ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸುದ್ದಿ, ಸಮಾಚಾರ

ಮಾಧ್ಯಮದ ಮಿತ್ರರಿಗೊಂದು ಬಹಿರಂಗ ಪತ್ರ

July 6, 2007 - 11:41am — anmanjunath

>> ಮಾಧ್ಯಮಗಳ ಸನ್ಮಿತ್ರರಿಗೊಂದು ಸವಿನಯ ಮನವಿ.
>> ------------------------------------------------
>>
>> ಸತ್ಯಶೋಧನೆ, ಸಾರ್ವಜನಿಕ ಹಿತಾಸಕ್ತಿಗಳು ಪತ್ರಿಕೋದ್ಯಮದ - ಸಮೂಹ ಮಾಧ್ಯಮಗಳ
>> ಅಡಿಪಾಯಗಳಾಗಿದ್ದ ಕಾಲವೊಂದಿತ್ತು. ಅದು ಸತ್ಯಯುಗದ ಕಾಲ, ಇಂದಿನ ಕಲಿಯುಗಕ್ಕೆ
>> ಹೊಂದುವುದಿಲ್ಲ ಎಂಬ ಭಾವನೆ, ಮಾಧ್ಯಮಗಳ ಇಂದಿನ ಕೆಲವು ಮಿತ್ರರಿಗೆ ಇದ್ದಂತಿದೆ.
>> ಕನ್ನಡದ ಕೆಲವು ಸುದ್ದಿವಾಹಿನಿಗಳು, ಹಿಂದಿ / ಇಂಗ್ಲಿಷ್ ಭಾಷೆಗಳ ಕೆಲವು
>> ವಾಹಿನಿಗಳು,
>> ಒಂದೆರಡು ಪತ್ರಿಕೆಗಳು, ಭಯೋತ್ಪಾದಕರ ಕುಟುಂಬದವರಿಗೆ ಇದೀಗ ನೀಡುತ್ತಿರುವ
>> ಪ್ರಚಾರ
>> ಅಪಾಯಕಾರಿಯಾಗಿದೆ, ಸಾರ್ವಜನಿಕರ - ದೇಶದ ಹಿತಾಸಕ್ತಿಗೆ ವಿರುದ್ಧವಾಗಿದೆ.
>> ಬಂಧಿತ
>> ಆಪಾದಿತರ ತಾಯಿಯಾಗಲೀ, ಕುಟುಂಬದ ಉಳಿದ ಸದಸ್ಯರಾಗಲೀ, ಆಪಾದಿತರನ್ನು ಅಮಾಯಕರೆಂದೇ
>> ಪ್ರತಿಪಾದಿಸುತ್ತಾರೆ. ಅದರಲ್ಲಿ ಆಶ್ಚರ್ಯಪಡುವಂತಹುದೇನಿಲ್ಲ. ’ನಮ್ಮ ಮಗನಿಗೆ
>> ಭಯೋತ್ಪಾದಕರೊಂದಿಗೆ ಸಂಪರ್ಕವಿತ್ತು’ ಎಂದು ಯಾರು ತಾನೇ ಹೇಳಿಯಾರು ? ಬಿಡಿ.
>> ಪ್ರಶ್ನೆ ಅದಲ್ಲ. ಅವರಿಗೆ ಅಷ್ಟೊಂದು ಪ್ರಚಾರ ಏಕೆ ?
>>
>> ನಿಜವಾಗಲೂ ವಿಸ್ಮಯ, ವಿಚಿತ್ರ ಎನಿಸುವುದು. ಈ ಕಾರಣಕ್ಕೇ.
>>
>> ಜನಮಾನಸದ ಹೆಂಗರುಳು ಬೇಗ ಕರಗಿಹೋಗಿಬಿಡುತ್ತದೆ. ಯಾವುದೋ ಸುದ್ದಿಯ ತುಣುಕು,
>> ಇನ್ನಾವುದೋ ದೃಶ್ಯ - ಶ್ರವ್ಯ (ವೀಡಿಯೋ) ತುಣುಕು, ಸಾರ್ವಜನಿಕರ ಬಹುಕಾಲದ
>> ಮಾನಸಿಕತೆಯನ್ನೇ ಬದಲಿಸಿಬಿಡುತ್ತದೆ. ಭಯೋತ್ಪಾದಕರಿಂದ ತೊಂದರೆಗೀಡಾದ -
>> ಹತ್ಯೆಗೀಡಾದ
>> ಸಾರ್ವಜನಿಕರ - ಪೊಲೀಸರ ದುಃಖ - ದುಮ್ಮಾನಗಳನ್ನು ತಕ್ಷಣ ಮರೆತು, ಭಯೋತ್ಪಾದಕರ
>> ಮನೆಯವರ ಬಗೆಗೆ "ಅಯ್ಯೋ ಪಾಪ" ಎಂದುಬಿಡುತ್ತೇವೆ. ಇದು ಮಾಧ್ಯಮದ ಕೆಲವರ
>> "ಕೊಡುಗೆ".
>> ಅನಗತ್ಯ ವೃತ್ತಿ ಸಂಬಂಧಿತ ಸ್ಪರ್ಧೆ ಮತ್ತು ರೋಚಕತೆಗಳಿಗೆ ಶರಣಾಗುವುದರಿಂದಾಗುವ
>> ಅಪಾಯವಿದು.
>>
>> ನಕ್ಸಲೀಯರು ಶೇಷಪ್ಪಗೌಡ, ಕೆಸಮುಡಿ ವೆಂಕಟೇಶರನ್ನು, ಪೊಲೀಸರಿಗೆ ಮಾಹಿತಿ
>> ನೀಡಿದರೆಂಬ
>> ಕಾರಣಕ್ಕೆ ಅಮಾನುಷವಾಗಿ ಕೊಂದು ಹಾಕಿದರು. ಆ ಕುಟುಂಬಗಳ ಕಥೆಯೇನು ? ಗತಿಯೇನು ?
>> ನಕ್ಸಲ್‘ರನ್ನು ನಿಗ್ರಹಿಸಲು ಮೀಸಲಾಗಿ, ಊಟ - ತಿಂಡಿ- ವಿಶ್ರಾಂತಿ ಇಲ್ಲದೆ
>> ಕಾಡು-ಮೇಡು ಅಲೆಯುತ್ತಿರುವ ಪೊಲೀಸ್ ಪೇದೆಗಳ ಗತಿಯೇನು ? ವಿಚಿತ್ರವೆಂದರೆ
>> ಹಿಂಸೆಯನ್ನೇ ಅಸ್ತ್ರವನ್ನಾಗಿಟ್ಟುಕೊಂಡಿರುವ ನಕ್ಸಲ್ ಹುಡುಗ ಹುಡುಗಿಯರಿಗೆ, ಅವರ
>> ಸಾವಿಗೆ ಸಿಕ್ಕುವ ಪ್ರಚಾರ, ದುರದೃಷ್ಟದಿಂದ ನಕ್ಸಲ್‘ರಿಂದ ಹತ್ಯೆಗೀಡಾದ
>> ಪೊಲೀಸರ
>> ಕುಟುಂಬಗಳಿಗೆ - ಸಾರ್ವಜನಿಕರಿಗೆ ಸಿಕ್ಕುತ್ತಿಲ್ಲ.
>>
>> ಹಿಂದೆ ವೀರಪ್ಪನ್ ಪ್ರಕರಣದಲ್ಲೂ ಹೀಗೇ ಆಗಿತ್ತು. ನೂರಾರು ಜನ ಪೊಲೀಸರನ್ನು -
>> ಅಧಿಕಾರಿಗಳನ್ನು ಆತ ನಿರ್ದಯವಾಗಿ ಕೊಂದು ಹಾಕಿದ್ದ. ವೀರಪ್ಪನ್ ಅಂತಹವರಿಗೆ
>> ಕ್ಷಮೆಯೇ
>> ಇಲ್ಲ. ಆದರೆ, ವೀರಪ್ಪನ್ ಸಾವಿನ ನಂತರ, ಕೆಲವು ವಾಹಿನಿಗಳವರು, ಅವನ ಹೆಂಡತಿ
>> ಮುತ್ತುಲಕ್ಷ್ಮಿಗೆ ಅವಳ ನೋವಿಗೆ - ಅವಳ ಆರ್ಭಟಕ್ಕೆ ವಿಪರೀತ ಪ್ರಚಾರ ನೀಡಿದರು.
>> ಆವಳ
>> ಮಗುವಿನ ಭವಿಷ್ಯವೇನು ಎಂಬ ಕರುಣಾರ್ದ್ರ ಪ್ರಶ್ನೆಗಳನ್ನು ವೀಕ್ಷಕರಿಗೆ
>> ಹಾಕಲಾಯಿತು.
>>
>> ಹನೀಫ್ - ಸಬೀಲ್ ಸದ್ಯಕ್ಕೆ ಆಪಾದಿತರಿರಬಹುದು, ಅಪರಾಧಿಗಳೆಂದು ಇನ್ನೂ
>> ಸಾಧಿತವಾಗದೇ
>> ಇರಬಹುದು. ಅವರ ಕುಟುಂಬಗಳಿಗೆ ಸಿಕ್ಕುತ್ತಿರುವ ಪ್ರಚಾರ ಅನಾರೋಗ್ಯಕರ. ಸಂಸತ್ತಿನ
>> ಮೇಲೆ ದಾಳಿಮಾಡಿದ ಭಯೋತ್ಪಾದಕನಿಗೆ ಕ್ಷಮಾದಾನ ಸಿಕ್ಕಬೇಕೆಂದು ಕೆಲವರು ಪ್ರದರ್ಶನ
>> ಮಾಡಿದುದು ಸಹ ಈ ಸಾಲಿಗೇ ಸೇರುವಂತಹುದು. ಅವರಿಗೆ ದೊರೆತ ಅತಿಯಾದ ಪ್ರಚಾರವೂ
>> ಬೇಸರ
>> ತರಿಸುವಂತಹುದು. ಸಂಸತ್ತಿನ ಮೇಲಾದ ಆ ದಾಳಿಯಲ್ಲಿ ಮಡಿದ ರಕ್ಷಣಾ ಸಿಬ್ಬಂದಿಯ
>> ಮನೆಯವರಿಗೆ ಇನ್ನಷ್ಟು ನೋವು ತರುವುದು ಶೋಭೆ ತರುವುದಿಲ್ಲ. ನಮ್ಮನ್ನು
>> ಉಳಿಸಲುಹೋದವರು ಅವರು.
>>
>> ಮುಸ್ಲಿಮರಲ್ಲಿ ಪ್ರೊ|| ಮಮ್ತಾಜ್ ಅಲಿ ಖಾನ್ ಅಂತಹವರು, ಕನ್ನಡದ ಬಗ್ಗೆ ಹೋರಾಟ
>> ಮಾಡಿ
>> ಜನರ ಗೌರವ ಪಡೆದಂಥವರು. ಶಾಂತಿ, ಸೌಹಾರ್ದ, ಮಾನವಹಕ್ಕುಗಳು, ಸ್ವಾಭಿಮಾನ,
>> ಸಮಾನತೆಗಳಿಗಾಗಿ ತಮ್ಮ "ಕ್ರಶ್ (CRUSH)" ಪತ್ರಿಕೆಯ ಮೂಲಕ, ಅವರು
>> ಮೂಢನಂಬಿಕೆಗಳ
>> ವಿರುದ್ಧ, ಶೋಷಣೆ - ಅತ್ಯಾಚಾರ - ಅನ್ಯಾಯಗಳ ವಿರುದ್ಧ ದನಿ ಎತ್ತುತ್ತಿದ್ದಾರೆ.
>> ಎಂತಹ
>> ವಿರೋಧಾಭಾಸ. ಪ್ರೊ|| ಮಮ್ತಾಜ್ ಅಲಿ ಖಾನ್ ಅವರಿಗಿಂತ, ಪ್ರಗತಿಪರ
>> ಮುಸ್ಲಿಮರಿಗಿಂತ
>> ಭಯೋತ್ಪಾದಕ ಮುಸ್ಲಿಮರ ಮನೆಯವರು ಪ್ರಚಾರ ಗಳಿಸುತ್ತಾರೆ.
>>
>> ಪ್ರೀತಿಯ ಪತ್ರಕರ್ತ ಮಿತ್ರರೇ, ಪ್ಲೀಸ್ ಪ್ಲೀಸ್, ನಿಮ್ಮ ಕೆಲಸ ಸಮಾಜಕ್ಕೆ
>> ಮಾರಕವಾಗದಿರಲಿ.
>>
>>
>> ಮಂಜುನಾಥ ಅಜ್ಜಂಪುರ, ಬೆಂಗಳೂರು.

‹ ಕನ್ನಡ ನಿಘಂಟು ನಮ್ಮನೆ ಮಗುವಿಗೆ ತಿನ್ನಲು ಆಸ್ಟ್ರೇಲಿಯಾದ ಆಹಾರವೇ ಬೇಕೇ?! ›
  • ಸುದ್ದಿ, ಸಮಾಚಾರ
~.~
  • Login or register to post comments
  • 382 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
July 8, 2007 - 1:29am — radha.kh

ಉ: ಮಾಧ್ಯಮದ ಮಿತ್ರರಿಗೊಂದು ಬಹಿರಂಗ ಪತ್ರ

radha.kh's picture

ಸರಿಯಾಗಿ ಹೇಳಿದ್ದೀರಿ ಮಂಜುನಾಥರವರೇ. ಯಾವುದಕ್ಕೆ ಪ್ರಚಾರ ನೀಡಬೇಕು ಮತ್ತು ಹೇಗೆ ನೀಡಬೇಕು ಎಂಬುದನ್ನು ನಮ್ಮ ಪೇಪರ್‌ನೋರು ಹಾಗೂ ಟಿ.ವಿ.ಯವರು ಕಲಿಯಬೇಕು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
July 8, 2007 - 11:58am — muralihr

ಉ: ಮಾಧ್ಯಮದ ಮಿತ್ರರಿಗೊಂದು ಬಹಿರಂಗ ಪತ್ರ

muralihr's picture

ಜನ ಬಯಸೋದು ಅಷ್ಟೇ ! Thrill ಇರಬೇಕು .. Sensation ಇರಬೇಕು ಅ೦ತಾ ತಾನೇ ??

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಟಿವಿ-೯ ಕಳ್ಳತನದ ಉಪಾಯ
  • ಪತ್ರಿಕೆಗಳಿಗೆ ದುರ್ದೆಸೆ ಬಂದಿದೆಯೇ?
  • ೨೦೦೮ ರ ವಿಧಾನಸಭಾ ಚುಣಾವಣೆ - ರಾಜಕೀಯ ಪಕ್ಷಗಳಿಂದ ಕನ್ನಡಿಗರ ಅಪೇಕ್ಷೆ
  • ಟಿವಿ-೯ ಹಿದ್ದೆನ್ ಉಪಾಯ
  • ವೊಡಾಫೋನ್‌ನ ಈ ಜಾಹೀರಾತಿನ ಅರ್ಥವೇನು?
Syndicate content

ಲೇಖಕರು

anmanjunath's picture

ಪೂರ್ಣ ಹೆಸರು
Manjunatha Ajjampura

ಪರಿಚಯ

I am a Kannada writer, columnist. I am a retired Bank Manager. I am interested in music (Hindustani Classical)

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
  • ಅಬ್ಬಿ, ಅರ್ಬಿ
  • ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
  • ಕನ್ನಡದಲ್ಲಿ ಓಸಿಆರ್‍ ಇದೆಯೇ?
  • ಪೊಳೆ, ಪೊೞೆ, ಹೊಳೆ, ಹೊೞೆ
  • ವಿಶ್ವಾಸ ಮತ ಮತ್ತು ವಿಶ್ವಾಸಘಾತ
  • ಸ್ತ್ರೀಸೌಂದರ್ಯ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 2:33pm
  • ಶ್ರೀನಿವಾಸ ವೀ. ಬ೦ಗೋಡಿ
    ಉ: ನಾನಿರುವುದೆ ನಿಮಗಾಗಿ :REMIX
    July 25, 2008 - 2:22pm
  • kannadakanda
    ಉ: ಮುಡುಕುತೊರೆ - ಒಂದು ಬರಹ
    July 25, 2008 - 2:22pm
  • ಸಂಗನಗೌಡ
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 25, 2008 - 2:19pm
  • ಸಂಗನಗೌಡ
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 25, 2008 - 2:17pm
  • kannadakanda
    ಉ: ಅಬ್ಬಿ, ಅರ್ಬಿ
    July 25, 2008 - 2:09pm
  • ASHMYA
    ಉ: ಅವಳು ಕಥೆಯಾಗಿಯೇ ಉಳಿದಳು!
    July 25, 2008 - 2:08pm
  • savithru
    ಉ: ಅಬ್ಬಿ, ಅರ್ಬಿ
    July 25, 2008 - 1:46pm
  • mahesha
    ಉ: ಅಬ್ಬಿ, ಅರ್ಬಿ
    July 25, 2008 - 1:06pm
  • mahesha
    ಉ: ಕೊಲ್ಲೆ ನಂನಂನೇ - ಅಪ್ಪಟ ಕನ್ನಡ ಅಪ್ಪಟ ಸವಿಗಂಪಿನ ಇಂಪು
    July 25, 2008 - 12:32pm
ಇನ್ನಷ್ಟು


ಅಖಂಡ ಕರ್ನಾಟಕ:
ಅಲ್ತೊ ನಮ್ಮ ಬೂಟಾಟದ ರಾಜಕೀಯ ನಾಟಕ!

ಇಂದು ಬಂದು ನಾಳೆ ಸಂದು
ಹೋಹ ಸಚಿವ ಮಂಡಲ
ರಚಿಸುವುದು ಕೃತಕವಲ್ತೊ
ಸಿರಿಗನ್ನಡ ಸರಸ್ವತಿಯ
ವಜ್ರ ಕರ್ಣಕುಂಡಲ!

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator