ರಾಮ ನಾಮವ ಜಪಿಸೋ, ಹೇ ಮನುಜ, ರಾಮ ನಾಮವ ಜಪಿಸೋ.. ರಾಮ ನಾಮ ಪಾಯಸಕ್ಕೆ, ಕೃಷ್ಣ ನಾಮ ಸಕ್ಕರೆ, ವಿಠಲನಾಮ ತುಪ್ಪವ ಬೆರೆಸಿ, ಬಾಯಿ ಚಪ್ಪರಿಸೋ..
ಹೀಗೆ ರಾಮ ಭಕ್ತಿಯ ಭಾವ ಗೀತೆಗಳು ಜನಮಾನಸದಲ್ಲಿ ಪ್ರಚಲಿತವಾಗಿದೆ. ಇಂದು ರಾಮನವಮಿ. ಇದೇ ವರ್ಷದಲ್ಲಿ ಬಹಳ ದೀರ್ಘ ವಿವಾದಾತ್ಮಕ ಹೋರಾಟದ ನಂತರ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆಯಾಗಿದೆ. ಕೆಲವು ಸಂಪ್ರದಾಯವಾದಿಗಳಲ್ಲಿ ಇದು ಒಂದು ಹೆಮ್ಮೆ ಎಂಬಂತೆ ಬಿಂಬಿತವಾಗಿದೆ. ಕೆಲವರಿಗೆ ಮಸೀದಿ ಒಡೆದು ನಿರ್ಮಿಸಿರುವುದು ತಪ್ಪು ಎಂಬ ಅಭಿಪ್ರಾಯವೂ ಇದೆ.
ವಿಷಯ ಏನೇ ಇರಲಿ, ಆದರೆ ಈಗ ಆಗಬೇಕಾಗಿರುವುದು ಕೇವಲ ಭಕ್ತಿ ಮಾತ್ರವಲ್ಲದೆ ವಾಸ್ತವವಾದ ಆಚರಣೆಗಳ ಅಗತ್ಯವಿದೆ. ದೈವ ಭಕ್ತಿ ಅಥವಾ ದೈವ ಶಕ್ತಿ ಕೇವಲ ಹಾಡುಗಳಲ್ಲಿ, ಬರಹಗಳಲ್ಲಿ, ಭಾಷಣಗಳಲ್ಲಿ ಮಾತ್ರ ಆಚರಣೆಯಲ್ಲಿದ್ದರೆ ಅದಕ್ಕೆ ಯಾವುದೇ ಅರ್ಥವೂ ಇರುವುದಿಲ್ಲ. ಅದೊಂದು ಮಾನಸಿಕ ಸಮಾಧಾನಕರ ಸ್ಥಿತಿ ಮಾತ್ರ. ಆದರೆ ಅದು ನಡವಳಿಕೆಯಾಗಿ ಸಮಾಜದಲ್ಲಿ ಆಚರಣೆಗೆ ಬಂದಾಗ ಮಾತ್ರ ಆ ಭಕ್ತಿಗೆ ಒಂದು ಪ್ರಾಮುಖ್ಯತೆ ಮತ್ತು ಅರ್ಥ ಸಿಗುತ್ತದೆ. ಇಲ್ಲದಿದ್ದರೆ ಅದನ್ನು ಪ್ರಜ್ಞಾವಂತ ಸಮೂಹ ಸದಾ ಪ್ರಶ್ನಿಸುತ್ತಲೇ ಇರುತ್ತದೆ.
ಆ ಕಾರಣದಿಂದ ಅದು ಕಾಲ್ಪನಿಕವೇ ಆಗಿದ್ದರು, ರಾಮ ಕೃಷ್ಣರ ನಿಜವಾದ ಆದರ್ಶಗಳನ್ನು ಮೆಚ್ಚುವವರು, ಪೂಜಿಸುವವರು, ಒಪ್ಪಿದವರು ನೀವಾಗಿದ್ದರೆ ಕನಿಷ್ಠ ಈ ರಾಮನವಮಿಯ ದಿನದಿಂದಲಾದರು ನಿಮ್ಮೊಳಗಡೆ ಈ ರೀತಿಯ ಬದಲಾವಣೆ ಸಾಧ್ಯವಾಗಬೇಕು ಎಂಬ ನಿರೀಕ್ಷೆ ನಮ್ಮದು. ಅಂದಿನ ಕಾಲದ ಆ ಮಹಾ ಗ್ರಂಥಗಳ ರಾಮ - ಕೃಷ್ಣರ ಆದರ್ಶಗಳಲ್ಲಿ ಕೆಲವು ಇಂದಿಗೂ ಪ್ರಸ್ತುತ, ಮತ್ತೆ ಕೆಲವು ಅಪ್ರಸ್ತುತ, ಮತ್ತೊಂದಿಷ್ಟು ಅನುಸರಣೆಗೆ ಯೋಗ್ಯವೂ ಅಲ್ಲ. ಇಂದಿನ ಆಧುನಿಕ ಪ್ರಜಾಪ್ರಭುತ್ವ ವ್ಯವಸ್ಥೆ…
ಮುಂದೆ ಓದಿ...