ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿ ಸಾಧನೆಯ ಸಮಾವೇಶ ಮಾಡುತ್ತಿದೆ. ಈ ಎರಡು ವರ್ಷಗಳ ನಂತರ ನಿಜಕ್ಕೂ ಸಮಾರಂಭವೆಂಬ ಬೃಹತ್ ವಿಜೃಂಭಣೆಯ ಕಾರ್ಯಕ್ರಮ ಮಾಡುವಷ್ಟು ಸಾಧನೆ ಈ ಸರ್ಕಾರದಿಂದಾಗಿದೆಯೇ ? ಇಲ್ಲಿನ ಶಾಸಕಾಂಗ ಮತ್ತು ಕಾರ್ಯಾಂಗ ಕಾನೂನು ಮತ್ತು ಆತ್ಮಸಾಕ್ಷಿಗೆ ಅನುಗುಣವಾಗಿ ನಿಜಕ್ಕೂ ತೃಪ್ತಿದಾಯಕವಾಗಿ ಕೆಲಸ ಮಾಡುತ್ತಿದೆಯೇ ?
ಸರ್ಕಾರದ ಸಾಧನೆಯ ಬಹುದೊಡ್ಡ ಮಾನದಂಡವೆಂದರೆ ಶಿಕ್ಷಣ, ಆರೋಗ್ಯ, ಭದ್ರತೆ, ಬೆಲೆ ನಿಯಂತ್ರಣ, ಭ್ರಷ್ಟಾಚಾರ ಇಲ್ಲದಿರುವಿಕೆ, ಸಾಮಾಜಿಕ ನ್ಯಾಯ, ಪರಿಸರ ಸಂರಕ್ಷಣೆ, ಅಪರಾಧಗಳ ನಿಯಂತ್ರಣ, ಉದ್ಯೋಗ ಸೃಷ್ಟಿ, ಮೂಲ ಸೌಕರ್ಯಗಳ ಅಭಿವೃದ್ಧಿ, ಆಡಳಿತದ ಮೇಲೆ ನಿಯಂತ್ರಣ, ಪ್ರಾದೇಶಿಕ ತಾರತಮ್ಯ ನಿವಾರಣೆ, ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆ, ಕ್ರೀಡೆ ಸಾಹಿತ್ಯ ಸಂಗೀತ ವಿಜ್ಞಾನಗಳಲ್ಲಿ ಮಹತ್ತರ ಸಾಧನೆ, ವ್ಯಕ್ತಿತ್ವ ನಿರ್ಮಾಣ, ಒಟ್ಟಾರೆ ಈ ಎಲ್ಲದರ ಬೆಳವಣಿಗೆಯಿಂದ ಜನರ ಜೀವನ ಮಟ್ಟ ಸುಧಾರಣೆ.
ಈ ನಿಟ್ಟಿನಲ್ಲಿ ಏನಾದರೂ ದೊಡ್ಡಮಟ್ಟದ ವ್ಯತ್ಯಾಸವಾಗಿದ್ದಲ್ಲಿ ಖಂಡಿತವಾಗಲು ಅದನ್ನು ಸಾಧನೆ ಎಂದು ಒಂದಷ್ಟು ಸಂಭ್ರಮ ಪಡಬಹುದು. ಇಲ್ಲದಿದ್ದರೆ ಉಳಿದ ಮೂರು ವರ್ಷಗಳಲ್ಲಿ ಈ ನಿಟ್ಟಿನಲ್ಲಿ ಸಾಕಷ್ಟು ಸುಧಾರಣೆ ಮಾಡಿ ಆನಂತರ ಸಾಧನೆಯ ಸಮಾವೇಶ ಮತ್ತು ಮುಂದಿನ ಚುನಾವಣೆಗೆ ಜನರಲ್ಲಿ ಮತ ಕೇಳಬೇಕಾಗುತ್ತದೆ.
ಇದರ ಆಧಾರದ ಮೇಲೆ ಕರ್ನಾಟಕವನ್ನು ಸಮಗ್ರವಾಗಿ ನೋಡುವುದಾದರೆ ರಾಜ್ಯ ಸರ್ಕಾರದ ಸಾಧನೆ ತೃಪ್ತಿದಾಯಕವಾಗಿಲ್ಲ. ಒಂದಷ್ಟು ಸಣ್ಣಪುಟ್ಟ ಸಹಜ ತಾಂತ್ರಿಕ ಬದಲಾವಣೆಯ ಬೆಳವಣಿಗೆ, ಅಭಿವೃದ್ಧಿಯನ್ನು ಹೊರತುಪಡಿಸಿದರೆ ಒಟ್ಟಾರೆ ಜನಜೀವನದ ಮೇಲೆ ಪರಿಣಾಮ ಬೀರುವಂತಹ ಯಾವುದೇ ಗಂಭೀರ ಪ್ರಯತ್ನಗಳು ಸಾಗುತ್ತಿಲ್ಲ. ವಸ್ತು ಸಂಸ್ಕೃತಿ ಎಂದಿನಂತೆ ಅಭಿವೃದ್ಧಿಯ, ಆಧುನಿಕ ತಂ…
ಮುಂದೆ ಓದಿ...