ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ನಿರಕ್ಷರಿ ಕವಿಯ ಅಕ್ಷರಗಾಥೆ

ನಂಬಿದರೆ ನಂಬಿ, ಬಿಟ್ಟರೆ ಬಿಡಿ, ಈತ ನಿರಕ್ಷರಸ್ಥ. ಆದರೆ, ಹದಿನಾರು ಕವನ ಸಂಕಲನಗಳನ್ನು ಬರೆದು ಪ್ರಕಟಿಸಿದ್ದಾನೆ.

ಬಾಗಲಕೋಟೆ ಜಿಲ್ಲೆ ಬೀಳಗಿಯ ಸಿದ್ದಪ್ಪ ಸಾಬಣ್ಣ ಬಿದರಿ ಎಂಬ ನಿರಕ್ಷರ ಆಶುಕವಿಯ ಸಾಹಸಗಾಥೆಯಿದು. ದೊಡ್ಡ ಕುಟುಂಬದಲ್ಲಿ ಜನಿಸಿ, ಬಡತನದಿಂದಾಗಿ ಬಾಲ್ಯದಿಂದಲೇ ಕೃಷಿಯಲ್ಲಿ ತೊಡಗಿದ ಸಿದ್ದಪ್ಪನಿಗೆ ಓದುವ ಭಾಗ್ಯ ದೊರೆಯಲಿಲ್ಲ.

ಆದರೇನಂತೆ, ಕಾವ್ಯ ಸರಸ್ವತಿ ಒಲಿದಿದ್ದಳು. ಚಿಕ್ಕಂದಿನಿಂದಲೇ ಪದ್ಯದ ಗೀಳು. ಸುತ್ತಲಿನ ಪರಿಸರವೇ ಕವಿತೆಯ ವಸ್ತುಗಳಾದವು. ಅವನ್ನೇ ಪ್ರಾಸಬದ್ಧವಾಗಿ, ಜಾನಪದ ಶೈಲಿಯಲ್ಲಿ ಜೋಡಿಸಿ ಹಾಡುತ್ತಿದ್ದ ಸಿದ್ದಪ್ಪ ಸುತ್ತಲಿನ ಜನರನ್ನು ಆಕರ್ಷಿಸಿದ. ಚೆನ್ನಾಗಿವೆ ಎಂದು ಅನ್ನಿಸಿದ ಕವಿತೆಗಳನ್ನು ಊರಿನ ಕೆಲವು ಅಕ್ಷರಸ್ಥರು ಆತನಿಗೆ ಬರೆದು ಕೊಟ್ಟರು. ಅವನ್ನೇ ನೋಟ್‌ಬುಕ್‌ನಲ್ಲಿ ಇಟ್ಟುಕೊಂಡು ಹರ್ಷಪಡುತ್ತ ದಿನಗಳೆದ ಸಿದ್ದಪ್ಪ.

ಕ್ರಮೇಣ ನೋಟ್‌ಬುಕ್‌ಗಳ ಸಂಖ್ಯೆ ಬೆಳೆಯಿತು. ಆಗ ಯಾರೋ ಒಬ್ಬರು, ’ಒಂದು ಕವಿತಾ ಸಂಕಲನ ಪ್ರಕಟಿಸಬಹುದಲ್ಲ?’ ಎಂದು ಸೂಚಿಸಿದರು. ಅಕ್ಷರವೇ ಬಾರದ ತಾನು ಏನಂತ ಪ್ರಕಟಿಸಬೇಕು ಎಂದು ಅನ್ನಿಸಿದರೂ, ಹಿತೈಷಿಗಳು ಒತ್ತಾಯಿಸಿದರು. ಕವಿತೆ ಕೇಳಿ ಮೆಚ್ಚಿದ ಸಹೃದಯರು ಪ್ರಕಟಿಸಲು ಮುಂದೆ ಬಂದರು. ಒಂದಷ್ಟು ಹಣ ಸಂಗ್ರಹಿಸಿ, ೧೯೯೦ರಲ್ಲಿ ಮೊದಲ ಕವಿತಾ ಸಂಕಲನ ’ಹೊಳಿ ಸಾಲಿನ ಹೋರಿ’ ಪ್ರಕಟಿಸಿದ ಸಿದ್ದಪ್ಪ.

ನಿರಕ್ಷರಿ ಕವಿಯ ಅಕ್ಷರಗಾಥೆ

ನಂಬಿದರೆ ನಂಬಿ, ಬಿಟ್ಟರೆ ಬಿಡಿ, ಈತ ನಿರಕ್ಷರಸ್ಥ. ಆದರೆ, ಹದಿನಾರು ಕವನ ಸಂಕಲನಗಳನ್ನು ಬರೆದು ಪ್ರಕಟಿಸಿದ್ದಾನೆ.

ಬಾಗಲಕೋಟೆ ಜಿಲ್ಲೆ ಬೀಳಗಿಯ ಸಿದ್ದಪ್ಪ ಸಾಬಣ್ಣ ಬಿದರಿ ಎಂಬ ನಿರಕ್ಷರ ಆಶುಕವಿಯ ಸಾಹಸಗಾಥೆಯಿದು. ದೊಡ್ಡ ಕುಟುಂಬದಲ್ಲಿ ಜನಿಸಿ, ಬಡತನದಿಂದಾಗಿ ಬಾಲ್ಯದಿಂದಲೇ ಕೃಷಿಯಲ್ಲಿ ತೊಡಗಿದ ಸಿದ್ದಪ್ಪನಿಗೆ ಓದುವ ಭಾಗ್ಯ ದೊರೆಯಲಿಲ್ಲ.

ಶ್ಯಾಮಲಾ

ಇವತ್ತು ಸ್ವಲ್ಪ ತಂಪಾಗಿದೆ . ಇಲ್ದೆ ಇದ್ರೆ ಸುಡೋ ಉರಿಬಿಸ್ಲು ! ಅದೂ ಕಾರವಾರದ ಬಿಸಿಲು ಅಂದ್ರೆ ಕೇಳ್ಬೇಕಾ ? ಕಲ್ಲೂ ಕರ್ಗೋಗೋಷ್ಟು . ತಂಪಾದ ಗಾಳಿ ಬೇರೆ ಬೀಸ್ತಾ ಇದೆ. ಎಲ್ಲೋ ಮಳೆ ಆಗಿರ್ಬೇಕು . ಸಮುದ್ರ ಮಾತ್ರ , ಯಾರನ್ನೋ ಕಾಯ್ತಾ ಇರೊವ್ರ ತರ ಮೊರಿತಾ ಇದ್ದಿದ್ದು ಈಗ ಒಮ್ಮೆಗೆ ಭೋರ್ಗರೀತಾ ಇದೆ . ಅದ್ರ ಮೂಡ್ ನೊಡಿ ನಂಗೂ ಖುಶಿ ಆಯ್ತು.

ಗಂಡ-ಹೆಂಡಿರು ಮತ್ತು ಪುರಂದರ ದಾಸರು

ನೀವು ಏನು ಬೇಕಾದ್ರೂ ಹೇಳಿ, ಪುರಂದರ ದಾಸರು ಅಂದ್ರೆ ನಂಗಿಷ್ಟ. ವ್ಯಾಸೋಚ್ಛಿಷ್ಟಂ ಜಗತ್ಸರ್ವಂ ಅನ್ನೋ ಮಾತಿದೆ. ಅಂದ್ರೆ, ವ್ಯಾಸರು ಹೇಳಿ ಬಿಟ್ಟುಳಿದದ್ದೇ ಈ ಜಗತ್ತಲ್ಲಿರೋದೆಲ್ಲ ಅಂತ. ಮಹಾಭಾರತ ಬರೆಯೋದಲ್ದೆ, ವೇದಗಳನ್ನ ನಾಕು ಪಾಲು ಮಾಡಿ ವಿಂಗಡಿಸಿದ್ದೇ ವ್ಯಾಸರು, ಮತ್ತೆ ಹದಿನೆಂಟು ಪುರಾಣಗಳನ್ನೂ ಬರ್ದಿದ್ದೂ ಅವರೇ ಅಂತ ನಂಬಿಕೆ ಇದೆಯಲ್ಲ. ನನಗೆ ಬಿಡಿ - ವೇದ ಓದಿದರೆ ನೇರವಾಗಿ ಅರ್ಥವಾಗೋಲ್ಲ. ಪುರಾಣ ಓದೋದಕ್ಕೆ ವೇಳೆ ಸಾಲದು. ಅದಕ್ಕೇ ನಾನು ’ದಾಸೋಚ್ಛಿಷ್ಟಂ ಜಗತ್ಸರ್ವಂ’ ಅಂದ್ಕೊಂಡ್ಬಿಡ್ತೀನಿ. ಯಾಕೆ ಅಂತೀರಾ? ’ದಾಸರೆಂದರೆ ಪುರಂದರ ದಾಸರಯ್ಯ” ಅನ್ನೋ ಮಾತನ್ನ ಅವರ ಗುರುಗಳೇ ಹೇಳಿಬಿಟ್ಟಿರೋದ್ರಿಂದ, ಈ ದಾಸರು ಯಾರು ಅಂತ ನಾನು ಬಿಡಿಸಿ ಹೇಳ್ಬೇಕಿಲ್ಲ. ಅಲ್ವಾ?

ಪುರಂದರ ದಾಸರು ಬರ್ದಿರೋದೆಲ್ಲ ಕನ್ನಡದಲ್ಲಿ. ಓದಿದ್ರೆ, ನನಗೆ ಅರ್ಥವಾಗೋದೇನೂ ಕಷ್ಟವಿಲ್ಲ. ಅಲ್ದೆ, ಅವ್ರೇನೂ ಸರ್ಗದ ಮೇಲೆ ಸರ್ಗ ಕವಿತೆ  ಹೊಸೆದಂತ ಕಾಳಿದಾಸನ ಹಾಗೆ ದೊಡ್ಡ ದೊಡ್ಡ ಕಾವ್ಯಗಳನ್ನೂ ಬರೆದಿಲ್ಲ. ಅದು ಬಿಡಿ ಕುಮಾರವ್ಯಾಸ ಹರಿಹರ ರಾಘವಾಂಕ ರತ್ನಾಕರವರ್ಣಿಯರ ಹಾಗೆ ಸಾಂಗತ್ಯ ರಗಳೆ  ಷಟ್ಪದಿಯ ಗೊಡವೆಗೂ ಅವರು ಹೋಗಿಲ್ಲ. ಏನಿದ್ರೂ ಅವರು ಬರೆದಿರೋದು ಸಣ್ಣ ಸಣ್ಣ ಹಾಡುಗಳು. ಒಂದು ಓದಿದ್ಮೇಲೆ ಇನ್ನೊಂದು ಇದನ್ನೇ ಓದ್ಬೇಕು ಅನ್ನೋದಕ್ಕೆ ಅಲ್ಯಾವ ಕಥೇನೂ ಇರೋದಿಲ್ಲ. ಅಲ್ದೆ ಸರಿಸುಮಾರು ಅರ್ಥವಾಗ್ದಿರೋ ಪದಗಳೂ ಅಲ್ಲೊಂದು ಇಲ್ಲೊಂದು ಹೊರತು ನಾನೇನೂ ಪಕ್ದಲ್ಲಿ ನಿಘಂಟು ಇಟ್ಕೊಂಡು ಕೂರ್ಬೇಕಾಗಿಲ್ಲ. ಇದೇಕಾರಣಕ್ಕೆ ಆದಾದಾಗ ಒಂದೊಂದು ಹೊಸ ಹಾಡನ್ನ ಓದಿ ನೋಡೋದು ಅಂದ್ರೆ ನನಗಂತೂ ಬಹಳ ಹಿಡಿಸುತ್ತೆ.

ದಿನಕ್ಕೊಂದು ಪದ

ಶಬ್ದ (ನಾ).

೧.ಸದ್ದು; ಸಪ್ಪುಳ; ಧ್ವನಿ: ಜಂಗಮದ ಶಬ್ದವ ಕೇಳಿ ಪ್ರಸಾದಕ್ಕೆ ಕೈ ದುಡಿಕಿದರೆ ಅದು ಪ್ರಸಾದವಲ್ಲ ಕಿಲ್ಬಿಷ (ಬಸವ. ೩೯೯);
ಶಬ್ದವೆಂದರೆ ನಮ್ಮ ಕಿವಿಗಳಲ್ಲಿ ಉಂಟಾಗುವ ಒಂದು ಅನುಭವ ಮತ್ತು ಆ ಅನುಭವವನ್ನು ಉಂಟುಮಾಡಬಲ್ಲ ಕಾರಣವಿಶೇಷ.(ಭೌತವಿಜ್ಞಾನ)

ಮೈಕ್ರೊಸಾಫ್ಟ್ ಬಿಲ್ ಗೇಟ್ಸ್ ಗೆ ಬಂಟನ ಪತ್ರ

ಬಂಟ ತನ್ನ ಮನೆಗಾಗಿ ಹೊಸ ಕಂಪ್ಯೂಟರ್ ಖರೀದಿಸಿದ, ಅದರಲ್ಲಿ Microsoft Windows ಸ್ಥಾಪಿಸಿದ್ದ ಆದರೆ ಅವನು ಸಂತುಷ್ಟನಾಗಿರಲಿಲ್ಲ. ಕೂಡಲೆ ಬಿಲ್ ಗೇಟ್ಸ್ ಗೆ ಆತ ಪತ್ರ ಬರೆದ.

ಪ್ರಿಯ ಬಿಲ್ ಗೇಟ್ಸ್,

ನಾನು ನನ್ನ ಮನೆಗೆ ಹೊಸದಾಗಿ ಒಂದು ಕಂಪ್ಯೂಟರ್ ಖರೀದಿಸಿದ್ದೇನೆ. ಅದರಲ್ಲಿ ನನ್ನ ಅನುಭವಕ್ಕೆ ಬಂದ ಕೆಲವು ತೊಂದರೆಗಳನ್ನು ನಿಮ್ಮ ಗಮನಕ್ಕೆ ತರುತ್ತಿದ್ದೇನೆ.

ಅನ್ನದಾತರ ಕುರಿತು

ನಾಡಿಗೆ ಅನ್ನವನ್ನು ನೀಡುವ ರೈತರ ಸಂಕಷ್ಟಗಳಿಗೆ ಪರಿಹಾರ ಹುಡುಕುವ ಪ್ರಯತ್ನ. ರೈತರ ಆತ್ಮಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಏರುತ್ತಿರುವ ಈ ಸಂದರ್ಭದಲ್ಲಿ ಸರ್ಕಾರ, ಸಂಸ್ಥೆಗಳು ಯಾವ ರೀತಿ ಕ್ರಮ, ಪರಿಹಾರ ಹುಡುಕುವಲ್ಲಿ ಪ್ರಯತ್ನಿಸಬೇಕು.