ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಬರಹಗಳು: ಇಂದು ಓದಿದ ವಚನ

ಸಂಪದ › User account

sreeedhar (ಲೇಖನಗಳು)

ಅನಂತ ಮೂರ್ತಿ ಅವರ ಬಗೆಗಿನ ಅಪ ಪ್ರಚಾರಗಳು - ತುಂಗಾ ಮೂಲ ಉಳಿಸಿ ಹೋರಾಟದ ಕಥೆ

July 3, 2007 - 11:36pm — sreeedhar

"ತುಂಗಾ ಮೂಲ ಚಳುವಳಿ"ಯ ಕೆಲವು ಸಂಗತಿಗಳು:

" ತುಂಗಾ ಮೂಲ ಚಳುವಳಿ" ಕುರಿತಾಗಿ ದಿನಾಂಕ ೧/೭/೨೦೦೭ ರ ವಿಜಯ ಕರ್ನಾಟಕ ದಿನಪತ್ರಿಕೆಯಲ್ಲಿ ಬಹಳ ಲಘುವಾಗಿ ಬರೆದಿದ್ದಾರೆ. ಅದು ಶ್ರೀ. ಅನಂತಮೂರ್ತಿಯವರನ್ನು ಲೇವಡಿ ಮಾಡಲು ಬರೆದದ್ದು. ಇದು ಅತ್ಯಂತ ಬೇಜವಾಬ್ದಾರಿ ನಡುವಳಿಕೆಯಾಗಿದ್ದು ಇದನ್ನು ನಾವು ಖಂಡಿಸುತ್ತಿದ್ದೇವೆ. 'ತುಂಗಾ ಮೂಲ ಉಳಿಸಿ ಹೋರಾಟ' ಈ ನಾಡಿನ ಕೋಟ್ಯಾಂತರ ಜನರ, ರೈತರ ಬದುಕಿನಮೇಲೆ ನೇರವಾಗಿ ಪರಿಣಾಮ ಬೀರುವ ತುಂಗಾ- ಭದ್ರಾ ನದಿಗಳ ಉಳಿವಿನ ಹೋರಾಟವದು. ಈ ಅಹಿಂಸಾತ್ಮಕ ಆಂದೋಳನಕ್ಕೆ ಜನಕೋಟಿಯ ಮನಸ್ಸು- ಹೃದಯದ ಬೆಂಬಲ ದೊರಕುವಂತೆ ಮಾಡಿ ಸರ್ಕಾರವನ್ನು ಮಣಿಸಿದ್ದು ಅನಂತಮೂರ್ತಿಯವರ ನಾಯಕತ್ವ. ನಮ್ಮ ಕಾಲದ ಈ ಮಹತ್ವದ ಘಟನೆಯ ಹಿಂದಿನ ಸಂಗತಿಗಳನ್ನು ತಿಳಿಸದೇ ಹೋದರೆ ಹೀನ ಮನಸ್ಸಿನ ಜನ ಸತ್ಯವನ್ನೇ ತಿರುಚಿಬಿಡುತ್ತಾರೆಂದು ಈ ಕೆಳಗಿನ ಮಾಹಿತಿಗಳನ್ನು ನಾವು ನೀಡಬೇಕಾಗಿದೆ.

ಯಾವುದೇ ಚಳುವಳಿಗಳಿರಲಿ ಅದೊಂದು ರೀತಿಯಲ್ಲಿ ರಿಲೇ ಓಟದಂತೆ. ಕೊನೆಯ ಹಂತದ 'ಲ್ಯಾಪಿ'ನಲ್ಲಿ ಗುರಿಮುಟ್ಟುವವನು ಹಿಂದಿನವರ ಎಲ್ಲಾ ಸರಿ-ತಪ್ಪುಗಳನ್ನೂ ಹೆಗಲಮೇಲೆ ಹೊತ್ತು-ಬಳಸಿಕೊಂಡು ಗೆಲುವನ್ನು ಸಾಧಿಸಬೇಕು. ನಮ್ಮ ದೇಶದ ಸ್ವಾತಂತ್ರ ಹೋರಾಟವನ್ನೂ ಹೀಗೇ ನೋಡಿದರೆ ಗಾಂಧೀಜಿಯವರ ನಾಯಕತ್ವ ಕೊನೆಯಲ್ಲಿ ನಮಗೆ ಬಿಡುಗಡೆಯನ್ನು ನೀಡಿತು. ಈ ಕೊನೆಯ ಹಂತವೇ ಬಹಳ ಸೂಕ್ಷ್ಮ ಮತ್ತು ಆತಂಕಭರಿತವಾದದ್ದು. ಏಕೆಂದರೆ ನಿಜಕ್ಕೂ ನಮಗೆ ಯಶಸ್ಸು ಸಿಗಬಹುದೆಂಬ ಸಂಪೂರ್ಣ ನಂಬಿಕೆ ಹೋರಾಟಗಾರರಲ್ಲಿ ಇರುವುದಿಲ್ಲ. ಇಲ್ಲಿ ಸಿನಿಕತನ, ಅನುಮಾನಗಳೆಲ್ಲಾ ಇದ್ದೇ ಇರುತ್ತವೆ. ನಾವೇನು ನೂರಕ್ಕೆ ನೂರು ದೇವರನ್ನು ನಂಬುವವರೇ? ಈ ರೀತಿಯ ಅಂತಿಮ ಗಳಿಗೆಯ ಮನಸ್ಸಿನ ಸ್ಥಿತಿ ಹೋರಾಟವನ್ನು ಹಿಂಸಾ ಮಾರ್ಗದತ್ತ ತಳ್ಳುವುದನ್ನು ನಾವು ನೋಡುತ್ತಲೇ ಇರುತ್ತೇವೆ. ನಿಜಕ್ಕೂ ಅಹಿಂಸಾ ಮಾರ್ಗದಿಂದಲೇ ಕೊನೆಯ ಹಂತದ ಜಯವನ್ನು ಸಾಧಿಸಬೇಕೆಂದರೆ ನಾಯಕತ್ವದಲ್ಲಿ ಅಸೀಮ ಜಾಣತನ, ಚಾಲೂಕುತನ,ಯಾರನ್ನೂ ದ್ವೇಶಿಸದೇ ಎಲ್ಲರ ಮನಸ್ಸನ್ನು ತಟ್ಟುವ ಪ್ರಾಮಾಣಿಕತೆ- ಇವೆಲ್ಲವೂ ಮೇಳೈಸಿರಬೇಕಾಗುತ್ತದೆ. ಗಾಂಧೀಜಿ ಇದರಲ್ಲಿ ನಿಪುಣರಾಗಿದ್ದರಿಂದಲೇ ರಕ್ತಪಾತವಿಲ್ಲದೇ ಸ್ವಾತಂತ್ರ ದೊರಕಿತು.  ಮುಂದೆ ಓದಿ »

  • ವ್ಯಕ್ತಿ ವಿಷಯ, ಪರಿಚಯ, ಸಾಧನೆ
~.~
  • 5 ಪ್ರತಿಕ್ರಿಯೆಗಳು
  • 838 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ವಾಟರ್ ಪೋರ್ಟಲ್: ದಿನದ ಚಿತ್ರ

ಕುಡಿಯುವ ನೀರು?

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • hamsanandi
    ಉ: ಇಂದು ಓದಿದ ವಚನ: ಚಂದಿಮರಸ: ಅದೂ ಅಲ್ಲ ಇದೂ ಅಲ್ಲ ಮತ್ತೇನು?
    December 3, 2008 - 5:10am
  • venkatesh
    ಉ: ಮರುಕಳಿಸಿದ ನೆನಪು
    December 3, 2008 - 4:45am
  • hamsanandi
    ಉ: ಮತಾಂತರದ ಬಗ್ಗೆ: ಸ್ವಲ್ಪ late ಆದರೂ ನನ್ನ ಅನಿಸಿಕೆಗಳು
    December 3, 2008 - 12:12am
  • rasikathe
    ಉ: ಒಗಟು - ಬಿಡಿಸಿ!
    December 2, 2008 - 11:58pm
  • savithru
    ಉ: ಮತಾಂತರದ ಬಗ್ಗೆ: ಸ್ವಲ್ಪ late ಆದರೂ ನನ್ನ ಅನಿಸಿಕೆಗಳು
    December 2, 2008 - 11:47pm
  • kannadakanda
    ಉ: ಕನ್ನಡದಲ್ಲಿ ’ಆಗಮ’ ಮತ್ತು ಲೋಪ ಸಂಧಿಗಳು
    December 2, 2008 - 11:32pm
  • kalpana
    ಉ: ಉಗ್ರಗಾಮಿ ಹೇಡಿಗಳ ಹೀನ ಕೃತ್ಯದ ಹಿನ್ನೆಲೆಯಲ್ಲಿ ಒಂದು ಮನವಿ
    December 2, 2008 - 11:16pm
  • mahesha
    ಉ: ಕನ್ನಡದಲ್ಲಿ ’ಆಗಮ’ ಮತ್ತು ಲೋಪ ಸಂಧಿಗಳು
    December 2, 2008 - 11:04pm
  • kannadakanda
    ಉ: ಕನ್ನಡದಲ್ಲಿ ’ಆಗಮ’ ಮತ್ತು ಲೋಪ ಸಂಧಿಗಳು
    December 2, 2008 - 10:58pm
  • mahesha
    ಉ: ಮಲ್ಲೂ ಟೇಬಲ್ಲು, ಗುಲ್ಟೂ ಟೇಬಲ್ಲು , ಬಿಹಾರಿ ಟೇಬಲ್ಲು, ಕನ್ನಡ ಟೆಬಲ್ಲು
    December 2, 2008 - 10:46pm
ಇನ್ನಷ್ಟು


ತಣ್ಣನೆ ಮನದಿ೦ ತಣ್ಣಮಾನಸಕೆ
ಮಣ್ಣಿನ ಕ೦ಪಿದು ಹರಡುತಿದೆ
ಬಣ್ಣದ ಮಾತೊಳು ಬ್ರಹ್ಮವನಾತ್ಮಕೆ
ಉಣ್ಣಬಡಿಸಿಯೌತಣಿಸುತಿದೆ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator