ಹೇಳಿದ್ದು ಪಾಲನೆಯಾಗುತ್ತೆ ...!
7 hours 11 minutes ago - ಬರಹಗಾರರ ಬಳಗ
ಭಾರತದ ಭಾವಿ ಪ್ರಜೆಗಳನ್ನು ದೇಶನಿಷ್ಠರನ್ನಾಗಿ, ಸತ್ಪ್ರಜೆಗಳನ್ನಾಗಿ, ಸುಸಂಸ್ಕೃತರನ್ನಾಗಿ, ಉತ್ತಮ ಪೌರರನ್ನಾಗಿ, ದೇಶದ ಏಳಿಗೆಗೆ ಶ್ರಮಿಸುವ, ಸದ್ಭಾವದ, ಸಹಬಾಳ್ವೆಯ ಸಚ್ಚಾರಿತ್ರ್ಯವಂತರನ್ನಾಗಿ ರೂಪಿಸುವ ನಿಟ್ಟಿನಲ್ಲಿ ಪೌರನೀತಿಯ ಬೋಧನೆ ಮಹತ್ತರ ಪಾತ್ರ ವಹಿಸಬಲ್ಲದು. ಈ ನಿಟ್ಟಿನಲ್ಲಿ ಐದನೇ ತರಗತಿಯ ಸಮಾಜ ವಿಜ್ಞಾನದ ಪೌರನೀತಿಯ ಕಲಿಕಾ ಪ್ರಕ್ರಿಯೆ ಸಂದರ್ಭ ಹಾಗೂ ಮುಂದುವರೆದ ದಿನಗಳಲ್ಲಿ ಆದ ಅನುಭವವನ್ನು ತಮ್ಮೊಂದಿಗೆ ಹಂಚಿಕೊಳ್ಳುವ ಪುಟ್ಟ ಪ್ರಯತ್ನ ಇದಾಗಿದೆ.
ರಾಷ್ಟ್ರಗೀತೆ - ಜನಗಣಮನ ಅಧಿನಾಯಕ ಜಯಹೇ ಭಾರತದ ರಾಷ್ಟ್ರಗೀತೆ. ರವೀಂದ್ರನಾಥ ಠಾಕೂರ್ ಅವರು 1911ರಲ್ಲಿ ಬಂಗಾಲಿ ಭಾಷೆಯಲ್ಲಿ ರಚಿಸಿದ ದೀರ್ಘಗೀತೆಯ ಐದು ಪದ್ಯಗಳಲ್ಲಿ ಮೊದಲ ಪದ್ಯದ ಸಾಲುಗಳನ್ನು ಮಾತ್ರ ಆಯ್ದಕೊಂಡು ಈ ರಾಷ್ಟ್ರಗೀತೆಯನ್ನು ರೂಪಿಸಲಾಗಿದೆ. ಸ್ವತಂತ್ರ ಭಾರತದ ಸಂವಿಧಾನ ರಚನಾಸಭೆಯು 1950 ಜನವರಿ 24ರಂದು ಇದನ್ನು ರಾಷ್ಟ್ರಗೀತೆ ಎಂದು ಅಂಗೀಕರಿಸಿತು. ರವೀಂದ್ರನಾಥ ಠಾಕೂರ್ ಸಂಪಾದಕರಾಗಿದ್ದ ತತ್ತ್ವಬೋಧಿನಿ ಪತ್ರಿಕಾ ಎಂಬ ಪತ್ರಿಕೆಯಲ್ಲಿ ಇದು 1912ರಲ್ಲಿ ಮೊದಲಿಗೆ ಪ್ರಕಟವಾಗಿತ್ತು. ಪ್ರಕಟಣೆಗೆ ಮೊದಲು ಈ ಗೀತೆಯನ್ನು 27 ಡಿಸೆಂಬರ್ 1911ರಂದು ಕಲ್ಕತ್ತದಲ್ಲಿ ನೆರೆದ ಅಖಿಲ ಭಾರತ ಕಾಂಗ್ರೆಸ್ ಅಧಿವೇಶನದಲ್ಲಿ ಹಾಡಲಾಗಿತ್ತು. ರವೀಂದ್ರನಾಥ ಠಾಕೂರ್ ಅವರು ಇದನ್ನು 'ಮಾರ್ನಿಂಗ್ ಸಾಂಗ್ ಆಫ್ ಇಂಡಿಯಾ' ಎಂಬ ಹೆಸರಿನಲ್ಲಿ 1919ರಲ್ಲಿ ಇಂಗ್ಲಿಷಿಗೆ ಅನುವಾದಿಸಿದ್ದರು. ಇದು ಭಾರತ ಇಬ್ಭಾಗವಾಗುವುದಕ್ಕೆ ಮೊದಲು ಬರೆದ ಗೀತೆಯಾದರೂ ಇದರಲ್ಲಿ ಬರುವ ರಾಷ್ಟ್ರದ ವಿವಿಧ ಪ್ರದೇಶಗಳ ಹೆಸರುಗಳನ್ನು ಬದಲಾಯಿಸದಿರುವುದು ಗಮನಾರ್ಹ. ಈ ಹೆಸರುಗಳು ವಿವಿಧ ಭಾರತೀಯ ಜನಾಂಗಗಳನ್ನು ಸೂಚಿಸುತ್ತವೆ. ಹಾಗಾಗಿ ಈ ಗೀತೆಯನ್ನು ರಾಷ್ಟ್… ಮುಂದೆ ಓದಿ...