ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ › User account

rasheed (ಲೇಖನಗಳು)

ಅಂತ್ಯಸಂಸ್ಕಾರ ಮತ್ತು ಭೂಮಿ ವ್ಯವಹಾರ

March 14, 2007 - 8:25pm — rasheed

ನನ್ನ ಪ್ರೀತಿಯ ಆಮಿತಾತ ಎಂಬ ಅಜ್ಜಿ ತೀರಿಹೋದರು ಎಂದು ನಿರ್ವಿಕಾರವಾಗಿ ಆಕೆಗೆ ಹೇಳಿ ಆಕೆಂದ ಅನುಕಂಪಭರಿತ ಸಾಂತ್ವನದ ಮಾತುಗಳನ್ನು ನಿರೀಕ್ಷಿಸುತ್ತಿದ್ದೆ. ಆದರೆ ಆಕೆಯೂ ಅಷ್ಟೇ ನಿರ್ವಿಕಾರವಾಗಿ ‘you lost your character’ ಅಂದಳು. ನನ್ನನ್ನು ಬಹಳ ಬಲ್ಲವಳಾಗಿದ್ದರಿಂದ ಸುಮ್ಮಗಾದೆ. ನಿನ್ನ ಪಾತ್ರಗಳು ನಿನಗೆ ಆನೆ ಇದ್ದಂತೆ. ಬದುಕಿರುವಾಗಲೂ ತೀರಿಹೋದಮೇಲೂ ನಿನಗೆ ಅವುಗಳು ಅಷ್ಟೇ ಬೆಲೆ ಬಾಳುತ್ತದೆ ಎನ್ನುವುದು ಅವಳ ಮಾತಿನ ಮರ್ಮವಾಗಿತ್ತು.

ಅವಳ ಮಾತುಗಳು ಯಾವಾಗಲೂ ಹೀಗೆಯೇ.ಮರ್ಮಕ್ಕೆ ತಾಗುವ ಹಾಗೇ ಮಾತನಾಡುತ್ತಾಳೆ.ಅವಳ ಮಾತು ನೂರಕ್ಕೆ ನೂರು ಸತ್ಯದ ಹಾಗೆ ಇರುತ್ತದೆ.ನಾನು ಬರೆದದ್ದನ್ನ ಕೆಲವೊಮ್ಮೆ ಓದಿ bull shit ಅನ್ನುತ್ತಾಳೆ. ಅಂದರೆ ಸಗಣಿ ಅಂತ ಅರ್ಥ.

ಇಟ್ಟರೆ ಸಗಣಿ ಯಾದೆ ತಟ್ಟಿದರೆ ಬೆರಣಿಯಾದೆ ನೀನಾರಿಗಾದೆಯೋ ಎಲೆಮಾನವಾ ಎಂದು ಯಾರಿಗೂ ಕ್ಯಾರೇ ಅನ್ನದೆ ನಾನು ಬರೆಯುತ್ತಲೇ ಇರುತ್ತೇನೆ.

ಈಗಲೂ ಅಷ್ಟೇ. ಆಮಿತಾತ ತೀರಿಹೋದರು ಅಂತ ಸುದ್ದಿ ಗೊತ್ತಾದಾಗ ನಾನು ಎಲ್ಲೋ ಬೀದಿ ಸುತ್ತುತ್ತಿದ್ದೆ. ಆಮೇಲೆ ಸುಮ್ಮನೆ ಮನೆಗೆ ಬಂದು ನಿದ್ದೆ ಹೋದೆ.ಇನ್ನೂ ಮಳೆ ಸುರಿಯುತ್ತಲೇ ಇತ್ತು. ಹಗಲು ಸುಸ್ತು ಹೊಡೆದಂತೆ ಮಂಕಾಗಿ ಹೋಗಿತ್ತು.

ಬಾಗಿಲು ಬಡಿಯುವ ಕರ್ಕಶ ಸದ್ದಿಗೆ ಹೆದರಿ ಎದ್ದು ಬಂದರೆ ಯಾವನೋ ಒಬ್ಬ ಜಮೀನು ದಲ್ಲಾಳಿ ಕಮಿಷನ್ ವಿಷಯಕ್ಕೆ ಜಗಳ ಕಾಯಲು ಬಂದು ಕೂತಿದ್ದ. ಹಳ್ಳಿಯ ದಲ್ಲಾಳಿ. ಆತನಿಗೆ ಜಮೀನು ವ್ಯವಹಾರದ ಆದುನಿಕೋತ್ತರ ನಯ ನಾಜೂಕು ಒಂದೂ ಗೊತ್ತಿದ್ದಂತಿರಲಿಲ್ಲ.ಕುರಿ ಮರಿ ವ್ಯಾಪಾರದವನಂತೆ ಜಗಳಕ್ಕೇ ನಿಂತು ಕೊಂಡಿದ್ದ.ನಾನೂ ಅಷ್ಟೆ. ಅಷ್ಟೇ ಮೊಂಡನಂತೆ ಇದಕ್ಕಿಂತ ಹೆಚ್ಚು ಒಂದು ಕಾಸು ಕೊಡುವುದಿಲ್ಲ.ಅದೇನು ಕಿಸೀತೀಯಾ ಕಿಸಿ ಅಂತ ನಿದ್ದೆಗಣ್ಣಲ್ಲಿ ಜಗಳಕ್ಕೆ ನಿಂತಿದ್ದೆ.

ಆತನೂ ಹೆಗಲಲ್ಲಿದ್ದ ಕೊಳಕು ಟವಲ್ಲು ಕೊಡವಿ `ಅದೆಂಗಾದಾತೂ.. ದೇಸದಲ್ಲಿ ನಡೀತಿರೋ ವ್ಯವಹಾರ ಬುಟ್ಟು ನಾನು ಬೇರೇನಾದ್ರೂ ಕೇಳಿವ್ನಾ? ನನ್ ಕೂಲಿ ಕೊಡಿ. ಇಲ್ಲಾ ನ್ಯಾಯ ತೀರ್ಮಾನ ಆಗ್ಲಿ" ಅಂತ ದಲ್ಲಾಳಿ ಕೆಲಸವನ್ನು ಕೂಲಿ ಕೆಲಸದ ಜೊತೆ ಸಮೀಕರಿಸಿಕೊಂಡು ಜಾಗತೀಕರಣ ಮುಕ್ತ ಮಾರುಕಟ್ಟೆ ಇತ್ಯಾದಿಗಳ ವಕ್ತಾರನಂತೆ ಸಡ್ಡು ಹೊಡೆಯುತ್ತಿದ್ದ.  ಮುಂದೆ ಓದಿ »

  • ಪ್ರಬಂಧ
~.~
  • 2 ಪ್ರತಿಕ್ರಿಯೆಗಳು
  • 511 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಶ್ರೀನಿವಾಸರಾಜು ಮೇಷ್ಟರಿಗೆ ನಮಸ್ಕಾರ

February 19, 2007 - 7:51pm — rasheed

ಬಹುಶಃ ಈಗಿನ ಹುಡುಗರಿಗೆ ಶ್ರೀನಿವಾಸರಾಜು ಮೇಷ್ಟರು ಸಿಗಲಿಕ್ಕಿಲ್ಲ
ಮೇಷ್ಟರಿಗೆ ಹುಡುಗರೂ ಇರಲಿಕ್ಕಿಲ್ಲ
ಇದು ಹಳಹಳಿಕೆಯೆಂದೇನೂ ಅನಿಸಬೇಕಾಗಿಲ್ಲ
ಏಕೆಂದರೆ ಕವಿತೆ ಹುಚ್ಚು ಹಾದರಗಿತ್ತಿಯಂತಹ ಹೆಂಗಸು,
ವಿಟನಂತಹ ಬೇಜವಾಬ್ಧಾರಿಯ ಗಂಡಸು, ಹಾಗೆಲ್ಲಾ
ಮೇಷ್ಟರ ಪಾಲಾಗುವುದಿಲ್ಲ ಅಂತ ನಾವೆಲ್ಲ ಸಜ್ಜನರ ಕಾಲೆಳೆಯಬೇಕಾಗಿಲ್ಲ.
ಏಕೆಂದರೆ ಸಜ್ಜನರು ಈಗಲೂ ಕಾಲವಾಗಿಲ್ಲ.
ಬಹುಶಃ ಇದನ್ನು ಸಮೀಕರಣದ ಮೂಲಕ ಹೀಗೂ ಹೇಳಬಹುದು
ಅಂತೆಲ್ಲ ಬಗೆಹರಿಸುತ್ತಿರಬೇಕಾದರೆ ನನಗೆ ನನ್ನನ್ನೇ ಒದೆಯಬೇಕೆನ್ನಿಸುತ್ತದೆ.  ಮುಂದೆ ಓದಿ »

  • ಕಾವ್ಯ ಮತ್ತು ಕವನ
~.~
  • 2 ಪ್ರತಿಕ್ರಿಯೆಗಳು
  • 735 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಒಂದು ರೇಡಿಯೋ ಕವಿತೆ

February 9, 2007 - 6:22pm — rasheed

ಆಗ ರೇಡಿಯೋ ಇರಲಿಲ್ಲ . ಆದರೆ ದೊಡ್ಡ ಬೀಟೆಯ ಮರದ ಪೆಟ್ಟಿಗೆ ಮಾತ್ರ ಉಳಿದಿತ್ತು
ಒಳಗೆ ಅಪ್ಪನ ಬೀಡಿ ಪೊಟ್ಟಣ, ಅರಬಿ ಪುಸ್ತಕ, ಕೆಮ್ಮಿನ ಔಷದಿ,
ಮೊಲದ ಬೇಟೆಗೆ ತಂದು ಇಟ್ಟಿದ್ದ ನಾಡಕೋವಿಯ ತೋಟೆ,
ಅವರ ಕನ್ನಡಕ,ಅಂಗಡಿಯ ಸಾಲದ ಪುಸ್ತಕ, ನಮಗೆ ಕದ್ದು ಮುಚ್ಚಿ
ಮುದ್ದು ಮಾಡಲು ತಂದಿಟ್ಟಿದ್ದ ಮಿಠಾಯಿ ಮತ್ತು ಅವರ ಮೂಗು ಒರೆಸಿಟ್ಟ ಕರ್ಚೀಪು.
ನಮ್ಮಷ್ಟಕ್ಕೆ ನಮಗೆ ಯಾವುದೂ ಎಟುಕುತ್ತಿರಲಿಲ್ಲ. . . . .
ಮತ್ತು ರೇಡಿಯೋ ಅಂದರೆ ಏನು ಅಂತ ಗೊತ್ತಿರಲಿಲ್ಲ

ಈಗ ರೇಡಿಯೋ ಕೈಗೆಟುಕುತ್ತಿದೆ. ಅಪ್ಪ ನೋಡಲು ಸಿಗುತ್ತಿಲ್ಲ
ಅವರ ಸದ್ದು, ಆಕಾರ, ರೇಡಿಯೋ ಪೆಟ್ಟಿಗೆಯಂತಿರುವ ಅವರ ನೆನಪುಗಳು
ಎಲ್ಲ ಕೇಳಿಸುತ್ತಿದೆ.. ಅವರ ಕೈ ಹಿಡಿದು ಕೊಳ್ಳಲು ಸಿಗುತ್ತಿಲ್ಲ  ಮುಂದೆ ಓದಿ »

  • ಕಾವ್ಯ ಮತ್ತು ಕವನ
~.~
  • 9 ಪ್ರತಿಕ್ರಿಯೆಗಳು
  • 754 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ತೆಹ್ರಿ ಅಣೆಕಟ್ಟು, ಉತ್ತರಾಂಚಲ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • vinayak.mdesai
    ಉ: ಸ್ವಲ್ಪನಗಿ
    October 13, 2008 - 12:42pm
  • veena
    ಉ: ನನ್ನ ಮೆಚ್ಚಿನ ಟಿ.ವಿ.ಕಾರ್ಯಕ್ರಮಗಳು
    October 13, 2008 - 12:40pm
  • mahesha
    ಉ: ಶಿವಮಣಿ ಎಂಬ ಅದ್ಭುತ ಪ್ರತಿಭೆ
    October 13, 2008 - 12:40pm
  • Chetan.Jeeral
    ಉ: ಶಿವಮಣಿ ಎಂಬ ಅದ್ಭುತ ಪ್ರತಿಭೆ
    October 13, 2008 - 12:34pm
  • mahesha
    ಉ: ಬಸವನ ಹುಳು...
    October 13, 2008 - 12:31pm
  • mahesha
    ಉ: ನನ್ನ ಮೆಚ್ಚಿನ ಟಿ.ವಿ.ಕಾರ್ಯಕ್ರಮಗಳು
    October 13, 2008 - 12:30pm
  • mahesha
    ಉ: ಶಂಕರ ಬಟ್ಟರ ಹೊತ್ತಗೆಯಲ್ಲಿರ ತಪ್ಪು ಇಲ್ಲವೇ ಬಿಟ್ಟು ಹೋದ ಸಂಗತಿ, ಕನ್ನಡದ ಲಿಂಗ/ಜೆಂಡರ್‍ ಸಿಸ್ಟಮ್ ಬಗ್ಗೆ
    October 13, 2008 - 12:23pm
  • gurubaliga
    ಉ: Attitude
    October 13, 2008 - 12:21pm
  • kannadakanda
    ಉ: ಶಂಕರ ಬಟ್ಟರ ಹೊತ್ತಗೆಯಲ್ಲಿರ ತಪ್ಪು ಇಲ್ಲವೇ ಬಿಟ್ಟು ಹೋದ ಸಂಗತಿ, ಕನ್ನಡದ ಲಿಂಗ/ಜೆಂಡರ್‍ ಸಿಸ್ಟಮ್ ಬಗ್ಗೆ
    October 13, 2008 - 12:17pm
  • srinivasps
    ಉ: ಶಿವಮಣಿ ಎಂಬ ಅದ್ಭುತ ಪ್ರತಿಭೆ
    October 13, 2008 - 12:14pm
ಇನ್ನಷ್ಟು


ಸು:ಖ ದು:ಖ ಗಳನು ತಟಸ್ಥಭಾವದಿ
ಸಕಲಕು ವಿತರಿಸುವುದು ಪ್ರಕೃತಿ
ಸು:ಖವ ಹೆಚ್ಚಿಸುತಾ ದು:ಖವ ತಗ್ಗಿಪ
ಯುಕುತಿಯೆನಿಸುವುದು ಸ೦ಸ್ಕೃತಿ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator