ಜೂನ್ ತಿಂಗಳೆಂದರೆ ಮೊದಲು ನೆನಪಾಗುವುದು ವಿಶ್ವ ಪರಿಸರ ದಿನ. ಈ ವರ್ಷದ World environment day ಜೂನ್ 5. ಕಳೆದ ವರ್ಷದ ತಾಪಮಾನದ ಹೊಡೆತಕ್ಕೆ ಬಹಳಷ್ಟು ಜನ ಮತ್ತು ಪ್ರಾಣಿ ಪಕ್ಷಿಗಳು ನುಜ್ಜುಗುಜ್ಜಾದ ಕಾರಣ ಇದರ ನೆನಪು ಬೇಗ ಆಗುತ್ತಿದೆ. ಅದರಲ್ಲೂ ಉತ್ತರ ಭಾರತದ ಒಂದು ಸ್ಥಳದಲ್ಲಿ ಗರಿಷ್ಠ ತಾಪಮಾನ 56 ಡಿಗ್ರಿ ಸೆಲ್ಸಿಯಸ್ ಎಂದು ಕೇಳಿಯೇ ತಲೆ ತಿರುಗುತ್ತಿದೆ.
ವಿಶ್ವ ಪರಿಸರ ದಿನ ಎಂಬ ನಾಟಕ, ನೀರು ಉಳಿಸಿ ಜೀವ ಉಳಿಸಿ ಎಂಬ ಮೂರ್ಖತನ, ಹಸಿರೇ ಉಸಿರು, ಗಿಡ ನೆಡಿ ಎಂಬ ಫ್ಯಾಷನ್, ಪ್ರಕೃತಿಯೇ ದೇವರು ಎಂಬ ಸೋಗಲಾಡಿತನ. ಅರೆ, ಮನುಷ್ಯನೇ ಪ್ರಕೃತಿಯ ಒಂದು ಭಾಗ, ಆತನ ಅಸ್ತಿತ್ವವದ ಮೂಲವೇ ಪರಿಸರ, ಅದನ್ನು ಉಳಿಸಿಕೊಳ್ಳದೇ ನಾಶ ಮಾಡುತ್ತಿರುವ ಮನುಷ್ಯನಿಗೆ ಪರಿಸರ ದಿನ ಆಚರಿಸುವ ನೈತಿಕತೆಯೇ ಇಲ್ಲ, ಅದೊಂದು ಆತ್ಮವಂಚನೆ - ಬೂಟಾಟಿಕೆ. ಸ್ವತಃ ತನ್ನ ಕಣ್ಣನ್ನು ತಾನೇ ತಿವಿದುಕೊಂಡು ನನ್ನ ಕಣ್ಣನ್ನು ಉಳಿಸಿ ಎಂದು ಗೋಗರೆಯುವ ನಾಟಕವೇಕೆ? ಹೃದಯವನ್ನು ಇರಿದುಕೊಂಡು ಹೃದಯ ಉಳಿಸಿ ಎಂಬ ಕಣ್ಣೀರೇಕೆ? ಆತ್ಮಹತ್ಯೆ ಮಾಡಿಕೊಳ್ಳಲು ವಿಷ ಕುಡಿದು ಜೀವ ಉಳಿಸಿ ಎಂದು ಬೇಡುವಂತ ದೈನೇಸಿ ಸ್ಥಿತಿ ಏಕೆ?
ಈ ಮನುಷ್ಯನಿಗೆ ಬೇಕಿರುವುದು ದೊಡ್ಡ ದೊಡ್ಡ, ಉದ್ದುದ್ದದ ವಿಶಾಲ ರಸ್ತೆಗಳು, ಲಕ್ಜುರಿ ಅಪಾರ್ಟ್ಮೆಂಟ್ ಗಳು, ಬೃಹತ್ ಕಟ್ಟಡಗಳು, ಜಂಗಲ್ ಲಾಡ್ಜ್ ಗಳು, ಸ್ಮಾರ್ಟ್ ಸಿಟಿಗಳು, ನಿರಂತರ ವಿದ್ಯುತ್, ವಿಮಾನ ನಿಲ್ದಾಣಗಳು, ಭವ್ಯ ಆಸ್ಪತ್ರೆಗಳು, ರಾಸಾಯನಿಕ ಕಾರ್ಖಾನೆಗಳು, ಮೊಬೈಲ್, ಷೂ, ಲಿಪ್ ಸ್ಟಿಕ್, ಡ್ರೆಸ್, ಕಾರ್, ಕಮೋಡ್ ಗಳಲ್ಲಿ ಅತ್ಯುತ್ತಮ ಕ್ವಾಲಿಟಿ ನಿರೀಕ್ಷಿಸುವ - ಬಯಸುವ ಇದೇ ಮನುಷ್ಯನಲ್ಲಿ ಆತನ ದೇಹ ಮತ್ತು ಮಾನಸಿಕ ಆರೋಗ್ಯದಲ್ಲಿ ಯಾವುದೇ ಕ್ವಾಲಿಟಿ ಇರುವುದಿಲ್ಲ. ನೀರನ್ನು, ಗಾಳಿಯನ್ನು,…
ಮುಂದೆ ಓದಿ...