Abhaya Simha (ಬ್ಲಾಗ್ ಬರಹಗಳು)
ಕನ್ನಡ ವಾಹಿನಿಯೇ ಕಣ್ಣೀರವಾಹಿನಿಯೇ?
March 30, 2007 - 11:23am — Abhaya Simhaಸೀರಿಯಲ್ಗಳ ಟಿ.ಆರ್.ಪಿ ಹೆಚ್ಚುತ್ತಲೇ ಇದೆ. ಅದರಲ್ಲಿ ಅತ್ತೆ ಸೊಸೆ ಪರಸ್ಪರ ಜುಟ್ಟು ಹಿಡಿದು ಜಗಳವಾಡುತ್ತಲೇ ಇದ್ದಾರೆ. ಮಾತು ಮಾತಿಗೆ ದೇವರ ಕೋಣೆಗೆ ಹೋಗಿ ದೀವಾರ್ ಸಿನೆಮಾದಂತೆ ದೇವರನ್ನು ಬ್ಲಾಕ್ ಮೈಲ್ ಮಾಡಿ ತಮ್ಮ ಕೆಲಸ ಗಿಟ್ಟಿಸುತ್ತಲೇ ಇದ್ದಾರೆ. ದಿನ ದಿನ ಕಡುವಾ ಚೌತ್ ಮಾಡಿ ತಮ್ಮ ಗಂಡಂದಿರ ಆಯುಷ್ಯ ಹೆಚ್ಚಿಸುತ್ತಲೇ ಇದ್ದಾರೆ. ನಮ್ಮ ಕಾಲೇಜು ಹುಡುಗ ಹುಡುಗಿಯರು ಈ ಸೀರಿಯಲ್ಗಳನ್ನು ಬೈಯ್ಯುತ್ತಲೇ ಕದ್ದು ಮುಚ್ಚಿ ತಮ್ಮ ಪ್ರೇಮಿಗಳಿಗಾಗಿ ಉಪವಾಸ ಮಾಡುವುದು, ಕಡುವಾ ಚೌತ್ (ನಂಬಿದರೆ ನಂಬಿ ಬಿಟ್ಟರೆ ಬಿಡಿ... ಆದರೆ ಇದು ನಿಜ!) ನಡೆಸುತ್ತಿದ್ದಾರೆ! ಕನ್ನಡದ ಉತ್ತಮ ನಿರ್ದೇಶಕರೊಬ್ಬರ ಮನೆಗೆ ನಾನು ಹೋಗಿದ್ದ ಸಂದರ್ಭದಲ್ಲಿ ಉತ್ತಮ ಕಲಾವಿದೆಯಾಗಿರುವ ಅವರ ಹೆಂಡತಿಯೂ ಸಹ ಇಂಥದ್ದೇ ಸೀರಿಯಲ್ ನೋಡಿಕೊಂಡು ಕುಳಿತಿದ್ದದ್ದು ಕಂಡು ನಾನು ಎರಡು ವರ್ಷ ಹಿಂದೆ ಆಶ್ಚರ್ಯ ಪಟ್ಟಿದ್ದೆ. ವರ್ಷ ಉರುಳುತ್ತಾ ಸಾಗಿದೆ. ಸೀರಿಯಲ್ಗಳ ಎಪಿಸೋಡ್ ಸಂಖ್ಯೆ ಉರುಳಿದಂತೆ. ನಾವಿನ್ನೂ ಇದರಿಂದ ಮೇಲೆದ್ದಿಲ್ಲ. ಮುಂದೆ ಓದಿ »

ಹೊತ್ತು ಮೂಡುವ ಸಮಯದಲ್ಲಿ ಗೊತ್ತು ಮೂಡಿದ ಕಥೆ
March 24, 2007 - 3:40pm — Abhaya Simhaಹೊತ್ತು ಮೂಡುವ ಸಮಯ
ಅರಳಿತೆರಡು ಹೂಗಳು
ಒಂದು ಕೆಂಪು ಒಂದು ಹಳದಿ ಮುಂದೆ ಓದಿ »

- Abhaya Simha ರವರ ಬ್ಲಾಗ್
- Login or register to post comments
- 612 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ
ಸಕಾಲದಲ್ಲಿ ಮುಂಗಾರು ಮಳೆ
March 21, 2007 - 8:06am — Abhaya Simhaಅಷ್ಟು ಚೆನ್ನಾಗಿದೆ ಇಷ್ಟು ಚೆನ್ನಾಗಿದೆ ಎಂದೆಲ್ಲಾ ಕೇಳಿ ಕೇಳಿ ಸಾಕಾಗಿ ಇನ್ನು ನೋಡದೇ ಕಳೀದು ಎಂದಂದುಕೊಂಡು ಇಂದು ನಾನು ಮುಂಗಾರು ಮಳೆ ನೋಡೇ ಬಿಟ್ಟೆ. ಮಂಗಳೂರಿನ ಜನ ಕನ್ನಡ ಸಿನೆಮಾ ನೋಡುವುದೇ ಇಲ್ಲ ಎಂದಂದುಕೊಂಡು ನಾನು ಥ್ಯೇಟರಿಗೆ ಹೋದೆ. ನೋಡಿದರೆ ಬಾಲ್ಕನಿ ಫುಲ್! ಈ ಸಿನೆಮಾ ಇದೇ ಥ್ಯೇಟರಿನಲ್ಲಿ ಆಗಲೇ ಕನಿಷ್ಟ ೫ ವಾರದಿಂದ ಓಡುತ್ತಿದೆ. ಕೆಳಗೆ ಕೂತರೆ ಅದೂ ಆಲ್ಮೋಸ್ಟ್ ಫುಲ್. ನಾನು ಕೂತ ಕೆಲವು ಸಮಯದಲ್ಲೇ ದೀಪ ಆರಿತು ಸಿನೆಮಾ ಆರಂಭವಾಯಿತು.
ಟೈಟಲ್ ಆದ ಮೇಲೆ ತೀರಾ ಸಾದಾರಣ ಎನ್ನುವ ಓಪನಿಂಗ್ ಆಗುತ್ತೆ ಸಿನೆಮಾಕ್ಕೆ. ಗಣೇಶ್ ಪಾತ್ರ ಯಾಕೆ ಹೀಗಿದ್ದಾನೆ? ಮಡಿಕೇರಿಯ ಹುಡುಗಿ ಬೆಂಗಳೂರಿನಲ್ಲಿ ಏನು ಮಾಡುತ್ತಿದ್ದಾಳೆ? ರೇಡಿಯೋ ಮಿರ್ಚಿಗೆ ದೂರವಾಣಿಸಿದ ಕೂಡಲೇ ಲೈನ್ ಸಿಗುವುದು! ಶುದ್ಧ ನಾಲಾಯಕ್ಕಾದ ಮಗನಿದ್ದೂ ಅಮ್ಮ ಅವನಿಗೆ ಸಹಕಾರ ಕೊಡುವುದು, ಅಪ್ಪ ಮಗನಿಗೆ ಹೆದರುವುದು! ಈ ರೀತಿ ವಿಚಿತ್ರವಾಗಿ ಸಿನೆಮಾ ಆರಂಭವಾಗುತ್ತದೆ. ಮುಂದೆ ಸಿನೆಮಾದುದ್ದಕ್ಕೂ ಈ ವಿಚಿತ್ರಗಳ ಸರಮಾಲೆ ಮುಂದುವರೆಯುತ್ತದೆ. ಎಷ್ಟೋ ಕಡೆ ಸ್ಕ್ರಿಪ್ಟ್ ವೀಕ್ ಅನ್ನಿಸುತ್ತದೆ. ನಟನೆ ಇನ್ನೂ ಚೆನ್ನಾಗಿರಬಹುದಿತ್ತು ಅನ್ನಿಸುತ್ತದೆ. ಚಿತ್ರದ ನಡುವೆ ಪಂಜಾಬಿ ನೃತ್ಯ ಅನಗತ್ಯ ಅನ್ನಿಸುತ್ತದೆ. ಸಿನೆಮಾದ ಕಥೆ ಮೊದಲೇ ಅನೇಕ ಛಾಯೆಗಳಲ್ಲಿ ಹಿಂದಿಯಲ್ಲಿ ಬಂದಿದೆ ಅನ್ನಿಸುತ್ತೆ. ಪ್ರಸಿದ್ಧ ದಿಲ್ ವಾಲೆ ದುಲ್ಹನಿಯಾ ಲೇಜಾಯೆಂಗೆ ಇದೇ ಕಥೆಯ ಎಳೆಯಲ್ಲವೇ? (ಇದು ಅದರ ನಕಲು ಎಂದಲ್ಲ ನಾನು ಹೇಳುತ್ತಿರುವುದು) ಹೀಗೆ ಅನೇಕ ವಿಷಯಗಳು ಮಾಮೂಲು ಎಂದನ್ನಿಸುತ್ತದೆ. ಆದರೆ ನಾನು ಇದನ್ನೇ ಪಟ್ಟಿಮಾಡಿದರೆ ತಪ್ಪು ಮಾಡಿದಂತಾಗುತ್ತದೆ. ಮುಂದೆ ಓದಿ »

ಆವರಣದ ಬಗ್ಗೆ ಒಂದು ಅನೌಪಚಾರಿಕ ಪತ್ರ
March 20, 2007 - 9:41am — Abhaya Simhaನನ್ನ ತಂದೆ ಜಿ.ಎನ್. ಅಶೋಕ ವರ್ಧನ, ಮಂಗಳೂರಿನ ಅತ್ರಿ ಬುಕ್ ಸೆಂಟರ್ ಮಾಲಿಕ. ಭೈರಪ್ಪನವರ ಆವರಣ ಪುಸ್ತಕ ಬಿಡುಗಡೆಯಾಗಿ ಭಾರೀ ವ್ಯಾಪಾರ ನಡೆಸುತ್ತಿರುವ ಸಮಯದಲ್ಲಿ ತಮ್ಮ ಅನಿಸಿಕೆಗಳನ್ನು ಬರೆದಿದ್ದಾರೆ. ಅವನ್ನು ಈ ಮೂಲಕ ನಿಮ್ಮೆಲ್ಲರ ಓದಿಗಾಗಿ ಸಂಪದಕ್ಕೆ ಸೇರಿಸುತ್ತಿದ್ದೇನೆ.
- ಅಭಯ ಸಿಂಹ.
ಪ್ರಿಯರೆ ನನಗೆ ಹೊಳೆದ ಕೆಲವು ಈಚಿನ ವಿಚಾರಗಳನ್ನು ಹೀಗೇ ಇನ್ನಷ್ಟು ಮಂದಿಯೊಂದಿಗೆ ಹಂಚಿಕೊಳ್ಳಬೇಕೆಂದು ತುಡಿತ ತೀವ್ರವಾದುದರಿಂದ ಎಂದಿನಂತೆ ಯಾವ ಔಪಚಾರಿಕ ಚೌಕಟ್ಟು, ಅಂತಿಮ ತೀರ್ಮಾನಗಳನ್ನು ಹೇರದೆ ನಿರೂಪಿಸುತ್ತೇನೆ. ಆದರೆ ಅವಶ್ಯ ನಿಮ್ಮ ಪ್ರತಿಕ್ರಿಯೆಗಳನ್ನು ಕಾದಿರುತ್ತೇನೆ. ಸಾಹಿತ್ಯಭಂಡಾರದಿಂದ ಆವರಣದ ಇಪ್ಪತ್ತೈದು ಪ್ರತಿ ಕೇಳಿದ್ದೆ. ಕನ್ನಡದಲ್ಲಿ ಎಂದೂ ಇಲ್ಲದ ಬಿಡುಗಡೆಯ ದಿನದ ಒತ್ತಡದಲ್ಲಿ ಐದನೇ ತಾರೀಕಿನಂದು ಬಂದ ಪ್ರತಿಗಳು ಮಾರಿಹೋಗುವುದನ್ನು ಕಂಡು ಆರರಂದು ಮತ್ತೆ ಐವತ್ತು ಪ್ರತಿಗಳಿಗೆ ಬೇಡಿಕೆ ಮಂಡಿಸಿದೆ. ಎಲ್ಲರಿಗೂ ತಿಳಿದಂತೆ `ಭಂಡಾರಿಗಳು' ಎರಡನೇ ಮುದ್ರಣವನ್ನು ಒಂಬತ್ತಕ್ಕೆ ಮುಗಿಸಿಕೊಟ್ಟರು. ಮುಂದೆ ಓದಿ »

ನೀವ್ಯಾಕೆ ಬ್ಲಾಗ್ ಬರೆಯುತ್ತೀರಿ?
March 19, 2007 - 7:15pm — Abhaya Simhaಒಬ್ಬಾತ ಬ್ಲಾಗ್ ಯಾಕೆ ಬರೀತಾನೆ ಅಂತ ನಾನು ಅನೇಕ ಬಾರಿ ಯೋಚಿಸಿದ್ದೆ. ಮುಂದೆ ಓದಿ »


RSS: