ಯಾರಾದರೂ ಸಮುದ್ರದಲ್ಲಿ ಇಳಿಯ ಬಯಸಿದರೆ 'ದೋಣಿ ತೆಗೆದುಕೊಂಡು ಹೋಗು' ಎನ್ನುವೆವು. ಇದೇ ಕರ್ಮ ಯೋಗ. ದಂಡೆಯ ಮೇಲೆ ನಿಂತು ನೋಡುವುದು ಸನ್ಯಾಸ. ಇವೆರಡರ ಆನಂದವೂ ಒಂದೇ. ಎರಡರಲ್ಲಿಯೂ ಮನುಷ್ಯ ಮುಳುಗುವುದಿಲ್ಲ. ಸಾಕ್ಷಿಯಂತೆ ಸಮುದ್ರವನ್ನು ನೋಡುತ್ತಾನೆ, ಇದರಲ್ಲೇ ಇರುವುದು ಆನಂದ

— ವಿನೋಬಾ ಭಾವೆ

ಸಂಪದ ಆರ್ಕೈವಿನಿಂದ

ಹಿತೋಪದೇಶ, ಸುಹೃದ್ಭೇದ

ಸಿಂಹಕ್ಕೆ ಮೃಗಗಳು ಅಭಿಷೇಕವನ್ನಾಗಲೀ ಸಂಸ್ಕಾರವನ್ನಾಗಲೀ ಮಾಡುವುದಿಲ್ಲ. ತನ್ನ ಪರಾಕ್ರಮದಿಂದ ತಾನೇ ಸಂಪಾದಿಸಿಕೊಂಡ ಸಂಪತ್ತುಳ್ಳ ಅದಕ್ಕೆ ಮೃಗರಾಜಪದವಿ ತಾನಾಗಿಯೇ ಬರುತ್ತದೆ.

— ಹಿತೋಪದೇಶ, ಸುಹೃದ್ಭೇದ