medhadongre (ಬ್ಲಾಗ್ ಬರಹಗಳು)
ವೈದ್ಯನಾರಾಯಣಕಥೆ
July 6, 2008 - 8:41am — medhadongre’ನಿಮ್ಮನ್ನು ನೋಡಿದ್ರೆ ಇನ್ನೂ ಕಾಲೇಜ್ ವಿದ್ಯಾರ್ಥಿ ಹಾಗೆ ಕಾಣ್ತೀರಿ ’ ಅಂತ ನನ್ನ ಮುಂದೆ ಕೂತ ೨೮ ವರ್ಷದ ಜವಾನ್ತಿ(ಯುವತಿ) ಹೇಳಿದಾಗ ನಾಕನೇ ದಶಕ ಓಡುತ್ತಿರುವ ನನ್ಗೆ (ನಾನೇನೂ ೪೦+ ಅಲ್ಲ ಮಾರಾಯ್ರೇ..ಬರೀ ೩೦+…ಅಷ್ಟೇ ಅಲ್ಲ..೩೦ ರ ನಂತರ ವಯಸ್ಸು ಓಡ್ಲಿಕ್ಕೆ ಶುರು ಆಗ್ತದೆ ಮಾರಾಯ್ರೆ) ಒಂದುಸಲ ಭಯಂಕರ ಖುಷಿ ಆಗಿ ಪುಗ್ಗದ ಹಾಗೆ ಹಿಗ್ಗಿದ ನಾನು ಕೂಡ್ಲೇ ಟುಸ್ಸ್…ಅಂತ ಮುಖ ಸಣ್ಣದು ಮಾಡಿಕೊಂಡೆ. ಯಾಕೆ ಹೀಗೆ ಆಯ್ತು?..ಕಥೆ ಕೇಳಿ..
ಕರ್ಮಸಿದ್ಧಾಂತದ ಪ್ರಕಾರ ಹೇಳ್ಬೇಕಾದ್ರೆ ಘನಘೋರ ಪಾಪ ಮಾಡಿದ ನರಮಾನಿ (ಮನುಷ್ಯ) ಮರುಜನ್ಮದಲ್ಲಿ ಡಾಕ್ಟರಾಗುವುದು ಖಂಡಿತ. ಇಲ್ಲಸಲ್ಲದ ಸಮಯದಲ್ಲಿ ಫೋನ್ ಬರುವುದು, ಊಟಮಾಡುವಾಗಲೇ ಕರೆಗಂಟೆ ಬಾರಿಸುವುದು, ನೆಂಟರು ಬಂದ ದಿನವೇ ಎಮರ್ಜೆನ್ಸಿ ಕೇಸ್ ಬರುವುದು, ಡಯೇರಿಯಾ ಕೇಸ್ ನೋಡಿದ ಮೇಲೆ ಹಲಸಿನಹಣ್ಣಿನ ಪಾಯಸದ ಮೇಲೂ ಗುಮಾನಿ ಬರುವುದು..ಇದೆಲ್ಲ ಎಲ್ರಿಗೂ ಗೊತ್ತುಂಟು. ಆದ್ರೆ ಇಲ್ಲಿ ಕಥೆಯೇ ಬೇರೆ.. ವೈದ್ಯೋನಾರಾಯಣೋ ಹರಿಃ ಅನ್ನುವುದನ್ನು ತಮ್ಮ ಅವಶ್ಯಕತೆಗೆ ತಕ್ಕಂತೆ ನಾರಾಯಣನೇ ವೈದ್ಯನೆಂದು ಅಥವಾ ವೈದ್ಯನೇ ನಾರಾಯಣನೆಂದೂ ಅರ್ಥಮಾಡಿಕೊಳ್ಳುವ ಚಾಲಾಕ್ ರೋಗಿಗಳು ಇನ್ನು ಕೆಲವು ವಿಷಯಗಳಲ್ಲಿ ಸ್ವಲ್ಪ confused ಇರ್ತಾರೆ. ಮುಖ್ಯವಾಗಿ ಎಲ್ರಿಗೂ ಡಾಕ್ಟರೆಂಬ ಪ್ರಾಣಿಯೂ ತಮ್ಮ ಹಾಗೇ ಮನುಷ್ಯ ಜಾತಿಯಲ್ಲಿ ಬರುತ್ತದೆ, ಅದಕ್ಕೂತಮ್ಮ ಹಾಗೆ ೨ ಕಣ್ಣು , ೨ ಕಿವಿ, ೧ ಮೂಗು (ಹೋಗ್ಲಿ ಬಿಡಿ, ನಿಮಗೆ ಎಷ್ಟು ಮಾಂಸಖಂಡ, ಎಲುಬು, ನರಗಳು ಅಂತ ಹೇಳಲಿಕ್ಕೆ ಇದೇನು ಅನಾಟಮಿ ಕ್ಲಾಸಲ್ಲವಲ್ಲ..)ಮಾತ್ರವಲ್ಲ , ಒಂದು ಮನಸ್ಸೂ ಇರ್ತದೆ ಅಂತ ನೆನಪಿರುವುದಿಲ್ಲ. ಹೀಗಾಗಿ ಈ ವಿಚಿತ್ರ ಪ್ರಾಣಿಯ ಬಗ್ಗೆ ಒಂಥರ ಪೂರ್ವಾಗ್ರಹಪೀಡಿತ ಅಭಿಪ್ರಾಯ ಇಟ್ಟುಕೊಂಡಿರುವುದು ಪಂಜುರ್ಲಿ ,ಗುಳಿಗ ,ರಕ್ತೇಶ್ವರಿಯ ಆಣೆಗೂ ಸತ್ಯ. ಇವು ತಮ್ಮ ಡಾಕ್ಟರ್ ಎಷ್ಟು ಅನುಭವಿಗಳು ಅಂತ ತೀರ್ಮಾನಿಸಲು ಇರುವ ಕ್ರೈಟೀರಿಯ ಅಂತಲೂ ಹೇಳಬಹುದು. ಮುಂದೆ ಓದಿ »








RSS: