ನಿರಕ್ಷರಿ ಕವಿಯ ಅಕ್ಷರಗಾಥೆ
ನಂಬಿದರೆ ನಂಬಿ, ಬಿಟ್ಟರೆ ಬಿಡಿ, ಈತ ನಿರಕ್ಷರಸ್ಥ. ಆದರೆ, ಹದಿನಾರು ಕವನ ಸಂಕಲನಗಳನ್ನು ಬರೆದು ಪ್ರಕಟಿಸಿದ್ದಾನೆ.
ಬಾಗಲಕೋಟೆ ಜಿಲ್ಲೆ ಬೀಳಗಿಯ ಸಿದ್ದಪ್ಪ ಸಾಬಣ್ಣ ಬಿದರಿ ಎಂಬ ನಿರಕ್ಷರ ಆಶುಕವಿಯ ಸಾಹಸಗಾಥೆಯಿದು. ದೊಡ್ಡ ಕುಟುಂಬದಲ್ಲಿ ಜನಿಸಿ, ಬಡತನದಿಂದಾಗಿ ಬಾಲ್ಯದಿಂದಲೇ ಕೃಷಿಯಲ್ಲಿ ತೊಡಗಿದ ಸಿದ್ದಪ್ಪನಿಗೆ ಓದುವ ಭಾಗ್ಯ ದೊರೆಯಲಿಲ್ಲ.
ಆದರೇನಂತೆ, ಕಾವ್ಯ ಸರಸ್ವತಿ ಒಲಿದಿದ್ದಳು. ಚಿಕ್ಕಂದಿನಿಂದಲೇ ಪದ್ಯದ ಗೀಳು. ಸುತ್ತಲಿನ ಪರಿಸರವೇ ಕವಿತೆಯ ವಸ್ತುಗಳಾದವು. ಅವನ್ನೇ ಪ್ರಾಸಬದ್ಧವಾಗಿ, ಜಾನಪದ ಶೈಲಿಯಲ್ಲಿ ಜೋಡಿಸಿ ಹಾಡುತ್ತಿದ್ದ ಸಿದ್ದಪ್ಪ ಸುತ್ತಲಿನ ಜನರನ್ನು ಆಕರ್ಷಿಸಿದ. ಚೆನ್ನಾಗಿವೆ ಎಂದು ಅನ್ನಿಸಿದ ಕವಿತೆಗಳನ್ನು ಊರಿನ ಕೆಲವು ಅಕ್ಷರಸ್ಥರು ಆತನಿಗೆ ಬರೆದು ಕೊಟ್ಟರು. ಅವನ್ನೇ ನೋಟ್ಬುಕ್ನಲ್ಲಿ ಇಟ್ಟುಕೊಂಡು ಹರ್ಷಪಡುತ್ತ ದಿನಗಳೆದ ಸಿದ್ದಪ್ಪ.
ಕ್ರಮೇಣ ನೋಟ್ಬುಕ್ಗಳ ಸಂಖ್ಯೆ ಬೆಳೆಯಿತು. ಆಗ ಯಾರೋ ಒಬ್ಬರು, ’ಒಂದು ಕವಿತಾ ಸಂಕಲನ ಪ್ರಕಟಿಸಬಹುದಲ್ಲ?’ ಎಂದು ಸೂಚಿಸಿದರು. ಅಕ್ಷರವೇ ಬಾರದ ತಾನು ಏನಂತ ಪ್ರಕಟಿಸಬೇಕು ಎಂದು ಅನ್ನಿಸಿದರೂ, ಹಿತೈಷಿಗಳು ಒತ್ತಾಯಿಸಿದರು. ಕವಿತೆ ಕೇಳಿ ಮೆಚ್ಚಿದ ಸಹೃದಯರು ಪ್ರಕಟಿಸಲು ಮುಂದೆ ಬಂದರು. ಒಂದಷ್ಟು ಹಣ ಸಂಗ್ರಹಿಸಿ, ೧೯೯೦ರಲ್ಲಿ ಮೊದಲ ಕವಿತಾ ಸಂಕಲನ ’ಹೊಳಿ ಸಾಲಿನ ಹೋರಿ’ ಪ್ರಕಟಿಸಿದ ಸಿದ್ದಪ್ಪ.
- Read more about ನಿರಕ್ಷರಿ ಕವಿಯ ಅಕ್ಷರಗಾಥೆ
- 8 comments
- Log in or register to post comments