ಶಂಕರ್ ನಾಗ್: ಒಂದು ನೆನಪು...
ಶಂಕರನಾಗ್ ಅವರು ನಮ್ಮನ್ನು ಅಗಲಿ ಇಂದಿಗೆ ಹದಿನೆಂಟು ವರ್ಷ.
ಶಂಕರ್ ನಾಗ್ ಎಂದರೆ ಸಾಕು ಕನ್ನಡಿಗರಲ್ಲಿ ಏನೋ ಒಂದು ರೀತಿ ಹುರುಪು ಮತ್ತು ಲವಲವಿಕೆ ಮೂಡುತ್ತದೆ. ಸಾಧನೆಯ ಉತ್ತುಂಗಕ್ಕೇರುವ ತವಕದಲ್ಲಿ ಅವಿರತವಾಗಿ ಪಾದರಸದಂತೆ ಕೆಲಸಮಾಡುತ್ತಿದ್ದ ಶಂಕರ್ ಮೇಲೆ ವಿಧಿಗೆ ಅದೇನು ಮುನಿಸೋ ಏನೋ . 1990ರ ಸೆ. 30ರಂದು ತನ್ನ ಬಳಿಗೆ ಕರೆದುಕೊಂಡು ಬಿಟ್ಟಿತು.
ಕನ್ನಡ ಚಿತ್ರರಂಗವನ್ನು ಮುಂಚೂಣಿಯಲ್ಲಿ ಸಾಗುವಂತೆ ಮಾಡಿದ ನಾಗ್ ಅವರಿಗೆ ಮುಂದೊಂದು ದೊಡ್ಡ ಆಘಾತ ಕಾದ್ದಿತ್ತು. ತಮ್ಮ ಮುಂದಿನ ಚಿತ್ರ "ಜೋಕುಮಾರ ಸ್ವಾಮಿ" ಕುರಿತು ಚರ್ಚಿಸಲು ಪತ್ನಿ ಅರುಂಧತಿ ನಾಗ್ ಹಾಗೂ ಪುತ್ರಿಯೊಂದಿಗೆ ಅದು ಸೆಪ್ಟೆಂಬರ್ 30, 1990 ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ತಮ್ಮ ಕಾರಿನಲ್ಲಿ ಬೆಂಗಳೂರಿಗೆ ಹೋಗುತ್ತಿದ್ದಾಗ, ದಾವಣಗೆರೆ ಹತ್ತಿರ ಅವರು ಹೋಗುತ್ತಿದ್ದ ಕಾರು ಅಪಘಾತಕ್ಕೆ ಈಡಾಯಿತು. ಅದರಲ್ಲಿ ನಾಗ್ ಅವರನ್ನು ಬಿಟ್ಟು ಎಲ್ಲರೂ ಉಳಿದರು. ಆದರೆ, ಶಂಕರ್ ನಾಗ್.... ಅಮರರಾದರು. ಶಂಕರ್ ನಮ್ಮೊಂದಿಗಿಲ್ಲ ಎಂಬುದನ್ನು ಜೀರ್ಣಿಸಿಕೊಳ್ಳಲು ಇಂದಿಗೂ ಕನ್ನಡ ಚಿತ್ರರಂಗಕ್ಕೆ ಕಷ್ಟವಾಗುತ್ತಿದೆ.
- Read more about ಶಂಕರ್ ನಾಗ್: ಒಂದು ನೆನಪು...
- 8 comments
- Log in or register to post comments