ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಮೈ ಮನಗಳ ಸುಳಿಯಲ್ಲಿ - ಒಂದು ಸಮೀಕ್ಷೆ

(ವೇಶ್ಯಾವಾಟಿಕೆ ಎಷ್ಟರಮಟ್ಟಿಗೆ ಸಾಮಾಜಿಕವಾಗಿ ಒಪ್ಪಲರ್ಹ, ಎಂಬುದನ್ನು ಮತ್ತೊಂದು ಲೇಖನದಲ್ಲಿ ಚರ್ಚಿಸಿದರಾಯಿತು. ಈ ಲೇಖನ, ಕೇವಲ acceptable prostitution ಬಗ್ಗೆ ಮಾತನಾಡುತ್ತದೆ.)

ಅನುಭವವನ್ನು ಕಾದಂಬರಿಯಲ್ಲಿ ತುಂಬಲು ಶಿವರಾಮ ಕಾರಂತರು ಮಾಡಿದ ಮತ್ತೊಂದು ಪ್ರಯತ್ನವೇ “ಮೈ ಮನಗಳ ಸುಳಿಯಲ್ಲಿ”. ಎಂದಿನಂತೆ ಕಾರಂತರು, ಕಥೆಯನ್ನು ಹೇಳುತ್ತ ಹೋಗುತ್ತಾರೆ. ಅವರ narrationನಲ್ಲಿ ಓದುಗನನ್ನು ಸೆಳೆದೆ ಹಿಡಿಯಬೇಕೆಂಬ ಹಂಬಲವಿಲ್ಲ. ಕಾದಂಬರಿಯನ್ನು ಅರ್ಧಕ್ಕೆ ನಿಲ್ಲಿಸಿ ಎದ್ದರೆ, ಎನೋ ಕಳೆದುಕೊಂಡೆ ಎನ್ನುವಂತಹ ಚಡಪಡಿಕೆ ಮೂಡಿಸುವದಿಲ್ಲ. ಆದರೆ, ಕಥೆಯನ್ನು ಹೇಳಿದಂತೆಲ್ಲ, ಕೇಳುವ ತಾಳ್ಮೆಯನ್ನು ಸೃಷ್ಟಿಸುತ್ತಾರೆ. ಇದು ಪಕ್ಷಪಾತ ರಹಿತ ಸಾಹಿತ್ಯಕ್ಕಿರಬೇಕಾದ ಮಹತ್ವದ ಲಕ್ಷಣ (ಇದು ಭೈರಪ್ಪನವರ ಕಾದಂಬರಿಗಳಲ್ಲಿ ಕಂಡುಬರುವದಿಲ್ಲ. ಹೀಗಾಗಿ, ಅವರನ್ನು ನಿಷ್ಪಕ್ಷಪಾತ ಸಾಹಿತಿ ಎಂದು ನಾನು ಹೇಳಲಾರೆ.)

ಕಾರಂತರ ಎಲ್ಲ ಕಾದಂಬರಿಗಳನ್ನು ಗಮನಿಸಿದಾಗ, ಅವರು ಎಲ್ಲ ಪಾತ್ರಗಳನ್ನೂ ಅದರ ಸಾಮಾನ್ಯ ಪರಿಧಿಯಲ್ಲಿಯೇ ನಿಲ್ಲಿಸಿ ಅದಕ್ಕೆ ತೂಕ ತುಂಬುತ್ತಾರೆ. ಪಾತ್ರ ಬಣ್ಣ ಹಚ್ಚಿದಕ್ಷಣ ತನ್ನ ಎಲ್ಲ ಸಾಮಾನ್ಯ ಗುಣಗಳನ್ನು ಕಳೆದುಕೊಂಡು ಒಂದು ಹಂತ ಎತ್ತರಕ್ಕೆ ಹೋಗಲಾರದು.ಹಾಗೆ ಹೋಗಬಾರದು ಕೂಡ (ಹಾಗೇನಾದರೂ ಆದರೆ, ಪಾತ್ರಗಳು ತಮ್ಮ ನೈಜತೆಯನ್ನು ಕಳೆದುಕೊಂಡು, ಢೋಂಗಿಯಾಗಿಬಿಡುತ್ತವೆ. ಓದುಗನಿಗೆ ಒಂದು fairy tailನ ಅನುಭವ ಕೊಡುತ್ತವೆ. ಅಲ್ಲದೇ, ಅಲ್ಲಿ ಬರುವ “values and ethics” impractical ಆಗಿರುವ ಸಾಧ್ಯತೆ ಹೆಚ್ಚು).

ಮರಳಿ ಬರಲಿ ಬಾಲ್ಯ

 ತಾವು ದೊಡ್ಡವರಾಗುತ್ತಾ ತಾವು ಸ್ವತಂತ್ರರು ತಮಗೆ ಇಷ್ಟ ಬಂದಂತೆ ತಾವು ನಡೆದುಕೊಳ್ಳಬಹುದು ಎಂದುಕೊಳ್ಳುತ್ತೇವೆ. ಆದರೆ ನಿಜವಾಗಲು ಅವರು ಸ್ವಾತಂತ್ರ್ಯ ಕಳೆದುಕೊಳ್ಳುತ್ತಾರೆ. ಬಾಲ್ಯದ ದಿನಗಳಲ್ಲಿ ಇದ್ದ ಸ್ವತಂತ್ರತೆ, ಉಲ್ಲಾಸ, ಸಂತೋಷವನ್ನು ದೊಡ್ಡವರಾಗುತ್ತಾ ಕಳೆದುಕೊಳ್ಳುತ್ತೇವೆ.

ಇಂಬಕ್ಕ

( ನನ್ನೀ ಪುಟ್ಟ ಕತೆಯನ್ನು ಪ್ರಕಟಿಸಿ ಪ್ರೋತ್ಸಾಹಿಸಿದ ’ತರಂಗ’ ವಾರಪತ್ರಿಕೆಗೆ ಧನ್ಯವಾದಗಳು.)
"ತೇಜು ಇನ್ನ ಬೇಕಾದ್ರೆ ಎದ್ಕಳ್ಲಕ್ಕೇ ಮನೆ ಹತ್ರ ಬಂತು, ಇನ್ನು ಮನಿಗ್ಹೋಗೆ ಮಲ್ಗಲಕ್ಕೂ‌" ಎಂಬ ಅಪ್ಪನ ಎಚ್ಚರಿಸುವಿಕೆಯಿಂದಲೇ ನನಗರಿವಾದದ್ದು ನಾನಿರುವುದು ಕಾರಿನಲ್ಲಿ ಎಂದು. ಪ್ರಯಾಸದಿಂದ ಕಣ್ಣು ಬಿಟ್ಟು ವಾಚ್ ನೋಡಿದರೆ ಗಂಟೆ ಆರು ಆಗಿತ್ತು. ಮಧ್ಯಾಹ್ನ ಒಂದು ಗಂಟೆಗೇ ಮಂಗಳೂರಿನಿಂದ ಹೊರಟಿದ್ದರೂ ಶಿರಸಿ ಮುಟ್ಟುವಾಗ ಐದು ತಾಸು ಬೇಕಾಯಿತೇ ಎಂದು ಆಶ್ಚರ್ಯವಾಯಿತು. ಅಷ್ಟೂ ಹೊತ್ತು ಒಂದೇ ಭಂಗಿಯಲ್ಲಿ ಕುಳಿತಿದ್ದರಿಂದ ಮೈಯನ್ನೆಲ್ಲಾ ಒಂದು ತರಹ ಜಡತ್ವ ತುಂಬಿದಂತಾಗಿತ್ತು. ಅದನ್ನು ನೀಗಿಸಲು ಕಾರಿನ ಕಿಟಿಗಿ ಗಾಜನ್ನು ತೆಗೆದೆ,ಕೂಡಲೇ ಘಟ್ಟದ ತಂಪಾದ ಮುಸ್ಸಂಜೆ ಗಾಳಿ ರೊಯ್ಯನೆ ತೂರಿ ಬಂದು ಮೈ ಮನವನ್ನೆಲ್ಲಾ ಉಲ್ಲಾಸಗೊಳಿಸಿತು. ಆಗಲೇ ಕಾರು ಮನೆಯ ದಣಪೆಯ ಮುಂದೆ ನಿಂತಾಗಿತ್ತು.

ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಸಪ್ತಮಿ

ಇವತ್ತು ನವರಾತ್ರಿಯ ಏಳನೇ ದಿನ. ಮತ್ತೆ ಇವತ್ತೇ ಹೆಚ್ಚು ಜನರ ಮನೆಯಲ್ಲಿ ಸರಸ್ವತೀ ಪೂಜೆ ಕೂಡ. ಕೆಲವರು ಮಹಾನವಮಿಯ ಆಯುಧಪೂಜೆಯ ದಿನ ಸರಸ್ವತೀ ಪೂಜೆ ಮಾಡುವುದೂ ಉಂಟು.ಸರಸ್ವತಿ ಎಂದರೆ ನನಗೆ ನೆನಪಾಗುವುದು ಶೃಂಗೇರಿಯ ಶಾರದೆ. ಅದೆಂತಹ ಪ್ರಶಾಂತ ಸ್ಥಳ? ಅಲ್ಲಿ ದಸರೆಯ ಸಮಯದಲ್ಲಿ ನಡೆಯುವುವ ಪೂಜೆಗಳೂ ಹೆಚ್ಚಾಯದ್ದೇ. ಮಳಗಾಲ ಮುಗಿಯುತ್ತ ಬಂದಿರುವುದರಿಂದ ತಿಳಿಯಾಗಿ ಹರಿಯುವ ತುಂಗೆ. ಅದಕ್ಕೇ ಇರಬೇಕು ಶೃಂಗೇರಿಯ ಶಾರದೆಯ ಮೇಲಿರುವ ಸಂಗೀತ ರಚನೆಗಳಿಗೂ ಕೊರತೆ ಇಲ್ಲ.

ಕೆಲವು ಪ್ರಸಿದ್ಧ ಸರಸ್ವತೀ ಸ್ತುತಿಗಳನ್ನು ಕನ್ನಡಕ್ಕೆ(ಭಾವಾನುವಾದದಲ್ಲಿ) ತಂದಿರುವೆ. ಓದಿ, ನಂತರ ಹಾಡು ಕೇಳಬಹುದು. ಅಲ್ಲವೇ?

ಸರಸತಿಯೆ ತಲೆಬಾಗುವೆನು ಮನದಾಸೆಗಳನೀವಳೆ
ಅರಿವಿನಾಸೆಯೆನಗಿರಲು ಹರಸು ಕೈಗೂಡುತಿರಲೆಂದು

ಕೆಂಪು, ಹಳದಿ ಮತ್ತು ಹಸಿರು ಬಣ್ಣದ ಸೂಚಿ

ಆಕ್ವಗಾರ್ಡ್ ಮುಂದೆ ನಿಂತುಕೊಳ್ಳಿ, ವಿದ್ಯುತ್ ಹರಿಸುವ ಗುಂಡಿಯೊತ್ತಿ. ಕೆಂಪು ದೀಪ ಹತ್ತುತ್ತದೆ.ನಿಲ್ಲಿ ಎನ್ನುವ ಸೂಚನೆ! ಕಾಯುತ್ತಿರಿ, ಹಳದಿ ದೀಪಕ್ಕೆ ಬದಲಾಗುತ್ತದೆ. ಇನ್ನೇನು ನಿಮ್ಮ ದಾರಿ ಸುಗಮ ಎನ್ನುತ್ತದೆ. ಮತ್ತೆ ಕೆಲವು ಕ್ಷಣಗಳಲ್ಲಿ ಹಸಿರು ದೀಪ ಮತ್ತು ಶುದ್ಧ (!)ನೀರು ಬರುತ್ತದೆ. ನೀರು ಹಿಡಿಯಲು ಆರಂಭಿಸಿರಿ. ಇದರ ಚಲನ ಚಿತ್ರ ಇಲ್ಲಿ ನೋದಿ

ಸಾಗರಕ್ಕೆ ಒಮ್ಮೆ ಹೋಗಿ ಬನ್ನಿ

ಮೊನ್ನೆ ಅಂದರೆ 24ನೇ ತಾರೀಖು ಸಾಗರಕ್ಕೆ ಬೇಟಿ ನೀಡಿದ್ದೆ. ಬೆಂಗಳೂರಿನಿಂದ ರೈಲಿನಲ್ಲಿ ಶಿವಮೊಗ್ಗ ಎಕ್ಸ್ ಪ್ರೆಸ್ ನಲ್ಲಿ ಹೊರಟೆ ರೈಲು ಬೆಳಿಗ್ಗೆ 5:30ಗೆ ಹೋಗಬೇಕಾದದ್ದು 2 ಗಂಟೆ ತಡವಾಗಿ ಹೋಯಿತು, ಶಿವಮೊಗ್ಗ ಹತ್ತಿರ ಹೋಗುತ್ತಿದ್ದಾಗೆ ಜಿಟೆ ಜಿಟೆ ಮಳೆ ಬೀಳುತ್ತಿತ್ತು ಆ ಮಳೆಯಲ್ಲಿ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದರೆ ಅದರ ಮಜಾನೆ ಬೇರೆ.