ಬಂಗಾರದ ಮನುಷ್ಯನಿಗೆ ಹೃದಯಸ್ಫರ್ಶಿ ನಮನ (ರಾಜಣ್ಣನವರ ಕುರಿತು ಒಂದು ಕವನ)

ಬಂಗಾರದ ಮನುಷ್ಯನಿಗೆ ಹೃದಯಸ್ಫರ್ಶಿ ನಮನ (ರಾಜಣ್ಣನವರ ಕುರಿತು ಒಂದು ಕವನ)

ಬರಹ

ಶಿವಪ್ಪನಿಗೆ ಕಣ್ಣನ್ನು ಕೊಟ್ಟು│
ಶಬ್ಧವೇದಿಯ ಜಾಡನ್ನು ಹಿಡಿದು│
ದೂರದ ಬೆಟ್ಟ ಏರಿ ಗಿರಿ ಕನ್ಯೆ ರೂಪಕ್ಕೆ ಕರಗಿ│
ಗುರಿ ಮರೆತು ದಾರಿ ತಪ್ಪಿದ ಮಗನಾಗಿ│
ಪ್ರಾಯಶ್ಚಿತ್ತಕೊಸ್ಕರ ಮನದಲ್ಲಿ ಅನುರಾಗ ಅರಳಿಸಿಕೊಂಡು│
ಅದೇ ಕಣ್ಣಲ್ಲಿ ಸಾಧನೆಗೈದು│ ತ್ರಿಮೂರ್ತಿಗಳ ವರ ಪಡೆದು│
ಭಲೇ ಹುಚ್ಚನಾಗಿ ಜಾಣ್ಮೆಯನ್ನು ತೋರಿ│
ಬಹದ್ದೂರ್ ಗಂಡಾಗಿ ಶೌರ್ಯವನ್ನು ಬೀರಿ│

ಆಕಸ್ಮಿಕವಾಗಿ ಕಸ್ತೂರಿ ನಿವಾಸಕ್ಕೆ ಬಂದು│
ಜೀವನ ಚೈತ್ರದಲ್ಲಿ ಮಿಂದು│
ಒಡಹುಟ್ಟಿದವರೊಡಗೂಡಿ│
ಶ್ರಾವಣ ಬಂತೆಂದು ಹಾಡಿ│
ಭಾಗ್ಯದ ಬಾಗಿಲಲ್ಲಿ│
ಹೊಸ ಬೆಳಕನು ಚೆಲ್ಲಿ│

ನೀತಿ ಇಲ್ಲದ ಸಿರಿವಂತರ ಸಂಪತ್ತಿಗೆ ಸವಾಲ್ ಹಾಕಿ│
ಮೇಯರ್ ಮುತ್ತಣ್ಣನಾಗಿ│
ಭಾಗ್ಯದ ಲಕ್ಷ್ಮಿ ಬಾರಮ್ಮನಿಗೆ ಮನಸೋತು│
ಎರಡು ಕನಸನು ಹೊತ್ತು│
ಚೂರಿ ಚಿಕ್ಕಣ್ಣನ ವೇಷ ಧರಿಸಿ│
ಅಪರೇಷನ್ ಡೈಮಂಡ್ ರಾಕೆಟ್‌ನಲ್ಲಿ ಬಾನಂಗಳಕ್ಕೆ ಹೋಗಿ│
ಧ್ರುವತಾರೆಯನು ಹೊತ್ತು ತಂದು ಸಂಭ್ರಮಿಸಿ│
ಗಂಧದ ಗುಡಿಯಲಿ ಇರಿಸಿ│
ಕಾಮನಬಿಲ್ಲಿನಲ್ಲಿ ಬೆಸೆದು ಉಡುಗೊರೆಯಾನ್ನಾಗಿಸಿ│
ಪ್ರೇಮದಕಾಣಿಕೆಯಾಗಿ ನೀಡಿ│
ಯಾವ ಕವಿಯು ಬರೆಯಲಾರದ ಗೀತೆಯನ್ನು ಹಾಡಿ│

ಕನ್ನಡಿಗರ ಹೃದಯವನ್ನು ಸದ್ದಿಲ್ಲದೆ ಕದ್ದು ತನ್ನ ಅಭಿನಯನದಲ್ಲಿ ಇರಿಸಿ│
ಬಂಗಾರದ ಮನುಷ್ಯಯೆಂಬ ಹೆಸರನಿಟ್ಟ ತಾಯಿಗೆ ತಕ್ಕಮಗನಾಗಿ ಬಾಳಿ│
ಒಲವನ್ನು ಸಾಕ್ಷಾತ್ಕಾರಿಸಿಕೊಂಡು ಹೋದರು ನಮ್ಮಣ್ಣ ರಾಜಣ್ಣ│
ನೆಡೆ ನುಡಿ ನಟನೆಯಲ್ಲಿ ಎಂದೆದಿಂಗೂ ಅವರಿಗೆ ಅವರೇ ಸಾಟಿ│
ವಿಧಿಕರೆಗೆ ಓಗೊಟ್ಟು ಅವರು ಹೋದಾಗ ಕಂಬನಿ ಧಾರೆ ಹರಿಸಿದ ಜೀವಗಳವು ಕೋಟಿ│
ರಚನೆ, ನಿಮ್ಮ ಸುನಿಲ್ ಮಲ್ಲೇನಹಳ್ಳಿ
http://mallenahallipages.blogspot.com/