ಶಕ್ತಿಯಿದ್ದರೆ ಬಂಗಲೆಯಲ್ಲಿ ಒಬ್ಬ, ಬಯಲಿನಲ್ಲಿ ಒಬ್ಬ ವಾಸಿಸುವುದನ್ನು ತಡೆ, ಕರುಣೆ ಇದ್ದರೆ ಪುಟ್ಟ ಬಾಲಕಿಯರ ಮೇಲೆ ನಡೆಯುವ ಅತ್ಯಾಚಾರ ತಡೆ, ಆತ್ಮವಿದ್ದರೆ ಒಬ್ಬನಿಗೆ ಭಕ್ಷ್ಯ ಭೋಜನದ ಸುಖ, ಇನ್ನೊಬ್ಬನಿಗೆ ಹಸಿವಿನ ನೋವು ತಡೆ, ಧ್ಯೆರ್ಯವಿದ್ದರೆ ನಿನ್ನದೇ ಮುಗ್ಧ ಜನರನ್ನು ಕೊಲ್ಲುವ ಭಯೋತ್ಪಾದಕರನ್ನು ತಡೆ, ಗೊತ್ತಿದ್ದರೆ ಸಾರ್ವಜನಿಕ ಹಣ ಲೂಟಿ ಹೊಡೆಯುವ ಭ್ರಷ್ಟರನ್ನು ತಡೆ, ತಿಳಿದಿದ್ದರೆ ಲಕ್ಷಾಂತರ ಜನ ಸಾಯುವ ಅಪಘಾತಗಳನ್ನು ತಡೆ, ಅರ್ಥವಾದರೆ ಖಾಯಿಲೆಗಳಿಂದ ಜನ ಅಕಾಲಿಕವಾಗಿ ಸಾಯುವುದನ್ನು ತಡೆ, ಬುದ್ದಿಯಿದ್ದರೆ ರೈತರ ಆತ್ಮಹತ್ಯೆಗಳನ್ನು ತಡೆ, ಪ್ರೀತಿಯಿದ್ದರೆ ಹೆಣ್ಣಿನ ಮೇಲಿನ ಕಾಮುಕರ ಅಟ್ಟಹಾಸ ತಡೆ, ಕಾಡು ನಿನ್ನದಾದರೆ ಅದನ್ನು ನಾಶಮಾಡುತ್ತಿದ್ದೇವೆ, ತಡೆ ನೋಡೋಣ, ನೀರು ನಿನ್ನದಾದರೆ ಅದನ್ನು ಮುಗಿಸುತ್ತಿದ್ದೇವೆ, ತಡೆ ನೋಡೋಣ, ಗಾಳಿ ನಿನ್ನದಾದರೆ ಅದನ್ನು ಮಲಿನ ಮಾಡುತ್ತಿದ್ದೇವೆ, ತಡೆ ನೋಡೋಣ, ಪ್ರಾಣಿ ಪಕ್ಷಿಗಳು ನಿನ್ನದಾದರೆ ಅದನ್ನು ಇಲ್ಲವಾಗಿಸುತ್ತಿದ್ದೇವೆ ತಡೆ ನೋಡೋಣ, ಭೂಮಿ ನಿನ್ನದಾದರೆ ಅದನ್ನು ಕೊರೆಯುತ್ತಿದ್ದೇವೆ, ತಡೆ ನೋಡೋಣ, ಏಕೆ ಕಾಣದ ಜಾಗದಲಿ ಮರೆಯಾಗಿರುವೆ, ಏಕೆ ಮಂದಿರ, ಮಸೀದಿ, ಚರ್ಚುಗಳಲ್ಲಿ ಬಂಧಿಯಾಗಿರುವೆ, ಏಕೆ ಪೂಜಾರಿ, ಪಾದ್ರಿ, ಮೌಲ್ವಿಗಳ ಬೆನ್ನಹಿಂದೆ ಅಡಗಿರುವೆ, ಏಕೆ ಪವಿತ್ರ
ಮುಂದೆ ಓದಿ...