ಜೀವನದ ಪ್ರೀತಿಗಾಗಿ...
1 day ago - Shreerama Diwanaಮನಸ್ಸಿಗೆ ಏನೋ ಕಿರಿಕಿರಿಯಾಗುತ್ತಿದೆಯೇ ? ಒಳಗೊಳಗೆ ಹೇಳಿಕೊಳ್ಳಲಾಗದ ಅಸಹನೆ ಉಂಟಾಗುತ್ತಿದೆಯೇ ? ಕೌಟುಂಬಿಕ ಸಂಬಂಧಗಳಲ್ಲಿ ಸಹಿಸಲಾಗದ ಮಾನಸಿಕ ಹಿಂಸೆಯಾಗುತ್ತಿದೆಯೇ ? ಹೊರ ಜಗತ್ತಿನ ನಮ್ಮ ಸುತ್ತಮುತ್ತಲಿನ ಅನೇಕ ಘಟನೆಗಳು ನಮ್ಮ ಇಚ್ಚೆಗೆ ವಿರುದ್ಧವಾಗಿ ಘಟಿಸುತ್ತಿದೆಯೇ ? ಮಾಧ್ಯಮ, ಗೆಳೆತನ, ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ನಂಬಿಕೆಗೆ ವಿರೋಧ ವ್ಯಕ್ತವಾಗುತ್ತಿದೆಯೇ ? ಧರ್ಮ ಜಾತಿ ಭಾಷೆ ಹಣಕಾಸು ಪಕ್ಷ ಸಂಪ್ರದಾಯ ಸಿದ್ದಾಂತಗಳ ವಿಷಯದಲ್ಲಿ ಏನೋ ಒಂತರಾ ಕಸಿವಿಸಿ ಎನಿಸುವಂತೆ ಮನಸ್ಸಿಗೆ ತುಮಲವಾಗುತ್ತಿದೆಯೇ ? ಕೆಲವು ವಿಷಯಗಳ ಬಗ್ಗೆ ಬೇಗ ಕೋಪ ಬಂದು ಪ್ರತಿಕ್ರಿಯಿಸಿ ವಿರೋಧಿಗಳ ಸದ್ದಡಗಿಸಬೇಕು ಎಂಬ ಅಭಿಪ್ರಾಯ ಉಂಟಾಗಿ ಬಿಪಿ ಏರಿಕೆಯಾಗುತ್ತದೆಯೇ ? ಈ ರೀತಿಯ ಕೆಲವು ಅಥವಾ ಎಲ್ಲವೂ ನಿಮ್ಮಲ್ಲಿ ಉಂಟಾಗುತ್ತಿದ್ದರೆ ಅದನ್ನು ನಿಯಂತ್ರಿಸಿಕೊಳ್ಳಲು ಕೆಲವು ಸಲಹೆ ರೂಪದ ಕಿವಿಮಾತುಗಳು ನಿಮಗಾಗಿ...
ನಿಮ್ಮ ಮನಸ್ಸನ್ನು ವಿಶಾಲಗೊಳಿಸಿಕೊಂಡರೆ ಖಂಡಿತವಾಗಿ ಈ ಸಮಸ್ಯೆಗಳಿಗೆ ಸಹಜ ಸ್ವಾಭಾವಿಕವಾಗಿ ಪರಿಹಾರ ಕಂಡುಕೊಳ್ಳಬಹುದು ಮತ್ತು ನೆಮ್ಮದಿಯಿಂದ ಬದುಕಿನ ಸಾರ್ಥಕತೆಯತ್ತ ಹೆಜ್ಜೆ ಹಾಕಬಹುದು. ಹೇಗೆ ಮನಸ್ಸನ್ನು ವಿಶಾಲ ಮಾಡಿಕೊಳ್ಳುವುದು?
1) ನಮ್ಮ ಮೂಲ ನಿಷ್ಠೆಯನ್ನು ಪ್ರಕೃತಿಗೆ ವರ್ಗಾಯಿಸುವುದು: ನಮ್ಮನ್ನು ಹುಟ್ಟಿಸಿರುವ ಅಪ್ಪ ಅಮ್ಮ ನಾವು ಹುಟ್ಟಿಸುವ ಮಕ್ಕಳು ಸೇರಿ ಎಲ್ಲಾ ಸಂಬಂಧಗಳು ಒಂದು ಸಾಮಾಜಿಕ ವ್ಯವಸ್ಥೆಯೇ ಹೊರತು ಅದೇ ಅಂತಿಮವಲ್ಲ. ನಾವು ಸೃಷ್ಟಿಯ ಪ್ರತ್ಯೇಕ ಜೀವಿ. ನಮ್ಮ ಅಸ್ತಿತ್ವ ಸ್ವತಂತ್ರ. ಹುಟ್ಟಿಗೆ ಗಂಡು ಹೆಣ್ಣು ಒಂದು ಮಾರ್ಗ. ಅವರನ್ನು ವ್ಯಾವಹಾರಿಕ ಗುರುತಿಗಾಗಿ ತಂದೆ ತಾಯಿ ಮಗ ಮಗಳು ಮುಂತಾದ ಹೆಸರಿನಿಂದ ಕರೆಯಲಾಗುತ್ತದೆ. ಅದರ ಅರ್ಥ ನಾವು ಈ ಯಾವ ಸಂಬಂಧಗಳ ನಿಯಂತ್… ಮುಂದೆ ಓದಿ...