ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸಾಹಿತ್ಯ, ಭಾಷೆ

ಬೇಂದ್ರೆ ಅಲ್ಲಮ ಪ್ರಭು ಬಗ್ಗೆ...

April 14, 2007 - 4:28am — ವೈಭವ

ಬೇಂದ್ರೆಯವರ 'ಉಯ್ಯಾಲೆ' ಯಿಂದ ಈ ಪದ್ಯ

ಅಲ್ಲಮ ಪ್ರಭು

ಮನದ ಬಯಲಲಿ ಬವಣೆಗೊಂಡೆ, ಬಿಸಿಲಿನ ಝಳದೆ

ಹುಲ್ಲೆ ಹಂಗಿಸುವ ಹುಸಿನೀರ ಕಾಂಬೊಲು ಕಂಡೆ

ನೀರ, ನೇಹಿಗ, ನಂಟ, ಬಂಟ, ಸಂವಾದಿ, ಗುರು,

ಶಿಷ್ಯ, ಪ್ರೀತಿಯ ಜಾತಿಗಾರ! ಎಲ್ಲಿರುವೆ ರಸ-

ಸಿದ್ಧ ಗೋರಕ್ಷನುಕ್ಕಿಲೆ ಹೊಯ್ದರೂ ಮುಕ್ಕು

ತುಕ್ಕರಿಯದಿದ್ದ ಮೈಕವಚ ಕಳೆದಿಡುವಂತೆ

ಕೆಳಗಿರಿಸಿ, ಕದಳಿಯಲ್ಲಡಗಿ ಕಾಣದೆ ಹೋದ,

ಲಿಂಗ ಲೀಲಾವಿಲಾಸದಲಿ ನಟಿಸಿದ ಮೂರ್ತಿ?

ವಚನ ವಿದ್ಯಾನಟಿಯು ಕುಣಿಕುಣಿದಳಂದು, ಮ-

ದ್ದಳೆಯ ಸೊಲ್ಲಿಗೆ ವಿವಿಧ ಭಂಗಿಯಲಿ; ಶೂನ್ಯದಲಿ

ಹುಟ್ಟುಗಟ್ತಿತು ಹದುಳದೊಂದು ಹುಣ್ಣಿಮೆ; ಬೆಡಗು

ಬಿನ್ನಾಣ ಬಿಡಿಸಿ, ಬೆಳುದಿಂಗಳವ ಕುಡಿದ ಮಧು-

ಮತ್ತ ಚಿತ್ತ-ಚಕೋರ ಕೇಳುತಿದೆ, ಹೇಳುತಿದೆ -

'ಬೇರೆ ದರುಶನವೇಕೆ? ಮಾತೆ ಜ್ಯೋತಿರ್ಲಿಂಗ?"

ಅರ್ಥಗಳು :-

ನೀರ(ನೀಱ) = ಚೆಲುವ,

ನೇಹಿಗ = ಸ್ನೇಹಿತ = ಗೆಳೆಯ

ದರುಶನ = ಆಧ್ಯಾತ್ಮ

ಮಾತೆ  = ಮಾತೆಂಬುದೆ = ನುಡಿಯಂಬುದೆ

ಪ್ರೀತಿಯ ಜಾತಿಗಾರ ಪದ ಬಳಕೆ ಗವನಿಸಿ.

‹ Rainbow = ಕಮಾನು ಬಿಲ್ಲು? = ಕಾಮನ ಬಿಲ್ಲು? ಗೊರೂರು ರಾಮಸ್ವಾಮಿ ಅಯ್ಯ೦ಗಾರ್ ಅವರ "ಮೆರವಣಿಗೆ" ›
  • ಸಾಹಿತ್ಯ, ಭಾಷೆ
~.~
  • Login or register to post comments
  • 564 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 14, 2007 - 4:43am — ವೈಭವ

Re: ಬೇಂದ್ರೆ ಅಲ್ಲಮ ಪ್ರಭು ಬಗ್ಗೆ...

ವೈಭವ's picture

ಹುಟ್ಟುಗಟ್ತಿತು ಅಲ್ಲ ..ಹುಟ್ಟುಗಟ್ಟಿತು..

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
April 16, 2007 - 7:13pm — mahesha

ಹೊಳೆಯದ ಒರೆಗಳು

mahesha's picture

ವೈಬವ...

ಕೆಲವು ಒರೆಗಳು ತಿಳಿಯಲಿಲ್ಲ.

ಹುಲ್ಲೆ ಹಂಗಿಸುವ ಹುಸಿನೀರ ಕಾಂಬೊಲು ಕಂಡೆ

ಚಿಗರೆಯನ್ನು ಅಣಕಿಸುವ 'ಕಾಂಬೊಲು' ಅಂದರೇನು?

ಎಲ್ಲಿರುವೆ ರಸ-

ಸಿದ್ಧ ಗೋರಕ್ಷನುಕ್ಕಿಲೆ ಹೊಯ್ದರೂ ಮುಕ್ಕು

ತುಕ್ಕರಿಯದಿದ್ದ ಮೈಕವಚ ಕಳೆದಿಡುವಂತೆ

ಕೆಳಗಿರಿಸಿ, ಕದಳಿಯಲ್ಲಡಗಿ ಕಾಣದೆ ಹೋದ,

ಲಿಂಗ ಲೀಲಾವಿಲಾಸದಲಿ ನಟಿಸಿದ ಮೂರ್ತಿ?

ಇದನ್ನು ತುಸು ಬಿಡಿಸಿ ಅಱುಪಿರಿ/ಅರುಹಿರಿ!

======================================

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
April 17, 2007 - 5:08am — hamsanandi

Re: ಹೊಳೆಯದ ಒರೆಗಳು

hamsanandi's picture

Quote:
ಹುಲ್ಲೆ ಹಂಗಿಸುವ ಹುಸಿನೀರ ಕಾಂಬೊಲು ಕಂಡೆ

ಕಾಣುವ ಒಲು -> ಕಾಣುವೊಲು -> ಕಾಂಬೊಲು = ಕಾಣುವಂತೆ

ಮರೀಚಿಕೆಯಂತೆ ಅನ್ನುವ್ ಭಾವ.

ಕಷ್ಟ ಬೇಡೆಂಬಾಸೆ ಕಡುಸುಖವ ಕಾಂಬಾಸೆ ನಷ್ಟ ಜೀವನದಾಸೆ ಪುರಂದರ ವಿಠಲ - ಎಂಬ ಪುರಂದರದಾಸರ ಪದವನ್ನು ನೆನಪಿಸಿಕೊಳ್ಳಿ (ಬಿನ್ನಹಕೆ ಬಾಯಿಲ್ಲವಯ್ಯ)

-ಹಂಸಾನಂದಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
April 17, 2007 - 10:56am — mahesha

ಕಾಂಬೊಲು

mahesha's picture

ನನ್ನಿ ಹಂಸಾನಂದಿ.

ನನಗೆ ತಿಳಿದಿಲ್ಲ ಆ ಪುರಂದರ ದಾಸರ ಪದ!
======================================

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
April 17, 2007 - 11:07am — shreekant.mishrikoti

Re: ಕಾಂಬೊಲು- ಎಂದು ಕಾಂಬೆನು- ಬಾಹೋರಿಲ್ಲ

shreekant.mishrikoti's picture

’ಎಂದು ಕಾಂಬೆನು ಎನ್ನ ಸಲಹುವ’ ಎಂಬ ಒಮ್ದು ಪುರಂದರದಾಸರ ರಚನೆಯೂ ಇದೆ.
ಕಾಣು -
ಕಾಂಬ-ಕಾಣುವ
ಕಾಂಬೆನು- ಕಾಣುವೆನು .
ಕಾಂಬೊಲು - ಕಾಣುವೊಲು ಇತ್ಯಾದಿ

ದಾಸಸಾಹಿತ್ಯವನ್ನೂ , ವಚನಸಾಹಿತ್ಯವನ್ನೂ , ಸಾಮಾನ್ಯ ಜನದ ಮಾತನ್ನೂ ಗಮನಿಸಿದರೆ ನಿಮಗೆ ಹೆಚ್ಚು ’ಒರೆ’ಗಳು ಸಿಗುತ್ತವೆ .

ಸಹಜವಾಗಿ ಅವು ಕನ್ನಡ ಜಾಯಮಾನಕ್ಕೆ ಹೊಂದಿರುತ್ತವೆ.

ನಿಮಗೆ ’ಬಾಹೋರಿಲ್ಲ’ ಗೊತ್ತೇ ? ಹೇಳಿ ನೋಡುವ.

"ಕನ್ನಡದ ಪುಲ್ಲೆನಗೆ ಪರಮ ಪಾವನ ತುಳಸಿ"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
April 17, 2007 - 6:20pm — mahesha

Re: ಕಾಂಬೊಲು- ಎಂದು ಕಾಂಬೆನು- ಬಾಹೋರಿಲ್ಲ

mahesha's picture

"ಬಾಹೋರಿಲ್ಲ"!! ಅಂದ್ರೆ?
======================================

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹೃದಯದ ಭಾವ
  • ಕನಸ್ಸು
  • ಪ್ರೇಮದ ಓಲೆ
  • ಓ ನನ್ನ ಜೀವವೇ
  • ನನ್ನ ಕಾವ್ಯ
Syndicate content

ಲೇಖಕರು

ವೈಭವ's picture

ಪೂರ್ಣ ಹೆಸರು
ಬರತ್ ಕುಮಾರ್

ಪರಿಚಯ

ನಾನು ಮಿನ್ಕೆ ಎಂಜಿನಿಯರ್ ಆಗಿ ಬೆಂಗಳೂರಿನಲ್ಲಿ ಕೆಲಸ ಮಾಡುತಿದ್ದೇನೆ. ಕನ್ನಡದ ಬಗ್ಗೆ ತುಂಬ ಹುರುಪಿದೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
  • ವಿಶ್ವಾಸ ಮತ ಮತ್ತು ವಿಶ್ವಾಸಘಾತ
  • ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
  • "ಕನ್ನಡ+ತಮಿಳ್" = ?
  • ಸ್ತ್ರೀಸೌಂದರ್ಯ
  • ಯೋಗವಾಹಕ
  • ತೆರೆ, ತೆಱೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • roshan_netla
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:38pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:28pm
  • vikashegde
    ಉ: ನೂರು ವರ್ಷ ಕವನಗಳನ್ನು ಬ್ಯಾನ್ ಮಾಡ
    July 24, 2008 - 5:27pm
  • uniquesupri
    ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು
    July 24, 2008 - 5:23pm
  • srinivasps
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:13pm
  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:06pm
  • keerthi2kiran
    ಉ: ನವ್ಯ, ನವೋದಯ, ಬಂಡಾಯ.....
    July 24, 2008 - 5:05pm
  • mahesha
    ಉ:
    July 24, 2008 - 5:01pm
  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:01pm
  • srinivasps
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:00pm
ಇನ್ನಷ್ಟು


ಸು:ಖ ದು:ಖ ಗಳನು ತಟಸ್ಥಭಾವದಿ
ಸಕಲಕು ವಿತರಿಸುವುದು ಪ್ರಕೃತಿ
ಸು:ಖವ ಹೆಚ್ಚಿಸುತಾ ದು:ಖವ ತಗ್ಗಿಪ
ಯುಕುತಿಯೆನಿಸುವುದು ಸ೦ಸ್ಕೃತಿ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator