Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಶಿಕ್ಷಣ

ಕನ್ನಡದ ಹೆಸರಲ್ಲಿ ಇಂಗ್ಲೀಷ್ ಕಲಿಕೆ... ಮಾನ್ಯತೆ ರದ್ದು! ಈ ಪರಿಸ್ಥಿತಿಗೆ ಯಾರು ಹೊಣೆ?

July 1, 2007 - 2:14pm — arunhegde

ಕಳೆದ ಕೆಲವು ದಿನಗಳಿಂದ ಯಾವ ಪತ್ರಿಕೆಯನ್ನು ನೋಡಿದರೂ ಇದೇ ಸುದ್ದಿ - ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಕೊಡುವುದಾಗಿ ಸರ್ಕಾರದಿಂದ ಅನುಮತಿ ಪಡೆದ ರಾಜ್ಯದ ಸಾವಿರಾರು ಶಾಲೆಗಳು ಇಂಗ್ಲೀಷ್ ಮಾಧ್ಯಮದಲ್ಲಿ ಬೋಧಿಸುವ ಮೂಲಕ ವಿವಾದದ ಮೂಲಬಿಂದುಗಳಾದದ್ದು; ಸರ್ಕಾರ ಮತ್ತು ಇಂತಹ ಶಾಲೆಗಳ ಆಡಳಿತ ಮಂಡಳಿಗಳ ನಡುವಣ ಕಾನೂನು ಸಮರ; ಭಾಷಾ ನೀತಿ ಉಲ್ಲಂಘನೆ ಮಾಡಿದ ತಪ್ಪಿಗೆ ಸರ್ಕಾರದಿಂದ ಇಂತಹ ಶಾಲೆಗಳ ಮಾನ್ಯತೆ ರದ್ದು; ಸರ್ಕಾರದ ಈ ನಿರ್ಧಾರವನ್ನು ಎತ್ತಿ ಹಿಡಿದ ರಾಜ್ಯದ ಉಚ್ಚ ನ್ಯಾಯಾಲಯ; ಕನ್ನಡದಲ್ಲಿಯೇ ಬೋಧಿಸುವುದಾಗಿ ಪ್ರಮಾಣ ಪತ್ರ ಸಲ್ಲಿಸಿದರೆ ಉಳಿಗಾಲ ಇಲ್ಲವಾದರೆ ಶಾಶ್ವತವಾಗಿ ಮಾನ್ಯತೆ ರದ್ದು ಎಂಬ ಮಹತ್ವದ ತೀರ್ಪು. ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿದಾಗೆ ಒಮ್ಮೊಮ್ಮೆ ಅನಿಸುತ್ತದೆ; ಯಾಕೆ ಹೀಗೆಲ್ಲಾ ಆಯಿತು. ಸಮಸ್ಯೆಯ ಮೂಲ ಕಾರಣವೇನು. ಯಾರದೋ ತಪ್ಪಿಗೆ ಈಗ ಅಮಾಯಕ ಪುಟಾಣಿಗಳು ಶಿಕ್ಷೆ ಅನುಭವಿಸಬೇಕೇ ಎಂದು.

 ಈ ಎಲ್ಲಾ ಸಮಸ್ಯೆಗಳಿಗೆ ಯಾರು ಹೊಣೆ?

  • ಆಂಗ್ಲ ಮಾಧ್ಯಮದಲ್ಲಿ ಬೋಧಿಸಿದರೆ ಪೋಷಕರಿಂದ ಹೆಚ್ಚಿನ ಹಣ ಕಿತ್ತುಕೊಳ್ಳಬಹುದೆಂಬ ದುರಾಸೆಗೆ ಬಿದ್ದ ಶಾಲಾ ಆಡಳಿತ ಮಂಡಳಿಯವರೇ?
  • ಹತ್ತಾರು ವರ್ಷಗಳಿಂದಲೇ ಅವ್ಯಾಹತವಾಗಿ ನಡೆಯುತ್ತಿದ್ದ ಭಾಷಾ ನೀತಿಯ ಉಲ್ಲಂಘನೆಯನ್ನು ಹಣದ ಆಮಿಷಕ್ಕೊಳಗಾಗಿಯೋ ಅಥವಾ ದಿವ್ಯ ನಿರ್ಲಕ್ಷದಿಂದಲೋ ಕಡೆಗಣಿಸಿ ಸುಮ್ಮನೇ ಕುಳಿತ ಕ್ಷೇತ್ರ ಶಿಕ್ಷಣಾಧಿಕಾರಿಗಳೇ?
  • ಇವೆಲ್ಲಾ ಗೊತ್ತಿದ್ದೂ ಜಾಣ ಕಿವುಡರಂತೆ ವರ್ತಿಸುತ್ತಿದ್ದ ರಾಜಕಾರಣಿಗಳೇ?
  • ಇಷ್ಟು ವರ್ಷಗಳ ಕಾಲ ಏನೇನೂ ಕ್ರಮ ಕೈಗೊಳ್ಳದೇ ಈಗ ಧಿಡೀರನೆ ಭೀಕರ ಕಾನೂನು ಸಮರಕ್ಕಿಳಿದ ಸರ್ಕಾರವೇ?
  • ಆಂಗ್ಲ ಮಾಧ್ಯಮದಲ್ಲಿ ಓದಿದರೇನೇ ಹೆಚ್ಚು ಪ್ರತಿಷ್ಠೆ ಹಾಗೂ ಅನುಕೂಲ, ಕನ್ನಡಮಾಧ್ಯಮದಲ್ಲಿ ಕಲಿಯುವುದು ಅವಮಾನ, ನಿಷ್ಪ್ರಯೋಜಕವೆಂದು ತಿಳಿದು ಡೊನೇಷನ್ ಎಷ್ಟಾದರೂ ಸರಿ ಕಲಿಸಿದರೆ ಆಂಗ್ಲ ಮಾಧ್ಯಮದಲ್ಲೇ ಕಲಿಸಬೇಕೆಂದು ಪಟ್ಟು ಹಿಡಿಯುವ ಪೋಷಕವರ್ಗವೇ?
  • ಕನ್ನಡ ಮಾಧ್ಯಮ ಶಾಲೆಗಳ ಅದರಲ್ಲೂ ಸರ್ಕಾರೀ ಕನ್ನಡ ಶಾಲೆಗಳ ಗುಣಮಟ್ಟದ ಬಗ್ಗೆ ಕಿಂಚಿತ್ತೂ ಕಾಳಜಿ ವಹಿಸದೇ ಅವುಗಳನ್ನು ದೊಡ್ಡಿಗಳ ಮಟ್ಟಕ್ಕೆ ತಂದಿರುವ ಸರ್ಕಾರವೇ?
  • ತಮ್ಮ ಮಕ್ಕಳು, ಮೊಮ್ಮಕ್ಕಳನ್ನು ದುಬಾರಿ ಆಂಗ್ಲ ಶಾಲೆಗಳಿಗೆ  ಕಳುಹಿಸಿ ಹೊರಗಿನಿಂದ ಕನ್ನಡವೇ ಬೇಕು, ಕನ್ನಡವೇ ಸರ್ವಸ್ವವೆಂದು ಒಣ ಭಾಷಣ ಬಿಗಿದು ಉರಿಯುವ ಬೆಂಕಿಕೆ ಇನ್ನಷ್ಟು ತುಪ್ಪ ಸುರಿಯುವ "ಬುದ್ಧಿ ಜೀವಿ"ಗಳೇ?

ಪರಿಹಾರವಿದೆಯೇ?

ಇದು ಚಿಂತನಾರ್ಹ ವಿಷಯ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಆಂಗ್ಲ ಭಾಷೆಯ ಜ್ಞಾನ ಅವಶ್ಯಕವೆಂಬುದರಲ್ಲಿ ಎರಡು ಮಾತಿಲ್ಲ. ಸರ್ಕಾರವು ಒಂದನೇಯ ತರಗತಿಯಿಂದಲೇ ಕನ್ನಡ ಮಾಧ್ಯಮ ಶಾಲೆಗಳಲ್ಲೂ ಇಂಗ್ಲೀಷನ್ನು ಒಂದು ವಿಷಯವಾಗಿ ಬೋಧಿಸುವ ನಿರ್ಧಾರಕ್ಕೆ ಬಂದದ್ದು ಶ್ಲಾಘನಾರ್ಹ. ಆದರೆ ಇದೊಂದೇ ಸಾಲದು. ಕನ್ನಡ ಮಾಧ್ಯಮ ಶಾಲೆಗಳ ಅದರಲ್ಲೂ ಸರ್ಕಾರೀ ಶಾಲೆಗಳ ಮೂಲಭೂತ ಸೌಕರ್ಯಗಳ, ಕಲಿಕಾ ಗುಣಮಟ್ಟದ ಸುಧಾರಣೆಯಾಗಬೇಕು. ಖಾಸಗೀ ಆಂಗ್ಲ ಮಾಧ್ಯಮದ ಶಾಲೆಗಳಿಗೆ ತಾವೇನೂ ಕಡಿಮೆಯಿಲ್ಲ. ಅಲ್ಲಿ ಸಿಗುವ ಎಲ್ಲ ಉತ್ಕೃಷ್ಠ ಗುಣಮಟ್ಟದ ಶಿಕ್ಷಣ ಸರ್ಕಾರೀ ಶಾಲೆಗಳಲ್ಲೂ ಲಭ್ಯವೆಂಬುದನ್ನು ಪೋಷಕರಿಗೆ ಮನದಟ್ಟಾಗುವಂತೆ ಶಾಲೆಗಳ ಅಭಿವೃದ್ಧಿಯಾಗಬೇಕಿದೆ. ಹಾಗಾದಾಗ ಕೇವಲ ಕೆವವೊಂದೇ ಶಾಲೆಗಳಿಗೆ ಅಂಟಿಕೊಂಡಿರುವ ಪೋಷಕರು ತಮ್ಮ ಮಕ್ಕಳನ್ನು ಬೇರೆ ಶಾಲೆಗಳಿಗೆ ಸೇರಿಸಲು ಹಿಂಜರಿಯುವುದಿಲ್ಲ. ಇದರಿಂದ ದುಬಾರಿ ಡೊನೇಷನ್ ಹಾವಳಿಯನ್ನೂ ತಪ್ಪಿಸಬಹುದು. ಅಲ್ಲದೇ ಗುಣಮಟ್ಟದ ಶಿಕ್ಷಣದ ಹೆಸರಲ್ಲಿ ಹೆಚ್ಚಿಗೆ ಹಣವನ್ನು ಕಿತ್ತುಕೊಳ್ಳುವ ಧನ ದಾಹೀ ಆಡಳಿತ ಮಂಡಳಿಯವರಿಗೂ ಕಡಿವಾಣಹಾಕಬಹುದು. ಎಲ್ಲಿ ಬೇಡಿಕೆ ಕುಸಿಯುತ್ತದೋ, ಆವಾಗ ತನ್ನಿಂತಾನೇ ಭಾಷಾ ನೀತಿಯ ಪಾಲನೆಯೂ ಆಗುತ್ತದೆ.

ನನ್ನ ಪ್ರಕಾರ ಪ್ರಸಕ್ತ ಸಮಸ್ಯೆಗೆ ಸರ್ಕಾರ, ಪೋಷಕರು, ಶಿಕ್ಷಣಾಧಿಕಾರಿಗಳು, ರಾಜ ಕಾರಣಿಗಳು, ಶಾಲಾ ಆಡಳಿತ ವರ್ಗದವರೆಲ್ಲರೂ ಪ್ರತ್ಯಕ್ಷವಾಗಿಯೋ ಪರೋಕ್ಷವಾಗಿಯೋ ಹೊಣೆಯಾಗುತ್ತಾರೆ. ಅವರೆಲ್ಲರೂ ತಮ್ಮ ತಮ್ಮ ಜವಾಬ್ದಾರಿಯನ್ನರಿತು ಸೂಕ್ತವಾದ ಕ್ರಮ ಕೈಗೊಂಡರೆ ಮುಗ್ಧ ಕಂದಮ್ಮಗಳ ಭವಿಷ್ಯದ ಮೇಲಾಗುವ ಪರಿಣಾಮಗಳನ್ನು ತಪ್ಪಿಸಬಹುದು.

 ತಾವು ಏನಂತೀರಿ??...

‹ ಶಾಲಾ ಮಕ್ಕಳಿಗೆ ಮೊಟ್ಟೆ ಕೊಡಬೇಕೇ?ಹಾಲನ್ನೇ? ಬೇಸಿಸ್ ಪಾಯಿಂಟ್ ಎಂದರೇನು ? ›
  • ಶಿಕ್ಷಣ
Ornamental seperator
  • Login or register to post comments
  • 374 hits
  • Email this forum
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪ್ರಾಥಮಿಕ ಹಂತದಲ್ಲಿ ಇಂಗ್ಲೀಷ್ ಬೇಕೆ ಬೇಡವೆ?
  • ಇದಪ್ಪಾ ಕನ್ನಡ ಪ್ರೇಮ..!!!
  • ರಾಜ್ಕುಮಾರ್ ಎಂಬ ಪವಾಡ
  • ಕನ್ನಡವೇ ಸತ್ಯ, ಇಂಗ್ಲಿಷ್ ನಿತ್ಯ
  • ಕನ್ನಡವೇ ಸತ್ಯ ಕನ್ನಡವೇ ನಿತ್ಯ !
Syndicate content

ಲೇಖಕರು

arunhegde's picture

ಪೂರ್ಣ ಹೆಸರು
ಅರುಣ್ ಹೆಗಡೆ

ಪರಿಚಯ

ನಾನು ಅರುಣ್ ಕುಮಾರ್ ಡಿ. ವೃತ್ತಿಯಿಂದ ಸಾಫ್ಟ್ ವೇರ್ ಇಂಜಿನಿಯರ್. ಮೂಲತಃ ಉತ್ತರ ಕನ್ನಡ ಜಿಲ್ಲೆಗೆ ಸೇರಿದವನು. ಕನ್ನಡದ ಬಗ್ಗೆ ಗೌರವ ಅಭಿಮಾನವಿದ್ದು ಕನ್ನಡ ಅಂತರ್ಜಾಲ ತಾಣಗಳಿಗೆ ಭೇಟಿ ಕೊಡುವುದು, ಸಾಧ್ಯವಾದರೆ ನಾನೂ ಒಂದಿಷ್ಟು ಬರೆಯುವುದು ನನ್ನ ಹವ್ಯಾಸಗಳಲ್ಲೊಂದು.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಮೊಝಿಲ್ಲಾ ಫೈರ್ ಫಾಕ್ಸ್ ಮತ್ತು ಪ್ರಜಾವಾಣಿ ಈ ಪೇಪರ್.....
  • ಸಹಾಯ ಮಾಡಿ : ಕನ್ನಡದ ವೆಬ್ ಪೇಜ್ ಮಾಡಬೇಕಾಗಿದೆ.
  • ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
  • ನಾಡೋಜ ಎಂದರೆ.....
  • ಸವಾಲೊಂದು ನಿನ್ನ ಮ್ಯಾಲ...
  • ಇಂಗ್ಲಿ’ ಷ್ ’ ನಲ್ಲಿ ’ ಷ ’ ಕಾರ ಯಾಕೆ? ’ ಶ’ ಸಾಲದೇ?
  • ’ದ್ರಾವಿಡ’ ಶಬ್ದದ ಬದಲು ’ತೆನ್ನುಡಿ’ ಎನ್ನುವ ಶಬ್ದ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • raghava
    ಉ: ಅಕ್ಷರೋದಿ ಸೂತ್ರ
    May 17, 2008 - 12:10am
  • uniquesupri
    ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
    May 16, 2008 - 11:37pm
  • uniquesupri
    ಉ: ಒಂದು affair
    May 16, 2008 - 10:47pm
  • karihaida
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 7:51pm
  • ಸಂಗನಗೌಡ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 6:13pm
  • hpn
    ಉ: ಅಕ್ಷರೋದಿ ಸೂತ್ರ
    May 16, 2008 - 5:40pm
  • shreekant.mishrikoti
    ಉ: ’ಸಖೇದಾಶ್ಚರ್ಯ’ ಮತ್ತು ’ಸನೇಕ’
    May 16, 2008 - 4:50pm
  • vinayak.mdesai
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 4:47pm
  • anivaasi
    ಉ: ಕಲಿತರೆ ಹೀಗೆ...
    May 16, 2008 - 3:36pm
  • vinayudupa
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 3:32pm
ಇನ್ನಷ್ಟು

ಸನ್ಮಾನ ಮತ್ತು ಪುರಸ್ಕಾರಗಳು ನೀರ್ಗುಳ್ಳೆಯಂತೆ.

— ಜಾನ್ ಡ್ರೈಡನ್

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator