Test

ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ದಿನಕ್ಕೊಂದು ಪದ : ಕಾಣ್, ಕಾಣು

ಕಾಣ್, ಕಾಣು (ಕ್ರಿ೦
ಕಂಡ್ಯ (ಭೂತಕೃ); ಕಂಡು (ಭೂತನ್ಯೂ); ಕಾಂಬ, ಕಾಣ್ಬ, ಕಾಬ (ಭವಿಕೃ).

೧. ನೋಡು; ಈಕ್ಷಿಸು
೨. ಭೇಟಿಯಾಗು; ಸಂದರ್ಶಿಸು
೩. ಎಣಿಸು; ಭಾವಿಸು; ತಿಳಿದುಕೋ; ಅರಿತುಕೊ
೪. ಹೊಂದು; ಪಡೆ
೫. ತೋರು; ಕಣ್ಣಿಗೆ ಬೀಳು; ಗೋಚರಿಸು

ಜಗನ್ನಾಥನ ತಬ್ಬಲಿ ಮಕ್ಕಳು

[ಈ ಸಾವಿನ ಸುದ್ದಿ ನೋಡಿ]

ಜೀವ ದಿಟ ಅನಿಸಲಿಲ್ಲವೇ ನಿನಗೆ?
ದೇವ ಸುಳ್ಳು ಅನಿಸಲಿಲ್ಲವೆ ನಿನಗೆ?
ನಂಬಿಕೆಯೇ ಎಲ್ಲ ಮೀರಿದ ಸತ್ಯ ನಿನಗೆ
ಬುಡವಿಲ್ಲದಿದ್ದರೂ ಅಲ್ಲವೆ?

ಟೈಮಿಗಿಲ್ಲ ಟೈಮ್ ಸೆನ್ಸು

ಕಾಲ ನಾವಂದುಕೊಂಡಂತೆ ಬಾರದು.ಅದಕ್ಕೆ ಆ ಕಾಲನ 'ಸಮಯ'ಕ್ಕೆ ಹೀಗೆ ಒಂದಿಷ್ಟು ಬೈಗುಳ ನೀಡುವತ್ತ..

ಟೈಮಿಗಿಲ್ಲ ಟೈಮ್ ಸೆನ್ಸು
ಸ್ವಲ್ಪ ಕೂಡ ಕಾಮನ್ ಸೆನ್ಸು ||

ನಾ ಖುಷಿಯಾಗಿದ್ದಾಗ ಓಡಿಹೋಗುತ್ತೆ
ದುಃಖದಲ್ಲಿದ್ರೆ ನಿಂತೇ ಬಿಡತ್ತೆ
ಖಾಲಿಯಾಗಿದ್ರೆ ಕೂತು ಊಟ ಮಾಡುತ್ತೆ
ಮಲಗಿದ್ರೆ ತಾನೂ ಮಲಗೇ ಬಿಡತ್ತೆ ||

ಟೈಮಿಗಿಲ್ಲ ಟೈಮ್ ಸೆನ್ಸು..

ಕನಸಿನ ಕನ್ಯ

ಕನಸಿನ ಕನ್ಯ

ರವಿಯ ರಮ್ಯತೆಯಲಿ ರಮಿಸಿರುವೆ ರತ್ನದಂತೆ
ಕವಿಯ ಕವಿತೆಯಲಿ ಕುಳಿತಿರುವೆ ಕರಗದಂತೆ
ದಿನದ ದಿನಚರಿಯ ಧರಿಸಿರುವೆ ಧರಿತ್ರಿಯಂತೆ
ಮನದ ಮಮತೆಯಲಿ ಮಲಗಿರುವೆ ಮಗುವಿನಂತೆ ||೧||

ಸುಧೆಯ ಸವಿಸಿರುವೆ ಸುಂದರ ಸಮುದ್ರದಂತೆ
ಹ್ರುದಯ ಹೊಮ್ಮಿಸಿರುವೆ ಹೊಸ ಹುಮ್ಮಸ್ಸಿನಂತೆ
ಚಿತ್ತವ ಚೆಲ್ಲಿರುವೆ ಚಿತ್ತಾರದ ಚಿತ್ರದಂತೆ

ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?

Openoffice.orgತನ್ನ ದೈನಂದಿನ ಕೆಲಸ ಕಾರ್ಯಗಳಿಗೆ ಪ್ರತಿನಿತ್ಯ ಕಂಪ್ಯೂಟರ್ ಅನ್ನ ಅವಲಂಬಿಸಿ ಕೊಂಡು ಬರಲಿಕ್ಕೆ ಸರ್ಕಾರಿ ಇಲಾಖೆಗಳು ಪ್ರಾರಂಭಿಸಿ ವರ್ಷಗಳು ಕಳೆದಿರಬಹುದು. ಅಂದಿನಿಂದ ಇಂದಿನವರೆಗೆ ಪತ್ರಗಳನ್ನ, ಇತರೆ ಕಡತಗಳನ್ನ ಸಂಪಾದಿಸಲಿಕ್ಕೆ ಸಮಾನ್ಯವಾಗಿ ಉಪಯೋಗಿಸಿ ಕೊಂಡು ಬಂದಿರುವ ತಂತ್ರಾಂಶ ಮೈಕ್ರೋ ಸಾಫ್ಟ್ ಆಫೀಸ್ ಅಲ್ವೇ? ಇದನ್ನ ಮೈಕ್ರೋಸಾಫ್ಟ್ ನಿಂದ ಕೊಂಡು ಉಪಯೋಗಿಸಿದವರನ್ನ ನಾನು ಕಂಡದ್ದೇ ಇಲ್ಲ. ಸರ್ಕಾರ ಇದನ್ನ ಉಪಯೋಗಿಸಲಿಕ್ಕೆ ಪ್ರತಿಯೊಂದು ಕಂಪ್ಯೂಟರ್ಗೆ ಲೈಸೆನ್ಸ್ ಕೊಂಡುಕೊಳ್ಳ ಬೇಕಾಗುತ್ತದೆ. ಸ್ವಲ್ಪ ಲೆಕ್ಕ ಹಾಕಿ, ಒಂದೊಂದು ಸರ್ಕಾರಿ ಆಫೀಸಿಗೆ ಈ ತಂತ್ರಾಂಶ ಕೊಳ್ಳಬೇಕೆಂದರೆ ಲಕ್ಷಗಟ್ಟಲೆ ಹಣ ಸುರಿಯ ಬೇಕಾಗುತ್ತದೆ. ಹಣ ಎಲ್ಲಿಂದ ಬರತ್ತೆ? ಇದೆಯಲ್ಲ ನಾನು, ನೀವು ಕೊಟ್ಟ ಟ್ಯಾಕ್ಸ್ ಹಣ. 

ಈ ರೀತಿ ಹೊರ ದೇಶದ ಒಂದು ಕಂಪೆನಿಗೆ ಹರಿದು ಹೋಗೋ ಹಣವನ್ನ ತಡೆಯೋದ್ ಹ್ಯಾಗೆ? ಟ್ಯಾಕ್ಸ್ ಹಣ ಉಳಿಸಿ ಅದನ್ನ ಅಭಿವೃದ್ದಿ ಕಾರ್ಯಗಳಿಗೆ ಬಳಸೋದ್ ಸಾಧ್ಯಾನಾ? ಕೆಲ ತಿಂಗಳುಗಳ ಹಿಂದೆ ಕರ್ನಾಟಕ ಸರ್ಕಾರ ಮೈಕ್ರೋಸಾಫ್ಟ್ ನೊಂದಿಗೆ ಅದರ ತಂತ್ರಾಂಶಗಳನ್ನ ಉಪಯೋಗಿಸುವುದಕ್ಕೆ ಒಪ್ಪಂದವನ್ನ ಮಾಡಿಕೊಳ್ಳ ಹೊರಟಾಗ ಅದನ್ನ ವಿರೋಧಿಸಿ ಒಂದು ಹೋರಾಟವನ್ನ ಪ್ರಾರಂಭಿಸಿದ್ದೆವು. ವಿದೇಶಿ ತಂತ್ರಾಂಶದಿಂದಾಗ ಎದುರಾಗ ಬಹುದಾದ  ತೊಂದರೆಗಳನ್ನ ಎಲ್ಲರ ಮುಂದಿಟ್ಟಿದ್ದೆವು. ಸೆಕ್ಯೂರಿಟಿಯ ಮಟ್ಟಿಗೆ ಕೂಡ ಹಿಂದೆ ನೆಡೆದ ಲಾಜಿಕ್ ಬಾಂಬ್ ಘಟನೆಗಳನ್ನ ವಿವರಿಸಿದ್ದೆವು.

ಇಹದ ಬದುಕಿನ ಪಯಣ ಮುಗಿಸಿದ ಜಿಟಿಎನ್

ಮೈಸೂರಿನ ೨೫೪೩೭೫೯ ಸಂಕ್ಯೆಗೆ ದೂರವಾಣಿ ಕರೆ ಮಾಡಿದರೆ, ನೀವಿನ್ನು ಎಂದಿನ ಗಂಭೀರ ಧ್ವನಿ "ನಮಸ್ಕಾರ, ಜಿ.ಟಿ.ನಾರಾಯಣರಾವ್" ಎಂದಿಗೂ ಕೆಳದು. ಸರಸ್ವತೀಪುರಂನಲ್ಲಿರುವ "ಅತ್ರೀ" ಮನೆಯ ಗೇಟನ್ನು ಮೆಲ್ಲಗೆ ತೆರೆದರೂ ಸಾಕು, ಮನೆಯೊಳಗಿಂದ ಹೊರ ಬಂದು, ಎರಡೂ ಕೈ ಜೋಡಿಸಿ ನಮಸ್ಕಾರ ಮಾಡುತ್ತ "ಸುಖ ಪ್ರಯಾಣವಾಯಿತೇ" ಎಂದು ಕೇಳಿ ಸ್ವಾಗತಿಸುತ್ತಿದ್ದ ಜಿ.ಟಿ.ನಾರಾಯಣ ರಾವ್, ಹೃಸ್ವವಾಗಿ ಜಿಟಿಎನ್ ಇನ್ನಿಲ್ಲ. "ಮುಗಿಯದ ಪಯಣ" ಕೃತಿಯ ಕರ್ತೃ ಇಹದ ಬಾಳಿನ ಪಯಣ ಮುಗಿಸಿ ವಿಶ್ವ ರಹಸ್ಯದಲ್ಲಿ ಲೀನವಾಗಿದ್ದಾರೆ.

ಜಿಟಿಎನ್ ಗುರುವಾರ (೨೬.೬.೨೦೦೮) ಸಂಜೆ ಸ್ನೇಹಿತರ ಮನೆಯಲ್ಲಿ ಸಂಗೀತಕ್ಕೆ ಸಂಬಂಧಿಸಿದ ಲೇಖನವನ್ನು ಕಂಪ್ಯೂಟರ್ ಪರದೆ ಮೇಲೆ ಓದುತ್ತ ಇದ್ದಾಗ "ಎಲ್ಲ ಮಂಜಾಗುತ್ತಿದೆ" ಎಂದರಂತೆ. ಮನೆಯವರು ಶರಬತ್ತು ಕೊಟ್ಟರು. ಕುಡಿದು ಮತ್ತೆ ಓದಲು ತೊಡಗುತ್ತಿದ್ದಂತೆ ನಿದ್ದೆಗೆ ಜಾರಿದರು. ಆ ನಿದ್ದೆ ಮಾತ್ರ ದೀರ್ಘ ನಿದ್ರೆಯಾಯಿತು. ಮತ್ತೆಂದೂ ಏಳದ ನಿದ್ರೆಯಾಯಿತು. ಈ ಭುವಿಯ ಯಾವ ಶಕ್ತಿಯೂ ಅವರನ್ನು ನಿದ್ದೆಯಿಂದ ಎಚ್ಚರಿಸಲು ಸಾಧ್ಯವಾಗದ ನಿದ್ದೆಯದು.
ಅವರಿಗೆ ಎಂಬತ್ತಮೂರರ ವಯಸ್ಸು. ವಯಸ್ಸಿಗೆ ಅನುಗುಣವಾಗಿ ದೇಹ ಕೃಷವಾಗಿತ್ತು - ಹಕ್ಕಿಯಂತಾಗಿತ್ತು. ಆದರೆ ಜೀವನೋತ್ಸಾಹ ಅದೇ ಇತ್ತು. ಜಿಟಿಎನ್ ಸ್ಮೃತಿ ಕಳೆದುಕೊಂಡ ಸುದ್ದಿ ಬಂದಾಗ ಅವರು ಮತ್ತೆ ಚೇತರಿಸಿಕೊಳ್ಳಬಹುದೆಂಬ ನಿರೀಕ್ಷೆ ಇತ್ತು. ಏಕೆಂದರೆ ನಾಲ್ಕೈದು ವರ್ಷಗಳ ಹಿಂದೆ ಅವರ ದೇಹ ಸ್ಥಿತಿ ತೀರ ಹದಗೆಟ್ಟಿತ್ತು. ಆ ಸಂದರ್ಭದಲ್ಲಿ ತಿಂಗಳುಗಳ ಕಾಲ ಆಸ್ಪತ್ರೆಯಲ್ಲಿದ್ದಾಗ ಅವರು ಹೇಳುತ್ತಿದ್ದರು "ಸೋರುತಿಹುದು ಮನೆಯ ಮಾಳಿಗೀ" ಅವರಿಗೆ ತಮಾಷೆ. ನಮಗೆ?ಮ್ಮ "ಮುಗಿಯದ ಪಯಣ" ದಲ್ಲಿ "ಯಮ ಸದನ ನೋಡಿ ಬಂದೆ" ಎಂಬ ಅಧ್ಯಾಯದಲಿ ಈ ಬಗ್ಗೆ ಬರೆದಿದ್ದಾರೆ. ಸಾವು ಬದುಕಿನ ಹೋರಾಟದಲ್ಲಿ ಜಯಶಾಲಿಯಾಗಿ ಮರಳಿದ ಜಿಟಿಎನ್ ಅವರಿಗೆ ನಾನು ಬರೆದೆ "ಜವರಾಯ ಬಂದರೂ ನಿಮ್ಮನ್ನು ಕರೆದೊಯ್ಯಲಿಲ್ಲ, ನಮಗಾಗಿ" ಆದರೆ ಈ ಬಾರಿ ಹಾಗಾಗಲೇ ಇಲ್ಲ. ಜವರಾಯ ತಣ್ಣಗೆ ಬಂದ ಯಾರಿಗೂ ಹೇಳದೇ - ಅವರನ್ನು ಓಯ್ದೇ ಬಿಟ್ಟ.
ಮೈಸೂರಿಗೆ ಧಾವಿಸಿ, ಅತ್ರಿ ಮನೆ ತಲುಪುವಾಗ ನಡು ಮಧ್ಯಾಹ್ನ. ಹೊರಗಡೆ ಜನರೋ ಜನರು. ಒಳಗೆ ಹಜಾರದಲ್ಲಿ ಜಿಟಿಎನ್ ಮಲಗಿದ್ದರು ಹೂವಿನ ರಾಶಿಯನ್ನೇ ಹೊದ್ದು. ಮೂಕದಲ್ಲೊಂದು ನಗುವಿನ ಸೆಳೆ. ಪಕ್ಕದ ಅವರ ಆಧ್ಯಯನ ಕೊಠಡಿಯಲ್ಲಿ ಪುಸ್ತಕಗಳ ರಾಶಿ. ಬಿಳಿ ಹಾಳೆಯ ಮೇಲೆ ಬರೆಡಿಟ್ಟ ಟಿಪ್ಪಣಿ, ಅತ್ರಿಸೂನು ಕವನದ ಸಾಲುಗಳು. ಎಲ್ಲವೂ ಇದ್ದುವು. ಆದರೆ ಇವೆಲ್ಲವುಗಳಿಗೆ ಅರ್ಥ ಕೊಡುವ, ಮಾತು ನೀಡುವ, ಚಿತ್ರವಾಗುವ, ರೂಪಕವಾಗುವ ಆ ಚೇತನ ಮಾತ್ರ ಅಲ್ಲಿರಲಿಲ್ಲ. ಅನಿಕೇತನ ಹುಡುಕುತ್ತ ಹೊರಟಿತ್ತೇ? ಗೊತ್ತಿಲ್ಲ.

ವಿಧ್ಯಾಭ್ಯಾಸ ಮತ್ತು ಕಾಲೇಜು

ಇತ್ತೀಚೆಗೆ ಮಿತ್ರರೊಂದಿಗೆ ಇಂದಿನ ವಿಧ್ಯಾಭ್ಯಾಸ ಕ್ರಮದ ಬಗ್ಗೆ ಹರಟುತ್ತಿದ್ದೆವು. ಅದರಲ್ಲಿ ನಗರಗಳಲ್ಲಿನ ಕಾಲೇಜು/ಇಂಗಿನಿಯರಿಂಗ್ ಕಾಲೇಜುಗಳಲ್ಲಿ ಓದುತ್ತಿರುವ ವಿಧ್ಯಾರ್ಥಿಗಳ ಕೆಲವು ಭಾವನೆಗಳನ್ನು ಕೇಳಿ ಆಶ್ಚರ್ಯವಾಯಿತು. ಅದೆಂದರೆ ಒಂದೋ ಎರಡೋ ವಿಷಯಗಳಲ್ಲಿ ಫೇಲ್ ಆಗುವುದು ಪ್ರತಿಷ್ಠೆಯ ಲಕ್ಷಣವಂತೆ !!