

hmm... ಇನ್ನೂ ಕಣ್ಣು ಬಿಡುತ್ತಿರುವ ಅಂತರ್ಜಾಲದ ಕನ್ನಡದಲ್ಲೂ ಪ್ಲೇಗಿಯರಿಸಮ್!

ಸದ್ಯಕ್ಕೆ ಮೇಲಿನ (ssantosh) ಸದಸ್ಯರ ಐಡಿ ಬ್ಲಾಕ್ ಮಾಡಲಾಗಿದೆ. ಈ ತರಹದ ಇನ್ಯಾವುದಾದರೂ 'ಪ್ಲೇಗಿಯರಿಸಮ್' ಪ್ರಸಂಗ ಕಣ್ಣಿಗೆ ಬಿದ್ದರೆ ತಪ್ಪದೆ ತಿಳಿಸಿ.
--
Check my Blog
Kannada wikipedia

"ಹೊಸ ಚಿಗುರು, ಹಳೆ ಬೇರು"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
April 5, 2007 - 3:17pm — Sunil Jayaprakash

ಟೀಕೆ: ಬಸವಣ್ಣನವರ ವಚನಗಳ ಬಗ್ಗೆ ಒಂದು ಚಿಂತನೆ

Sunil Jayaprakash's picture

(ಬಸವಣ್ಣನವರು ಈ ರೀತಿಯ ನಗೆತನಕ್ಕೆ ಮುನಿಸಿಕೊಳ್ಳುತ್ತಿರಲಿಲ್ಲ ಎಂಬ ಬಗೆಯಿಂದಾಗಿ)

ಬಲ್ಲವರು ಚೆನ್ನಾಗಿ ಬ್ಲಾಗುವರು,
ನಾನೇನ ಬ್ಲಾಗಲಿ ತಿಳಿಯದಯ್ಯಾ,
Ctrl+Xಏ ಕಟ್ಟ್(ಉ), Ctrl+Cಏ ಕಾಪಿ,
Ctrl+Vಪೇಸ್ಟು ಕಣಯ್ಯಾ,
ಓ ಬ್ಲಾಗೋದುಗ ಕೇಳಯ್ಯಾ, ಟೈಪುವುದಕ್ಕಳಿವುಂಟು ಕಾಪಿ-ಪೇಸ್ಟಿಗಿಲ್ಲಾಆಆಆಆ..

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬಸವಣ್ಣ
  • ಚಕೋರಂಗೆ ಚಂದ್ರಮನ ಬೆಳಕಿನ ಚಿಂತೆ
  • ಬಸವಣ್ಣನ ಮೂಲ ಹೆಸರು ಬಸವಣ್ಣ ಭಟ್ಟ! ಇದು ‘ಸಂ’ಶೋಧನೆ?
  • ಅನನ್ಯ ಅಲ್ಲಮ (೪)
  • ಸಂಸ್ಕೃತಿಯೆಂದರೆ ನೃತ್ಯ, ಗಾಯನ, ಉಡುಗೆ, ಅಡುಗೆ ಮಾತ್ರವೆ ?
Syndicate content

ಲೇಖಕರು

ssantosh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
  • ವಿಶ್ವಾಸ ಮತ ಮತ್ತು ವಿಶ್ವಾಸಘಾತ
  • ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
  • "ಕನ್ನಡ+ತಮಿಳ್" = ?
  • ಸ್ತ್ರೀಸೌಂದರ್ಯ
  • ಯೋಗವಾಹಕ
  • ತೆರೆ, ತೆಱೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • roshan_netla
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:38pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:28pm
  • vikashegde
    ಉ: ನೂರು ವರ್ಷ ಕವನಗಳನ್ನು ಬ್ಯಾನ್ ಮಾಡ
    July 24, 2008 - 5:27pm
  • uniquesupri
    ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು
    July 24, 2008 - 5:23pm
  • srinivasps
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:13pm
  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:06pm
  • keerthi2kiran
    ಉ: ನವ್ಯ, ನವೋದಯ, ಬಂಡಾಯ.....
    July 24, 2008 - 5:05pm
  • mahesha
    ಉ:
    July 24, 2008 - 5:01pm
  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:01pm
  • srinivasps
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:00pm
ಇನ್ನಷ್ಟು


ಪ್ರಶ್ನೆಮಾಡುವುದನ್ನು ನಿಲ್ಲಿಸದಿರುವುದು ಅತ್ಯಂತ ಮುಖ್ಯ.

— ಅಲ್‌ಬರ್ಟ್ ಐನ್‌ಸ್ಟೀನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator