ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚಿತ್ರ ಪುಟಗಳು › misc (Uncategorized) pictures

ಹೊಳಲ್ಕೆರೆಯ ತೂಗುತಲೆ ಗಣೇಶ- ದೇವಸ್ಥಾನ ಕಟ್ಟುವ ಮೊದಲು !

March 28, 2007 - 10:14am — venkatesh
ಹೊಳಲ್ಕೆರೆಯ  ತೂಗುತಲೆ   ಗಣೇಶ-  ದೇವಸ್ಥಾನ   ಕಟ್ಟುವ   ಮೊದಲು  !

"ಹೊಳಲ್ಕೆರೆ ತೂಗ್ತಲೆ ಗಣೇಶ" ನ ಚಿತ್ರ ಮನದಲ್ಲಿ ಮೂಡುತ್ತಿದ್ದಂತೆಯೇ, ಚಿತ್ರದುರ್ಗದ ಕಾಮಗೇತಿ ವಂಶದ ಪಾಳೆಯಗಾರರು ನಮ್ಮ ಮನಸ್ಸಿನಲ್ಲಿ ಹೊರಹೊಮ್ಮುತ್ತಾರೆ. ಅವರು ಹೊಳಲ್ಕೆರೆಯಲ್ಲಿ ತಮ್ಮ ಅಧಿಪತ್ಯ ಸ್ಥಾಪಿಸಿದ ದಿನಗಳಲ್ಲಿ ಇದನ್ನು ಕಟ್ಟಿಸಿ ಕೃತಾರ್ಥರಾಗಿರಬಹುದು. ಎಲ್ಲಾ ಪಾಳೆಯಗಾರರೂ ದೈವಭಕ್ತರಾಗಿದ್ದರು. ಪ್ರಜೆಗಳ ಹಿತಾಸಕ್ತಿಯಬಗ್ಗೆ ತುಂಬಾ ಕಾಳಜಿ ವಹಿಸುತ್ತಿದ್ದರು. ಎಲ್ಲಕ್ಕಿಂತ ಹೆಚ್ಚಾಗಿ ಅವರೆಲ್ಲಾ ಗಂಡುಗಲಿಗಳು. ಆ ಸಂತತಿಯಲ್ಲಿ ಬಂದ ಹಲವಾರು ಮದಕರಿನಾಯಕರುಗಳ ಹೆಸರುಗಳು ಇದನ್ನು ಖಚಿತಪಡಿಸುತ್ತವೆ.

ಮೇಲಿನ ಚಿತ್ರ , ನಮ್ಮ ಮನೆಯ ಫೋಟೊ ಆಲ್ಬಮ್ ನಿಂದ ಪ್ರಸ್ತುತ ಪಡಿಸಿದ್ದು. ಆಗಿನ ದಿನಗಳಲ್ಲಿ ಗಣೇಶ ಬಟ್ಟ ಬಯಲಿನಲ್ಲಿ ಸರ್ವರಿಗೂ ದರ್ಶನಕೊಟ್ಟು ನಮ್ಮ ಮನೋಕಾಮನೆಗಳನ್ನು ಈಡೇರಿಸುವ ದೇವನಾಗಿದ್ದ. ಈಗಲೂ ಮತ್ತು ಮುಂದಿನ ಅನಂತಾನಂತ ವರ್ಷಗಳಲ್ಲೂ ಅವನ ಕೃಪಾದೃಷ್ಟಿ ನಮ್ಮೆಲ್ಲರ ಮೇಲೆ ಇರುವುದರಲ್ಲಿ ಸಂಶಯವಿಲ್ಲ. ಗಣೇಶನಿಗೆ ಉದ್ದವಾದ ಜಡೆಯಿದೆ. ಅದಕ್ಕೆ ಭಕ್ತಾದಿಗಳು ಬೆಣ್ಣೆಹಚ್ಚಿ, ಪ್ರಸಾದವನ್ನು ತಲೆಗೆ ಹಚ್ಚಿಕೊಳ್ಳುತ್ತಾರೆ. ಡಾ. ಬಾತ್ರ ರವರ ಭಾರಿಬಿಲ್ಲು ತೆತ್ತು ಬುದ್ಧಿಕಲಿತವರಿಗೆ, ಗಣೇಶನ ಸನ್ನಿಧಿ ಮನಸ್ಸಿಗೆ ಮುದನೀಡುತ್ತದೆ. ನಂಬಿಕೆ, ಭಕ್ತಿ, ಶ್ರದ್ಧೆ ಎಲ್ಲಾ ಒಳಿತಿಗೂ ಮೂಲ ಮಂತ್ರ. ಪ್ರಯತ್ನಿಸಬಹುದು. ಆ ಮಂಗಳಮೂರ್ತಿ ಗಣರಾಯನ ಅನುಗ್ರಹ ನಿಮ್ಮ ಮೇಲೆ ಇರಲಿ.

ಈಗ ಸುಮಾರು ೧೦ ವರ್ಷಗಳಿಂದೀಚೆಗೆ ಭಕ್ತರ ಮನೋಕಾಮನೆಯ ಮೇರೆಗೆ ಒಂದು ಗುಡಿಯನ್ನು ಕಟ್ಟಿದ್ದಾರೆ. ಇದಕ್ಕೆ ಬೀಗ ಇರುವುದಿಲ್ಲ. ದಿನವಿಡೀ ಅರ್ಚಕರು ಅಲ್ಲಿರುತ್ತಾರೆ. ಭಕ್ತರಿಗೆ ಹಣ್ಣು ಕಾಯಿ ಮಾಡಿಸಲು ಅನುವುಮಾಡಿಕೊಡುತ್ತಾರೆ.

ಪೌಳಿ ನಾಲ್ಕುಕಡೆಗೂ ಇದ್ದು, ಅಲ್ಲಿ ಪಕ್ಕದಲ್ಲೇ ಹಾಕಿರುವ ಕಲ್ಲು ಮಂಚಗಳ ಮೇಲೆ ಹುಣಸೇಮರದ ತಂಪು ಛಾಯೆಯಡಿಯಲ್ಲಿ ಬಂದವರು ದಣಿವಾರಿಸಿಕೊಳ್ಳಬಹುದು. ಈಗ ಭಕ್ತಾದಿಗಳಿಗಾಗಿ ಗಣಪತಿ ದೇವರ ಸನ್ನಿಧಾನದಲ್ಲಿ ಮದುವೆ ಮಾಡಲು ಒಂದು ಛತ್ರವನ್ನೂ ಕಟ್ಟಿಸುತ್ತಿದ್ದಾರೆ. ಅದು ಇನ್ನೇನು ಮುಕ್ತಾಯದ ಹಂತದಲ್ಲಿದೆ.

ಈಗ ನಮ್ಮ ಕಾಲದ ಬಯಲು ಗಣಪತಿ ಹೋಗಿ, ಗಣಪತಿ ದೇಗುಲ ಎಲ್ಲರನ್ನೂ ಆಕರ್ಶಿಸುತ್ತಿದೆ. ಬನ್ನಿ, ಗಣೇಶನ ಅನುಗ್ರಹಕ್ಕೆ ಪಾತ್ರರಾಗಿ. ನಿಮಗೆ ಮಂಗಳವಾಗಲಿ. ನಮ್ಮೆಲ್ಲರ, ನಿಮ್ಮೆಲ್ಲರ ಇಷ್ಟ ಕಾಮನೆಗಳು ನೆರವೇರಲಿ.

  • misc (Uncategorized) pictures
~.~
  • Login or register to post comments
  • 547 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Thumbnail
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 22, 2007 - 2:00pm — veena

ಉ: ಹೊಳಲ್ಕೆರೆಯ ತೂಗುತಲೆ ಗಣೇಶ- ದೇವಸ್ಥಾನ ಕಟ್ಟುವ ಮೊದಲು !

veena's picture

veena.

ಧನ್ಯವಾದಗಳು ವೆಂಕಟೇಶ್ ಅವರೆ, ಫೋಟೋ ನೋಡಿ ನನ್ನ ಬಾಲ್ಯದ ದಿನಗಳು ನೆನಪಿಗೆ ಬಂದವು.
ಈಗ್ಗೆ ಇಪ್ಪತ್ತು ವರ್ಷಗಳ ಕೆಳಗೆ ನಾವು ಪ್ರತಿ ಭಾನುವಾರ ಅಲ್ಲಿಗೆ ಹೋಗಿ ಪಕ್ಕದ ತೋಟದಲ್ಲಿ ಆಟವಾಡುತಿದ್ದುದು ನೆನಪಿಗೆ ಬಂದಿತು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
May 22, 2007 - 3:50pm — veena

ಉ: ಹೊಳಲ್ಕೆರೆಯ ತೂಗುತಲೆ ಗಣೇಶ- ದೇವಸ್ಥಾನ ಕಟ್ಟುವ ಮೊದಲು !

veena's picture

veena.

ಅಷ್ಟೆ ಅಲ್ಲ, ಈ ಗಣಪತಿಯ ಇನ್ನೊಂದು ವಿಶೇಷವೆಂದರೆ ಇದಕ್ಕೆ ಉದ್ದನೆಯ ಜಡೆ ಇದೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
May 22, 2007 - 8:02pm — venkatesh

ಉ: ಹೊಳಲ್ಕೆರೆಯ ತೂಗುತಲೆ ಗಣೇಶ- ದೇವಸ್ಥಾನ ಕಟ್ಟುವ ಮೊದಲು !

venkatesh's picture

ಹೌದು. ಅದನ್ನು ಇಲ್ಲಿ ಸೇರಿಸಿದ್ದೇನೆ. ನೆನಪಿಸಿದ್ದಕ್ಕೆ ಧನ್ಯವಾದಗಳು ; ವೀಣಾ ರವರೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ತೂಗ್ತಲೆ ಗಣಪತಿ ದೇವಸ್ಥಾನ, ಹೊಳಲ್ಕೆರೆ.
  • ಗಣಪತಿ
  • ಗಣಪತಿ ವಿಸರ್ಜನೆ ನಾಳೆ !
  • ಮುಂಬೈನ ಪ್ರಭಾದೇವಿಯಲ್ಲಿರುವ [ವರ್ಲಿ] ಶ್ರೀ ಸಿದ್ಧಿವಿನಾಯಕನ ಮಂದಿರ
  • ಆಫ್ರಿಕಾದಲ್ಲಿ ಗಣೇಶ
Syndicate content

ಲೇಖಕರು

venkatesh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

'ಸಂಪದ'ದ ಚಿತ್ರ ಪುಟಗಳಿಂದ

ಅವಿನಾಶ್

ಇತ್ತೀಚಿನ ಪ್ರತಿಕ್ರಿಯೆಗಳು

  • spruhi
    ಉ: ಏಳಿ ಎದ್ದೇಳಿ ಟ್ರೆಕಿಂಗ್ ಮಾಡಲು ಸಿದ್ಧರಾಗಿ
    July 24, 2008 - 6:41pm
  • madhava_hs
    ಉ: ಕುಮಾರವ್ಯಾಸ ಭಾರತ
    July 24, 2008 - 6:41pm
  • mahesha
    ಉ: ಸ್ತ್ರೀಸೌಂದರ್ಯ
    July 24, 2008 - 6:04pm
  • roshan_netla
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:38pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:28pm
  • vikashegde
    ಉ: ನೂರು ವರ್ಷ ಕವನಗಳನ್ನು ಬ್ಯಾನ್ ಮಾಡ
    July 24, 2008 - 5:27pm
  • uniquesupri
    ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು
    July 24, 2008 - 5:23pm
  • srinivasps
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:13pm
  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:06pm
  • keerthi2kiran
    ಉ: ನವ್ಯ, ನವೋದಯ, ಬಂಡಾಯ.....
    July 24, 2008 - 5:05pm
ಇನ್ನಷ್ಟು


ಗುರುವಿನ ವಿಸ್ತರದ | ಪರಿಯ ನಾನೇನೆಂಬೆ
ಮೆರೆವ ಬ್ರಹ್ಮಾಂಡದೊಳಹೊರಗನವ ಬೆಳಗಿ |
ಪರಿಪೂರ್ಣನಿಪ್ಪ ಸರ್ವಜ್ಞ ||

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator