ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಝೆನ್ ಕತೆಗಳು - ಓ ಎಲ್ ಎನ್ ಸ್ವಾಮಿ

ಝೆನ್ ೧: ನಗುವ ಬುದ್ಧ

August 4, 2005 - 10:59am — olnswamy

ಝೆನ್ ೧

ದೊಡ್ಡ ಗಂಟನ್ನು ಹೊತ್ತಿರುವ, ದಪ್ಪ ಹೊಟ್ಟೆಯ, ನಗುಮುಖದ, ಕುಳ್ಳ ದೇಹದ ವ್ಯಕ್ತಿಯೊಬ್ಬನ ಬೊಂಬೆಯನ್ನು ನೀವು ನೋಡಿರಬಹುದು. ಕೆಲವೊಮ್ಮೆ ಎರಡೂ ಕೈ ಎತ್ತಿ ಜೋರಾಗಿ ನಗುತ್ತಿರುವ ಬೊಂಬೆಯ ರೂಪದಲ್ಲೂ ಇದು ಎಲ್ಲ ಕಡೆ ಕಾಣಿಸುತ್ತದೆ. ಚೀನಾದ ವ್ಯಾಪಾರಿಗಳು ಇವನನ್ನು ನಗುವ ಬುದ್ಧ ಅನ್ನುತ್ತಾರೆ.
ಈತ ಹೋಟಿ. ಇವನು ಬದುಕಿದ್ದು ತಾಂಗ್ ವಂಶಸ್ಥರ ಆಳ್ವಿಕೆಯ ಕಾಲದಲ್ಲಿ. ಅವನಿಗೆ ತಾನು ಝೆನ್ ಗುರು ಎಂದು ಹೇಳಿಕೊಳ್ಳುವ ಆಸೆ ಇರಲಿಲ್ಲ. ಶಿಷ್ಯರನ್ನು ಗುಂಪುಗೂಡಿಸಿಕೊಳ್ಳುವ ಹಂಬಲವಿರಲಿಲ್ಲ.
ಹೆಗಲ ಮೇಲೆ ಸದಾ ಬಟ್ಟೆಯ ಗಂಟೊಂದನ್ನು ಹೊತ್ತು ಬೀದಿಗಳಲ್ಲಿ ನಡೆಯುತ್ತಿದ್ದ. ಅದರಲ್ಲಿ ಮಿಠಾಯಿ, ಹಣ್ಣು, ಇಂಥ ತಿನಿಸು ತುಂಬಿರುತ್ತಿದ್ದವು. ಬೀದಿಮಕ್ಕಳಿಗೆ ಅವನ್ನು ಹಂಚುತ್ತ ಅವರೊಡನೆ ಆಡುತ್ತಾ ಕಾಲ ಕಳೆಯುತ್ತಿದ್ದ. ಬೀದಿ ಬೀದಿಗಳಲ್ಲಿ ಅವನ “ಶಿಶುವಿಹಾರ”ಗಳಿದ್ದವು.
ಝೆನ್ ಪಂಥದ ಅನುಯಾಯಿಗಳು ಯಾರಾದರೂ ಕಂಡರೆ ಕೈ ಚಾಚಿ “ಒಂದು ಕಾಸು ಕೊಡಿ” ಎಂದು ಎಗ್ಗಿಲ್ಲದೆ ಕೇಳುತ್ತಿದ್ದ. “ದೇವಸ್ಥಾನಕ್ಕೆ ಬಂದು ಮಕ್ಕಳಿಗೆ ಪಾಠ ಹೇಳು” ಎಂದು ಯಾರಾದರೂ ಅಂದರೆ, ಮತ್ತಿನ್ನೊಮ್ಮೆ ಕೈ ಚಾಚಿ “ಕಾಸು ಕೊಡಿ” ಅನ್ನುತ್ತಿದ್ದ.
ಹೀಗೇ ಒಂದು ದಿನ ತನ್ನ ಆಟದ ಕಾಯಕದಲ್ಲಿ ಅವನು ತೊಡಗಿರುವಾಗ ಇನ್ನೊಬ್ಬ ಝೆನ್ ಗುರು ಅಲ್ಲಿಗೆ ಬಂದ. “ಝೆನ್‌ನ ಮಹತ್ವವೇನು?” ಎಂದು ಹೋಟಿಯನ್ನು ಕೇಳಿದ.
ಹೋಟಿ ತಟ್ಟನೆ ತನ್ನ ಹೆಗಲಮೇಲಿದ್ದ ಗಂಟನ್ನು ಕೆಳಕ್ಕಿಳಿಸಿ ಮೌನವಾಗಿ ನಿಂತ. ಅದೇ ಅವನ ಉತ್ತರ.
“ಝೆನ್ ಸಾಕ್ಷಾತ್ಕಾರವಾಗಿರುವುದರ ಕುರುಹೇನು?” ಎಂದು ಆ ಗುರು ಮತ್ತೆ ಕೇಳಿದ.
ಹೋಟಿ ನಗುನಗುತ್ತಲೇ ಗಂಟನ್ನು ಮತ್ತೆ ಭುಜದ ಮೇಲೆ ಏರಿಸಿಕೊಂಡು ಮುಂದೆ ನಡೆದ.

‹ ಝೆನ್ ಕತೆಗಳು ೧೨: ಆರಿಹೋದ ದೀಪಮೇಲಿನ ಪುಟಕ್ಕೆಝೆನ್ ೧೦ : ಇನ್ನೂ ಮೂರು ದಿನ ›
  • ಕಥಾ ಮಾಲಿಕೆ
  • ಝೆನ್ ಕಥೆಗಳು (ಕಥಾ ಮಾಲಿಕೆ)
~.~
  • Printer-friendly version
  • Login or register to post comments
  • 1447 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 4, 2005 - 9:44pm — chitta

ಒಳ್ಳೆಯ

chitta's picture

ಒಳ್ಳೆಯ ಕಥಾಮಾಲಿಕೆ. ಈ laughing buddha ಎಂದು ಈತನಿಗೆ ಹೇಳುವುದು ಎಂದು ಇವತ್ತೇ ತಿಳಿದಿದ್ದು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
August 4, 2005 - 10:37pm — tvsrinivas41

ಗೊಂಬೆ

tvsrinivas41's picture

ನಮ್ಮ ಮನೆಯಲ್ಲಿ ನವರಾತ್ರಿಯಲ್ಲಿ ಗೊಂಬೆಗಳನ್ನು ಕೂಡಿಸುವಾಗ ಒಂದು ಜೊತೆ ಶೆಟ್ಟಿ ದಂಪತಿಗಳ ಗೊಂಬೆಗಳನ್ನೂ ಕೂಡಿಸುವರು. ಅದರಂತೆಯೇ ಈ ಗೊಂಬೆ ಕೂಡಾ ಅಂತ ತಿಳಿದಿದ್ದೆ. ಈ ವಿಷಯ ಗೊತ್ತಿರಲಿಲ್ಲ. ಒಳ್ಳೆಯ ಕಥಾಮಾಲಿಕೆ ಪ್ರಾರಂಭಿಸಿದ್ದೀರ. ಒಳ್ಳೆಯ ನಿರೂಪಣೆ. ಇಂತಹ ಕೃತಿಗಳಿಂದ ನಮ್ಮ ಸಂಪದ ಬಹಳ ಬೇಗ ವಿಶ್ವ ಪ್ರಸಿದ್ಧ ಆಗುವುದರಲ್ಲಿ ಅನುಮಾನವೇ ಇಲ್ಲ.

ತವಿಶ್ರೀನಿವಾಸ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
September 22, 2007 - 4:28pm — lkanil

ಉ: ಝೆನ್ ೧: ನಗುವ ಬುದ್ಧ

lkanil's picture

ಝೆನ್ ಕತೆ ಎಂದರೆ ಏನೂ ಅರ್ಥವಾಗದಿದ್ದರೂ ಅರ್ಥವಾದಂತೆ, ಅರ್ಥವಾದರೂ ಅರ್ಥವಾಗದಂತೆ ತೋರಿಸಿಕೊಳ್ಳುವುದೇನೋ ಅಲ್ಲವೆ?

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಝೆನ್ ಕತೆ: ೨೨: ಅಮೂಲ್ಯ
  • ಝೆನ್: ೩: ಒಂದು ಹನಿ
  • ಝೆನ್ ಕತೆ: ೨೪: ಸಾಯುವ ಸಮಯ
  • ಝೆನ್ ಕತೆ ೧೪ ಪ್ರತಿ ಕ್ಷಣ ಝೆನ್
  • ಝೆನ್ ಕತೆ: ೧೮ ನಿಜದ ಹಾದಿ
Syndicate content

ಲೇಖಕರು

olnswamy's picture

ಪರಿಚಯ

ಅಧ್ಯಾಪಕ, ಸಾಹಿತ್ಯ ವಿದ್ಯಾರ್ಥಿ, ಓದುಗ, ಲೇಖಕ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಗಿರಿಜನರ ನಾಡು ಕೋರಾಪುಟ್
  • ಹೀಗೇ ಎಂದು ಬರಿ
  • ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
  • ಇಹದ ಬದುಕಿನ ಪಯಣ ಮುಗಿಸಿದ ಜಿಟಿಎನ್
  • ಹರತಾಳಗಳ 'ತಾಳ'ಕ್ಕೆ ಕುಣಿಯುತ್ತಿರುವ ಕೇರಳ!
  • ವಿಧ್ಯಾಭ್ಯಾಸ ಮತ್ತು ಕಾಲೇಜು
  • ದಾಸವಾಳಕ್ಕೆ ಇರುವೆಗಳ ದಾಳಿ: ಕತ್ತರಿಸಿದ ಬುಲ್-ಬುಲ್ ಕರುಳ ಬಳ್ಳಿ

ಇತ್ತೀಚಿನ ಪ್ರತಿಕ್ರಿಯೆಗಳು

  • cmariejoseph
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 7:09am
  • rameshbalaganchi
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 5:52am
  • ಕೇವೆಂ
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 1:42am
  • ahankari
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 12:58am
  • sushil
    ಉ: ನಿರಕ್ಷರಿ ಕವಿಯ ಅಕ್ಷರಗಾಥೆ
    July 5, 2008 - 12:48am
  • hpn
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 4, 2008 - 10:56pm
  • muralihr
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 4, 2008 - 10:34pm
  • Jayalaxmi.Patil
    ಉ: ರಾತ್ರಿ ರಾಣಿ ಜತೆ ಕೆಲ ನಿಮಿಷ..
    July 4, 2008 - 9:58pm
  • Narayana
    ಉ: ನಿಮಗೆ ಕನ್ನಡ ಬರುತ್ತಾ?
    July 4, 2008 - 9:35pm
  • Narayana
    ಉ: ನಿಮಗೆ ಕನ್ನಡ ಬರುತ್ತಾ?
    July 4, 2008 - 9:31pm
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 23 ಅತಿಥಿಗಳು ಆನ್ಲೈನ್ ಇರುವರು.


ಎಲ್ಲ ಬಲ್ಲವರಿಲ್ಲ | ಬಲ್ಲವರು ಬಹಳಿಲ್ಲ
ಬಲ್ಲಿದರು ಇದ್ದು ಬಲವಿಲ್ಲ ಸಾಹಿತ್ಯ |
ವೆಲ್ಲವರಿಗಿಲ್ಲ ಸರ್ವಜ್ಞ |

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator