ಜನವರಿ 26 ರ ಗಣರಾಜ್ಯೋತ್ಸವದ ಸನಿಹದಲ್ಲಿ… ಪ್ರಕೃತಿ ವಿಕೋಪ ಮತ್ತು ಅಭಿವೃದ್ಧಿ ಒಂದಕ್ಕೊಂದು ಬೆಸದಿದೆಯೇ ? ಅನಾರೋಗ್ಯ ಮತ್ತು ಅಭಿವೃದ್ಧಿ ಜೊತೆಗಾರರೇ ? ಅಪಘಾತ ಅಸಹನೆ ವಂಚನೆ ಮಾನಸಿಕ ರೋಗ ಅಭಿವೃದ್ಧಿಯ ಭಾಗವೇ? ಇದು ಅನಿವಾರ್ಯವೇ ? ಅನಿರೀಕ್ಷಿತವೇ ? ಸ್ವೀಕಾರಾರ್ಹವೇ ?
ಪರಿಸರ ತಜ್ಞರ ಅಭಿಪ್ರಾಯ, ಉದ್ಯಮಿಗಳ ಅಭಿಪ್ರಾಯ, ಆರ್ಥಿಕ ತಜ್ಞರ ಅಭಿಪ್ರಾಯ,ರಾಜಕಾರಣಿಗಳ ಅಭಿಪ್ರಾಯ, ಜನ ಸಾಮಾನ್ಯರ ಅಭಿಪ್ರಾಯ ಏನಿರಬಹುದು ಮತ್ತು ಮಾನವನ ಹಿತಾಸಕ್ತಿಯ ದೃಷ್ಟಿಯಿಂದ ಯಾವುದು ಒಳ್ಳೆಯದು ಎಂದು ಯೋಚಿಸತೊಡಗಿದಾಗ… ಭೂಮಿ ಇರುವಷ್ಟೇ ಇದೆ ಮತ್ತು ಹಾಗೆಯೇ ಇರುತ್ತದೆ. ಸ್ವಲ್ಪ ಸಮುದ್ರಗಳ ಕೊರೆತದಿಂದ ಒಂದಷ್ಟು ಸಣ್ಣದಾಗಬಹುದು. ಅದನ್ನು ಸಹ ದೇಶಗಳಾಗಿ ವಿಭಜನೆ ಮಾಡಿ ರಿಜಿಸ್ಟರ್ ಮಾಡಿಸಿಕೊಳ್ಳಲಾಗಿದೆ. ಅದು ಇನ್ನು ದೊಡ್ಡದಾಗುವ ಯಾವ ಸಾಧ್ಯತೆಯೂ ಇಲ್ಲ. ಇರುವುದರಲ್ಲೇ ಅಡ್ಜೆಸ್ಟ್ ಮಾಡಿಕೊಂಡು ಬದುಕಬೇಕಿದೆ.
ಇನ್ನು ಈ ಜಾಗದಲ್ಲಿ ಇರುವ ಮಾನವ ಅವಶ್ಯಕತೆಯ ನೈಸರ್ಗಿಕ ಸಂಪನ್ಮೂಲಗಳು ಸಾಕಷ್ಟು ವರ್ಷಗಳು, ಸಾಕಷ್ಟು ಜನರಿಗೆ ಸಾಕಾಗುವಷ್ಟು ಇದೆ. ಆದರೆ ಆ " ಸಾಕಷ್ಟು " ಎಂಬುದೇ ಬಹುದೊಡ್ಡ ಪ್ರಶ್ನೆ ಮತ್ತು ನಮ್ಮ ಎದುರಿಗಿರುವ ಸವಾಲು. ಮಳೆ, ಗಾಳಿ, ಕಾಡು, ನೀರು, ಸಮುದ್ರ, ಗಣಿ, ಕೃಷಿ, ಮಣ್ಣು, ಕಲ್ಲು, ಮುಂತಾದ ಎಲ್ಲವೂ ಒಂದು ಮಿತಿಗೆ ಒಳಪಟ್ಟು ಸಾಕಷ್ಟು ಸಿಗುತ್ತದೆ. ಅದು ಈಗ ಮಿತಿ ಮೀರಿದೆ ಎಂದು ಭಾಸವಾಗುತ್ತಿದೆ.
ಭಾರತವನ್ನೇ ಒಂದು ಉದಾಹರಣೆಯಾಗಿ ತೆಗೆದುಕೊಳ್ಳೋಣ. ಸ್ವಾತಂತ್ರ್ಯ ಪೂರ್ವದಲ್ಲಿ ದಟ್ಟ ಕಾಡುಗಳ, ಗಿರಿ ಶಿಖರಗಳ, ಹಿಮಾಚ್ಛಾದಿತ ಪ್ರದೇಶಗಳ ಸಮೃದ್ಧ ನದಿಗಳ ನಾಡಾಗಿತ್ತು. ಈ ಬೃಹತ್ ದೇಶದ ಜನಸಂಖ್ಯೆ ಸ್ವಾತಂತ್ರ್ಯದ ಸಮಯದಲ್ಲಿ ಕೇವಲ ಸುಮಾರು 36 ಕೋಟಿಯಾಗಿತ್ತು. ವಾಹನಗಳು ತುಂಬಾ ಕಡಿಮೆ. ಮನ…
ಮುಂದೆ ಓದಿ...