ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ನಯಸೇನನ ಸಲೀಸಾದ ಸಾಲುಗಳು

ತುಂಬ ದಿನ ಆದ ಮೇಲೆ ಯಾವುದಾದರು ಹಳೆಗನ್ನಡದ(ಅಲ್ಲ ಹಿರಿಗನ್ನಡದ) ಕಬ್ಬವೋದಬೇಕೆಂಬ ಆಸೆಯಾಯಿತು. ತುಂಬ ದಿನಗಳ ಕೆಳಗೆ ನಯಸೇನನ 'ದರ್ಮಾಮ್ರುತಂ' ಇಲ್ಲಿಂದ ಇಳಿಸಿಟ್ಟಿದ್ದೆ.

ಮನದ ಮುಂದಣ ಮಾಯೆ

ಪ್ರಹ್ಲಾದ ಅಗಸನಕಟ್ಟೆಯವರ `ಮನದ ಮುಂದಣ ಮಾಯೆ' ಸಂಕಲನಕ್ಕೆ ಸಾಹಿತ್ಯ ಅಕೆಡಮಿಯ ಪುರಸ್ಕಾರ ಸಂದಿದೆ. ಈ ಸಂಕಲನದಲ್ಲಿ ಒಟ್ಟು ಹನ್ನೆರಡು ಕಥೆಗಳಿವೆ. ಬೆಂಗಳೂರಿನ ಕ್ರೈಸ್ಟ್ ಕಾಲೇಜಿನ ಕನ್ನಡ ಸಂಘ ಹೊರತಂದಿದೆ.

ಮನದ ಮುಂದಣ ಮಾಯೆ

ಪುಸ್ತಕದ ಲೇಖಕ/ಕವಿಯ ಹೆಸರು
ಪ್ರಹ್ಲಾದ ಅಗಸನಕಟ್ಟೆ
ಪ್ರಕಾಶಕರು
ಬೆಂಗಳೂರಿನ ಕ್ರೈಸ್ಟ್ ಕಾಲೇಜಿನ ಕನ್ನಡ ಸಂಘ

ಪ್ರಹ್ಲಾದ ಅಗಸನಕಟ್ಟೆಯವರ `ಮನದ ಮುಂದಣ ಮಾಯೆ' ಸಂಕಲನಕ್ಕೆ ಸಾಹಿತ್ಯ ಅಕೆಡಮಿಯ ಪುರಸ್ಕಾರ ಸಂದಿದೆ. ಈ ಸಂಕಲನದಲ್ಲಿ ಒಟ್ಟು ಹನ್ನೆರಡು ಕಥೆಗಳಿವೆ. ಬೆಂಗಳೂರಿನ ಕ್ರೈಸ್ಟ್ ಕಾಲೇಜಿನ ಕನ್ನಡ ಸಂಘ ಹೊರತಂದಿದೆ.

೧೦ನೇ ಸಂಚಿಕೆ: ನಾಗೇಶ ಹೆಗಡೆಯವರೊಂದಿಗೆ

ನಾಗೇಶ ಹೆಗಡೆಯವರೊಂದಿಗೆ ಪ್ರಶಾಂತ ಪಂಡಿತ್

ವಿಜ್ಞಾನ, ಪತ್ರಿಕಾ ಮಾಧ್ಯಮ, ಪರಿಸರ ಹೋರಾಟ, ಸೃಜನಶೀಲ ಬರವಣಿಗೆ ಹೀಗೆ ಮೇಲ್ನೋಟಕ್ಕೆ ಒಂದಕ್ಕೊಂದು ಸಂಬಂಧವಿಲ್ಲದಂತೆ ತೋರುವ ಕಾರ್ಯಕ್ಷೇತ್ರಗಳಲ್ಲಿ ಕಳೆದ ಸುಮಾರು ಮೂರು ದಶಕಗಳಿಂದ ತೊಡಗಿಸಿಕೊಂಡಿರುವ ನಾಗೇಶ ಹೆಗಡೆ ನಮ್ಮ ನಡುವಿನ ಅಪರೂಪದ ಚಿಂತಕ. ಅವರ ಬರಹಗಳನ್ನು ಓದುತ್ತಾ ಬೆಳೆದಿರುವ ನನಗೆ ಅವರು ಕನ್ನಡದ ಸಂದರ್ಭದಲ್ಲಿ ಶಿವರಾಮ ಕಾರಂತ, ಗೌರೀಶ ಕಾಯ್ಕಿಣಿ, ಮೂರ್ತಿರಾಯರ ವೈಚಾರಿಕ ಪರಂಪರೆಯ ಮುಂದುವರಿಕೆಯಾಗಿ ಕಾಣುತ್ತಾರೆ. ಆದರೆ ಈ ಹಿರಿಯರಂತೆ ಕತೆ, ಕಾವ್ಯ, ಕಾದಂಬರಿಗಳನ್ನು ಬರೆಯದ ನಾಗೇಶ ಹೆಗಡೆ ಸಾಹಿತ್ಯದ ಎಲ್ಲಾ ಪ್ರಕಾರಗಳ ಸತ್ವವನ್ನು ಹೀರಿ ಭಾಷೆಯ ಸೊಗಡನ್ನೂ ಶಕ್ತಿಯನ್ನೂ ವೈಜ್ಞಾನಿಕ ಬರಹಗಳಲ್ಲಿ ತಂದವರು. ವೈಚಾರಿಕ ಲೇಖನ, ವೈಜ್ಞಾನಿಕ ಪ್ರಬಂಧಗಳನ್ನು ಹೀಗೂ ಬರೆಯಬಹುದು ಎಂದು ತೋರಿಸಿದವರು. ಗಂಭೀರ ವಿಷಯಗಳನ್ನು ಸರಳಗೊಳಿಸದೇ ಸರಳವಾಗಿ ಬರೆದವರು.

ಅವರ ಪ್ರಬಂಧವೊಂದು ನಮಗೆ ಹನ್ನೆರಡನೇ ತರಗತಿಯಲ್ಲಿ ಕನ್ನಡದ ಪಠ್ಯವಾಗಿತ್ತು. ಅದರಲ್ಲಿ ಚೆರ್ನೋಬಿಲ್ ಅಣು ದುರಂತ, ಭೋಪಾಲ್ ವಿಷಾನಿಲ ದುರಂತಗಳನ್ನು ಕಣ್ಣಿಗೆ ಕಟ್ಟುವಂತೆ ವಿವರಿಸುತ್ತಾ ಆಧುನಿಕ ಅಭಿವೃದ್ಧಿ ಮಾದರಿಗಳ ಸಾಧಕ ಬಾಧಕಗಳನ್ನು ಚರ್ಚಿಸಿದ್ದು ನನಗಿನ್ನೂ ಚೆನ್ನಾಗಿ ನೆನಪಿದೆ. ನಿಧಾನವಾಗಿ ಚಳುವಳಿಗಳೆಲ್ಲಾ ಕಾವು ಕಳೆದುಕೊಳ್ಳತೊಡಗಿದ್ದು, ನೋಡನೋಡುತ್ತಲೇ ಗ್ಲೋಬಲ್ ಎಕಾನಮಿ, ಡೆವಲಪ್ಮೆಂಟು ಇತ್ಯಾದಿಗಳು ನಮ್ಮನ್ನು ಆವರಿಸತೊಡಗಿದ್ದು ಶಾಪಿಂಗ್ ಸಂಸ್ಕೃತಿ ಇನ್ನಿಲ್ಲದಂತೆ ಹಬ್ಬುತ್ತಿರುವುದು, ಇವನ್ನೆಲ್ಲಾ ಹೇಗೆ ಅರ್ಥಮಾಡಿಕೊಳ್ಳುವುದು, ಹೇಗೆ ನಿಭಾಯಿಸುವುದು ಎಂದು ಗೊಂದಲಕ್ಕೊಳಗಾದಾಗಲೆಲ್ಲ ನನಗೆ ಅವರ ಅಂಕಣ ಬರಹಗಳು ಒಮ್ಮೊಮ್ಮೆ ಹೊಸದಾರಿಯನ್ನು ತೋರಿವೆ ಕೆಲವೊಮ್ಮೆ ಇನ್ನಷ್ಟು ಬೆಚ್ಚಿಬೀಳಿಸಿವೆ. ಅವರನ್ನು ಹಲವು ವರ್ಷಗಳಿಂದ ತಪ್ಪದೇ ಓದುತ್ತಾ ಬಂದಿರುವ ನಾನು ಬಹಳ ದಿನದಿಂದ ಈ ಎಲ್ಲಾ ವಿಷಯಗಳ ಬಗ್ಗೆ ಅವರೊಂದಿಗೆ ಚರ್ಚಿಸಬೇಕು ಎಂದುಕೊಳ್ಳುತ್ತಿದ್ದೆ. ಅಷ್ಟರಲ್ಲಿ ಹರಿ ಪಾಡ್ಕಾಸ್ಟಿನ ಐಡಿಯಾ ಮುಂದಿಟ್ಟರು. ಮೂರ್ನಾಲ್ಕು ತಿಂಗಳಿಂದ ಆಗ ಹೋಗೋಣ, ಈಗ ಹೋಗೋಣ ಎನ್ನುತ್ತಾ ಕೊನೆಗೂ ಜನವರಿಯ ಮೊದಲ ಭಾನುವಾರ ಮುಂಜಾನೆ ಅವರ ಹಳ್ಳಿಗೆ ಹೊರಟೇಬಿಟ್ಟೆವು. ಮಧ್ಯಾಹ್ನ ಅವರ ಮನೆ ತಲುಪಿದಾಗ ಸ್ವಾಗತಿಸಿದ್ದು ಹಕ್ಕಿಗಳ ಚಿಲಿಪಿಲಿ, ನಾಯಿಯ ಬೌಬೌ, ತಂಪಾದ ಗಾಳಿ. ನಾವು ಬೆಂಗಳೂರಿನ ಹೊರವಲಯದಲ್ಲೇ ಇದ್ದೇವೆಯೇ ಎಂದು ಆಶ್ಚರ್ಯಪಡುವಂತೆ ಇತ್ತು ಅಲ್ಲಿಯ ವಾತಾವರಣ. ಅವರ “ಮೈತ್ರಿ” ಫಾರಂನಲ್ಲಿ ಕುಳಿತು ನಾವು informal ಆಗಿ ಚರ್ಚಿಸಿದ್ದು ಇದೀಗ ನಿಮ್ಮ ಮುಂದಿದೆ.

ಯಾರ ಹತ್ರನಾದ್ರು ಟೈಂ ಮೆಷಿನ್ ಇದೀಯಾ ???

ಯಾಕಪ್ಪ ಏನಾಯ್ತು ಅಂತ ತಲೆ ಕೆಡ್ಸ್ಕೋತೀದೀರಾ ??? ಟೈಂ ಮೇಷಿನ ಇದ್ದಿದ್ರೆ ನಾನು ಸ್ವಲ್ಪ ನನ್ನ ಬಾಲ್ಯದ ದಿನ ಗಳಿಗೆ ಹೋಗಿ ಬರ್ತಾ ಇದ್ದೆ.ನಿಮಗೆ ಯಾವತ್ತಾದ್ರು ಅನ್ಸಿಲ್ವಾ ? ವಾಪಾಸ ನಿಮ್ಮ ಬಾಲ್ಯದ ದಿನಗಳಿಗೆ ಹೋಗ್ಬೇಕು ಅಂತ ?

ಮೊಬೈಲ್ ಕಳ್ಳ...

ಆ ವ್ಯಕ್ತಿ ರಾಜುವನ್ನೇ ಗಮನಿಸುತ್ತಿದ್ದ.ಒ೦ದೆರಡು ಬಾರಿ ಆ ಕಡೆಗೆ ಲಕ್ಷ್ಯ ಕೊಡದ ರಾಜುವಿಗೆ,ಸ್ವಲ್ಪ ಸಮಯದ ನ೦ತರ ಆ ವ್ಯಕ್ತಿಯ ಮೇಲೆ ಅನುಮಾನ ಶುರುವಾಯಿತು.ಇವನು ಅವನಿರಬಹುದಾ..? ಊಹು೦...ಇರಲಿಕ್ಕಿಲ್ಲ ತು೦ಬಾ ಡೀಸೆ೦ಟ್ ಆಗಿದ್ದಾನೆ,ಇರಲಿಕ್ಕಿಲ್ಲ ಎ೦ದುಕೊ೦ಡು ಆ ವ್ಯಕ್ತಿಯೆಡೆಗೆ ನೋಡಿದ ರಾಜು.ಅವನು ಈಗಲೂ ರಾಜುನನ್ನೇ ಗಮನಿಸುತ್ತಿದ್ದ.

ಕಾವ್ಯಮಯ ಸಂಭಾಷಣೆ

ಇತ್ತೀಚೆಗೆ ನಡೆದ ಒಂದು ಸಂಭಾಷಣೆ ಇದು. ನಾನು ಮತ್ತು ನನ್ನ ಸ್ನೇಹಿತರೊಬ್ಬರ ನಡುವೆ ನಡೆದದ್ದು. ನಾನು ಆ ದಿನ ಬಹಳ stress ಆಗಿದ್ದೆ. ಈ ರೀತಿ ನಾನು ಹೆಚ್ಚು stress ಆದಾಗ ನನ್ನ creativity ಸ್ವಲ್ಪ ಜಾಸ್ತಿಯಾಗಿರುತ್ತೆ. ಹೀಗಿರುವಾಗ ಪಾಪ ನನ್ನ friendಗೆ ನಾನು ಕವಿಯಂತೆ ಉತ್ತರ ಕೊಟ್ಟು ತಲೆ ತಿಂದಿದ್ದು ಇಲ್ಲಿ ಕೆಳಗಿನ chat logನಲ್ಲಿ ವ್ಯಕ್ತವಾಗತ್ತೆ. ಓದಿ ಆನಂದಿಸಿ.

"ಇಂಟರ್‌ನೆಟ್‌ನಲ್ಲಿ ನವಗ್ರಹ ಕಾಟ" ಮತ್ತಿತರ 2007 ರ ಪೂರ್ವಾರ್ಧದ 26 ಲೇಖನಗಳು

ಇವು 2007 ರ ಜನವರಿಯಿಂದ ಜುಲೈ ವರೆಗೆ ಬರೆದಿರುವ ಅಂಕಣ ಲೇಖನಗಳು. ಇವುಗಳೊಂದಿಗೆ ನಾನು ಇಲ್ಲಿಯವರೆಗೆ ಅಂಕಣಕ್ಕೆ ಬರೆದಿರುವ ಎಲ್ಲಾ ಲೇಖನಗಳನ್ನೂ ಅಂತರ್ಜಾಲಕ್ಕೆ ಸೇರಿಸಿದಂತಾಯಿತು. ಇದೇ ಸಮಯದಲ್ಲಿ ಅಂಕಣಕ್ಕಲ್ಲದೆ ಪತ್ರಿಕೆಗೆ ಬರೆದ ಇತರ ಇನ್ನೂ ಒಂದೆರಡು ಲೇಖನಗಳಿವೆ. ನಿಧಾನಕ್ಕೆ ಸೇರಿಸಬೇಕು.

ಈಗ ಈ ಲೇಖನಗಳನ್ನು ಮತ್ತೆ ನೋಡುತ್ತಿದ್ದಾಗ ತೇಜಸ್ವಿ ಮತ್ತು ಭೈರಪ್ಪನವರು ಒಂದಲ್ಲ ಒಂದು ಸಂದರ್ಭದಲ್ಲಿ ಈ ಅವಧಿಯಲ್ಲಿ (ಅಂದರೆ 2007 ರ ಪೂರ್ವಾರ್ಧದಲ್ಲಿ) ನನಗೆ ಪ್ರಸ್ತುತರಾಗಿದ್ದು ಕಾಣಿಸುತ್ತದೆ. ತೇಜಸ್ವಿಯವರು ಸಾಯುವ ನಾಲ್ಕೈದು ದಿನಗಳ ಹಿಂದೆ ಬರೆದಿದ್ದ "ಆದರ್ಶವಾದಿಗಳೊಡನೆ ಒಂದು ಬೆಳಗ್ಗೆ..." ಲೇಖನದಲ್ಲೂ ಅವರಿದ್ದಾರೆ. ಅವರು ತೀರಿಕೊಂಡ ಸಂದರ್ಭದಲ್ಲಿ ಬರೆದದ್ದು "ಜೀವಂತ ರೋಲ್ ಮಾಡೆಲ್ ಇನ್ನಿಲ್ಲ...". ಹಾಗೆಯೆ, ರಾಮದಾಸರು ತೀರಿಕೊಂಡ ಸಂದರ್ಭದಲ್ಲಿ ಬರೆದ "ಕಾಲಕ್ಕಿಂತ ಮುಂದಿದ್ದ ದಾರ್ಶನಿಕರು..." ಲೇಖನದಲ್ಲೂ ನೆನಪಾಗಿದ್ದಾರೆ.

ಇನ್ನು ಭೈರಪ್ಪನವರೂ ಮೂರ್ನಾಲ್ಕು ಕಡೆ ಕಾಣಿಸಿಕೊಂಡಿರುವುದನ್ನು ಕಂಡಾಗ ನನಗೇನಾದರೂ ಭೈರಪ್ಪ-ಫೋಬಿಯ ಇತ್ತೆ ಎನ್ನುವ ಸಂದೇಹ ಬರುತ್ತದೆ. ಆದರೆ ಅದು ನನ್ನೊಬ್ಬನದೆ ಕತೆಯಲ್ಲ, ಹಾಗೂ ಆ ಸಮಯದಲ್ಲಿ ವರ್ತಮಾನಕ್ಕೆ ಪ್ರತಿಕ್ರಿಯಿಸುತ್ತಿದ್ದ ಕನ್ನಡ ಬರಹಗಾರರು ಈ ವಿಚಾರದಲ್ಲಿ ಪದೆಪದೆ ಭೈರಪ್ಪನವರನ್ನು (ಪರ-ವಿರೋಧ) ಚರ್ಚಿಸಿದ್ದಾರೆ ಎನ್ನಿಸುತ್ತದೆ. ಯಾಕೆಂದರೆ, ಅದು ಆವರಣದ ಮಾಯೆ ಆವರಿಸಿಕೊಂಡಿದ್ದ ಕಾಲ. ಭೈರಪ್ಪನವರನ್ನು ಪ್ರತ್ಯಕ್ಷ-ಪರೋಕ್ಷವಾಗಿ ನೆನಪಿಸಿಕೊಂಡಿರುವ ಲೇಖನಗಳು:

ಇನ್ನು, ಸಂಪದದ ಬಗ್ಗೆ:

"ಹಾಗೆಯೆ, ಸಂಪದ.ನೆಟ್ ಎಂಬ ಇನ್ನೊಂದು ವೆಬ್‌ಸೈಟ್ ಮತ್ತು ತಂಡದ ಬಗ್ಗೆಯೂ ಹೇಳಬೇಕು. ಇನ್ನೂ 25-30 ದಾಟದ ಚುರುಕು ಕನ್ನಡ ಹುಡುಗರ ಈ ಗುಂಪಿನಲ್ಲಿ ಅನೇಕ ಮೌಲ್ಯಯುತ ಬರಹಗಳು, ಚರ್ಚೆಗಳು, ಕಂಪ್ಯೂಟರ್‌ನಲ್ಲಿ ಕನ್ನಡ ತಂತ್ರಾಂಶ ಅಭಿವೃದ್ಧಿ ದಿಸೆಯಲ್ಲಿನ ಕೆಲಸಗಳು ನಡೆಯುತ್ತಿವೆ. ಕನ್ನಡ ಪಂಡಿತರಲ್ಲದ, ಮಡಿಮೈಲಿಗೆ ಇಲ್ಲದ, ಹೊಸವಿಚಾರಗಳಿಗೆ, ಪ್ರಯೋಗಗಳಿಗೆ ಮೈಯೊಡ್ಡಿಕೊಳ್ಳುವ ಇಂತಹ ಒಂದು ಸಕ್ರಿಯ ಗುಂಪು ಇದೆ ಎನ್ನುವುದೆ ಹೆಮ್ಮೆಯ ವಿಚಾರ. ... "

ಇದು "ಕಂಪ್ಯೂಟರ್‌ನಲ್ಲಿ ಕನ್ನಡ - ಯಾಹೂ!!!" ಲೇಖನದಲ್ಲಿ ಪ್ರಸ್ತಾಪವಾಗಿದೆ.

ಇತ್ತೀಚೆಗೆ ಗೆಳೆಯ ನರೇಂದ್ರ ಪೈ ಕತೆಗಾರ ವಿವೇಕ್ ಶಾನುಭೋಗರ ಆಡಿಯೊ ಸಂದರ್ಶನ ಮಾಡಿದ್ದ ಪಾಡ್‍ಕ್ಯಾಸ್ಟ್ ನೀವೆಲ್ಲ ಕೇಳಿರಬಹುದು. ಸಂಪದ ತಂಡದ ಇಂತಹ ಪ್ರಯತ್ನಗಳ ಬಗ್ಗೆ ಹೆಮ್ಮೆ ಪಟ್ಟುಕೊಂಡು

"http://www.sampada.net/podcasts ವೆಬ್‌ಸೈಟಿನಲ್ಲಿ ತೇಜಸ್ವಿ, ಕಂಬಾರ, ಅನಂತಮೂರ್ತಿ, ಜಿಎಸ್ಸೆಸ್, ನಿಸಾರ್ ಅಹ್ಮದ್ ಮತ್ತಿತರ ಕನ್ನಡ ಸಾಹಿತಿಗಳ ಬಿಚ್ಚುಮಾತಿನ ಸಂದರ್ಶನಗಳ ಧ್ವನಿಮುದ್ರಣಗಳೂ ಇವೆ. ಓ.ಎಲ್.ಎನ್. ಸ್ವಾಮಿ, ಉದಯವಾಣಿಯ ಇಸ್ಮಾಯಿಲ್ ಮುಂತಾದವರು ಮಾಡಿರುವ ಈ ಕೆಲಸ ನಿಜಕ್ಕೂ ಶ್ಲಾಘನೀಯ. ಇದನ್ನೆಲ್ಲ ಇವರು ಮಾಡಿರುವುದು ತಮ್ಮ ಬಿಡುವಿನ ವೇಳೆಯಲ್ಲಿ. ಇಂಟರ್‌ನೆಟ್‌ನಲ್ಲಿ ಸುಮ್ಮನೆ ಬಡಬಡಿಸುವ, ಸ್ವರತಿಯಲ್ಲಿ ಮುಳುಗಿರುವ ಅನೇಕ ಕನ್ನಡಿಗರು ಮಾತಿಗಿಂತ ಕೃತಿಯಲ್ಲಿ ತೊಡಗಿಕೊಳ್ಳಲು ಇವೆಲ್ಲ ಪ್ರೇರಣೆಯಾಗಬೇಕಿದೆ. ಅಲ್ಲವೆ?"

ಎಂದು ಬರೆದದ್ದು "ಪಿ.ಬಿ.ಎಸ್.: ಅಣ್ಣಾವ್ರಂತೆ ಅಮರ." ಲೇಖನದಲ್ಲಿ.